• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ

cknewsnow desk by cknewsnow desk
August 15, 2023
in STATE
Reading Time: 1 min read
0
ಭ್ರಷ್ಟಾಚಾರ & ಕೆಮ್ಮು ಎರಡನ್ನೂ ಮುಚ್ಚಿಡಲಾಗಲ್ಲ!!
912
VIEWS
FacebookTwitterWhatsuplinkedinEmail

ಕುಮಾರಸ್ವಾಮಿ ಏನು ಬೇಕಾದರೂ ಮಾಡಲಿ, ಅವರ ಬಳಿ ಇರುವ ಮಾಹಿತಿ ಬಹಿರಂಗಪಡಿಸಲಿ ಎಂದ ಡಿಸಿಎಂ

ಬೆಂಗಳೂರು: “ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

“ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ” ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

“ಕುಮಾರಸ್ವಾಮಿ ಅವರು ಏನು ಬೇಕಾದರೂ ಮಾಡಲಿ, ಅವರ ಬಳಿ ಇರುವ ಮಾಹಿತಿ ಬಹಿರಂಗಪಡಿಸಲಿ” ಎಂದು ತಿಳಿಸಿದರು.

ಪೆನ್ ಡ್ರೈವ್ ಮಾಹಿತಿ ಬಹಿರಂಗಪಡಿಸಿದರೆ ಸಿಒಡಿ ತನಿಖೆ ಮಾಡಿಸಿ ತಮ್ಮ ಪರ ವರದಿ ಮಾಡಿಸುತ್ತಾರೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ನಮಗೆ ಅವರಷ್ಟು ಅನುಭವವಿಲ್ಲ. ಈಗ ಅವರನ್ನು “ಅಣ್ಣ” ಎಂದು ಕರೆಯುವಂತಿಲ್ಲ. ಮುಂದಿನ ಜನ್ಮದ ಬಗ್ಗೆ ಬೇರೆ ಮಾತಾಡಿದ್ದಾರೆ. ಇರಲಿ, ಎಲ್ಲಾ ಪಕ್ಷಗಳಿಗೂ ಬಿಚ್ಚಿಡುವುದಕ್ಕೆ ಅವಕಾಶವಿದೆ” ಎಂದರು.

ಈ ಜಟಾಪಟಿ ವೈಯಕ್ತಿಕವೋ, ರಾಜಕಿಯವೊ ಎನ್ನುವ ಪ್ರಶ್ನೆಗೆ, “ನಾನ್ಯಾಕೆ ಅವರ ಜೊತೆ ವೈಯಕ್ತಿಕ ಜಟಾಪಟಿ ಮಾಡಲಿ. ರಾಜಕೀಯ ಯುದ್ಧ ಮಾಡಿ ಮುಗಿದಿದೆ. ರಾಜ್ಯದ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರಿಗೆ ಅಸೂಯೆ. ನನಗೆ ಅಧಿಕಾರ, ಅವಕಾಶ ಸಿಗಲಿಲ್ಲ ಎಂದು ಕೈ, ಕೈ ಹಿಸುಕಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

ಬಿಬಿಎಂಪಿ ಕರ್ಮಕಾಂಡ ವಿಚಾರವಾಗಿ ಯಾವಾಗ ದಾಖಲೆ ಸಮೇತ ಮಾತನಾಡುತ್ತೀರಿ ಎಂಬ ಪ್ರಶ್ನೆಗೆ, “ಅದಕ್ಕೆ ಯಾಕಿಷ್ಟು ಆತುರ? ಶುಭ ಗಳಿಗೆ, ಮುಹೂರ್ತ ಎಲ್ಲಾ ಕೂಡಿಬರಲಿ. ಯಾರು ಏನೇನು ಬಿಚ್ಚಿಡುತ್ತಾರೋ ಬಿಚ್ಚಿಟ್ಟು ಮುಗಿಸಲಿ. ನನಗೆ ಅವಸರವೇನಿಲ್ಲ. ಎಲ್ಲರ ಪಿಕ್ಚರ್ ಮುಗಿಯಲಿ. ತನಿಖೆಯ ಅಂಶಗಳು ಕೈ ಸೇರಿದ ತಕ್ಷಣ ಬಿಡುಗಡೆ ಮಾಡುತ್ತೇವೆ” ಎಂದು ತಿಳಿಸಿದರು.

6-7 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಮಾತಿಗೆ ಉತ್ತರಿಸುತ್ತಾ, “ಕೆಲವರಿಗೆ ಮಾನಸಿಕ ಅಸ್ವಸ್ಥತೆ ಇರುತ್ತದೆ, ಅಂತವರಿಗೆ ಕನಸು ಕಾಣಬೇಡಿ ಎಂದು ಹೇಳುವುದಕ್ಕೆ ಆಗುತ್ತದೆಯೇ? ಆಸೆಪಡಲಿ, ಏನು ಬೇಕಾದರೂ ಮಾಡಿಕೊಳ್ಳಲಿ. ಜನ ನಮಗೆ ಆಶೀರ್ವಾದ ಮಾಡಿದ್ದು, ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು. ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಅದಕ್ಕಾಗಿ ನಮ್ಮ ಕೆಲಸ ನಾವು ಮಾಡುತ್ತೇವೆ” ಎಂದು ತಿಳಿಸಿದರು.

ಕುಮಾರಸ್ವಾಮಿ ಅವರ ಬಗ್ಗೆ ಯಾಕಿಷ್ಟು ಮೃದು ಧೋರಣೆ ಎಂದು ಕೇಳಿದಾಗ, “ಅವರಿಗೆ ಪ್ರಮೋಷನ್ ಕೊಟ್ಟಿದ್ದೆವು. ಅದನ್ನು ಬೇಡ ಎಂದಿದ್ದಾರೆ. ಮುಂದಿನ ಜನ್ಮದಲ್ಲಾದರೂ ಸಿಗಲಿದೆ ಎಂದು ಹೇಳಿದ್ದಾರಲ್ಲ ಬಹಳ ಸಂತೋಷ” ಎಂದು ತಿಳಿಸಿದರು.

ಪಕ್ಷ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಚಿಂತನೆ ಇದೆಯಾ ಎಂದು ಕೇಳಿದಾಗ, “ಈ ವಿಚಾರವಾಗಿ ಯಾರ ಜತೆಯೂ ಮಾತನಾಡಿಲ್ಲ. ರಾಜಕೀಯದಲ್ಲಿ ಯಾರೂ ಯಾವ ನಿರ್ಧಾರ ಕೈಗೊಳ್ಳುತ್ತಾರೋ ಗೊತ್ತಿಲ್ಲ. ಅವರವರ ಭವಿಷ್ಯದ ಬಗ್ಗೆ ಆಲೋಚಿಸಿ ಅವರು ತೀರ್ಮಾನ ಮಾಡುತ್ತಾರೆ. ನನ್ನ ಜೊತೆ ಯಾರೂ ಯಾವ ಚರ್ಚೆಯನ್ನು ಮಾಡಿಲ್ಲ. ನಾನು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಬೇಕು, ಮತ ಪ್ರಮಾಣ ಹೆಚ್ಚಿಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು.

ಬಿಜೆಪಿ ನಾಯಕರ ಆರೋಪಗಳ ಬಗ್ಗೆ ಕೇಳಿದಾಗ, “ಬಿಜೆಪಿಯ ನವರಂಗಿ ನಾರಾಯಣ ಮತ್ತು ತಂಡಡವರು ನಾವು ತನಿಖೆ ಮಾಡುತ್ತಿರುವುದಕ್ಕೆ ಹೆದರಿಕೊಂಡಿದ್ದಾರೆ. ಅದರಿಂದ ಇಲ್ಲ, ಸಲ್ಲದ ಆರೋಪ ಮಾಡುತ್ತಿದ್ದಾರೆ. ಯಾವ ಗುತ್ತಿಗೆದಾರರಿಗೂ ನಾವು ತೊಂದರೆ ನೀಡುವುದಿಲ್ಲ. ಯಾರು ಕೆಲಸ ಮಾಡಿದ್ದಾರೋ ಅವರಿಗೆ ಹಣ ಸಿಗಲಿದೆ. ಬಿಜೆಪಿ ಸರ್ಕಾರ ಕಳೆದ ಎರಡು ಮೂರು ವರ್ಷಗಳಿಂದ ಬಿಲ್ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿರುವುದೇಕೆ? ಈ ಬಗ್ಗೆ ಅಂಕಿ ಅಂಶಗಳ ಸಮೇತ ಮಾತನಾಡುತ್ತೇನೆ. ನಮ್ಮ ಸರ್ಕಾರ ಕಮಿಷನ್ ಕೇಳಿಲ್ಲ ಎಂದು ಸತ್ಯಹೇಳಿದ್ದಕ್ಕೆ ಕೆಂಪಣ್ಣ ಅವರಿಗೆ ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರಿಗೆ ಧನ್ಯವಾದ ಹೇಳುತ್ತೇನೆ. ದಕ್ಷ ಆಡಳಿತ ನೀಡುವುದು ನಮ್ಮ ಗುರಿ. ಹೀಗಾಗಿ ಬಿಜೆಪಿ ಸುಳ್ಳು ಆರೋಗಳಿಗೆ ಹೆದರದೆ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ” ಎಂದು ತಿಳಿಸಿದರು.

ಎನ್‌ಇಪಿ ರದ್ದು ಮಾಡುತ್ತಿರುವುದು ಮೋದಿ ಅವರ ಮೇಲಿರುವ ದ್ವೇಷದಿಂದ ಎಂಬ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ಹರಿಯಾಣ ಇಲ್ಲೆಲ್ಲ ಏಕೆ ಎನ್‌ಇಪಿ ಜಾರಿಗೆ ತಂದಿಲ್ಲ? ಮೊದಲು ಅಲ್ಲಿ ಜಾರಿ ಮಾಡಲಿ. ಅವರಿಗೆ ಕರ್ನಾಟಕದ ಮೇಲೆ ಏಕೆ ಕಣ್ಣು? ಎನ್‌ಇಪಿ ಎಂದರೆ “ನಾಗ್ಪುರ ಎಜುಕೇಷನ್‌ ಪಾಲಿಸಿ” ಅದು ನಮಗೆ ಬೇಕಾಗಿಲ್ಲ. ನಮ್ಮ ಮಕ್ಕಳ ಭವಿಷ್ಯದ ಜೊತೆ ಆಟವಾಡಲು ಬಿಡುವುದಿಲ್ಲ. ಇಷ್ಟು ದಿನ ನಮ್ಮ ರಾಜ್ಯದಲ್ಲಿ ಉತ್ತಮ ಶಿಕ್ಷಣ ವ್ಯವಸ್ಥೆ ಇತ್ತು. ಇಲ್ಲಿ ಓಡಿರುವವರು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ನಮ್ಮ ಶಿಕ್ಷಣ ನೀತಿ ಬಗ್ಗೆ ನಮಗೆ ಹೆಮ್ಮೆ ಇದೆ. ಎನ್ ಇಪಿ ರದ್ದು ಮಾಡುವುದಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದೆವು. ರಾಜ್ಯ ಪಟ್ಟಿಯಲ್ಲಿ ಬರುವ ವಿಷಯದ ಬಗ್ಗೆ ಅವರಿಗೆ ಚಿಂತೆ ಬೇಡ” ಎಂದು ಹೇಳಿದರು.

ಎರಡೂವರೆ ವರ್ಷಗಳ ಬಳಿಕ ಹಿರಿಯರು ಅಧಿಕಾರ ಬಿಟ್ಟುಕೊಡಬೇಕು ಎಂಬ ಮುನಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಬಗ್ಗೆ ನಾನು ಏನೂ ಹೇಳುವುದಿಲ್ಲ. ಇದು ಪಕ್ಷದ ಆಂತರಿಕ ವಿಚಾರ. ಈ ವಿಚಾರವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ನಾವು ಸರ್ಕಾರ ಮಾಡುತ್ತಿದ್ದು, ನಮ್ಮ ಐದು ವರ್ಷಗಳ ಅವಧಿಯಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಕೆಲಸ ಮಾಡುತ್ತೇವೆ” ಎಂದು ತಿಳಿಸಿದರು.

ಬಿಬಿಎಂಪಿ ಕಾಮಗಾರಿ ತನಿಖೆ ಯಾವಾಗ ಮುಗಿಯಲಿದೆ ಎಂದು ಕೇಳಿದಾಗ, “ಈ ಬಗ್ಗೆ ನಾನು ದಾಖಲೆ ಸಮೇತ ಮಾತನಾಡುತ್ತೀನಿ. ಎಲ್ಲ ಮಾಧ್ಯಮದವರನ್ನು ಕರೆದು ಮಾತನಾಡುತ್ತೇನೆ. ನನ್ನ ಘನತೆಗೆ ಧಕ್ಕೆಯಾಗುವಂತೆ ರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರ (ಪ್ರಾಪೊಗಂಡ) ಮಾಡಲಾಗಿದೆ. ಎಲ್ಲದರ ಬಗ್ಗೆಯೂ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.

Tags: ckcknewsnowCongressDK Shivakumarhd kumaraswamyjdsnews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸೀಸನ್‌, ಚಾಪ್ಟರ್ ಲೆಕ್ಕದಲ್ಲಿ ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರ!!

ಸೀಸನ್‌, ಚಾಪ್ಟರ್ ಲೆಕ್ಕದಲ್ಲಿ ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರ!!

Leave a Reply Cancel reply

Your email address will not be published. Required fields are marked *

Recommended

ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

ಸಿಎಂ ಸಿದ್ದರಾಮಯ್ಯಗೆ ತೀಕ್ಷ್ಣ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

2 years ago
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಬಾಕಿ ಇರುವ ಪದವಿ, ಡಿಪ್ಲೊಮೊ ಪರೀಕ್ಷೆಗೆ ಡೇಟ್‌ ಫಿಕ್ಸ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ