• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಗುಡಿಬಂಡೆಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ ಗರಿ

cknewsnow desk by cknewsnow desk
October 30, 2022
in STATE
Reading Time: 1 min read
0
ಗುಡಿಬಂಡೆಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ ಗರಿ
1.2k
VIEWS
FacebookTwitterWhatsuplinkedinEmail

ಮುಖವೀಣೆ ಆಂಜನಪ್ಪ ಅವರನ್ನು ಹುಡುಕಿಕೊಂಡು ಬಂದ ಪ್ರಶಸ್ತಿ

ಗುಡಿಬಂಡೆ: ರಾಜ್ಯದ ಅತ್ಯಂತ ಹಿಂದುಳಿದ ತಾಲ್ಲೂಕು ಎಂದೇ ಕುಖ್ಯಾತಿಯಾಗಿರುವ ಗುಡಿಬಂಡೆ ಕಲೆಯಲ್ಲಿ ಮಾತ್ರ ಸಿರಿವಂತಿಕೆ ಕಾಪಿಟ್ಟುಕೊಂಡಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ಈ ನೆಲದ ಅಭಿಜಾತ ಕಲಾವಿದ ಮುಖವೀಣೆ ಆಂಜನಪ್ಪ ಅವರನ್ನು ರಾಜ್ಯೋತ್ಸವ ಪ್ರಶಸ್ತಿ ಹುಡುಕಿಕೊಂಡು ಬಂದಿದೆ.

ಹಿಂದೆ ಎಂದೋ ಸಿಗಬೇಕಿದ್ದ ಈ ಪ್ರಶಸ್ತಿ ಕೊನೆಗೂ ಅವರಿಗೆ ವರಿಸಿದೆ. ಆ ಮೂಲಕ ಆ ಪ್ರಶಸ್ತಿಯ ಹೊಳಪು ಹೆಚ್ಚಾಗಿದೆ.

ಮೂಲತಃ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿಕ್ಕದಾಳವಟ್ಟ ಎಂಬ ಗ್ರಾಮದ ತಿಮ್ಮಮ್ಮ-ತಿಮ್ಮಪ್ಪ ದಂಪತಿ ಪುತ್ರರಾದ ಆಂಜನಪ್ಪ ಅವರು ಸುಮಾರು 50 ವರ್ಷಗಳಿಂದ ಗುಡಿಬಂಡೆಯ ತಾಲೂಕಿನ ದಪ್ಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗವಿಕುಂಟಹಳ್ಳಿ (ಕಾಟೈಗಾರಹಳ್ಳಿ) ಯಲ್ಲಿ ಜೀವಿಸುತ್ತಿದ್ದಾರೆ. ಅವರ ಪತ್ನಿ ಹೆಸರು ಶ್ರೀಮತಿ ಲಕ್ಷಮ್ಮ.

ತಮ್ಮ ಪೂರ್ವಜರು ಹೊಟ್ಟೆಪಾಡಿಗಾಗಿ ನುಡಿಸುತ್ತಿದ್ದ ಮುಖವೀಣೆನ್ನೇ (ಇದು ಶಹನಾಯ್‌ ಮಾದರಿಯ ವಾದ್ಯ) ಅದ್ಭುತ ಪ್ರಾಚೀನ ಜಾನಪದ ಕಲೆಯನ್ನು ಮೈಗೂಡಿಸಿಕೊಂಡು, ಹಳ್ಳಿಯಿಂದ ದೆಹಲಿವರೆಗೆ ಅದರ ಪ್ರದರ್ಶನ ನೀಡುತ್ತಾ ಶ್ರೋತೃಗಳನ್ನು ಬೆರಗಿನಲ್ಲಿ ಮುಳುಗಿಸುವ ಈ ವೀಣೆಯ ಮಾಂತ್ರಿಕನಿಗೆ ಇಂದಿಗೂ ವಾಸಿಸಲು ಸುಸಜ್ಜಿತವಾದ ಒಂದು ಮನೆ ಇಲ್ಲ. ಮಹಾನ್‌ ಕಲಾವಿದನೊಬ್ಬ ಇವತ್ತು ಸೂರಿಗಾಗಿ ಅವರಿವರ ಮುಂದೆ ಬೇಡಿಕೊಳ್ಳುವ ಸ್ಥಿತಿ ಇರುವುದು ಅತ್ಯಂತ ನೋವಿನ ಸಂಗತಿ.

ಸಂಗೀತವನ್ನು ಶಾಸ್ತ್ರೀಯವಾಗಿ ಅಭ್ಯಾಸ ಮಾಡಿರುವ ಆಂಜನಪ್ಪ ಅವರು ‘ಕನಗಾಂಗಿಯ’ ದಿಂದ ಹಿಡಿದು ‘ರಸಿಕಪ್ರಿಯ’ ತನಕ 72 ಮೇಳಕರ್ತ ರಾಗಗಳನ್ನು ಸುಲಲಿತವಾಗಿ ಮುಖವೀಣೆಯಲ್ಲಿ ನುಡಿಸಬಲ್ಲರು. ರಾಜ್ಯದಲ್ಲಿ ಮಾತ್ರವಲ್ಲದೆ ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಕೇರಳ ರಾಜ್ಯಗಳಲ್ಲಿ ಕೂಡ ಅವರು ಪ್ರದರ್ಶನ ನೀಡಿದ್ದಾರೆ.

ಶಿಕ್ಷಣ ತಜ್ಞ ಎಚ್ ನರಸಿಂಹಯ್ಯ, ವರನಟ ಡಾ.ರಾಜಕುಮಾರ್, ಮೇರು ಗಾಯಕ ಘಂಟಸಾಲ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರು ಸೇರಿದಂತೆ ಅನೇಕರ ಎದುರು ತಮ್ಮ ವಿಶಿಷ್ಟ ಕಲೆಯನ್ನು ಪ್ರದರ್ಶಿಸಿ ಭೇಷ್ ಎನಿಸಿಕೊಂಡಿದ್ದಾರೆ ಆಂಜಿನಪ್ಪ ಅವರು.

ಅವರ ಕಲೆಯನ್ನು ಮೆಚ್ಚಿ ಈವರೆಗೆ ಅನೇಕ ಸಂಘ-ಸಂಸ್ಥೆಗಳು, ಮಠಗಳು ಸನ್ಮಾನಿಸಿವೆ. ದುರ್ದೈವವೆಂದರೆ ಆಂಜನಪ್ಪ ಅವರಿಗೆ ಸಂದಿರುವ ಸನ್ಮಾನಗಳಲ್ಲಿ ಬಂದಿರುವ ಸ್ಮರಣಿಕೆಗಳನ್ನು ಜೋಡಿಸಿಡಲು ಅವರಿಗೊಂದು ಚಿಕ್ಕ ಮನೆ ಕೂಡ ಇಲ್ಲ. ಜೋಪಡಿಯಲ್ಲಿ ಜೀವನ ನಡೆಸುವ ಸ್ಥಿತಿಯಲ್ಲಿರುವ ಈ ದೊಡ್ಡ ಕಲಾವಿದನಿಗೆ ದೊರೆಯಬೇಕಾದ ನಿಜವಾದ ಗೌರವ ಈವರೆಗೆ ದೊರೆತಿಲ್ಲ.

ಜಾನಪದ ಯಕ್ಷಗಾನ ಅಕಾಡಮಿ ಪ್ರಶಸ್ತಿ, ದೂರದರ್ಶನ ಕೊಡಮಾಡುವ ಚಂದನ ಪ್ರಶಸ್ತಿ, ಜಾನಪದ ಕಲಾಶ್ರೀ ಪ್ರಶಸ್ತಿ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ನೀಡುವ ರಾಜ್ಯೋತ್ಸವ ಪ್ರಶಸ್ತಿ, ಜಿಲ್ಲಾ ಪ್ರಶಸ್ತಿ, ಎಲ್.ಎಚ್. ಆರ್ ಪತ್ರಿಕಾ ಪ್ರಶಸ್ತಿ, ಆದರ್ಶ ಶೃಂಗ ಪ್ರಶಸ್ತಿ, ಜಾನಪದ ಲೋಕೋತ್ಸವ ಪ್ರಶಸ್ತಿ, ಶಾರದ ಪ್ರಶಸ್ತಿ, ಉನ್ನತಿ ಜಾನಪದ ಕಲಾಶ್ರೀ ಪ್ರಶಸ್ತಿ, ಮೇಳಾದೇವಿ ಉತ್ಸವ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಇವರಿಗೆ ಸಂದಿವೆ.

ಜೀವನದ ಸಂಧ್ಯಾಕಾಲದಲ್ಲಿರುವ ಆಂಜನಪ್ಪ ಅವರಿಗೆ ಸೂರಿಲ್ಲ ಎನ್ನುವ ಕೊರಗು ಸಂದಿರುವ ಪ್ರಶಸ್ತಿಗಳ ಸಂತಸವನ್ನು ಕಳೆದು ಹಾಕಿದೆ. ಇನ್ನಾದರೂ ಜಿಲ್ಲಾಡಳಿತ ಅಥವಾ ಸರ್ಕಾರ ಈ ಮೇರು ಕಲಾವಿದನಿಗೆ ಮನೆ ಕಟ್ಟಿಸಿಕೊಟ್ಟು ನೆಮ್ಮದಿ, ಘನತೆಯಿಂದ ಬದುಕುವ ವ್ಯವಸ್ಥೆ ಮಾಡಿಕೊಡಬೇಕು ಎನ್ನುವುದು ಪ್ರಜ್ಞಾವಂತ ನಾಗರಿಕರ ಆಗ್ರಹವಾಗಿದೆ.

Tags: awardschikkaballapuracknewsnowgudibandekannada rajyotsavamukhaveene anjanappa
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ ಬಳಿ KSRTC ಬಸ್ ಅಪಘಾತ; 15 ಪ್ರಯಾಣಿಕರಿಗೆ ಗಾಯ

ಗುಡಿಬಂಡೆ ಬಳಿ KSRTC ಬಸ್ ಅಪಘಾತ; 15 ಪ್ರಯಾಣಿಕರಿಗೆ ಗಾಯ

2 years ago
ಟೊಯೋಟ ಕಿರ್ಲೋಸ್ಕರ್‌ ಕಾರ್ಮಿಕರ ಬಿಕ್ಕಟ್ಟು ಶಮನ; 115 ದಿನಗಳ ಹಗ್ಗಜಗ್ಗಾಟ ಕೊನೆಗೂ ಸುಖಾಂತ್ಯ,  ಶುಕ್ರವಾರದೊಳಗೆ ಕೆಲಸಕ್ಕೆ ಹಾಜರಾಗಲು ಕಾರ್ಮಿಕರಿಗೆ ಡೆಡ್‌ಲೈನ್

ಟೊಯೋಟ ಕಿರ್ಲೋಸ್ಕರ್‌ ಕಾರ್ಮಿಕರ ಬಿಕ್ಕಟ್ಟು ಶಮನ; 115 ದಿನಗಳ ಹಗ್ಗಜಗ್ಗಾಟ ಕೊನೆಗೂ ಸುಖಾಂತ್ಯ, ಶುಕ್ರವಾರದೊಳಗೆ ಕೆಲಸಕ್ಕೆ ಹಾಜರಾಗಲು ಕಾರ್ಮಿಕರಿಗೆ ಡೆಡ್‌ಲೈನ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ