• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

BRS-JDS ಚುನಾವಣೆ ಮೈತ್ರಿ

P K Channakrishna by P K Channakrishna
October 5, 2022
in NATION, STATE
Reading Time: 2 mins read
0
BRS-JDS ಚುನಾವಣೆ ಮೈತ್ರಿ
1.3k
VIEWS
FacebookTwitterWhatsuplinkedinEmail

ವಿಧಾನಸಭೆ-ಲೋಕಸಭೆ ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ

ಹೆಜ್ಜೆಹೆಜ್ಜೆಗೂ ಹೆಚ್ಡಿಕೆ ವಿಶ್ವಾಸ ಪಡೆದ ಕೆಸಿಆರ್; ಬಿಜೆಪಿ-ಕಾಂಗ್ರೆಸ್ ಮುಕ್ತ್ ಕರ್ನಾಟಕ; ಹೆಚ್ಡಿಕೆ, ಕೆಸಿಆರ್ ಸಂಕಲ್ಪ


ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ‘ಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (BRS) ಹೆಸರಿನ್ಲಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಬೆಂಗಳೂರಿಗೆ ಹೊರಡುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಮುಂದುವರಿದು ಕುಮಾರಸ್ವಾಮಿ ಅವರು ಹೇಳಿದ್ದು ಇಷ್ಟು;

ಈ ಮೊದಲಿನಿಂದಲೂ ಜೆಡಿಎಸ್ ಮತ್ತು ಟಿಆರ್ ಎಸ್ ಪಕ್ಷಗಳು ಸಹಜ ಮಿತ್ರಪಕ್ಷಗಳಾಗಿದ್ದವು. ಪರಸ್ಪರ ವಿಶ್ವಾಸದಿಂದ ಕೆಲಸ ಮಾಡಿಕೊಂಡು ಬಂದಿವೆ. ಈಗ ಟಿಆರ್ ಎಸ್ ರಾಷ್ಟ್ರೀಯ ಪಕ್ಷವಾಗಿ ಬಿಆರ್ ಎಸ್ ಹೆಸರಿನಲ್ಲಿ ಹೊರಹೊಮ್ಮಿರುವುದನ್ನು ನಮ್ಮ ಪಕ್ಷ ಮುಕ್ತಮನಸ್ಸಿನಿಂದ ಸ್ವಾಗತಿಸುತ್ತಿದೆ. ಮುಂದಿನ ದಿನಗಳಲ್ಲಿ ನಾವು ಕೆ.ಚಂದ್ರಶೇಖರ್ ರಾವ್ ಅವರೊಂದಿಗೆ ಕೆಲಸ ಮಾಡುತ್ತೇವೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಆರ್ ಎಸ್ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲಿವೆ. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಬಿಜೆಪಿ-ಕಾಂಗ್ರೆಸ್ ಮುಕ್ತ್ ರಾಜಕೀಯ ವಾತಾವರಣವಿದೆ. ಅದೇ ಸ್ಥಿತಿಯನ್ನು ಕರ್ನಾಟದಲ್ಲೂ ತರಲು ನಾನು ಮತ್ತು ಚಂದ್ರಶೇಖರ್ ರಾವ್ ಅವರೂ ನಿರ್ಧಾರ ಮಾಡಿದ್ದೇವೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹೊರತಾದ ಪೂರ್ಣ ಬಹುಮತದ ಸರಕಾರ ರಚನೆ ಮಾಡುವ ಬಗ್ಗೆ ಎರಡೂ ಪಕ್ಷಗಳು ಸದೃಢವಾಗಿ ಕೆಲಸ ಮಾಡಲಿವೆ. ಸಂಪೂರ್ಣ ಬೆಂಬಲ ನೀಡುವುದಾಗಿ ಕೆಸಿಆರ್ ಅವರು ಭರವಸೆ ನೀಡಿದ್ದಾರೆ.

2023ರ ಚುನಾವಣೆಯಲ್ಲಿ ಫಲಿತಾಂಶ ಜೆಡಿಎಸ್ ಪರವಾಗಿ ಬಂದರೆ, ಅದು 2024ರ ಲೋಕಸಭೆ ಚುನಾವಣೆಗೆ ಹೊಸ ದಿಕ್ಸೂಚಿಯಾಗಲಿದೆ. ಕರ್ನಾಟಕವೂ ರಾಷ್ಟ್ರ ರಾಜಕಾರಣದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ. ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರಕಾರ ತರುವ ನಿಟ್ಟಿನಲ್ಲಿಯೂ ನಾವಿಬ್ಬರೂ ಚರ್ಚೆ ನಡೆಸಿದ್ದೇವೆ. ಅದಕ್ಕೆ ಇವತ್ತಿನ ಕಾರ್ಯಕ್ರಮ ವೇದಿಕೆಯಾಗಿದೆ.

ದೃಢ ನಾಯಕತ್ವದ ಕೆಸಿಆರ್ ಅವರು ತಮ್ಮ ಸಂಕಲ್ಪ ಬಲದಿಂದಲೇ ತೆಲಂಗಾಣದ ಜನರನ್ನು ಒಟ್ಟಾಗಿ ಕರೆದೊಯ್ದು ತೆಲಂಗಾಣ ರಾಜ್ಯವನ್ನು ಸಾಧನೆ ಮಾಡಿದರು. ನಂತರ ತಮ್ಮ ಆಡಳಿತಾವಧಿಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ʼರೈತಬಂಧುʼ, ʼದಲಿತ ಬಂಧುʼದಂತಹ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದು ಸರಕಾರದ ಕಾರ್ಯಕ್ರಮಗಳು ಪ್ರತೀ ನಾಗರಿಕನಿಗೂ ತಲುಪುವಂತೆ ಮಾಡಿದರು. ಇದೇ ರೀತಿಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಕೂಡ ಮಾಡಿತ್ತು. ಮುಂದಿನ ದಿನಗಳಲ್ಲಿ ಅಂತಹ ಜನಪರ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲೂ ಜಾರಿಗೆ ತರಲಾಗುವುದು.


ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯ ಇತ್ತು. ಕೆಲವೇ ಪಕ್ಷಗಳ ರಾಜಕೀಯ ಏಕಸ್ವಾಮ್ಯತೆಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು. ಅದಕ್ಕೆ ಬಿಆರ್ ಎಸ್ ಒಂದು ಪ್ತಬಲ ಪರ್ಯಾಯ ಎನ್ನುವುದು ನನ್ನ ಭಾವನೆ.

ಹೆಚ್.ಡಿ.ಕುಮಾರಸ್ವಾಮಿ

2023ರ ಕರ್ನಾಟಕ ಚುನಾವಣೆ, 2024ರ ಲೋಕಸಭೆ ಚುನಾವಣೆಯಲ್ಲಿ @JanataDal_S & @trspartyonline (BRS) ಒಟ್ಟಾಗಿ ಕೆಲಸ ಮಾಡಲಿವೆ. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಅದೇ ಸ್ಥಿತಿಯನ್ನು ರಾಜ್ಯದಲ್ಲೂ ತರಲು ನಾನು, ಶ್ರೀ ಕೆಸಿಆರ್ ನಿರ್ಧಾರ ಮಾಡಿದ್ದೇವೆ.1/4#JDS #BRS pic.twitter.com/OKLxBqGyEU

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 5, 2022

ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿತ್ತು. ಕೆಲ ಪಕ್ಷಗಳ ʼರಾಜಕೀಯ ಏಕಸ್ವಾಮ್ಯತೆʼ ದೇಶಕ್ಕೆ ಮಾರಕ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು. ಬಿಆರ್ ಎಸ್ ಒಂದು ʼಪ್ರಬಲ ಪರ್ಯಾಯʼ ಎನ್ನುವುದು ನನ್ನ ಭಾವನೆ. ಬಿಆರ್ ಎಸ್ ಸ್ಥಾಪನೆಯನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ. 3/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 5, 2022

ಮುಂದಿನ ದಿನಗಳಲ್ಲಿ ತಮಿಳುನಾಡಿನ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಸೇರಿದಂತೆ ಇನ್ನೂ ಹಲವಾರು ಪ್ರಮುಖ ಪಕ್ಷಗಳ ನಾಯಕರು ಬಿಆರ್ ಎಸ್ ಒಕ್ಕೂಟದಲ್ಲಿ ಕೆಲಸ ಮಾಡಲಿವೆ ಎನ್ನುವ ವಿಶ್ವಾಸ ನನಗಿದೆ. ಅಂತಹ ಪ್ರಯತ್ನ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಜೆಡಿಎಸ್-ಬಿಆರ್ ಎಸ್ ಮಿತ್ರಪಕ್ಷಗಳಾಗಿ ಮುನ್ನಡೆಯಲಿವೆ.

ರೈತರು, ದಲಿತರು ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗದ ಜನರ ಕಲ್ಯಾಣಕ್ಕಾಗಿ ಕೆಸಿಆರ್ ಅವರು ಪರಿಣಾಮ ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ತೆಲಂಗಾಣದಲ್ಲಿ ಅಂಥ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಮುಖ್ಯವಾಗಿ ದೇಶದ ಸಂಪತ್ತು ಕೆಲವರಲ್ಲಿಯೇ ಸಂಗ್ರಹವಾಗದೇ ಅದು ಸಮಾನ ಹಂಚಿಕೆ ಆಗಬೇಕು. ಸಾಮಾನ್ಯನಿಗೂ ಆ ಸಂಪತ್ತಿನಲ್ಲಿ ಪಾಲಿರಬೇಕು ಎನ್ನುವ ಗುರಿಯೊಂದಿಗೆ ಅವರು ಕೆಲಸ ಮಾಡುತ್ತಿದ್ದಾರೆ. ಕೆಸಿಆರ್ ಅವರು ತಮ್ಮ ರಾಜ್ಯದಲ್ಲಿ ರೈತರಿಗೆ, ದಲಿತರಿಗೆ ಹಾಗೂ ದುರ್ಬಲರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ.

ಬಿಆರ್ ಎಸ್ ಸ್ಥಾಪನೆ ಬಗ್ಗೆ ಈ ಹಿಂದೆಯೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ನನ್ನ ಜತೆ ಕೆಸಿಆರ್ ಅವರು ಸಮಾಲೋಚನೆ ನಡೆಸಿದ್ದರು. ಕೆಲ ದಿನಗಳ ಹಿಂದೆ ಸ್ವತಃ ನಾನೇ ಹೈದರಾಬಾದ್ʼಗೆ ಭೇಟಿ ನೀಡಿ ಚರ್ಚೆ ಮಾಡಿದ್ದೆ. ನಮ್ಮನ್ನು ಪರಿಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಅವರು ಈ ಹೆಜ್ಜೆ ಇರಿಸಿದ್ದಾರೆ.

c

Tags: brsbrs partycknewsnowhd kumaraswamyindiajdsk Chandrashekar Raonational partynewsTelanganatrs
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಶಿಶುವಿಹಾರದಲ್ಲಿ ಶೂಟೌಟ್: ಮಕ್ಕಳು ಸೇರಿ 36 ಜನ ಸಾವು

ಶಿಶುವಿಹಾರದಲ್ಲಿ ಶೂಟೌಟ್: ಮಕ್ಕಳು ಸೇರಿ 36 ಜನ ಸಾವು

Leave a Reply Cancel reply

Your email address will not be published. Required fields are marked *

Recommended

ಸಮ ಸಮಾಜಕ್ಕಾಗಿ ಅಕ್ಷರಮಾಲೆ ಪೋಣಿಸಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಇನ್ನಿಲ್ಲ

ಸಮ ಸಮಾಜಕ್ಕಾಗಿ ಅಕ್ಷರಮಾಲೆ ಪೋಣಿಸಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಇನ್ನಿಲ್ಲ

4 years ago
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ದೇವಸ್ಥಾನಗಳ ಜೀರ್ಣೋದ್ದಾರ ಅನುದಾನಕ್ಕೆ ರಾಜ್ಯ ಸರಕಾರ ಬ್ರೇಕ್!

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ