• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಹಳ್ಳಿಗೆ ಮೆರುಗು ತಂದ ಮೊಹರಂ

cknewsnow desk by cknewsnow desk
August 16, 2023
in CKPLUS, EDITORS'S PICKS, NATION, STATE, WORLD
Reading Time: 1 min read
0
ಹಳ್ಳಿಗೆ ಮೆರುಗು ತಂದ ಮೊಹರಂ
983
VIEWS
FacebookTwitterWhatsuplinkedinEmail

ಅಸಹಿಷ್ಣುತೆ ಮೀರಿ ಸಹಿಷ್ಣುತೆಯ ಸಾಕ್ಷಾತ್ಕಾರ

by Pavan Kumar G angajala

ಬಾಗೇಪಲ್ಲಿ: ಪವಿತ್ರ ಮೊಹರಂ ಆಚರಣೆ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ? ಸಾಮಾನ್ಯ ಬೆಂಗಳೂರಿನಂಥ ನಗರಗಳಲ್ಲಿ ಇನ್ನವೇ, ನಗರ ಪಟ್ಟಣಗಳಲ್ಲಿ, ಮುಸ್ಲೀಂ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುವ ಸ್ಥಗಳಲ್ಲಿಈ ಆಚರಣೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತದೆ. ಆದರೆ, ಹಳ್ಳಿಯಲ್ಲಿ ಮೊಹರಂ ಜೋರಾಗಿ ಆಚರಿಸಲ್ಪಡುತ್ತದೆ ಎಂದರೆ.. ಮುಂದೆ ಓದಿ..

ಬಾಗೇಪಲ್ಲಿ ತಾಲೂಕು, ಅದರಲ್ಲಿಯೂ ಐತಿಹಾಸಿಕ ತಾಣ, ಗುಮ್ಮನಾಯಕನಪಾಳ್ಯ ಪಾಳೇಗಾರರ ನೆಲದ ದೇವಿಕುಂಟೆ ಗ್ರಾಮಕ್ಕೆ ಮೊಹರಂ ಜೀವಕಳೆ ತಂದಿದೆ. ಇಡೀ ಗ್ರಾಮವೇ ಮೊಹರಂ ಸಂಭ್ರಮದಲ್ಲಿ ತೇಲಿದೆ. ಗ್ರಾಮದ ಮನೆಗಳು ಸುಣ್ಣಬಣ್ಣದಿಂದ ಸಿಂಗಾರಗೊಂಡು ಕಂಗೊಳಿಸಿವೆ. ಮುಸ್ಲಿಂ ಸಮುದಾಯವನ್ನು ಮೀರಿಸುವಂತೆ ಆಚರಣೆಗಳು ನಡೆದಿವೆ. ಇದು ಹಿಂದೂ ಮುಸ್ಲೀಮರ ನಡುವಿನ ಸೌಹಾರ್ದತೆಗೆ ಮಹೋನ್ನತ ಸಾಕ್ಷ್ಯ!

ಹೌದು, ಇದು ನಿಜ. ಈ ಹಬ್ಬದಿಂದ ಮುಸ್ಲಿಮರು ಸಹೋದರತ್ವ ಸಂದೇಶವನ್ನು ಸಮಾಜಕ್ಕೆ ಸಾರಿದ್ದಾರೆ.

ದೇವಿಕುಂಟೆ ಒಂದು ಸಾವಿರ ಜನಸಂಖ್ಯೆಯುಳ್ಳ ಗ್ರಾಮ. ಇಲ್ಲಿನ ಹಿಂದು ಮುಸ್ಲಿಮರು ಪ್ರೀತಿ ಬಾಂಧವ್ಯದಿಂದ ಅವಿಭಕ್ತ ಕುಟುಂಬದಂತೆ ಬಾಳಿ ಬದುಕುತ್ತಿದ್ದಾರೆ. ಅವರು ಪರಸ್ಪರ ದೊಡ್ಡಪ್ಪ-ದೊಡ್ಡಮ್ಮ, ಚಿಕ್ಕಪ್ಪ -ಚಿಕ್ಕಮ್ಮ, ಮಾವ-ಅತ್ತೆ, ಅಣ್ಣ ತಂಗಿ ಎಂದು ಸಂಬೋಧಿಸುತ್ತಾ ಬದುಕುತ್ತಿದ್ದಾರೆ. ಆ ಶಬ್ದಗಳು ಕೇವಲ ಕೂಗಾಗಿ ಕೇಳದೇ ಪರಸ್ಪರ ಹೃದಯಗಳಿಂದ ಹೊರಹೊಮ್ಮುತ್ತಿವೆ. ತತ್ಪರಿಣಾಮವಾಗಿ ಹಳ್ಳಿಯಲ್ಲಿ ಸಂಬಂಧಗಳಿಗೆ ಮೀರಿದ ಮಾನವೀಯತೆ, ಸೌಹಾರ್ದತೆ ತುಂಬಿದೆ. ಮೊಹರಂ ಆಚರಣೆಯಲ್ಲೂ ಇದು ಪ್ರತಿಫಲಿಸಿತು.

ಹಲವಾರು ದಶಕಗಳಿಂದ ಐತಿಹಾಸಿಕ ಸೈಸವಲಿಬಾಬಾ ದರ್ಗಾದಲ್ಲಿ ಹಿಂದೂ-ಮುಸ್ಲಿಂ ಸಮುದಾಯಗಳು ಬಾಬಾ ಅವರ ಮೇಲೆ ಅಪಾರವಾದ ನಂಬಿಕೆ, ಭಕ್ತಿ ಇಟ್ಟುಕೊಂಡು ಶ್ರದ್ಧೆಯಿಂದ ನಡೆದುಕೊಳ್ಳುತ್ತಿದ್ದಾರೆ. ಎಲ್ಲ ಸಮುದಾಯದ ಜನರು ಕೌಟುಂಬಿಕ ಸಮಸ್ಯೆ, ಸಂತಾನ ಭಾಗ್ಯ, ಇನ್ನಿತರೆ ಏನೇ ಕಷ್ಟಕಾರ್ಪಣ್ಯ ಇದ್ದರೆ ಈ ದರ್ಗಾಕ್ಕೆ ಹರಿಕೆ ಹೊತ್ತುಕೊಳ್ಳುತ್ತಾರೆ. ಅವರ ಕಷ್ಟಗಳು ಪರಿಹಾರವಾದ ಮೇಲೆ ದರ್ಗಾಕ್ಕೆ ಬಂದು ಬಾಬಾ ಅವರಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ಅವರವರ ಸಂಪ್ರದಾಯ, ಧರ್ಮಾಚರಣೆಯಂತೆ ಇಲ್ಲಿ ವೊಧಿ ವಿಧಾನಗಳು ನಡೆಯುತ್ತವೆ.

ಹೀಗೆ ಮೋಹರ ಆಚರಣೆ;

ಮುಸ್ಲಿಮರು ಆಶುರಾ ದಿನದಂದು ಉಪವಾಸ ಮಾಡುತ್ತಾರೆ, ಹಾಗೆಯೇ, ಮೊಹರಂ ತಿಂಗಳಲ್ಲಿ ಕೃತಜ್ಞತೆಯನ್ನು ಅರ್ಪಿಸುತ್ತಾರೆ. ಶಿಯಾ ಮುಸ್ಲಿಮರು ಸಹ ಶೋಕಾಚರಣೆಯಲ್ಲಿ ತೊಡಗುತ್ತಾರೆ. ಮೋಹರಂ ಹಬ್ಬವನ್ನು ಹತ್ತು ದಿನ ಆಚರಣೆ ಮಾಡುತ್ತಾರೆ. ಮೊದಲ ದಿನ ಗುದ್ದಲಿಪೂಜೆ ಮಾಡಿ ಹಬ್ಬಕ್ಕೆ ಚಾಲನೆ ನೀಡುತ್ತಾರೆ. ಅವತ್ತಿನಿಂದ ಊರಿನಲ್ಲಿ ಚಿಕ್ಕಮಕ್ಕಳಿಂದ ಮೊದಲುಗೊಂಡು ಇಳಿವಯಸ್ಸಿನ ಹಿರಿಯರು ನಿತ್ಯವೂ ಸಂಜೆ ಸಾರ್ವಜನಿಕ ಆಚರಣೆಗಳಲ್ಲಿ ಭಾಗಿಯಾಗುತ್ತಾರೆ. ಈ ವೇಳೆ ಆಲಾಯಿ ಕುಣಿತ, ಜಿಲ್ಲಾಲಪಲ್ಲಿ ಕುಣಿತ, ಬಜಾರ್ ಕುಣಿತ ಮೊಹರಂ ಪದಗಳು ಹಾಡುವುದು, ದೇವರ ಕುಣಿತ, ಬೆಂಕಿಯಲ್ಲಿ ನಡೆದಾಡುವುದು ಸೇರಿದಂತೆ ಕೆಲವು ಆಚರಣೆಗಳು ಇರುತ್ತವೆ.

ಪ್ರತಿಯೊಂದು ಸಮುದಾಯವೂ ತನ್ನದೇ ಆದ ಹಬ್ಬ ಆಚರಣೆಯನ್ನು ಹೊಂದಿರುತ್ತದೆ ಹಾಗೂ ಪ್ರತಿಯೊಬ್ಬರೂ ತಮ್ಮ ಧರ್ಮದ ತತ್ತ್ವಗಳು, ಪದ್ಧತಿಗಳ ಪ್ರಕಾರ ಎಲ್ಲವನ್ನೂ ಆಚರಿಸುತ್ತಾರೆ. ಒಂದು ಸಮುದಾಯದ ಆಚರಣೆಗಳ ಸಂದರ್ಭದಲ್ಲಿ ಇತರೆ ಸಮುದಾಯಗಳ ಜನರು ಅಸಹಿಷ್ಣುತೆ ಮೀರಿ ಸಹಿಷ್ಣುತೆಯ ಸಾಕ್ಷಾತ್ಕಾರ ಮಾಡುವುದು ಎಂದರೆ ಈ ಕಾಲಘಟ್ಟದಲ್ಲಿ ಅಪರೂಪದಲ್ಲಿ ಅಪರೂಪ. ದೇವಿಕುಂಟೆ ಗ್ರಾಮದಲ್ಲಿ ಅದೆಲ್ಲಾ ಸಾಧ್ಯವಾಗಿದೆ.


Pavan Kumar G angajala
ಓದಿದ್ದು ಇಂಗ್ಲೀಷ್‌ ಲಿಟರೇಚರ್.‌ ಆಸಕ್ತಿ ಇತಿಹಾಸ, ಪ್ರವೃತ್ತಿ ಇತಿಹಾಸ ಸಂಶೋಧನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಐತಿಹಾಸಿಕ ತಾಣಗಳ ಬಗ್ಗೆ ಅತೀವ ಆಸಕ್ತಿ. ದೇವಿಕುಂಟೆ, ಗುಮ್ಮನಾಯಕನ ಪಾಳ್ಯ ಕೋಟೆಗಳ ಕುರಿತು ಆಳ ಶೋಧ ಮಾಡುತ್ತಿರುವ ಯುವಕ, ರಾಜ್ಯದ ಗಡಿಭಾಗವನ್ನು ಆಳಿದ ವಿವಿಧ ಪಾಳೇಯಗಾರರ ಆಡಳಿತದ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿದ್ದಾರೆ.
Tags: bagepallichikkaballapurackcknewsnowgood newsHindukarnatakaMuharramMuharram 2023Muslim
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ರಾಜರಾಜೇಶ್ವರಿ ನಗರದಲ್ಲಿ ಹೆಚ್ಚಿದ ರಗಳೆ; ಕಾಂಗ್ರೆಸ್‌ ಮತದಾರರ ಚೀಟಿ ಸಂಗ್ರಹಿಸುತ್ತಿದೆ ಎಂದು ನೇರ ಆರೋಪ ಮಾಡಿದ ಬಿಜೆಪಿ

ಆಪರೇಷನ್‌ ಕಮಲಕ್ಕೆ ಸಿಕ್ಕಿ ಬೇಲಿ ಹಾರಿದ್ದವರಿಗೆ ಶಾಕ್!‌

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆಯಲ್ಲೊಬ್ಬರು ಆಮ್‌ಆದ್ಮಿಗಳ ಡಾಕ್ಟರ್!‌ ಸೋಂಕಿತರಿಗೆ ವೈದ್ಯಕೀಯ ಆರೈಕೆ ಜತೆಗೆ ಆತ್ಮಸ್ಥೈರ್ಯದ ಪಾಠ

ಹಳ್ಳಿ ಜನರ ಮನೆ ಬಾಗಿಲಿಗೇ ಲಸಿಕೆ

4 years ago
ಪ್ರತೀ ದಿನಕ್ಕೆ 3 ಲಕ್ಷ ಜನರಿಗೆ ಲಸಿಕೆ; ಕೋವಿಡ್ಡೋತ್ತರ ಕಾಲದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬಲು ಖಾಸಗಿಯವರ ಜತೆ ಸಹಭಾಗಿತ್ವಕ್ಕೆ ಮುಂದಾದ ರಾಜ್ಯ ಸರಕಾರ‌

ಪ್ರತೀ ದಿನಕ್ಕೆ 3 ಲಕ್ಷ ಜನರಿಗೆ ಲಸಿಕೆ; ಕೋವಿಡ್ಡೋತ್ತರ ಕಾಲದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬಲು ಖಾಸಗಿಯವರ ಜತೆ ಸಹಭಾಗಿತ್ವಕ್ಕೆ ಮುಂದಾದ ರಾಜ್ಯ ಸರಕಾರ‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ