• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಗೃಹ ಇಲಾಖೆಯಲ್ಲಿ yst ಟ್ಯಾಕ್ಸ್ ದಂಧೆಕೋರರು; 250 ಕೋಟಿ ಕಲೆಕ್ಷನ್’ಗೆ ಬಿಡಿಎಗೆ ಟಾರ್ಗೆಟ್ ಫಿಕ್ಸ್

P K Channakrishna by P K Channakrishna
August 4, 2023
in STATE
Reading Time: 2 mins read
0
HDK ಪೆನ್‌ಡ್ರೈವ್ ನಲ್ಲಿ ಯಾವ ಮಂತ್ರಿ ಜಾತಕ ಅಡಗಿದೆ?
935
VIEWS
FacebookTwitterWhatsuplinkedinEmail

ನಾನು ಪ್ರವಾಸ ಹೋಗಿದ್ದು ಯುರೋಪಿಗೆ, ಸಿಂಗಾಪುರಕ್ಕೆ ಅಲ್ಲ; ದೇಶದಿಂದ ಬಂದೊಡನೆ ಸಿದ್ದು ಸರಕಾರಕ್ಕೆ ಗುದ್ದಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ವಿದೇಶ ಪ್ರವಾಸದಿಂದ ಹಿಂದಿರುಗಿದ ತಕ್ಷಣದಿಂದಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವರ್ಗಾವಣೆ ದಂಧೆ, ಭ್ರಷ್ಟಾಚಾರ, ಕಮೀಷನ್ ಸಂಗ್ರಹದ ಬಗ್ಗೆ ಗುರುತರ ಆರೋಪಗಳನ್ನು ಮಾಡಿದ್ದಾರೆ.

ಕಳೆದ ರಾತ್ರಿ ಅವರು ಯುರೋಪ್ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಬಂದರು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.

ಕಾಂಗ್ರೆಸ್ ಪಕ್ಷ ಈಸ್ಟ್ ಇಂಡಿಯಾ ಪಕ್ಷದಂತೆ ರಾಜ್ಯವನ್ನು ಲೂಟಿ ಮಾಡುತ್ತಿದೆ. ಪೊಲೀಸ್ ವರ್ಗಾವಣೆಯಲ್ಲಿ ವೈಎಸ್ ಟಿ ದಂಧೆಕೋರರು ಶಾಮೀಲಾಗಿದ್ದಾರೆ, ಬಿಡಿಎ ಅಧಿಕಾರಿಗಳಿಂದ 250 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಲಾಗಿದೆ ಎಂಬುದು ಮಾಜಿ ಮುಖ್ಯಮಂತ್ರಿ ಅವರು ಮಾಡಿರುವ ಗಂಭೀರ ಆರೋಪಗಳು.

ದುಡ್ಡಿದ್ದರೆ ಮನೆ ಒಳಕ್ಕೆ ಬನ್ನಿ ಎನ್ನುವ ಸಚಿವರ ಚೇಲಾಗಳು

ರಾಜ್ಯದಲ್ಲಿ ಪರ್ಸೆಂಟೇಜ್ ಸಂಗ್ರಹ ಅವ್ಯಾಹತವಾಗಿ ನಡೆಯುತ್ತಿದೆ. ಸಚಿವರೊಬ್ಬರು ನೇರವಾಗಿ ಗುತ್ತಿಗೆದಾರರಿಂದ ಕಮೀಷನ್ ಡಿಮ್ಯಾಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಆ ಸಚಿವರನ್ನು ಭೇಟಿಯಾಗಲು ಹೋಗಿದ್ದ ಗುತ್ತಿಗೆದಾರರಿಗೆ, ಹಣ ತಂದಿದ್ದರೆ ಒಳಕ್ಕೆ ಬನ್ನಿ. ಇಲ್ಲವಾದರೆ ಹೊರಗೆ ಇರಿ ಎಂದು ಆ ಸಚಿವರ ಚೇಲಾಗಳು ತಾಕೀತು ಮಾಡಿದ್ದಾರೆ. ಇವರು ಹೋಗಿ ದೆಹಲಿಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಅವರಿಗೆ ಹೇಳುತ್ತಾರೆ!! ಇಂಥವರಿಂದ ರಾಜ್ಯದ ಉದ್ಧಾರ ಸಾಧ್ಯವೇ? ಪಾರದರ್ಶಕ ಆಡಳಿತ ನೀಡಲು ಆಗುತ್ತದೆಯೇ? ಎಂದು ಅವರು ಪ್ರಶ್ನಿಸಿದರು.

250 ಕೋಟಿಗೆ ಡಿಮ್ಯಾಂಡ್

ಬಿಡಿಎ ಅಧಿಕಾರಿಗಳಿಂದಲೂ ಹಣಕ್ಕೆ ಬೇಡಿಕೆ ಇಡಲಾಗಿದೆ. ದಿಲ್ಲಿಗೆ ಈ ಹಣ ಕಲಿಸಬೇಕು, ಕೊನೆಪಕ್ಷ 250 ಕೋಟಿ ರೂಪಾಯಿ ಕಲೆಕ್ಷನ್ ಆಗಬೇಕು ಎಂದು ಅಧಿಕಾರಿಗಳು ಒಬ್ಬರು ಮಹಾನುಭಾವರು ತಾಕೀತು ಮಾಡುತ್ತಾರೆ. ದುಡ್ಡು ಯಾರಿಗೆ ಸೇರಬೇಕು ಅವರ ಪಟ್ಟಿ ಕೊಡುತ್ತೇವೆ, ಅವರಿಗೆ ನೇರವಾಗಿ ದುಡ್ಡು ತಲುಪಿಸಿ ಎಂದು ಹೇಳುತ್ತಾರಂತೆ. ನಾನು ಯುರೋಪ್ ನಲ್ಲಿ ಇದ್ದಾಗಲೇ ಈ ಬಗ್ಗೆ ಮಾಹಿತಿ ಬಂತು ಎಂದು ಮಾಜಿ ಮುಖ್ಯಮಂತ್ರಿ ಅವರು ಚಾಟಿ ಬೀಸಿದರು.

ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಈಸ್ಟ್ ಇಂಡಿಯಾ ಕಂಪನಿಯಂತೆ ಲೂಟಿ ಮಾಡುತ್ತಿದೆ. ಜನರಿಗೆ ಗ್ಯಾರಂಟಿ ತುಪ್ಪ ಸವರಿ ವರ್ಗಾವಣೆ ದಂಧೆಯಲ್ಲಿ ಕೊಳ್ಳೆ ಹೊಡೆಯುತ್ತಿದೆ. ಬೆಂಗಳೂರನ್ನು ಸಿಂಗಾಪುರ ಮಾಡುತ್ತೇವೆ ಎಂದು ಹೇಳಿದವರು ಇವತ್ತು ಇದೇ ಬೆಂಗಳೂರನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಹೊರನೋಟಕ್ಕೆ ಭ್ರಷ್ಟಾಚಾರವನ್ನು ತೊಡೆದು ಹಾಕುವ ಮಾತು ಹೇಳುತ್ತಿದ್ದಾರೆ. ನಿಜಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಂತಹ ಮನಃಸ್ಥಿತಿ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ವಸೂಲಿಗೆ ಆ ಪಕ್ಷ ಇರೋದು. ಈಸ್ಟ್ ಇಂಡಿಯಾ ಕಂಪನಿ ಇಡೀ ದೇಶವನ್ನು ಇವರಿಗೆ ಕೊಟ್ಟು ಹೋದರು. ಈಸ್ಟ್ ಇಂಡಿಯಾ ಕಂಪನಿಯ ವಸೂಲಿಯನ್ನ ಕಾಂಗ್ರೆಸ್ ಮುಂದುವರಿಸಿಕೊಂಡು ಬಂದಿದೆ. ಇಂಥವರು ಭ್ರಷ್ಟಾಚಾರ ನಿಲ್ಲಿಸ್ತಾರಾ? ಎಂದು ಅವರು ಪ್ರಶ್ನಿಸಿದರು.

ಗೃಹ ಇಲಾಖೆಯಲ್ಲಿ ವೈಎಸ್ಟಿ ಟ್ಯಾಕ್ಸ್ ದಂಧೆಕೋರರು

ಗೃಹ ಇಲಾಖೆಯಲ್ಲಿ ವರ್ಗಾವಣೆಯ ದಂಧೆ ಬಗ್ಗೆ ಕೇಳಿ ನನಗೆ ತೀವ್ರ ಆಘಾತ ಉಂಟಾಯಿತು. ಪೊಲೀಸರನ್ನು ಹೀಗೆ ಬಳಕೆ ಮಾಡಿಕೊಂಡರೆ ಕಾನೂನು ಸುವ್ಯವಸ್ಥೆ ಕಾಪಾಡುವ ಅವರು ಇನ್ನೇನು ಕೆಲಸ ಮಾಡುತ್ತಾರೆ? ಬ್ರಿಗೇಡ್ ರಸ್ತೆ ಸಮೀಪ ಇರುವ, ಗರುಡಾ ಮಾಲ್ ಹತ್ತಿರದ ಪೊಲೀಸ್ ಮೆಸ್ ನಲ್ಲಿ ನಡೆದ ಸಭೆಯಲ್ಲಿ ಯಾರೆಲ್ಲಾ ಇದ್ದರು? ವೈಎಸ್ ಟಿ ಟ್ಯಾಕ್ಸ್ ಬಾಬ್ತುನವರು ಅಲ್ಲೇ ಇದ್ದರಲ್ಲವೇ? ಪೊಲೀಸ್ ವರ್ಗಾವಣೆ ಸಂಬಂಧ ನಡೆದ ಈ ಸಭೆಯಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಇಲಾಖೆಯ ಉನ್ನತ ಅಧಿಕಾರಿಗಳ ಜತೆಗೆ ಈ ವೈಎಸ್ ಟಿ ಟ್ಯಾಕ್ಸ್ ಕುಳಗಳನ್ನು ಕೂರಿಸಿಕೊಂಡು ಚರ್ಚೆ ಮಾಡಿದ್ದೇಕೆ? ಪೊಲೀಸ್ ಇಲಾಖೆಯ ಸಭೆಯಲ್ಲಿ ಅವರಿಗೇನು ಕೆಲಸ? ಅವರನ್ನು ಒಳಕ್ಕೆ ಬಿತ್ತುಕೊಂಡವರು ಯಾರು? ಎಂದು ಕುಮಾರಸ್ವಾಮಿ ಅವರು ನೇರವಾಗಿ ಪ್ರಶ್ನಿಸಿದರು.

ಭ್ರಷ್ಟಾಚಾರದ ರಿಪೋರ್ಟ್ ಕಾರ್ಡು ಕೊಡಲು ಹೋಗಿರಬೇಕು

36 ಜನ ಮಂತ್ರಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದರು. ಅವರ ಹೈಕಮಾಂಡಿಗೆ ರಿಪೋರ್ಟ್ ಕಾರ್ಡು ಕೊಡೋದಕ್ಕೆ ಅವರು ಹೋಗಿದ್ದರಂತೆ. ಅವರು ರಿಪೋರ್ಟ್ ಕಾರ್ಡ್ ಇಡಬೇಕಿರುವುದು ರಾಜ್ಯದ ಆರೂವರೆ ಕೋಟಿ ಜನತೆಯ ಮುಂದೆ ಹೊರತು ಹೈಕಮಾಂಡ್ ಮುಂದೆ ಅಲ್ಲ. ಈ ರಾಜ್ಯದ ಜನರು ವೋಟು ಹಾಕಿ ಇವರನ್ನು ಗೆಲ್ಲಿಸಿದ್ದಾರೆ. ನಾವೇನು ಮಾಡಿದ್ದೇವೆ, ಮಾಡುತ್ತೇವೆ ಎನ್ನುವ ವರದಿಯನ್ನು ಈ ಜನರ ಮುಂದೆ ಇಡಬೇಕು. ಇವರೇನು ಭ್ರಷ್ಟಾಚಾರದ ರಿಪೋರ್ಟ್ ಕಾರ್ಡು ಕೊಡಲು ಹೋಗಿರಬೇಕು ಎಂದು ಅವರು ತರಾಟೆಗೆ ತೆಗೆದುಕೊಂಡರು.

ಇವರು ಲೂಟಿ ಮಾಡುವುದಕ್ಕೆ ಖಜಾನೆ ಖಾಲಿ ಎಂದು ತೋರಿಸುವ ಹುನ್ನಾರ ನಡೆಸಿದ್ದಾರೆ. ಗ್ಯಾರಂಟಿ ಗೊಂದಲ ಮಾಡಿಕೊಂಡು, ವಿಧಾನಸಭೆ ಕ್ಷೇತ್ರಗಳಿಗೆ ಹಣ ಇಲ್ಲ ಎನ್ನುವ ಸಬೂಬು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಹಣಕ್ಕೆ ಕೊರತೆ ಇಲ್ಲ. ಖಜಾನೆ ಸಮೃದ್ಧವಾಗಿದೆ. ಕಾಂಗ್ರೆಸ್ ಶಾಸಕರೇ ಅಭಿವೃದ್ಧಿಗೆ ಹಣ ಇಲ್ಲ ಎಂದು ಹೇಳುತ್ತಿದ್ದಾರೆ. ನನಗೆ ನಿಜಕ್ಕೂ ಆಶ್ಚರ್ಯ ಆಗುತ್ತಿದೆ.

ಹೆಚ್.ಡಿ.ಕುಮಾರಸ್ವಾಮಿ

ಹಣಕಾಸು ಬಗ್ಗೆ ಶ್ವೇತಪತ್ರ ಹೊರಡಿಸಿ

ಗ್ಯಾರಂಟಿಗಳಿಗೆ 20ರಿಂದ 25 ಸಾವಿರ ಕೋಟಿ ರೂಪಾಯಿ ಸಾಕು. ಕಳೆದ ವರ್ಷ 40,000 ಕೋಟಿ ರೂಪಾಯಿ ಹೆಚ್ಚುವರಿ ತೆರಿಗೆ ಆದಾಯ ಬಂದಿದೆ. ತೆರಿಗೆಯ ಎಲ್ಲಾ ಬಾಬ್ತುಗಳಲ್ಲಿ ನಿರೀಕ್ಷೆಗೂ ಮೀರಿ ತೆರಿಗೆ ಸಂಗ್ರಹ ಆಗಿದೆ. ಹಾಗಾದರೆ ಹದಿನಾಲ್ಕು ಬಜೆಟ್ ಮಂಡಿಸಿದ ಮಹಾನುಭಾವರು ಕೊರತೆ ಬಜೆಟ್ ಮಂಡಿಸಿದ್ದು ಯಾಕೆ? ಅದರ ಹಿಂದಿನ ಹುನ್ನಾರ ಏನು ಅವರು ಕೇಳಿದರು.

ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ದೊಡ್ಡ ನಾಟಕ ನಡೆಯುತ್ತಿದೆ. ಒಂದು ಕಡೆ ಸಾಲ ಪ್ರಮಾಣ ಹೆಚ್ಚಳ ಮಾಡಿಕೊಂಡಿದ್ದಾರೆ, ಇನ್ನೊಂದು ತೆರಿಗೆ ಸಂಗ್ರಹದಲ್ಲಿ ಗುರಿ ಮೀರಿದ ಸಾಧನೆ ಆಗಿದೆ. ಕೇಂದ್ರ ಸರಕಾರದಿಂದಲೂ ಯಾವುದೇ ಬಾಕಿ ಇಲ್ಲ. ನಾನು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಲು 25,000 ಕೋಟಿ ರೂಪಾಯಿ ನೀಡಿದ್ದೆ. ಅಭಿವೃದ್ಧಿ ಎಲ್ಲೂ ನಿಲ್ಲಲಿಲ್ಲ, ಶಾಸಕರ ಅನುದಾನಕ್ಕೆ ಕೂಡ ಕತ್ತರಿ ಬೀಳಲಿಲ್ಲ. ಅವರ ಭಾಗ್ಯಗಳಿಗೂ ಹಣ ನೀಡಿದೆ. ಎಲ್ಲವನ್ನೂ ಜನರ ಮುಂದೆ ಇಡಿ. ನಿಮಗೆ ಧೈರ್ಯ ಇದ್ದರೆ ಶ್ವೇತಪತ್ರ ಹೊರಡಿಸಿ ಎಂದು ಮಾಜಿ ಮುಖ್ಯಮಂತ್ರಿ ಅವರು ಒತ್ತಾಯ ಮಾಡಿದರು.

ಡಿಕೆಶಿಗೆ ಟಾಂಗ್ ಕೊಟ್ಟ ಮಾಜಿ ಮುಖ್ಯಮಂತ್ರಿ

ನಾನು ಪ್ರವಾಸ ಹೋಗಿದ್ದು ಯುರೋಪ್ ದೇಶಗಳಿಗೆ. ನನ್ನ ಕುಟುಂಬ ಸದಸ್ಯರು, ಸಹೋದರ, ಸಹೋದರಿಯರ ಜತೆ ತೆರಳಿದ್ದೆ. ಆದರೆ ಇಲ್ಲಿ ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹೋಗಿ ಸರಕಾರ ಕೆಡವಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ವದಂತಿ ಹಬ್ಬಿಸಿದರು. ಇದು ನಮ್ಮ ರಾಜ್ಯದ ಬೇಹುಗಾರಿಕೆ ಇಲಾಖೆ ಕೆಲಸ ಮಾಡುತ್ತಿರುವ ರೀತಿ ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಕೇವಲ 19 ಕ್ಷೇತ್ರ ಗೆದ್ದಿರುವ ಕುಮಾರಸ್ವಾಮಿ ಬಗ್ಗೆ 136 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಭಯವಿದೆ. ಅವರಿಗೆ ಬಹುಮತ ಇದ್ದರೂ ಸುಸ್ಥಿರ ಸರಕಾರ ನೀಡಲು ಸಾಧ್ಯವಿಲ್ಲ. ಅವರು ಅಭದ್ರತೆಯ ಭಾವದಿಂದ ಬಳಲುತ್ತಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಡಿಕೆ ಶಿವಕುಮಾರ್ ಅವರು ಯಾಕೆ ಈ ರೀತಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಅವರಿಗೆ ಈ ಸರಕಾರ ಪೂರ್ಣಾವಧಿಗೆ ಇರುತ್ತದೆ ಎನ್ನುವ ನಂಬಿಕೆ ಇದ್ದಂತೆ ಇಲ್ಲ. ಅವರು ಹೆಚ್ಚಾಗಿ ಶಾಸ್ತ್ರ ಜ್ಯೋತಿಷ್ಯ ಕೇಳುತ್ತಾರೆ, ಜ್ಯೋತಿಷ್ಯದ ಮೂಲಕ ಚುನಾವಣೆಗಾಗಿ ಕೃತಕವಾದ ಶಕ್ತಿ ತುಂಬಿಕೊಂಡಿದ್ದಾರೆ, ಆ ಶಕ್ತಿ ಬಹಳ ದಿನ ಇರೋದಿಲ್ಲ ಅನ್ನುವುದು ಅವರಿಗೆ ತಲೆ ಒಳಗೆ ಇರಬಹುದು. ಅದಕ್ಕೆ ಅವರು ಈ ಹೇಳಿಕೆ ಕೊಟ್ಟಿರಬಹುದು ಎಂದು ಅವರು ಟಾಂಗ್ ಕೊಟ್ಟರು.

Tags: cash for postingckcknewsnowcourrptionhd-kumaraswamykarnatakasiddaramaiahyst tax
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕಾಸಿಗಾಗಿ ಪೋಸ್ಟಿಂಗ್‌‌: ಕೋಲಾರ ಕೇಸಿನ ಮೇಲೆ ರಾಜಕೀಯ ಒತ್ತಡ; ದೂರೇ ಅದಲು ಬದಲು! ಧುತ್ತನೆದ್ದ 2ನೇ FIR!!

ಕಾಸಿಗಾಗಿ ಪೋಸ್ಟಿಂಗ್‌‌: ಕೋಲಾರ ಕೇಸಿನ ಮೇಲೆ ರಾಜಕೀಯ ಒತ್ತಡ; ದೂರೇ ಅದಲು ಬದಲು! ಧುತ್ತನೆದ್ದ 2ನೇ FIR!!

Leave a Reply Cancel reply

Your email address will not be published. Required fields are marked *

Recommended

ನಿಡುಮಾಮಿಡಿ ಪೀಠಕ್ಕೆ ಮಂಜೂರಾದ ₹30.57 ಲಕ್ಷವನ್ನುಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಏನು ಮಾಡಿತು? ಮಮ್ತಾಜ್‌ ಅಲಿಖಾನ್‌ ಕೊಟ್ಟ ಹಣ ಎಲ್ಲಿ? ಗಂಭೀರ ಆರೋಪ ಮಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ

ನಿಡುಮಾಮಿಡಿ ಪೀಠಕ್ಕೆ ಮಂಜೂರಾದ ₹30.57 ಲಕ್ಷವನ್ನುಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಏನು ಮಾಡಿತು? ಮಮ್ತಾಜ್‌ ಅಲಿಖಾನ್‌ ಕೊಟ್ಟ ಹಣ ಎಲ್ಲಿ? ಗಂಭೀರ ಆರೋಪ ಮಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ

4 years ago
ಸರಕಾರದಿಂದ H.D.ಕುಮಾರಸ್ವಾಮಿ ಫೋನ್ ಟ್ಯಾಪಿಂಗ್!

ಸರಕಾರದಿಂದ H.D.ಕುಮಾರಸ್ವಾಮಿ ಫೋನ್ ಟ್ಯಾಪಿಂಗ್!

12 months ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ