• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸಿಎಲ್‌ಪಿ ಸಭೆಯಲ್ಲಿ ಪ್ರದೀಪ್‌ ಈಶ್ವರ್‌ ಕಮಾಲ್‌

P K Channakrishna by P K Channakrishna
May 24, 2023
in NATION, STATE
Reading Time: 1 min read
0
ಸಿಎಲ್‌ಪಿ ಸಭೆಯಲ್ಲಿ ಪ್ರದೀಪ್‌ ಈಶ್ವರ್‌ ಕಮಾಲ್‌
1.8k
VIEWS
FacebookTwitterWhatsuplinkedinEmail

ಮುಖ್ಯಮಂತ್ರಿ ಮೆಚ್ಚುಗೆಗೆ ಪಾತ್ರವಾದ ಪರಿಶ್ರಮಿ

ಬೆಂಗಳೂರು: 2024ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷವನ್ನು ಹೆಚ್ಚು ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಶಾಸಕರಿಗೆ ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್‌ ಸೂಚನೆಗಳನ್ನು ನೀಡಿದ್ದಾರೆ. ಅಲ್ಲದೆ, ಬಿಜೆಪಿ ಸರಕಾರದ ಪ್ರಭಾವೀ ಸಚಿವರನ್ನು ಸೋಲಿಸಿ ಗೆದ್ದು ಬಂದಿರುವ ಯುವ ಶಾಸಕರನ್ನು ಬಹಳ ಮುತುವರ್ಜಿಯಿಂದ ವಿಚಾರಿಸಿಕೊಂಡರು.

ಬುಧವಾರ ಬೆಳಿಗ್ಗೆ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರುಗಳಿಗೆ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದು ಈಗಿನಿಂದಲೇ ಕೆಲಸ ಪ್ರಾರಂಭಿಸುವಂತೆ ಆದೇಶಿಸಿದರು. 135 ಕ್ಷೇತ್ರ ಗಳಿಸಿರುವ ಕಾಂಗ್ರೆಸ್ ಪಕ್ಷವು, ಲೋಕಸಭೆ ಚುನಾವಣೆಯಲ್ಲೂ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು.

ಬಿಜೆಪಿ ಸರಕಾರದ ಹೈಪ್ರೊಫೈಲ್‌ ಮಂತ್ರಿ ಡಾ.ಸುಧಾಕರ್ ಅವರನ್ನು‌ ಸೋಲಿಸಿದ ಪ್ರದೀಪ್ ಈಶ್ವರ್ ಅವರನ್ನು ಸಿದ್ದರಾಮಯ್ಯ ‌ವಿಶೇಷವಾಗಿ ವಿಚಾರಿಸಿದರು. ಹಾಗೆ ನೋಡಿದರೆ, ಇಡೀ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರದೀಪ್‌ ಈಶ್ವರ್‌ ಅವರೇ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದರು. ಬಹಳಷ್ಟು ಶಾಸಕರು ಬಂದೂಬಂದು ಚಿಕ್ಕಬಳ್ಳಾಪುರ ಶಾಸಕರಿಗೆ ಕೈಕುಲಕಿ ಮೆಚ್ಚುಗೆ ಸೂಚಿಸುತ್ತಿದ್ದದ್ದು ಕಂಡು ಬಂದಿತು.

ಹಾಗೆಯೇ; ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಫರ್ಧಿಸಿ ಜಯಗಳಿಸಿರುವ ಲತಾ ಮಲ್ಲಿಕಾರ್ಜುನ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಹ ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರು ಅನುಮೋದಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವ ಸಂಪುಟದ ನೂತನ ಸಚಿವರು ಹಾಗೂ ಶಾಸಕರು ಹಾಗೂ ಪಕ್ಷದ‌‌ ನಾಯಕರು ಉಪಸ್ಥಿತರಿದ್ದರು. pic.twitter.com/Z5jIunh8jf

— DK Shivakumar (@DKShivakumar) May 24, 2023

ಸಭೆಯಲ್ಲಿ ಸಿದ್ದರಾಮಯ್ಯ ಶಾಸಕರಿಗೆ‌ ಕೆಲ ಸೂಚನೆಗಳನ್ನು ನೀಡಿದ್ದಾರೆ. ರಾಜ್ಯದ ಜನತೆ ಅಪಾರ ನಿರೀಕ್ಷೆಗಳ ಜತೆಗೆ ನಮಗೆ ಅಪಾರ ಬಹುಮತದ ಮೂಲಕ ಜವಾಬ್ದಾರಿ ವಹಿಸಿದ್ದಾರೆ. 5 ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆಗಳನ್ನು ಈಡೇರಿಸಿ ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ಕಡ್ಡಾಯವಾಗಿ ಹೆಚ್ಚು ಕ್ರಿಯಾಶೀಲರಾಗಿ ಭಾಗವಹಿಸಿ. ನಿಮಗೆ ತಿಳಿಯದೇ ಇರುವ ವಿಚಾರಗಳು ಇರುತ್ತವೆ ಅದನ್ನೆಲ್ಲ ತಿಳಿದುಕೊಳ್ಳಿ,ಬಿಜೆಪಿಯವರು ಮಾಡುವ ಸುಳ್ಳು ಅಪಾದನೆಗಳನ್ನು ಯಶಸ್ವಿಯಾಗಿ ಎದುರಿಸಲು ಎಲ್ಲಾ ಶಾಸಕರು ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಕಡಕ್ ಸೂಚನೆ ನೀಡಿದ್ದಾರೆ.

ಕೇಂದ್ರದ ತಾರತಮ್ಯ ನೀತಿಯಿಂದ ರಾಜ್ಯದ ಜನತೆಗೆ ಅಪಾರ ನಷ್ಟವಾಗಿದೆ. ಹಣಕಾಸು ಆಯೋಗದಲ್ಲೂ ನಮಗೆ ಅನ್ಯಾಯವಾಗಿದೆ. ತೆರಿಗೆ ಪಾಲಿನಲ್ಲೂ ಅನ್ಯಾಯವಾಗಿದೆ. ನಮ್ಮ ನಾಡಿನ‌ ಜನತೆ ಕಟ್ಟುವ ತೆರಿಗೆಯಲ್ಲಿ ನಮ್ಮ ಪಾಲು ಸಮರ್ಪಕವಾಗಿ ಬರುತ್ತಿಲ್ಲ. ನಾವು ಒತ್ತಡ ಮತ್ತು ಬೇಡಿಕೆ ಮೂಲಕ ನಮ್ಮ ಪಾಲನ್ನು ನಾವು ಪಡೆದುಕೊಳ್ಳಬೇಕು.

ಕೇಂದ್ರದಿಂದ ರಾಜ್ಯಕ್ಕೆ, ನಾಡಿನ ಜನತೆಗೆ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆ ಆದ ಸಂಸದರು ನಾಲ್ಕೂವರೆ ವರ್ಷಗಳ ಕಾಲ ನಾಡಿನ ಜನತೆಯ ಪರವಾಗಿ ಬಾಯಿ ಬಿಡಲಿಲ್ಲ. ಇದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಕೋವಿಡ್, ಪ್ರವಾಹದ ಸಂದರ್ಭದಲ್ಲೂ ಈ ಸಂಸದರು ರಾಜ್ಯದ ಪರವಾಗಿ ಕೇಂದ್ರದ ಮುಂದೆ ಚಕಾರ ಎತ್ತಿಲ್ಲ,ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ಸರಿಯಾದ ಉತ್ತರ ಕೊಡಬೇಕಿದೆ.

ಆದ್ದರಿಂದ ಬರಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಜನಪರವಾಗಿ ಕೆಲಸ ಮಾಡಬೇಕೆಂದು ಸಿದ್ದರಾಮಯ್ಯ ‌ಕಾಂಗ್ರೆಸ್ ಶಾಸಕರಿಗೆ ಸೂಚನೆ ನೀಡಿದ್ದಾರೆ.

Tags: ckcknewsnowclpCongresspradeepeshwarsiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ವಿಧುರಾಶ್ವತ್ಥದಲ್ಲಿ ಗಂಗಾ ಪೂಜೆ ನೆರೆವೇರಿಸಿದ ನಿಖಿಲ್

ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ

Leave a Reply Cancel reply

Your email address will not be published. Required fields are marked *

Recommended

ಉನ್ನತ ಶಿಕ್ಷಣ ಡಿಜಿಟಲೀಕರಣ; ಜುಲೈ 15ರಿಂದ ಎಲ್ಲ ಆನ್‌ಲೈನ್

ನ.17ರಿಂದ ಪದವಿ, ಎಂಜನೀಯರಿಂಗ್‌, ಡಿಪ್ಲೊಮೋ ಕಾಲೇಜ್‌ ಆರಂಭ; ಹೊಸ SOP ರಿಲೀಸ್

5 years ago
ಮೈಸೂರಿನಲ್ಲಿ ಮೋದಿ ಮೋಡಿ

ಮೈಸೂರಿನಲ್ಲಿ ಮೋದಿ ಮೋಡಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ