• About
  • Advertise
  • Careers
  • Contact
Saturday, May 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

42 ಕ್ಷೇತ್ರಗಳಿಗೆ ಕಾಂಗ್ರೆಸ್‍ ಅಭ್ಯರ್ಥಿಗಳ ಘೋಷಣೆ: 2ರಲ್ಲಿ ಸಿದ್ದು, 2ರಲ್ಲಿ ಡಿಕೆಶಿ ಮೇಲುಗೈ

P K Channakrishna by P K Channakrishna
April 7, 2023
in ELECTION2024, NATION, STATE
Reading Time: 1 min read
0
ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ
931
VIEWS
FacebookTwitterWhatsuplinkedinEmail

ಕೋಲಾರದಲ್ಲಿನ್ನೂ ಕನ್‌ʼಫ್ಯೂಸ್‌, ಅನೇಕ ಕಡೆ ಬಂಡಾಯದ ಸುಳಿವು

ನವದೆಹಲಿ: ಕರ್ನಾಟಕ ವಿದಾನಸಭಾ ಚುನಾವಣೆಗೆ ಕಾಂಗ್ರೆಸ್‍ ತನ್ನ ಅಭ್ಯರ್ಥಿಗಳ 2 ನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ಒಟ್ಟು 42 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು  ಕೈ ನಾಯಕರು ಬೆಳಗ್ಗೆ ಬಿಡುಗಡೆ ಮಾಡಿದ್ದಾರೆ.

ತಮ್ಮ ಆಪ್ತ ರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದ ಡಿ.ಕೆ. ಶಿವಕುಮಾರ್‌ ಗೆ ಎರಡು ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ.

ತೀರ್ಥಹಳ್ಳಿಯಲ್ಲಿ ಮಂಜುನಾಥ ಗೌಡ ಪರ ಡಿಕೆಶಿ ಪಟ್ಟು ಹಿಡಿದಿದ್ದರು. ಆದರೆ ಕಿಮ್ಮನೆ ರತ್ನಾಕರ್ ಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಹಾಗೆಯೇ ಕಲಘಟಗಿಯಲ್ಲಿ ನಾಗರಾಜ್ ಚಬ್ಬಿಗೆ ಟಿಕೆಟ್ ಕೊಡುವಂತೆ ಡಿಕೆಶಿ ಕೋರಿದ್ದರು ಆದರೆ ಇಲ್ಲೂ ಸಂತೋಷ್‌ ಲಾಡ್ ಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ ಹಾಗಾಗು ಈ ಎರಡೂ ಕ್ಷೇತ್ರದಲ್ಲಿ ಡಿಕೆಶಿಗೆ ಹಿನ್ನಡೆಯಾಗಿದೆ.

ಬೇಲೂರಿನಲ್ಲಿ ಡಿಕೆಶಿ ಕೈ ಮೇಲಾಗಿದೆ. ರುದ್ರೇಶ್ ಗೌಡ ಕುಟುಂಬ ಹಾಗೂ ಸಿದ್ದರಾಮಯ್ಯ ಬಣ ಎರಡಕ್ಕೂ ಟಾಂಗ್ ಕೊಟ್ಟು ತಮ್ಮ ಆಪ್ತ ಮಾಜಿ ಸಚಿವ ಗಂಡಸಿ ಶಿವರಾಂಗೆ ಟಿಕೆಟ್ ಕೊಡಿಸುವಲ್ಲಿ  ಯಶಸ್ವಿಯಾಗಿದ್ದಾರೆ.

ಕೋಲಾರಕ್ಕೆ ಇನ್ನೂ ಟಿಕೆಟ್ ಪ್ರಕಟಿಸಿಲ್ಲ ಹಾಗಾಗಿ ಸಿದ್ದೂಗಾ ಅಥವಾ ಇನ್ಯಾರಿಗೆ ಟಿಕೆಟ್ ಎಂಬ ಕುತೂಹಲ ಹಾಗೆಯೇ ಇದೆ. ಜತೆಗೆ ಹಾಲಿ ಶಾಸಕ ವಿ. ಮುನಿಯಪ್ಪ ಕ್ಷೇತ್ರ ಶಿಡ್ಲಘಟ್ಟಕ್ಕೂ ಕೂಡ ಘೋಷಣೆ ಆಗಿಲ್ಲ.

ಚಿತ್ರದುರ್ಗದಲ್ಲಿ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ಗೆ ಟಿಕೆಟ್ ನೀಡದೆ ದೊಡ್ಡಣ್ಣ ಅಳಿಯ ವೀರೇಂದ್ರ ಪಪ್ಪಿಗೆ ಮಣೆ ಹಾಕಲಾಗಿದೆ.

ಹಾಲಿ ಶಾಸಕರ ಆಯ್ಕೆಯಲ್ಲಿ ಗೊಂದಲವಿದ್ದು  ಲಿಂಗಸುಗೂರು, ಪುಲಕೇಶಿ ನಗರ, ಕುಂದಗೋಳ, ಹರಿಹರ, ಶಿಡ್ಲಘಟ್ಟಕ್ಕೆ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿಲ್ಲ.

ಕರ್ನಾಟಕ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ 42 ಕ್ಷೇತ್ರದ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಗಿದೆ.

ರಾಜ್ಯದ ಭವ್ಯ ಭವಿಷ್ಯಕ್ಕಾಗಿ, ಅಭಿವೃದ್ಧಿಗಾಗಿ, ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ, ಆಯ್ಕೆ ಮಾಡಬೇಕೆಂದು ವಿನಂತಿಸುತ್ತೇವೆ. pic.twitter.com/FrV8v9wXkg

— Karnataka Congress (@INCKarnataka) April 6, 2023

ನಿಪ್ಪಾಣಿ– ಕಾಕಾಸಾಹೇಬ್ ಪಾಟೀಲ್, ಗೋಕಾಕ್– ಮಹಾಂತೇಶ್ ಕಡಾಡಿ, ಕಿತ್ತೂರು– ಬಾಬಾ ಸಾಹೇಬ್ ಡಿ ಪಾಟೀಲ್, ಸವದತ್ತಿ ಯಲ್ಲಮ್ಮ– ವಿಶ್ವಾಸ್ ವಸಂತ್ ವಿದ್ಯಾ, ಮುಧೋಳ ಎಸ್‍ಸಿ– ರಾಮಪ್ಪ ಬಾಳಪ್ಪ ತಿಮ್ಮಾಪೂರ್, ಬಿಳಗಿ– ಜಿ.ಟಿ ಪಾಟೀಲ್, ಬಾದಾಮಿ– ಭೀಮಸೇನಾ ಬಿ ಚಿಮ್ಮನಕಟ್ಟಿ, ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ, ಬಿಜಾಪುರ ನಗರ – ಅಬ್ದುಲ್ ಅಹ್ಮದ್ ಖಾಜಸಾಹೇಬ್ ಮುಷರಫಿ, ನಾಗಠಾಣ ಎಸ್‍ಸಿ– ವಿಠಲ್ ಕಟಕದೋಂಧ್, ಅಫ್ಜಲಪುರ್– ಎಂವೈ ಪಾಟೀಲ್, ಯಾದಗಿರಿ– ಚನ್ನರೆಡ್ಡಿ ಪಾಟೀಲ್, ಗುರುಮಿಠ್ಕಲ್– ಚಿಂಚನಸೂರ್, ಕಲಬುರಗಿ ದಕ್ಷಿಣ– ಅಲ್ಲಮಪ್ರಭು ಪಾಟೀಲ್, ಬಸವಕಲ್ಯಾಣ – ವಿಜಯ್ ಧರ್ಮಸಿಂಗ್, ಗಂಗಾವತಿ – ಇಕ್ಬಾಲ್ ಅನ್ಸಾರಿ, ನರಗುಂದ– ಬಿ.ಆರ್ ಯಾವಗಲ್, ಧಾರವಾಡ– ವಿನಯ್ ಕುಲಕರ್ಣಿ, ಕಲಘಟಗಿ– ಸಂತೋಷ್ ಎಸ್ ಲಾಡ್, ಸಿರಸಿ– ಭಿಮಣ್ಣ ನಾಯಕ್, ಯಲ್ಲಾಪುರ– ವಿಎಸ್ ಪಾಟೀಲ್,‌ ಕೂಡ್ಲಿಗಿ– ಶ್ರೀನಿವಾಸ್‌ ಎನ್‌.ಟಿ, ಮೊಳಕಾಲ್ಮೂರು– ಎನ್‌ ವೈ ಗೋಪಾಲಕೃಷ್ಣ, ಚಿತ್ರದುರ್ಗ– ಕೆ.ಸಿ ವೀರೇಂದ್ರ, ಹೊಳಲ್ಕೆರೆ– ಹೆಚ್.‌ ಆಂಜನೇಯ, ಚನ್ನಗಿರಿ– ಬಿ.ವಿ ಶಿವಗಂಗಾ, ತೀರ್ಥಹಳ್ಳಿ– ಕಿಮ್ಮನೆ ರತ್ನಾಕರ್‌, ಉಡುಪಿ– ಪ್ರಸಾದ್‌ ರಾಜ್‌ ಕಾಂಚಾನ, ಕಡೂರು– ಕೆ.ಎಸ್‌ ಆನಂದ್‌, ತುಮಕೂರು ನಗರ, ಇಕ್ಬಾಲ್‌ ಅಹ್ಮದ್‌, ಗುಬ್ಬಿ– ಎಸ್‌.ಆರ್‌ ಶ್ರೀನಿವಾಸ್‌, ಯಲಹಂಕ– ಕೇಶವ ರಾಜಣ್ಣ ಬಿ, ಯಶವಂತಪುರ– ಎಸ್‌. ಬಾಲರಾಜ್‌ ಗೌಡ, ಮಹಾಲಕ್ಷ್ಮಿ ಲೇ ಔಟ್–‌ ಕೇಶವಮೂರ್ತಿ,  ಪದ್ಮನಾಭನಗರ– ರಘುನಾಥ ನಾಯ್ಡು, ಮೇಲುಕೋಟೆ– ದರ್ಶನ್‌ ಪುಟ್ಟಣ್ಣಯ್ಯ, ಮಂಡ್ಯ– ಪಿ. ರವಿಕುಮಾರ್‌, ಕೆ ಆರ್ ಪೇಟೆ– ಬಿ.ಎಲ್‌ ದೇವರಾಜ್‌, ಬೇಲೂರು– ಬಿ. ಶಿವರಾಂ, ಮಡಿಕೇರಿ– ಮಂಥರ್‌ ಗೌಡ, ಚಾಮುಂಡೇಶ್ವರಿ– ಸಿದ್ದೇಗೌಡ, ಕೊಳ್ಳೇಗಾಲ– ಎ. ಆರ್‌ ಕೃಷ್ಣಮೂರ್ತಿ.

ಟಿಕೆಟ್ ವಂಚಿತರು: ಕಡೂರು– ವೈ. ಎಸ್. ವಿ ದತ್ತ, ಚನ್ನಗಿರಿ– ವಡ್ನಾಳ್ ರಾಜಣ್ಣ, ಚಿತ್ರದುರ್ಗ– ರಘು ಆಚಾರ್, ತೀರ್ಥಹಳ್ಳಿ– ಮಂಜುನಾಥಗೌಡ, ಮೊಳಕಾಲ್ಮೂರು– ಯೋಗೀಶ್ ಬಾಬು, ಕಲಘಟಗಿ– ನಾಗರಾಜ್ ಛಬ್ಬಿ.

Tags: ckcknewsnowkarnatakakolar
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ಯಾವ ಕ್ಷೇತ್ರದಿಂದ ಯಾರಿಗೆ BJP ಟಿಕೆಟ್?

Leave a Reply Cancel reply

Your email address will not be published. Required fields are marked *

Recommended

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಭರಾಟೆ; ಮುನಿರತ್ನ ಹ್ಯಾಟ್ರಿಕ್‌, 70 ವರ್ಷಕ್ಕೆ ಶಿರಾದಲ್ಲಿ ಅರಳಿದ ಕಮಲ

ಜೈಲಿಗೆ ಬೇಕಾದರೂ ಹೋಗುವೆ, ಕಾಂಗ್ರೆಸ್‍ಗೆ ವಾಪಸ್‌ ಹೋಗಲ್ಲ ಎಂದ ಮುನಿರತ್ನ

2 years ago
ಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ಖಚಿತ ಎಂದ ಸಿಎಂ

ಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ಖಚಿತ ಎಂದ ಸಿಎಂ

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ