• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ನೈಸ್ ಅಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ದೂರು

cknewsnow desk by cknewsnow desk
August 5, 2023
in NATION, STATE
Reading Time: 1 min read
0
ನೈಸ್ ಅಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ದೂರು

ನೈಸ್‌ ರಸ್ತೆ / photo courtesy: Wikipedia

919
VIEWS
FacebookTwitterWhatsuplinkedinEmail
  • ಪ್ರಧಾನಿ & ಕೇಂದ್ರ ಗೃಹ ಸಚಿವರ ಭೇಟಿಗೆ ಸಮಯಾವಕಾಶ ಕೆಳಲಿರುವ ಮಾಜಿ ಸಿಎಂ
  • ಸಿಬಿಐ ತನಿಖೆಗೆ ಆಗ್ರಹ ಮಾಡುವುದಾಗಿ ಹೇಳಿಕೆ
  • ದೂರು ನೀಡಿದ ದಿನವೇ ದೆಹಲಿಯಲ್ಲಿ ನೈಸ್ ಅಕ್ರಮಗಳ ದಾಖಲೆ ಬಿಡುಗಡೆ

ಬೆಂಗಳೂರು: ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ (ನೈಸ್) ಅಕ್ರಮಗಳ ಕುರಿತ ಎಲ್ಲಾ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಖುದ್ದು ಭೇಟಿಯಾಗಿ ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದಿಲ್ಲಿ ಘೋಷಣೆ ಮಾಡಿದರು.

ಅವರ ಭೇಟಿಯ ನಂತರ ಅದೇ ದಿನದಂದು ದೆಹಲಿಯಲ್ಲಿ ಈ ಅಕ್ರಮಗಳ ಎಲ್ಲಾ ದಾಖಲೆಗಳನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡುತ್ತೇನೆ ಹಾಗೂ ಈ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯ ಮಾಡುತ್ತೇನೆ ಎಂದು ಅವರು ಹೇಳಿದರು.

ಪ್ರಧಾನಿಗೆ ಸಲ್ಲಿಸಲಿರುವ ನೈಸ್‌ ಅಕ್ರಮದ ದಾಖಲೆಗಳನ್ನು ತೋರಿಸಿದ ಹೆಚ್.ಡಿ.ಕುಮಾರಸ್ವಾಮಿ.

ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರಾಜ್ಯ ವಿಧಾನಸಭೆಯಲ್ಲಿ ಈ ಬಗ್ಗೆ ಎಲ್ಲಾ ಮಾಹಿತಿಯನ್ನು ಬಿಚ್ಚಿಡುವ ಪ್ರಯತ್ನ ಮಾಡಿದೆ. ಅದಕ್ಕೆ ಅವಕಾಶ ಸಿಗಲಿಲ್ಲ. ರಾಜ್ಯದ ಹಿತ ಮತ್ತು ಈ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ಕೊಡಿಸುವ ದೃಷ್ಟಿಯಿಂದ ನೇರವಾಗಿ ಪ್ರಧಾನಿ ಅವರನ್ನೇ ಭೇಟಿ ಆಗಲಿದ್ದೇನೆ. ಒಂದೆರಡು ದಿನದಲ್ಲಿ ಪ್ರಧಾನಿಗಳು ಹಾಗೂ ಗೃಹ ಸಚಿವರ ಭೇಟಿಗೆ ಸಮಯಾವಕಾಶ ಕೋರಲಾಗುವುದು ಎಂದರು.

ಮೂಲಸೌಕರ್ಯ ಹಾಗೂ ರೈತರ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆದಿದ್ದಾರೆ. ಹಣ ಮತ್ತು ಭೂಮಿಯನ್ನು ಕೊಳ್ಳೆ ಹೊಡೆದಿದ್ದಾರೆ. ಆ ಬಗ್ಗೆ ಎಲ್ಲಾ ದಾಖಲೆ ಸಂಗ್ರಹ ಮಾಡಿದ್ದಿನಿ. ನೇರವಾಗಿ ಪ್ರಧಾನಿ ಅವರಲ್ಲಿಯೇ ನ್ಯಾಯ ಕೇಳುತ್ತೇನೆ, ಅವರನ್ನೇ ಪ್ರಶ್ನೆ ಮಾಡುತ್ತೇನೆ. ನಮ್ಮ ರೈತರಿಗೆ ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡುತ್ತೇನೆ. ಎಂದು ಅವರು ಹೇಳಿದರು.

ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ / photo courtesy: Wikipedia
ಪೆನ್ ಕೊಡಿ ಎಂದವರಿಂದಲೇ ಅಕ್ರಮ

ಈ ಸರಕಾರದಲ್ಲಿರುವ ಅತ್ಯಂತ ಪ್ರಭಾವಿಯೊಬ್ಬರು ಫೆರಿಫಿರಲ್ ರಿಂಗ್ ರೋಡ್ ಮಾಡಲು ನೈಸ್ ಜತೆ ಸೇರಿಕೊಂಡು ಏನೆಲ್ಲಾ ಕರ್ಮಕಾಂಡ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಸಣ್ಣಪುಟ್ಟ ಮನೆಗಳನ್ನು ಕಟ್ಟಿಕೊಂಡಿದ್ದ ಬಡವರನ್ನು ಒಕ್ಕಲೆಬ್ಬಿಸಲು ಹೊರಟಿದ್ದಾರೆ. ಆ ಮಹಾನುಭಾವರು ನನಗೂ ಒಮ್ಮೆ ಪೆನ್ ಹಿಡಿಯುವ ಅವಕಾಶ ಕೊಡಿ ಎಂದು ಕೇಳಿದ್ದು ಇದಕ್ಕೇನಾ? ಎಂದು ಯಾರೊಬ್ಬರ ಹೆಸರು ಹೇಳದೆಯೇ ಮಾಜಿ ಮುಖ್ಯಮಂತ್ರಿ ಅವರು ಟೀಕಾಪ್ರಹಾರ ನಡೆಸಿದರು.

ನೈಸ್ ಯೋಜನೆಯಲ್ಲಿ ಅಕ್ರಮಗಳ ಸರಣಿಯೇ ನಡೆದಿದೆ. ಯೋಜನೆಗೆ ಸ್ವಾಧೀನಕ್ಕೆ ಗುರುತಿಸಲಾಗಿದ್ದ, ಪ್ರಾಥಮಿಕ ಅಧಿಸೂಚನೆ ಮಾಡಲಾಗಿದ್ದ ಭೂಮಿಯನ್ನೇ ಖರೀದಿ ಮಾಡಿದ್ದ ಆ ಮಹಾನುಭಾವರಿಗೆ ಇದೆಲ್ಲವನ್ನೂ ಜೀರ್ಣ ಮಾಡುವ ತಾಕತ್ತು ಇದೆ. ನಾನು ಇಲ್ಲ ಎನ್ನಲು ಆಗುತ್ತದೆಯೇ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಅಧಿಸೂಚನೆ ಆಗಿದ್ದ ಬಡ ರೈತರ ಭೂಮಿಯನ್ನೇ ಸ್ವಾಹಾ ಮಾಡಿದವರು ಇಂದು ಬ್ರ್ಯಾಂಡ್ ಬೆಂಗಳೂರು ಭಜನೆ ಮಾಡುತ್ತಿದ್ದಾರೆ. ಎಲ್ಲಿ ಯಾರ ಭೂಮಿ, ಹಿದೆದುಕೊಳ್ಳೋಣ ಎಂದು ಹೊಂಚು ಹಾಕುವವರಿಂದ ಬೆಂಗಳೂರು ಉದ್ಧಾರ ಸಾಧ್ಯವೇ?

ಹೆಚ್.ಡಿ.ಕುಮಾರಸ್ವಾಮಿ
ಕನ್ನಡಿಗರಿಗೆ ಏನಾಗಿದೆ?

ಪ್ರತಿ ಸಣ್ಣ ವಿಷಯಕ್ಕೆ ನಾಡು, ನೀಡಿ, ಕನ್ನಡ ಅಸ್ಮಿತೆಯ ಮಾತನಾಡುವ ಮಂದಿ ಈಗೆಲ್ಲಿ ಹೋಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ರೈತರ 5 ಸಾವಿರ ಎಕರೆಯಲ್ಲಿ ಕಾರ್ಖಾನೆ ಕಟ್ಟಲು ಹೊರಟವರ ವಿರುದ್ಧ ಅಲ್ಲಿ ಬೃಹತ್ ಹೋರಾಟ ನಡೆಯಿತು. ಆ ಹೋರಾಟದಿಂದಲೇ ಮಮತಾ ಬ್ಯಾನರ್ಜಿ ಹುಟ್ಟಿಕೊಂಡು ನಾಯಕಿಯಾಗಿ ಹೊರಹೊಮ್ಮಿದರು. ಆದರೆ ನಮ್ಮವರಿಗೆ ಏನಾಗಿದೆ ಎಂದು ಗೊತ್ತಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಜನರ ಭೂಮಿಯನ್ನು ಕೊಳ್ಳೆ ಹೊಡೆಯುತ್ತಿದ್ದರೂ ಕನ್ನಡಿಗರು ಮೌನವಾಗಿದ್ದಾರೆ. ಇಲ್ಲಿ ಏನಾಗಿದೆ ಎನ್ನುವುದು ನನಗೆ ಅರ್ಥ ಆಗುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ನೈಸ್ ಅಕ್ರಮದ ಬಗ್ಗೆ ಸೂಕ್ತ ತನಿಖೆ ಆಗಬೇಕು. ಸದನದ ಸಮಿತಿ ವರದಿಯಲ್ಲಿ ಶಿಫಾರಸು ಮಾಡಿರುವಂತೆ ಸಿಬಿಐ ತನಿಖೆಯೇ ನಡೆಯಬೇಕು. ಸರ್ಕಾರಕ್ಕೆ ವಂಚನೆ ಮಾಡಿರುವ ಹಾಗೂ ಜನರ ಭೂಮಿಯನ್ನು ನುಂಗಿರುವ ಕುಳಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದ ಅವರು, ಈ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿಗಳಿಗೆ ಸಲ್ಲಿಸಲಾಗುವುದು ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೆ ಕಾನೂನು ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅವರು ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪ ಮಾಡಿದ್ದಕ್ಕೆ ಅವರಿಗೆ ಜೀವ ಬೆದರಿಕೆ ಹಾಕಿದ್ದರು. ಈ ಬೆದರಿಕೆ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆಯೂ ತನಿಖೆ ಆಗಬೇಕು ಎಂದ ಮಾಜಿ ಮುಖ್ಯಮಂತ್ರಿ ಅವರು; ಇಷ್ಟೆಲ್ಲಾ ನಡೆಯುತ್ತಿದ್ದರೂ ಈಗಿನ ಕಾನೂನು ಸಚಿವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಹಿಂದೆ ಬಳ್ಳಾರಿಯ ಜಿಂದಾಲ್ ಗೆ ಭೂಮಿ ಕೊಡಬಾರದು ಎಂದು ಹೆಚ್.ಕೆ.ಪಾಟೀಲ್ ಅವರೇ ಸರಕಾರಕ್ಕೆ ಪತ್ರ ಬರೆದಿದ್ದರು. ಈಗ ಅವರೇ ಸಚಿವರು. ಈಗೇನು ಮಾಡುತ್ತಿದ್ದಾರೆ? ಇಷ್ಟು ದೊಡ್ಡ ಪ್ರಮಾಣದ ಜನರ ಭೂಮಿಯನ್ನು ಉಳಿಸಿಕೊಳ್ಳಲು ಏನು ಮಾಡಿದ್ದೀರಿ? ಕಾನೂನು ಸಚಿವರಾಗಿ ನಿಮ್ಮ ಜವಾಬ್ದಾರಿ ಏನು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

Tags: amit shahBangalore Mysore Infrastructure Corridorckcknewsnowhd kumaraswamykarnatakanarendra modinice road
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
₹710 ಕೋಟಿ ಗುತ್ತಿಗೆದಾರರ ಹಣಕ್ಕೆ10-15 ಪರ್ಸೆಂಟ್ ಡಿಮಾಂಡ್

₹710 ಕೋಟಿ ಗುತ್ತಿಗೆದಾರರ ಹಣಕ್ಕೆ10-15 ಪರ್ಸೆಂಟ್ ಡಿಮಾಂಡ್

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್!

3 years ago
ಕುತ್ತಿಗೆಪಟ್ಟಿ ಹಿಡಿದ ಕೋಲಾರ ಎಸ್ಪಿ ವಿರುದ್ಧ ಸಂಸದರ ಹಕ್ಕುಚ್ಯುತಿ

ಕುತ್ತಿಗೆಪಟ್ಟಿ ಹಿಡಿದ ಕೋಲಾರ ಎಸ್ಪಿ ವಿರುದ್ಧ ಸಂಸದರ ಹಕ್ಕುಚ್ಯುತಿ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ