• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ

P K Channakrishna by P K Channakrishna
March 30, 2023
in ELECTION2024, NATION, POLITICS, STATE, Uncategorized
Reading Time: 1 min read
0
ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಫಿಕ್ಸ್;‌  ಚಿಕ್ಕಬಳ್ಳಾಪುರ, ಕೋಲಾರದ 208 ಪಂಚಾಯತಿಗಳಿಗೆ  ಡಿ.27ಕ್ಕೆ ಮತದಾನ
919
VIEWS
FacebookTwitterWhatsuplinkedinEmail

ಇಂದಿನಿಂದಲೇ ನೀತಿ ಸಂಹಿತೆ ಜಾರಿ; ಮೇ 13ಕ್ಕೆ ಫಲಿತಾಂಶ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ರಂದು ನಡೆಯಲಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಸುದ್ದಿ ಗೋಷ್ಠಿಯಲ್ಲಿ  ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು,ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಹೇಳಿದರು.

ಏ.13ರಿಂದ ವಿಧಾನಸಭೆ ಚುನಾವಣೆಗೆ ಅಸೂಚನೆ ಹೊರಡಲಿದ್ದು, ನಾಮಪತ್ರ ಸಲ್ಲಿಕೆಗೆ ಏ.20 ಕೊನೆಯ ದಿನವಾಗಿದೆ. ಏ.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದವರು ತಿಳಿಸಿದರು.

ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತ ಚಲಾಯಿಸುವ ಅವಕಾಶ ನೀಡಲಾಗುತ್ತಿದೆ. ಸಾಕಷ್ಟು ಚಾಲೆಂಜ್ ಗಳಿವೆ, ಅವುಗಳನ್ನು ಸುಧಾರಿಸಲಾಗಿದೆ, ಬುಡಕಟ್ಟು ಸಮುದಾಯ ಮತದಾನಕ್ಕೂ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು ಯಶಸ್ವಿಯಾಗಿ ಮುಗಿಸಿದ್ದೇವೆ. ಸದ್ಯ ಕರ್ನಾಟಕ ಚುನಾವಣೆಗೆ ಎಲ್ಲಾ ಸಿದ್ಧತೆಗಳು ನಡೆದಿವೆ. ಕರ್ನಾಟಕದಲ್ಲಿ 5,21,73579 ಒಟ್ಟು ಮತದಾರರಿದ್ದು, 2, 62,42, 561 ಪುರುಷರು, 2,59,26,319 ಮಹಿಳೆಯರು, 4,699 ತೃತೀಯ ಲಿಂಗಿ ಹಾಗೂ 5.55 ಲಕ್ಷ ದಿವ್ಯಾಂಗ ಮತದಾರರಿದ್ದಾರೆ. 9.17.241 ಮಂದಿ ಮೊದಲ ಸಲ ಮತದಾನ ಮಾಡುತ್ತಿದ್ದಾರೆ ಎಂದು ವಿವರಿಸಿದರು.

ತೃತೀಯ ಲಿಂಗಿಗಳು ಮತದಾರರ ಪಟ್ಟಿಗೆ ಸೇರ್ಪಡೆಗೆ ಹಿಂದೇಟು ಹಾಕುತ್ತಾರೆ. ಅವರಿಗೆ ನೋಂದಣಿ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

58,282 ಒಟ್ಟು ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತಿದೆ. ಒಂದೊಂದು ಮತಗಟ್ಟೆಗೆ 883 ಮಂದಿ ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ.

ನಗರ ಪ್ರದೇಶದಲ್ಲಿ 24,063, ಗ್ರಾಮೀಣ ಭಾಗದಲ್ಲಿ 34,219 ಹಾಗೂ 1320 ಮಹಿಳಾ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಯುವಕರಿಗಾಗಿ 224 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇತರೆ ಮಹಾನಗರಗಳಿಗೆ ಹೋಲಿಸಿದರೆ  ಕಳೆದ ಬಾರಿ ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಿದೆ. ಹೀಗಾಗಿ ಈ ಬಾರಿ ಮತದಾನ ಹೆಚ್ಚಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಬಹಳಷ್ಟು ಐಟಿ ಕಂಪನಿಗಳು ಇದಕ್ಕೆ ಸಹಕಾರ ನೀಡುತ್ತಿವೆ ಎಂದು ರಾಜೀವ್ ಕುಮಾರ್ ವಿವರಿಸಿದರು.

ಅಭ್ಯರ್ಥಿಗಳ ಮಾಹಿತಿ, ಪ್ರಮಾಣ ಪತ್ರ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಈ ಮೂಲಕ ಜನರು ತಮ್ಮ ಅಭ್ಯರ್ಥಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.

ಅಫಿಡೆವಿಟ್ APPನಲ್ಲಿ ಅಪ್ಲೋಡ್ ಮಾಡಲಾಗುವುದು. ಆ್ಯಪ್ ಸಹಾಯದಿಂದ ಚುನಾವಣಾ ಅಕ್ರಮಗಳ ಬಗ್ಗೆ ಜನರು ದೂರು ನೀಡಬಹುದು. ಈ ಹಿಂದೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ 1028 ಕೋಟಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕರ್ನಾಟಕದಲ್ಲಿ ಅಕ್ರಮ ತಡೆಯಲು 2400 ತಂಡಗಳನ್ನು ರಚಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಪರಿಶೀಲನೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

ರಾಜೀವ್ ಕುಮಾರ್ ಜೊತೆಗೆ ಚುನಾವಣಾ ಆಯುಕ್ತರಾದ ಅರುಣ್ ಗೋಯಲ್, ಅನುಪ್ ಚಂದ್ರ ಪಾಂಡೆ, ನಿತೇಶ್ ವೈಷ್ಯ, ಧರ್ಮೇಂದ್ರ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.

Tags: ckcknewsnowelection 2023election commission of indiakarnatakaKarnataka assembly election
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಪಂಚರತ್ನ ಜಾರಿಗೆ ತೆರಿಗೆ ಹಾಕಲ್ಲ, ನಯಾಪೈಸೆ ಸಾಲ ಮಾಡಲ್ಲಎಂದ ಹೆಚ್.ಡಿ.ಕುಮಾರಸ್ವಾಮಿ

ಪಂಚರತ್ನ ಜಾರಿಗೆ ತೆರಿಗೆ ಹಾಕಲ್ಲ, ನಯಾಪೈಸೆ ಸಾಲ ಮಾಡಲ್ಲಎಂದ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ ಕರವೇ ಅಧ್ಯಕ್ಷರಾಗಿ ಶ್ರೀನಿವಾಸ್ ಯಾದವ್‌

ಗುಡಿಬಂಡೆ ಕರವೇ ಅಧ್ಯಕ್ಷರಾಗಿ ಶ್ರೀನಿವಾಸ್ ಯಾದವ್‌

3 years ago
ಕುತ್ತಿಗೆಪಟ್ಟಿ ಹಿಡಿದ ಕೋಲಾರ ಎಸ್ಪಿ ವಿರುದ್ಧ ಸಂಸದರ ಹಕ್ಕುಚ್ಯುತಿ

ಕುತ್ತಿಗೆಪಟ್ಟಿ ಹಿಡಿದ ಕೋಲಾರ ಎಸ್ಪಿ ವಿರುದ್ಧ ಸಂಸದರ ಹಕ್ಕುಚ್ಯುತಿ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ