• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

HDK ಪೆನ್‌ಡ್ರೈವ್ ನಲ್ಲಿ ಯಾವ ಮಂತ್ರಿ ಜಾತಕ ಅಡಗಿದೆ?

cknewsnow desk by cknewsnow desk
July 5, 2023
in POLITICS, STATE
Reading Time: 2 mins read
0
HDK ಪೆನ್‌ಡ್ರೈವ್ ನಲ್ಲಿ ಯಾವ ಮಂತ್ರಿ ಜಾತಕ ಅಡಗಿದೆ?
982
VIEWS
FacebookTwitterWhatsuplinkedinEmail

ಹೆಚ್ಚಿದ ಕುತೂಹಲ; ಕಾಂಗ್ರೆಸ್‌ ಪಾಳಯದಲ್ಲಿ ತಣಿಯದ ತಳಮಳ

  • ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ; ₹10 ಕೋಟಿಗೆ ಹುದ್ದೆ ಬಿಕರಿ
  • ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನೇರ ಆರೋಪ
  • ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ಎಂದು ಪೆನ್ ಡ್ರೈವ್ ಪ್ರದರ್ಶನ ಮಾಡಿದ ಮಾಜಿ ಮುಖ್ಯಮಂತ್ರಿ
  • ಈ ಸರಕಾರದಲ್ಲಿ ನಗದು ಅಭಿವೃದ್ಧಿ ಇಲಾಖೆ ಇದೆ

ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10 ಕೋಟಿ ರೂಪಾಯಿ ಫಿಕ್ಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸ್ಫೋಟಿಸುತ್ತಿರುವ ಸರಣಿ ಭ್ರಷ್ಟಾಚಾರದ ಬಾಂಬುಗಳು ಹಸ್ತಪಾಳಯದಲ್ಲಿ ತೀವ್ರ ತಳಮಳಕ್ಕೆ ಕಾರಣವಾಗಿದೆ.

ಅಲ್ಲದೆ, ಸಿದ್ದರಾಮಯ್ಯ ಸರಕಾರದ ʼಕಾಸಿಗಾಗಿ ಹುದ್ದೆʼ ಸಿಕ್ಕಿನಲ್ಲಿ ಸಿಲುಕಿಕೊಂಡಿರುವ ಸಚಿವರು ಯಾರು? ಹೆಚ್.ಡಿ.ಕುಮಾರಸ್ವಾಮಿ ಅವರು ತೋರಿಸಿದ ಪೆನ್‌ ಡ್ರೈವ್‌ ನಲ್ಲಿ ಯಾವ ಮಂತ್ರಿ ಹಗರಣ ಅಡಗಿದೆ ಎನ್ನುವ ಚರ್ಚೆ ದೊಡ್ಡ ಪ್ರಮಾಣದಲ್ಲಿ ಶುರುವಾಗಿದೆ. ಜತೆಗೆ; ಕುಮಾರಸ್ವಾಮಿ ಅವರು ಸಿಡಿಸಿದ ಬಾಂಬ್‌ ಇಂದು ವಿಧಾನಸೌಧದಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿ ಮಾಡಿತ್ತು.

ಕುಮಾರಸ್ವಾಮಿ ಅವರು ಪೆನ್‌ ಡ್ರೈವ್‌ ಪ್ರದರ್ಶನ ಮಾಡುತ್ತಿದ್ದಂತೆಯೇ ಮಾಧ್ಯಮಗಳು ದೊಡ್ಡ ಪ್ರಮಾಣದಲ್ಲಿ ಬ್ರೇಕ್‌ ಮಾಡಿದವು. ಯಾವ ಮಂತ್ರಿ ಜಾತಕ ಅಡಗಿರಬಹುದು ಎಂದು ಲೆಕ್ಕಾಚಾರ ಹಾಕಿದವು. ಕೆಲವರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಎಂದರೆ, ಇನ್ನೂ ಕೆಲವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಊಹೆ ಮಾಡಿದರು. ಮತ್ತೆ ಕೆಲವರು ಕೆ.ಎಚ್.ಮುನಿಯಪ್ಪ ಎಂದುಕೊಂಡರು.

ಕೆಲ ಮಾಧ್ಯಮಗಳಂತೂ ಪೆನ್‌ ಡ್ರೈವ್‌ ಬೆನ್ನತ್ತಿದವು. ಕುಮಾರಸ್ವಾಮಿ ಅವರನ್ನು ಪೆನ್‌ ಡ್ರೈವ್‌ ಕೊಡಿ ಎಂದು ಕೇಳಿದವು.

ಇಷ್ಟಕ್ಕೂ ಕುಮಾರಸ್ವಾಮಿ ಅವರು ಹೂಡಿದ ಬಾಣಗಳೇನು? ಅನ್ನುವುದಾದರೆ; ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10 ಕೋಟಿ ರೂಪಾಯಿ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ನೇರ ಆರೋಪ ಮಾಡಿದರು.

ಈ ಸರಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಪೂರ್ಣವಾಗಿ ನಿರತವಾಗಿದೆ ಎಂದು ನೇರ ಆರೋಪ ಮಾಡಿದ ಅವರು, ಈ ಸರ್ಕಾರ ಸಂಪೂರ್ಣವಾಗಿ ಕಾಸಿಗಾಗಿ ಹುದ್ದೆ ದಂಧೆಯಲ್ಲಿ ತೊಡಗಿದೆ ಎಂದು ಹೇಳಿ ತಮ್ಮ ಬಳಿ ಮಹತ್ವದ ದಾಖಲೆ ಇದೆ ಎಂದು ಒಂದು ಪೆನ್ ಡ್ರೈವ್ ಪ್ರದರ್ಶಿಸಿದರು.

ವಿಧಾನಸೌಧದಲ್ಲಿ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸರಕಾರದ ವಿರುದ್ಧ ತೀವ್ರ ರೀತಿಯಲ್ಲಿ ಹರಿಹಾಯ್ದರು.

ಇಂಧನ‌ ಇಲಾಖೆಯಲ್ಲಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಈ ಸರ್ಕಾರದಲ್ಲಿ ನಗದು ಅಭಿವೃದ್ಧಿ ಇಲಾಖೆ ಒಂದು ಇದೆ ಎಂದು ಯಾರೊ ಹೇಳಿದರು. ಅದನ್ನು ‘ನಗದು ಅಭಿವೃದ್ಧಿ ‘ ಇಲಾಖೆ ಅಂತ ಯಾಕೆ ಕರೆಯಬಹುದು ಎಂದು ಅವರು ವಿವರಿಸಿದರು. ಅದು ನಿಜ ಆಗುತ್ತಿರುವ ರೀತಿಯಲ್ಲಿಯೇ ನಗರವನ್ನು ಅಭಿವೃದ್ಧಿ ಮಾದರಿ ರೆಡಿ ಮಾಡಿ ಇಟ್ಟುಕೊಂಡಿದ್ದಾರೆ. ಬೆಂಗಳೂರಿಗೆ ಒಬ್ಬರು, ಬೆಂಗಳೂರು ಹೊರಗೆ ಒಬ್ಬರು ‘ನಗದು ಅಭಿವೃದ್ಧಿ ‘ ಮಾಡಿಕೊಳ್ಳುತ್ತಿದ್ದಾರೆ. ಇವರಿಗೆ ಅಭಿವೃದ್ಧಿ ಎಂದರೆ ನಗದು ಅಭಿವೃದ್ಧಿ ಮಾತ್ರ ಎಂದು ಕುಮಾರಸ್ವಾಮಿ ಅವರು ಹರಿಹಾಯ್ದರು.

ನಿನ್ನೆ ಇಂಧನ ಇಲಾಖೆಯಲ್ಲಿ ಎರಡು ವರ್ಗಾವಣೆಗಳು ಆಗಿವೆ. ಆ ಎರಡು ಹುದ್ದೆಗಳನ್ನು ತಲಾ 10 ಕೋಟಿ ರೂಪಾಯಿಗೆ ಮಾರಿಕೊಳ್ಳಲಾಗಿದೆ. ಅಲ್ಲಿಗೆ ಬಂದು ಕೂತಿರುವ ಆ ಅಧಿಕಾರಿ ಒಂದು ದಿನಕ್ಕೆ 50 ಲಕ್ಷ ಕಮಿಷನ್ ಹೊಡೆಯುತ್ತಾನೆ ಎನ್ನುವ ಮಾಹಿತಿ ಸಿಕ್ಕಿದೆ. ಈ ಅಸಹ್ಯಕ್ಕೆ ಸರ್ಕಾರ ಏನು ಉತ್ತರ ಕೊಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಖಾರವಾಗಿ ಪ್ರಶ್ನಿಸಿದರು.

ಇದೇ ವೇಳೆ ಅವರು ಇಂಧನ ಇಲಾಖೆಯಲ್ಲಿ ವರ್ಗಾವಣೆ ಅದವರ ವರ್ಗಾವಣೆ ಪತ್ರಗಳನ್ನು ಮಾಧ್ಯಮಗಳಿಗೆ ನೀಡಿದರು.

ವೆಸ್ಟ್ ಎಂಡ್ ಎಂದ ಕಾಂಗ್ರೆಸ್ ಗೆ ಚಾಟಿ

ತಮ್ಮ ಬಗ್ಗೆ ಲಘುವಾಗಿ ಟೀಕೆ ಮಾಡಿರುವ ಕಾಂಗ್ರೆಸ್ ಬಗ್ಗೆ ತೀವ್ರವಾಗಿ ಹರಿಹಾಯ್ದ ಕುಮಾರಸ್ವಾಮಿ ಅವರು, KST ಟ್ಯಾಕ್ಸ್ ನಾನು ಇಟ್ಕೊಂಡಿಲ್ಲ. ಹಿಂದೆ ನಾನು ಕಾಂಗ್ರೆಸ್ ಪಕ್ಷದ ಮೈತ್ರಿ ಸರಕಾರ ರಚನೆ ಮಾಡಿದ್ದೆ. ಒಂದು ವೇಳೆ ವೆಸ್ಟೆಂಡ್ ಬಾಕಿ ಬಿಲ್ ಕಾಂಗ್ರೆಸ್ ಗೆ ಕಳಿಸಿದರಾ ಎನ್ನುವುದು ನನ್ನ ಅನುಮಾನ ಎಂದು ಕೈ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿಗಳು ಕಟುವಾಗಿ ಟಾಂಗ್ ಕೊಟ್ಟರು.

ನಾನೇನು ಬೀದಿಲಿ ಹೋಗೋದಾ? ಮುಖ್ಯಮಂತ್ರಿಯಾಗಿ ಬೀದಿಯಲ್ಲಿ ಇರಬೇಕಿತ್ತಾ? ಸ್ವಲ್ಪ ಹಣ ಖರ್ಚು ಮಾಡುವ ಯೋಗ್ಯತೆಯೂ ನನಗೆ ಇಲ್ವಾ? ತಾಜ್ ವೆಸ್ಟ್ ಎಂಡ್‌ನಲ್ಲಿ ಈಗಲೂ ರೂಂ ಇದೆ. ಇವರನ್ನು ಕೇಳಿ ನಾನು ರೂಂ ಮಾಡಬೇಕಾ? ಎಷ್ಟು ಗಂಟೆಗೆ ವಾಶ್‌ರೂಂಗೆ ಹೋಗಬೇಕು ಎಂದು ಕಾಂಗ್ರೆಸ್‌ನವರನ್ನ ಕೇಳಬೇಕಾ? ಬೇಕಿದ್ದರೆ ನನ್ನ ಆಸ್ತಿಯ ಬಗ್ಗೆ ತನಿಖೆ ಮಾಡಲಿ. ರಾಜಕೀಯಕ್ಕೆ ಬರುವ ಮುಂಚೆ ನನ್ನ ಎಷ್ಟಿತ್ತು ಆಸ್ತಿ? ಈಗ ಎಷ್ಟಿದೆ ಅಂತ ತನಿಖೆ ಮಾಡಲಿ ಎಂದು ಅವರು ಸವಾಲು ಹಾಕಿದರು.

ನಾನು ಬೇಸಾಯ ಮಾಡಿದವನು, ಸಿನಿಮಾ ಮಾಡಿದವನು. ಕೆಲವರಂತೆ ಟೆಂಟಿನಲ್ಲಿ ನೀಲಿಚಿತ್ರ ತೋರಿಸಿ ದುಡ್ಡು ಮಾಡಿದವನಲ್ಲ. ರೌಡಿಗಳಿಗೆ ಎಣ್ಣೆ ಸಪ್ಲೈ ಮಾಡಿಕೊಂಡು ಬಂದಿದ್ದೀನಾ? ನಾನು ಹೇಗೆ ಬೆಳೆದುಬಂದೆ ಎನ್ನುವ ಅರಿವು ನನಗೂ ಇದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದಾಖಲೆ ಜೇಬಿನಲ್ಲೇ ಇದೆ, ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ

ದಾಖಲೆಗಳ ಬಗ್ಗೆ ನನ್ನ ಬಳಿ ಹುಡುಗಾಟ ಆಡುವುದು ಬೇಡ. ದಾಖಲೆ ಇಲ್ಲದೆ ನಾನು ಮಾತನಾಡುವುದಿಲ್ಲ. ಕಳೆದ ಮೂರೂವರೆ ವರ್ಷ ಒಂದು ದಾಖಲೆಯನ್ನೂ ಬಿಡದೆ ಕಾಂಗ್ರೆಸ್ ಪಕ್ಷ ಗಾಳಿಯಲ್ಲಿ ಗುಂಡು ಹೊಡೆಯಿತು. ನಾನು ಹಾಗೆ ಮಾಡುವುದಿಲ್ಲ. ದಾಖಲೆ ಇರುವ ಪೆನ್ ಡ್ರೈವ್ ನನ್ನ ಜೇಬಿನಲ್ಲೆ ಇದೆ. ಸಮಯ ಬರಲಿ, ಬಿಡುಗಡೆ ಮಾಡ್ತೀನಿ ಎಂದು ಸ್ಪಷ್ಟ ಮಾತುಗಳಲ್ಲಿ ಕುಮಾರಸ್ವಾಮಿ ಅವರು ಹೇಳಿದರು.

ನಮ್ಮಿಂದ ಬೆಳೆದವರು ನಮ್ಮ ಬಗ್ಗೆಯೇ ಮಾತನಾಡುತ್ತಾರೆ. ಮಾತನಾಡಲಿ, ಅದು ಅವರ ಗುಣ ತೋರಿಸುತ್ತದೆ. ಎಲ್ಲಕ್ಕೂ ಕಾಲವೇ ಉತ್ತರ ನೀಡುತ್ತದೆ. ನಿನ್ನೆ ಮಂಡ್ಯದಲ್ಲಿ ಒಂದು ವರ್ಗಾವಣೆ ಆಯ್ತಲ್ಲ, ತಪ್ಪು ಎಸಗಿ ಸೇವೆಯಿಂದ ಅಮಾನತು ಆದವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಂಡು ಪಟ್ಟ ಕಟ್ಟಿದ್ದಾರೆ. ಲಾಟರಿ ದಂಧೆ ನಡೆಸಿದವರನ್ನು ಆಚೆ ಕಳಿಸಿದವನು ನಾನು. ಇವರು ನನ್ನ ಬಗ್ಗೆ ಮಾತನಾಡುತ್ತಾರೆ ಎಂದು ಅವರು ಕಿಡಿಕಾರಿದರು.

ಮೈ ಕೈ ಪರಚಿಕೊಳ್ಳೋದು ಬೇಡ ಅಂತಾ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಾನೇಕೆ ಮೈ ಕೈ ಪರಚಿಕೊಳ್ಳಲಿ?ಸೋತಾಗಲೂ ಜನರ ಕಷ್ಟ ಸುಃಖ ಕೇಳಿದ್ದೇವೆ. ಅಧಿಕಾರ ಬಂದಾಗ ಹಿಗ್ಗಿಲ್ಲ, ಇಲ್ಲದಾಗ ಕುಗ್ಗಿಲ್ಲ . ಇವರಿಂದ ಕಲಿಯೋ ದರಿದ್ರ ನಂಗೆ ಬಂದಿಲ್ಲ ಎಂದು ಅವರು ಕಿಡಿಕಾರಿದರು.

ಟನಲ್ ಹೊಡಿಯೋಕೆ ಹೋಗಿ ಬೆಂಗಳೂರು ಸಮಾಧಿ ಮಾಡಿಬಿಟ್ಟಿರಾ?

ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣ ಪ್ರಸ್ತಾಪ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಅವರು; ಟನಲ್ ಹೊಡಿಯೋಕೆ ಹೋಗಿ ಬೆಂಗಳೂರು ಸಮಾಧಿ ಮಾಡಿಬಿಟ್ಟಿರಾ, ಜೋಕೆ ಎಂದು ಎಚ್ಚರಿಸಿದರು.

ಬೆಂಗಳೂರು ಅಭಿವೃದ್ಧಿ ಮಾಡೋಕೆ ಹೋಗಿ ಈಗಾಗಲೇ ಸಮಾಧಿ ಮಾಡಿದ್ದೀರಿ. ಬೆಂಗಳೂರು ಅಭಿವೃದ್ಧಿಗೆ ಅತ್ಯುತ್ತಮ ಗುಣಮಟ್ಟದಲ್ಲಿ ತಾಂತ್ರಿಕವಾಗಿ, ಪ್ರಾಯೋಗಿಕವಾಗಿ ಕೆಲಸ ಮಾಡಿ. ಟನಲ್ ಮಾಡೋಕೆ ಹೋಗಿ ಇಡೀ ನಗರವನ್ನೇ ಸಮಾಧಿ ಮಾಡಬೇಡಿ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರು ಒಳ್ಳೆ ಮಾತು ಹೇಳಿದ್ದಾರೆ

ನಿನ್ನೆಯ ದಿನ ಯಡಿಯೂರಪ್ಪನವರು ನನ್ನ ಬಗ್ಗೆ ಒಂದೊಳ್ಳೆ ಮಾತು ಹೇಳಿದ್ದಾರೆ. ಅವರಿಗೆ ನಾನು ಕೃತಜ್ಞನಾಗಿದೇನೆ. ಜನಪರ ವಿಷಯಗಳಲ್ಲಿ ಪರಸ್ಪರ ಸಹಕಾರ ಮನೋಭಾವದಿಂದ ದನಿ ಎತ್ತುವುದು ತಪ್ಪಲ್ಲ. ರಾಜ್ಯದಲ್ಲಿ ಹೊಸ ಅಧ್ಯಾಯ ಶುರುವಾಗಬೇಕು. ನನಗೆ ಯಾರು ಸಹಕಾರ ಕೊಡ್ತಾರೊ ಅವರ ಬೆಂಬಲ ತೆಗೆದುಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

Tags: cash for postingckcknewsnowCMOCongresshd kumaraswamykarnatakapen drivesiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬೆಂಗಳೂರಿನ ಶಾಲೆಗಳಲ್ಲಿ ಕೊರೋನಾ ಸ್ಪೋಟ

ಲುಲುಕುಮಾರ್ ಎಂದು ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟ ಜೆಡಿಎಸ್

Leave a Reply Cancel reply

Your email address will not be published. Required fields are marked *

Recommended

ಮಾನವೀಯ ಮೌಲ್ಯ ಉಳಿಸಲು 10 ಸಾವಿರ ಕಿ.ಮೀ. ಪಾದಯಾತ್ರೆ

ಮಾನವೀಯ ಮೌಲ್ಯ ಉಳಿಸಲು 10 ಸಾವಿರ ಕಿ.ಮೀ. ಪಾದಯಾತ್ರೆ

4 years ago
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಜನಕ್ಕೆ ಕೊರೊನಾ ಲಸಿಕೆ; 2ನೇ ಹಂತದಲ್ಲಿ ಎರಡು ಕೋಟಿ ಜನರಿಗೆ ವ್ಯಾಕ್ಸಿನೇಶನ್‌ ಎಂದ ಸಚಿವ ಡಾ.ಕೆ.ಸುಧಾಕರ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ