• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ಅಸಲಿಗೆ ಕೋಲಾರದಲ್ಲಿ ಸಿದ್ದರಾಮಯ್ಯಗೆ ಸಮಸ್ಯೆ ಯಾರು ಗೊತ್ತಾ?

P K Channakrishna by P K Channakrishna
November 13, 2022
in ELECTION2024, STATE
Reading Time: 1 min read
0
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ
993
VIEWS
FacebookTwitterWhatsuplinkedinEmail

ಸಿದ್ದು ಸಮಸ್ಯೆ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?


ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ, ಅವರು ಕೋಲಾರಕ್ಕೆ ಹೋಗಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತನಾಡಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಸಚಿವರಾಗಿದ್ದವರು ಹಾಗೂ ಉಪಮುಖ್ಯಮಂತ್ರಿಯಾಗಿದ್ದವರು. ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಅವರಿಗೆ ಕ್ಷೇತ್ರವೇ ಇಲ್ಲ ಎಂಬ ಕ್ಷುಲ್ಲಕ ಮಾತುಗಳು ನಮಗೆ ಅವಶ್ಯಕತೆ ಇಲ್ಲ ಎಂದರು.

ಸಿದ್ದರಾಮಯ್ಯ ಹೋದರು ಎಂದು ಕೋಲಾರದಲ್ಲಿ ನಮ್ಮ ಯಾವುದೇ ಕಾರ್ಯತಂತ್ರ ಬದಲಾಗಲ್ಲ. ಕೋಲಾರದಲ್ಲಿ ನಮ್ಮ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳಿದ್ದಾರೆ. ಸಿದ್ದರಾಮಯ್ಯ ಅಷ್ಟೆ ಅಲ್ಲ, ಯಾರೇ ನಿಂತರೂ ನಮ್ಮ ಪಕ್ಷಕ್ಕೆ ಆತಂಕ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕೋಲಾರದಲ್ಲಿ ಸಿದ್ದರಾಮಯ್ಯಗೆ ಸಮಸ್ಯೆಯೇ ಶ್ರೀನಿವಾಸ್‌ಗೌಡರು

ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ಸಮಸ್ಯೆ ಎಂದರೆ ನಮ್ಮ ಪಕ್ಷಕ್ಕೆ ಕೈಕೊಟ್ಟು ಹೋದ ಹಾಲಿ ಶಾಸಕ ಶ್ರೀನಿವಾಸ್‌ಗೌಡರು. ಅವರು ನಮಗೆ ಮಾಡಿದ ದ್ರೋಹವೇ ಈ ಬಾರಿ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಲಿದೆ. ಸಿದ್ದರಾಮಯ್ಯ ಅವರಿಗೆ ನಕಾರಾತ್ಮಕ ಅಂಶಗಳು ಇರುವುದೇ ಅಲ್ಲಿ. ಹೀಗಾಗಿ ನಮ್ಮ ಪಕ್ಷಕ್ಕೆ ಆತಂಕ ಏನೂ ಇಲ್ಲ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಬಹುತೇಕ ಎಲ್ಲ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆಯುತ್ತಿದೆ. ಸಿದ್ದರಾಮಯ್ಯ ಕೂಡ ಅದೇ ಲೆಕ್ಕದಲ್ಲಿ ಕೋಲಾರಕ್ಕೆ ಹೋಗಿರಬಹುದು. ಚಾಮುಂಡೇಶ್ವರಿ, ಬಾದಾಮಿಯಲ್ಲೂ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆದಿದೆ. ಕಳೆದ ಚುನಾವಣೆಯಲ್ಲಿ ಕೊನೆ ಸಮಯದಲ್ಲಿ ನಾನು ಮೂರು ದಿನ ಬಾದಾಮಿಗೆ ಹೋಗದೆ ಇದ್ದಿದ್ದರೆ ಹತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಸಿದ್ದರಾಮಯ್ಯ ಅವರು ಸೋಲುತ್ತಿದ್ದರು.

ಗುಳೆದಗುಡ್ಡ ಸೇರಿದಂತೆ ಹಲವೆಡೆ ನಾನು ಅಂತಿಮ ಕ್ಷಣದಲ್ಲಿ ಪ್ರಚಾರ ಮಾಡಿದ್ದೆ, ಜನರಿಂದ ಹೆಚ್ಚು ಪ್ರತಿಕ್ರಿಯೆ ವ್ಯಕ್ತವಾಯಿತು. ನಮ್ಮ ಅಭ್ಯರ್ಥಿಗೆ 28 ಸಾವಿರ ಮತ ಪಡೆದರು. ಆಗ ಸಿದ್ದರಾಮಯ್ಯ ಚಿಕ್ಕ ಅಂತರದಲ್ಲಿ ಗೆದ್ದರು. ಇಲ್ಲವಾಗಿದ್ದರೆ ಹತ್ತು ಸಾವಿರ ಮತಗಳ ಅಂತರದಿಂದ ಸೋಲುತ್ತಿದ್ದರು. ಹಾಗೆ ನೋಡಿದರೆ ಅವರ ಗೆಲುವಿಗೆ ನಾನೇ ಕಾರಣ. ಇದರಲ್ಲಿ ಯಾವುದೇ ಸಂಶಯ ಇಲ್ಲ. ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ನನ್ನಿಂದ ರಾಜಕೀಯ ಮರುಜನ್ಮ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಾಭಿಪ್ರಾಯಕ್ಕಿಂತ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಬೇಕು. ಮಿಷನ್ 123 ಗುರಿಯಲ್ಲಿ ಕೋಲಾರ ಕ್ಷೇತ್ರವೂ ಒಂದು. ಈ ಬಗ್ಗೆ ನಾವು ಎಚ್ಚರ ತಪ್ಪುವುದಿಲ್ಲ ಎಂದು ಅವರು ತಿಳಿಸಿದರು.

ಕೆಂಪೇಗೌಡರ ಪ್ರತಿಮೆ ನಿಲ್ಲಿಸಿ ಬಿಟ್ರೆ ಒಕ್ಕಲಿಗರ ನಾಯಕರಾಗಲ್ಲ

ಬಿಜೆಪಿಯಲ್ಲಿ ಒಕ್ಕಲಿಗ ನಾಯಕರ ಬೆಳವಣಿಗೆಯನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎಂದು ಬಿಜೆಪಿಯ ಕೆಲ ನಾಯಕರು ನೀಡಿರುವ ಹೇಳಿಕೆಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿಗಳು; ನಾನು ಎರಡು ಕಡೆಗಳಲ್ಲಿ ನಾಡಪ್ರಭುಗಳ ಪ್ರತಿಮೆ ಅನಾವರಣ ಮಾಡಿ ಬಂದೆ. ಹಾಗಂತ ನನ್ನ ಜೊತೆ ಜನರು ಓಡಿ ಬರ್ತಾರಾ? ಕೆಂಪೇಗೌಡರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿದರೆ ಜನರು ಗೌರವ ನೀಡುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.

ಪ್ರತಿಮೆ ಅನಾವರಣ ಮಾಡಿರೋದಕ್ಕೂ, ಮುಂದಿನ ಚುನಾವಣೆಗೂ ಬಹಳ ವ್ಯತ್ಯಾಸ ಇದೆ. ನೆರೆ, ಬರ ಬಂದಾಗ ಜನರು ಬೀದಿಗೆ ಬಂದರು. ಜೀವಂತ ಪ್ರತಿಮೆಗಳಿಗೆ ಈ ನಾಯಕರು ಏನು ಕೊಟ್ಟಿದ್ದಾರೆ? ಹಾಗೆ ನೋಡಿದರೆ ಒಕ್ಕಲಿಗ ಸಮಾಜಕ್ಕೆ ಬಿಜೆಪಿಯ ಕೊಡುಗೆ ಏನು? ಕೆಂಪೇಗೌಡರ ಪ್ರತಿಮೆ ಮಾಡಿ ಹೆಸರಿನಲ್ಲಿ ಗಿನ್ನೆಸ್ ರೆಕಾರ್ಡ್ ಮಾಡಿದ್ದಾರೆ ಎಂದು ಹೇಳುತ್ತಾರೆ. ಅದೇ ಕೆಂಪೇಗೌಡರು ನಿರ್ಮಿಸಿದ ಕೆರೆಗಳನ್ನು ನುಂಗಿದ ಕಾರಣಕ್ಕೆ ಬಿಜೆಪಿಯವರನ್ನು ಗಿನ್ನೆಸ್ ದಾಖಲೆಗೆ ಸೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಕುಟುಕಿದರು.

ಪ್ರತಿಮೆಯಿಂದ ಮತ ಬರುತ್ತೆ ಎನ್ನುವ ಭ್ರಮೆಯಲ್ಲಿ ಇದ್ದಾರೆ ಬಿಜೆಪಿ ನಾಯಕರು. ಆ ಪ್ರತಿಮೆ ನಿರ್ಮಾಣಕ್ಕೆ 64 ಕೋಟಿ ಹಣ ಖರ್ಚು ಮಾಡಿದ್ದಾರೆ. ಪ್ರತಿಮೆ ಮಾಡಿ ದೊಡ್ಡ‌ ಲೀಡರ್ ಅನ್ನಿಸಿಕೊಳ್ತಾರಾ ಇವರು. ಇದು ಜನರಿಗೆ ಗೊತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ಬರುವಂತೆ ನಡುರಾತ್ರಿ ಬಂದು ದೇವೇಗೌಡರಿಗೆ ಆಹ್ವಾನ ನೀಡಿದ್ದಾರೆ. ಯಾರೋ ಮನೆ ಹತ್ತಿರ ಬಂದು ಪತ್ರ ‌ಕೊಟ್ಟು ಹೋಗಿದ್ದಾರೆ. ರಾತ್ರಿ ಕೊಟ್ಟ ಪತ್ರ ನೋಡಿ ಬೆಳಗ್ಗೆ ಹೋಗೋಕೆ ಆಗುತ್ತಾ? ಆಹ್ವಾನ ಪತ್ರಿಕೆ‌‌ ಮುದ್ರಣ ಮಾಡಿ 10 ದಿನ ಆಗಿದೆ. ಅದರಲ್ಲೂ ದೇವೇಗೌಡರ ಹೆಸರು ಇರಲಿಲ್ಲ. ಅವರು ಮಾಜಿ ಪ್ರಧಾನಿಗಳು ಹಾಗೂ ಹಾಲಿ ರಾಜ್ಯಸಭೆ ಸದಸ್ಯರು. ಇದೇನಾ ಶಿಷ್ಟಾಚಾರ? ಉದ್ದೇಶ ಪೂರ್ವಕವಾಗಿಯೇ ಹೀಗೆ ಮಾಡಿದ್ದಾರೆ. ಸರ್ಕಾರದ ದುಡ್ಡನಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿಕೊಂಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಅವರು ಡಬಲ್ ಎಂಜಿನ್ ಸರ್ಕಾರ ಅಂತ ಹೇಳಿದ್ದಾರೆ. ಇದು ದುಡ್ಡು ಲೂಟಿ ಮಾಡುವ ಡಬಲ್ ಎಂಜಿನ್ನಾ? ಹಣ ಹೊಡೆದುಕೊಂಡು ಹೋಗಿ ದೆಹಲಿಯಲ್ಲಿ ಇಟ್ಟುಕೊಂಡು ಹೋಗೋದಾ? ನಿಮ್ಮ ಡಬಲ್ ಎಂಜಿನ್ ಸರ್ಕಾರನಾ? ಎಂದು ಪ್ರಹಾರ ನಡೆಸಿದ ಅವರು; ವೀರಶೈವ ಸಮುದಾಯದವರು ಸೇರಿ ಎಲ್ಲರೂ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

2006ರಲ್ಲಿ ಬಿಜೆಪಿಯ ಯಾವುದೇ ನಿರ್ಧಾರಗಳು ರಾಜ್ಯದಲ್ಲಿ ಆಗುತ್ತಿದ್ದವು. ಈಗ ಎಲ್ಲವೂ ದೆಹಲಿಯಲ್ಲಿ ಆಗುತ್ತವೆ. ರಾಜ್ಯದ ಜನರ ಇದನ್ನ ಅರ್ಥ ಮಾಡಿಕೊಳ್ಳಬೇಕು. ಎಲ್ಲಾ ಲಕೋಟೆಗಳು ದೆಹಲಿಯಿಂದಲೇ ಬರುತ್ತವೆ. ಕರ್ನಾಟಕ ಲಕೋಟೆ ಎನ್ನುವುದು ಬಿಜೆಪಿಯಲ್ಲಿ ಮುಗಿದ ಅಧ್ಯಾಯ ಎಂದು ಹೇಳಿದರು ಅವರು.

Tags: cknewsnowelection 2023hd kumaraswam̧̧ykarnatakakolarPoliticssiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮುಳಬಾಗಿಲಿನಿಂದ ನ.18 ಅಥವಾ 20ಕ್ಕೆ ಪಂಚರತ್ನ ರಥಯಾತ್ರೆ ಪುನಾರಂಭ

ಮುಳಬಾಗಿಲಿನಿಂದ ನ.18 ಅಥವಾ 20ಕ್ಕೆ ಪಂಚರತ್ನ ರಥಯಾತ್ರೆ ಪುನಾರಂಭ

Leave a Reply Cancel reply

Your email address will not be published. Required fields are marked *

Recommended

ಎಲ್ಲಿದ್ದರೂ ಓಕೆ, ಯಾವಾಗ ಆದರೂ ಸರಿ, ಕಲಿಯಿರಿ‌: ಎಂಜಿನಿಯರಿಂಗ್, ಡಿಗ್ರಿ, ಡಿಪ್ಲೊಮೋದ 5 ಲಕ್ಷ‌ ವಿದ್ಯಾರ್ಥಿಗಳಿಗೆ  ಡಿಜಿಟಲ್‌ ಕ್ಲಾಸ್

ಎಲ್ಲಿದ್ದರೂ ಓಕೆ, ಯಾವಾಗ ಆದರೂ ಸರಿ, ಕಲಿಯಿರಿ‌: ಎಂಜಿನಿಯರಿಂಗ್, ಡಿಗ್ರಿ, ಡಿಪ್ಲೊಮೋದ 5 ಲಕ್ಷ‌ ವಿದ್ಯಾರ್ಥಿಗಳಿಗೆ ಡಿಜಿಟಲ್‌ ಕ್ಲಾಸ್

5 years ago
ಗುಡಿಬಂಡೆಯಲ್ಲಿ ಮನೆ ಬಾಗಿಲಿಗೇ ವ್ಯಾಕ್ಸಿನ್

ಗುಡಿಬಂಡೆಯಲ್ಲಿ ಮನೆ ಬಾಗಿಲಿಗೇ ವ್ಯಾಕ್ಸಿನ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ