• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ಪೇಶ್ವೆ ಡಿಎನ್ ಎ ವ್ಯಕ್ತಿ ಬಗ್ಗೆ ಹೇಳಿದ್ದೇನೆಯೆ ಹೊರತು ಬ್ರಾಹ್ಮಣರನ್ನು ನಿಂದಿಸಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

P K Channakrishna by P K Channakrishna
February 6, 2023
in ELECTION2024, NATION, POLITICS, STATE
Reading Time: 1 min read
0
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!
928
VIEWS
FacebookTwitterWhatsuplinkedinEmail

ಒಳ್ಳೆಯ ಬೆಲೆಯಲ್ಲಿ ಪ್ರಲ್ಹಾದ್ ಜೋಶಿ ಪಾರ್ಥೇನಿಯಂ ಇದ್ದಂತೆ ಎಂದು ಕುಟುಕಿದ ಮಾಜಿ ಮುಖ್ಯಮಂತ್ರಿ


ಬೆಂಗಳೂರು: ಮರಾಠಿ ಪೇಶ್ವೆಗಳ ಡಿ.ಎನ್ ಎ ಇರುವ ವ್ಯಕ್ತಿಯನ್ನು ಕರ್ನಾಟಕಕ್ಕೆ ಮುಖ್ಯಮಂತ್ರಿ ಮಾಡಲು ಬಿಜೆಪಿ ಮತ್ತು ಆರ್ ಎಸ್ ಎಸ್ ಹೊರಟಿವೆ ಎಂದು ಹೇಳಿದ್ದೇನೆಯೇ ಹೊರತು, ರಾಜ್ಯದ ಬ್ರಾಹ್ಮಣ ಸಮುದಾಯವನ್ನು ನಾನೆಲ್ಲೂ ನಿಂದಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುನರುಚ್ಚರಿಸಿದರು.

ಯಶವಂತಪುರ ವಿಧಾನಸಭೆ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆಯೇ ಹೊರತು ನಾನು ಎತ್ತಿದ ವಿಷಯದ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದರು.

ಪೇಶ್ವೆಗಳ ಡಿಎನ್ ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಬಿಜೆಪಿಯವರು ಹುನ್ನಾರ ಮಾಡಿದ್ದಾರೆ ಅಂತ ಹೇಳಿದ್ದೇನೆ. ಇದಕ್ಕೆ ಯಾಕೆ ಗಾಬರಿ ಯಾಕೆ? ಬ್ರಾಹ್ಮಣ ಸಮುದಾಯವೂ ಸೇರಿ ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ. ತೋರುವುದೂ ಇಲ್ಲ ಎಂದು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ನಾನು ಸಮಾಜದ ಬಗ್ಗೆ ಅಗೌರವ ತೋರಿದ್ದೇನೆ ಕೆಲವರು ನನ್ನ ಹೇಳಿಕೆಯನ್ನು ತಿರುಚಿ ಮಾತನಾಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಬಗ್ಗೆ ಹೇಳಿದ್ದೇನೆ. ನಿನ್ನೆ ನಾನು ಕೊಟ್ಟ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಕರ್ನಾಟಕದಲ್ಲಿ‌ ಇರುವ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಆ ಬ್ರಾಹ್ಮಣ ಸಮಾಜದ ಬಗ್ಗೆ ನನಗೆ ಗೌರವ ಇದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ ಮಠದ ಬಗ್ಗೆ ಗೌರವ ಇಟ್ಟುಕೊಂಡು ನಡೆದುಕೊಂಡು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ ಪಾರ್ಥೇಬಿಯಂ

ಒಳ್ಳೆಯ ಬಿತ್ತನೆಯ ಬೆಲೆಯಲ್ಲಿ ಪಾರ್ಥೇನಿಯಂ ಬೆಳೆದಂತೆ ಆಗಿದೆ ಬಿಜೆಪಿಯ ಪರಿಸ್ಥಿತಿ. ಪ್ರಲ್ಹಾದ್ ಜೋಶಿ ಅಂತಹ ಪಾರ್ಥೇಬಿಯಂ. ಹಿಂದೆ ನಿತೀಶ್ ಕುಮಾರ್ ಅವರ ಡಿಎನ್ ಎ ಬಗ್ಗೆ ಪ್ರಧಾನಿ ಮೋದಿ ಸೇರಿ ಬಿಜೆಪಿಯವರು ಟೀಕೆ ಮಾಡಿಲ್ಲವೇ? ನಾನು ಮಾತನಾಡಿದರೆ ಮಾತ್ರ ಇವರು ಅದಕ್ಕೆ ವಿವಾದದ ಸ್ವರೂಪ ಕೊಡುತ್ತಿದ್ದಾರೆ. ಇವರ ಉದ್ದೇಶ ಎಂಥದ್ದು ಎಂಬುದನ್ನು ಇದರಿಂದ ಅರಿಯಬಹುದು ಎಂದು ಬಿಜೆಪಿ ಮತ್ತು ಪ್ರಲ್ಹಾದ್ ಜೋಶಿ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.

ಬ್ರಾಹ್ಮಣ ಮಹಾಸಭಾಕ್ಕೆ ನಾನು ಹೇಳುವುದಿಷ್ಟೆ, ಬ್ರಾಹ್ಮಣ ಸಮೂದಾಯದ ವಿರುದ್ಧ ನಾನು ಹೇಳಿಕೆ ಕೊಟ್ಟಿಲ್ಲ. ನಾನು ಸಿಎಂ ಆಗಿದ್ದಾಗಲೇ ಬ್ರಾಹ್ಮಣ ಮಹಾಸಭಾಗೆ ಬನಶಂಕರಿ ಬಳಿ ಜಾಗ ಕೊಟ್ಟಿರುವುದು. ಎರಡನೇ ಬಾರಿ ಸಿಎಂ ಆಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು. ಸತ್ಯ ಹೀಗಿರುವಾಗ ಕೆಲವರು ನನ್ನ ಹೇಳಿಕೆ ತಿರುಚಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಕಿಡಿಕಾರಿದರು.

ಇನ್ನು ಸ್ಪಷ್ಟವಾಗಿ ಹೇಳುವುದಾದರೆ, ಈ ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಅಗಲಿ. ಬೇಡ ಎಂದವರು ಯಾರು? ನನ್ನ ಸಹಮತವೂ ಇದೆ. ನಾನು‌ ಸಹ ಬೆಂಬಲ ಕೊಡುವೆ. ಆದರೆ ಕರ್ನಾಟಕದ ಮೇಲೆ ದಾಳಿ ನಡೆಸಿ ಕನ್ನಡ ಪರಂಪರೆ, ಸಂಸ್ಕೃತಿಯ ಮೇಲೆ ದಾಳಿ ನಡೆಸಿದ ಪೇಶ್ವೆಗಳ ಡಿ ಎನ್ ಎ ಹೊಂದಿರುವ ವ್ಯಕ್ತಿ ಸಿಎಂ ಆಗಬೇಕಾ ಎನ್ನುವ ಪ್ರಶ್ನೆ ನನ್ನದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದರು. ಆಚಾರ ವಿಚಾರಕ್ಕೆ ಕೊಳ್ಳಿ ಇಟ್ಟರು. ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿ ಜನರ ಮನಸ್ಸು ಕೆಡಿಸಿದರು. ಸಮಾಜದಲ್ಲಿ ಕಲುಷಿತ ವಾತಾವರಣ ನಿರ್ಮಾಣ ಮಾಡಿದರು. ಆ ಕಾರಣಕ್ಕಾಗಿ ನಾನು ಕೆಲ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಅಂತ ಹೇಳಿದೆ ಎಂದ ಅವರು; ಶೃಂಗೇರಿ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಯಾರು ಗಾಂಧೀಜಿ ಅವರನ್ನು ಕೊಂದವರು ಯಾರು? ಅವರೆಲ್ಲ ಪೇಶ್ವೆ ವಂಶದವರು ಅಂತ ಹೇಳಿದ್ದೆ. ಇಂತಹವರನ್ನು ಸಿಎಂ ಮಾಡುವ ಹುನ್ನಾರ ನಡೆದಿದೆ ಅಂತ ಹೇಳಿದ್ದೆ ಎಂದರು.

ಪೇಶ್ವೆ ಬ್ರಾಹ್ಮಣರದು ಸರ್ವನಾಶೋ ಭವಂತು

ನಮ್ಮ ಬ್ರಾಹ್ಮಣ ಸರ್ವೇ ಜನ ಸುಖಿನೋ ಭವಂತು ಎಂದು ಹರಸುತ್ತಾರೆ. ಆದರೆ ಪೇಶ್ವೆ ಬ್ರಾಹ್ಮಣರು ಸರ್ವನಾಶೋ ಭವಂತು ಎಂದು ಶಪಿಸುತ್ತಾರೆ. ನಮ್ಮದು ಕುವೆಂಪು ಹೇಳಿದಂತಹ ಸರ್ವ ಜನಾಂಗದ ತೋಟ ಎಂದು ಕುಮಾರಸ್ವಾಮಿ ಅವರು ಹೇಳಿದರು.

Tags: bjpckcknewsnowhd kumaraswamymaratipeshwasPrahlad joshi
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪರ್ವೇಜ್ ಮುಶ್ರಫ್ ನಿಧನ

ಪರ್ವೇಜ್ ಮುಶ್ರಫ್ ನಿಧನ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ