• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ನೈಸ್‌ ಅಕ್ರಮ ಪ್ರಸ್ತಾಪಿಸಿದ್ದ ಟಿ.ಬಿ.ಜಯಚಂದ್ರ ಅವರಿಗೆ ಜೀವ ಬೆದರಿಕೆ

cknewsnow desk by cknewsnow desk
July 28, 2023
in CRIME, NATION, STATE
Reading Time: 1 min read
0
ನೈಸ್‌ ಅಕ್ರಮ ಪ್ರಸ್ತಾಪಿಸಿದ್ದ ಟಿ.ಬಿ.ಜಯಚಂದ್ರ ಅವರಿಗೆ ಜೀವ ಬೆದರಿಕೆ
940
VIEWS
FacebookTwitterWhatsuplinkedinEmail

ಪೊಲೀಸರಿಗೆ ದೂರು; ಸದನ ಸಮಿತಿ ವರದಿಯ ಇಂಗ್ಲಿಷ್ ಪ್ರತಿಯನ್ನು ಸರಕಾರ ಇನ್ನೂ ಸುಪ್ರಿಂ ಕೋರ್ಟ್‌ಗೆ ಸಲ್ಲಿಸಿಲ್ಲ ಎಂದ ನವದೆಹಲಿ ಪ್ರತಿನಿಧಿ‌

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ನೈಸ್‌ (ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸ್) ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಿ, ಹೆಚ್ಚುವರಿ ಭೂಮಿಯನ್ನು ಸರಕಾರದ ವಶಕ್ಕೆ ಪಡೆಯಬೇಕು ಎಂದು ಒತ್ತಾಯ ಮಾಡಿದ್ದ ರಾಜ್ಯ ಸರಕಾರದ ನವದೆಹಲಿ ಪ್ರತಿನಿಧಿ‌ ಟಿ.ಬಿ.ಜಯಚಂದ್ರ ಅವರಿಗೆ ಜೀವ ಬೆದರಿಕೆಯ ಕರೆಗಳು ಬರುತ್ತಿವೆ.

ಈ ಬಗ್ಗೆ ಅವರ ಕಚೇರಿ ಸಿದಬಬಂದಿ ಬೆಂಗಳೂರಿನ ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.

ಈ ಹಿಂದೆ 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನೈಸ್‌ ಕರ್ಮಕಾಂಡದ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಜಯಚಂದ್ರ ಅವರ ನೇತೃತ್ವದಲ್ಲಿಯೇ ಜಂಟಿ ಸದನ ಸಮಿತಿ ರಚನೆ ಮಾಡಿದ್ದರು.

ತದ ನಂತರ ನೈಸ್‌ ಯೋಜನೆಯ ಎಲ್ಲಾ ಅಕ್ರಮಗಳನ್ನು ದಾಖಲೆಗಳ ಸಮೇತ ಬಗೆದಿದ್ದ ಸಮಿತಿಯು, ಸರಕಾರಕ್ಕೆ ವಿಸ್ತೃತ ವರದಿ ನೀಡಿತ್ತು. ಆದರೆ, ಈ ಬಗ್ಗೆ ಸಿದ್ದರಾಮಯ್ಯ ಸರಕಾರವಾಗಲಿ ಅಥವಾ ನಂತರ ಬಂದ ಸರಕಾರಗಳು ಕ್ರಮ ಜರುಗಿಸಿರಲಿಲ್ಲ. ಅದನ್ನೇ ಪ್ರಶ್ನಿಸಿ ಸದನದಲ್ಲಿ ಮಾತನಾಡಿದ್ದ ಜಯಚಂದ್ರ ಅವರು, ನೈಸ್‌ ಅಕ್ರಮಗಳೆಲ್ಲವನ್ನೂ ಬಿಡಿಸಿಟ್ಟಿದ್ದರು.

ಈ ಹಿನ್ನೆಯಲ್ಲಿ ತಮಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ದೂರಿರುವ ಅವರು; ತಮಗೆ ಬರುತ್ತಿರುವ ಅನಾಮಧೇಯ ಕರೆಗಳ ಬಗ್ಗೆ ದೂರು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಜಯಚಂದ್ರ ಅವರು; ಒಂದು ಲಕ್ಷ ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ ಇದು. ಈ ಹಗರಣದಲ್ಲಿ ಸಾಕಷ್ಟು ಮನಿ ಲಾಂಡ್ರಿಂಗ್ ನಡೆದಿದೆ. 20,000 ಎಕರೆ ಭೂಮಿ ಇದರಲ್ಲಿ ದುರುಪಯೋಗ ಆಗಿದೆ. ಸದನದಲ್ಲಿ ವರದಿಯ ಬಗ್ಗೆ ಚರ್ಚೆ ಆಗುತ್ತಿದ್ದಂತೆ ನಿಮಗ್ಯಾಕೆ ಬೇಕಿತ್ತು ಅಂತ ನನಗೆ ಕರೆಗಳು ಬರುತ್ತಿವೆ. ಆದರೆ ಇದ್ಯಾವುದಕ್ಕೂ ನಾನು ಹೆದರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ನನ್ನ ಆಪ್ತ ಸಹಾಯಕ, ಗನ್‌ಮೆನ್ ಪೋನ್‌ಗಳಿಗೂ ಜೀವ ಬೆದರಿಕೆ ಕರೆಗಳು ಬಂದಿವೆ. ನಮ್ಮ ಕಚೇರಿಯಿಂದ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಸಿಬಿಐ ತನಿಖೆಯ ಜತೆಗೆ ತ್ರಿಸದಸ್ಯ ಸಮಿತಿ ರಚಿಸಿಬೇಕೆಂದು ವರದಿಯಲ್ಲಿ ಉಲ್ಲೇಖಿಸಿದ್ದೇನೆ. ನಾನು ನಿಷ್ಪಕ್ಷಪಾತ, ರಾಗ ದ್ವೇಷ ಇಲ್ಲದೆ ವರದಿ ಕೊಟ್ಟಿದ್ದೇನೆ. ಈವರೆಗೂ ವರದಿಯ ಇಂಗ್ಲೀಷ್ ಕಾಪಿಯನ್ನ ಸರಕಾರವು ಸುಪ್ರಿಂ ಕೋರ್ಟ್‌ಗೆ ಸಲ್ಲಿಸಿಲ್ಲ. ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎನ್ನುವುದಕ್ಕಿಂತ ಇಷ್ಟೊಂದು ದೊಡ್ಡ ಮೊತ್ತದ ಹಗರಣದ ಬಗ್ಗೆ ವಿಸ್ತೃತವಾಗಿ ತನಿಖೆ ಆಗಬೇಕು. ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ಸಿಗಬೇಕು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Tags: Bengaluruckcknewsnowkarnataka assemblylife threat callsnice projectpolicetb jayachandra
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗುಡಿಬಂಡೆಯಲ್ಲಿ ಹುಲಿ ದಿನಾಚರಣೆ

ಗುಡಿಬಂಡೆಯಲ್ಲಿ ಹುಲಿ ದಿನಾಚರಣೆ

Leave a Reply Cancel reply

Your email address will not be published. Required fields are marked *

Recommended

ಜೆಡಿಎಸ್‌’ಗೆ ನಾಲ್ವರು ಕಾರ್ಯಾಧ್ಯಕ್ಷರು

ಜೆಡಿಎಸ್‌’ಗೆ ನಾಲ್ವರು ಕಾರ್ಯಾಧ್ಯಕ್ಷರು

3 years ago
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ