• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ವರ್ಗಾವಣೆ ದಂಧೆ, ಕಮೀಷನ್ ವ್ಯವಹಾರ ಮರೆಮಾಚಲು ಘರ್ ವಾಪ್ಸಿ ನಾಟಕ

cknewsnow desk by cknewsnow desk
August 20, 2023
in STATE
Reading Time: 1 min read
0
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್
929
VIEWS
FacebookTwitterWhatsuplinkedinEmail

ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು, ಕಾವೇರಿಗಿಂತ ಘರ್ ವಾಪ್ಸಿಯದ್ದೇ ಚಿಂತೆ!; ಕನ್ನಡಿಗರ ಹಿತ ಬಲಿಗೊಟ್ಟು ತಮಿಳುನಾಡಿಗೆ ನೀರು ಬಿಟ್ಟಿದ್ದು ಸರಿಯಲ್ಲ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಈಗ ಕಾವೇರಿ, ಕನ್ನಡಿಗರ ಬಗ್ಗೆ ಚಿಂತೆ ಇಲ್ಲ. ಅವರಿಗೆ ಘರ್ ವಾಪ್ಸಿಯದ್ದೇ ಚಿಂತೆಯಾಗಿದೆ. ಈ ಚಿಂತೆಯಲ್ಲಿರುವ ಅವರು ನಮ್ಮನ್ನು ಸರ್ವಪಕ್ಷ ಸಭೆಗೆ ಕರೀತಾರೋ ಇಲ್ವೋ ಗೊತ್ತಿಲ್ಲ. ಅವರು ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ ಎಂದು ಕುಮಾರಸ್ವಾಮಿ ಅವರು ಕುಟುಕಿದರು.

ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಜರಗನಹಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು ಅವರು.

ರಾಜ್ಯ ಕಾಂಗ್ರೆಸ್ ಸರಕಾರ ವರ್ಗಾವಣೆ ದಂಧೆ, ಕಮೀಷನ್ ವ್ಯವಹಾರ, ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಹಾದಿ ಬೀದಿಯಲ್ಲಿ ಜನರು ಛೀ, ಥೂ ಎನ್ನುತ್ತಿದ್ದಾರೆ. ಇದನ್ನು ಮರೆ ಮಾಚಲು ಘರ್ ವಾಪ್ಸಿ ನಾಟಕ ಆಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಟೀಕಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಅರ್ಧಕ್ಕರ್ಧ ಮುಗಿದು ಹೋಗುತ್ತದೆ, ಜೆಡಿಎಸ್ ಮುಗಿದೇ ಹೋಗುತ್ತದೆ ಅಂತಿದ್ದಾರೆ. ನಿನ್ನೆ ಮೊನ್ನೆ ಆಯ್ಕೆ ಆದವರು ಕೂಡ 10-20ಕ್ಕೂ ಹೆಚ್ಚು ಎಂಎಲ್ ಎಗಳು ಬರುತ್ತಾರೆ ಎಂದು ಹೇಳುತ್ತಿದ್ದಾರೆ. ಆದರೆ, ಆ ಪಕ್ಷದಲ್ಲಿ ಇರುವ ಶಾಸಕರ ತಳಮಳದ ಬಗ್ಗೆ ಅವರು ಮಾತನಾಡುತ್ತಿಲ್ಲ, ಯಾಕೆ ಎಂದು ಅವರು ಪ್ರಶ್ನಿಸಿದರು.

ಘರ್ ವಾಪ್ಸಿ ಇತಿಹಾಸ ಬಿಚ್ಚಿಟ್ಟ ಮಾಜಿ ಸಿಎಂ

ಇವರಿಗೆ ಗೊತ್ತಿರಲಿ, ಯಾವುದೇ ಪಕ್ಷವನ್ನು ನಿರ್ನಾಮ ಮಾಡೋದು ಯಾರಿಂದಲೂ ಸಾಧ್ಯವಿಲ್ಲ. ಹಿಂದೆ ಎಸ್.ಎಂ. ಕೃಷ್ಣ ಅವರ ಬಹುಮತದ ಸರಕಾರ ಇತ್ತು. ಆಗಲೂ ಬಿಜೆಪಿ, ಜೆಡಿಎಸ್ ನಿಂದ ಹಲವಾರು ಶಾಸಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡರು. ಆಮೇಲೆ 2004ರಲ್ಲಿ ಏನಾಯ್ತು? ೨೦೦೮ರಲ್ಲಿ ಬಿಜೆಪಿಯವರು ಕೂಡ ಹಾಗೆಯೇ ಮಾಡಿದರು. 2013ಕ್ಕೆ ಏನಾಯಿತು? 2013ರಲ್ಲಿ ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಮ್ಮ ಶಾಸಕರಿಂದ ಕ್ರಾಸ್ ವೋಟಿಂಗ್ ಮಾಡಿ ಕರೆದುಕೊಂಡು ಹೋಯಿತು. 2018ರಲ್ಲಿ ಎಲ್ಲಿಗೆ ಬಂದು ನಿಂತಿತು? ಇನ್ನು ಬಿಜೆಪಿಯವರು 17 ಶಾಸಕರನ್ನು ಕರೆದುಕೊಂಡು ಹೋಗಿ 3 ವರ್ಷ ಸರಕಾರವನ್ನೂ ಮಾಡಿ ಈಗೆಲ್ಲಿ ಬಂದು ನಿಂತಿದ್ದಾರೆ. ಮುಂದೆ ಇವರ ಹಣೆಬರಹವೂ ಇಷ್ಟೇ. ಈ ಘರ್ ವಾಪ್ಸಿಗಳೆಲ್ಲ ಕೆಲಸ ಮಾಡಲ್ಲ ಎಂದರು ಮಾಜಿ ಮುಖ್ಯಮಂತ್ರಿಗಳು.

ಪಕ್ಷ ನಿಷ್ಠೆ ಕಡಿಮೆ ಆಗಿದೆ

ಮಾಜಿ ಶಾಸಕ ಆಯನೂರು ಮಂಜುನಾಥ್ ಮತ್ತು ಡಿ.ಕೆ.ಶಿವಕುಮಾರ್ ಭೇಟಿ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ ಕುಮಾರಸ್ವಾಮಿ ಅವರು; ಹೋಗುವವರನ್ನು ಹಿಡಿದುಕೊಳ್ಳಲು ಆಗುತ್ತಾ? ಈಗೆಲ್ಲಾ ಪಕ್ಷ ನಿಷ್ಠೆಗಿಂತ ವೈಯಕ್ತಿಕ ಲಾಭವೇ ಮುಖ್ಯವಾಗಿದೆ ಕೆಲವರಿಗೆ. ಈ ಬಗ್ಗೆ ಇನ್ನೇನು ಹೇಳಲಾರೆ ಎಂದರು.

ಕಾಂಗ್ರೆಸ್ ನವರು ಎಲ್ಲಾ ಪಕ್ಷಗಳ ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮದೂ ಅವಕಾಶವಾದಿ ರಾಜಕಾರಣವೇ ಎಂದು ಅವರೇ ಹೇಳಿಲ್ಲವೇ? ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? ಎಂದು ಅವರೇ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ

ರಾಜಧಾನಿ ಬೆಂಗಳೂರಿನಲ್ಲಿ ಕೆಲ ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಜನರು ಹಣ ಕೊಟ್ಟು ಖಾಸಗಿ ಟ್ಯಾಂಕರ್ ಗಳಲ್ಲಿ ನೀರು ಖರೀದಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ನಾಗರಿಕರಿಗೆ ಕುಡಿಯುವ ನೀರು, ರೈತರಿಗೆ ರಕ್ಷಣೆ ನೀಡಬೇಕಾದ್ದು ಸರಕಾರದ ಕೆಲಸ. ಅದರಲ್ಲೂ ರಾಜಧಾನಿಯಲ್ಲಿ ನೀರಿನ ಬವಣೆ ಶುರುವಾಗಿದೆ. ಆದರೆ ರಾಜ್ಯ ಸರಕಾರ ಕನ್ನಡಿಗರನ್ನು ನಿರ್ಲಕ್ಷ್ಯ ಮಾಡಿ ನೆರೆ ರಾಜ್ಯಕ್ಕೆ ನೀರು ಹರಿಸುತ್ತಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಪ್ರತಿಪಕ್ಷಗಳು ಹಾಗೂ ಜನರಿಂದ ವಿರೋಧ, ಟೀಕೆಗಳು ವ್ಯಕ್ತವಾದ ಮೇಲೆ ಸರಕಾರಕ್ಕೆ ಜ್ಞಾನೋದಯವಾಗಿದೆ. ನೀರನ್ನು ಬಿಟ್ಟ ಮೇಲೆ ಸುಪ್ರೀಂ ಕೋರ್ಟ್ ಗೆ ಹೋಗ್ತೀವಿ ಎನ್ನುತ್ತಿದ್ದಾರೆ. ತಮಿಳುನಾಡಿನವರು ಅರ್ಜಿ ಹಾಕಿದ ಕೂಡಲೇ ಸರಕಾರ ಆಕ್ಷೇಪಣೆ ಸಲ್ಲಿಸಬೇಕಿತ್ತು. ತಮಿಳುನಾಡಿನಲ್ಲಿ ಕುರುವೈ ಬೆಳೆ ವಿಸ್ತೀರ್ಣವನ್ನು ನಾಲ್ಕು ಪಟ್ಟು ಹೆಚ್ಚು ಮಾಡಿಕೊಂಡಿದ್ದಾರೆ. ಅದನ್ನು ನಮ್ಮ ಸರಕಾರ ವಿರೋಧ ಮಾಡಲಿಲ್ಲ, ಕೇಂದ್ರ ಸರಕಾರವೂ ಅದನ್ನು ನಿಲ್ಲಿಸಲಿಲ್ಲ. ಕನ್ನಡಿಗರ ಬದುಕಿನ ಜನತೆ ರಾಷ್ಟ್ರೀಯ ಪಕ್ಷಗಳೂ ಚೆಲ್ಲಾಟ ಆಡುತ್ತಿವೆ. ಅದಕ್ಕೆ ನಮ್ಮಲ್ಲೂ ಕೈಜೋಡಿಸಿದ್ದಾರೆ ಎಂದು ಅವರು ಹೇಳಿದರು.

ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಸಭೆ ಕರೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಇದು ʼಊರು ಕೊಳ್ಳೆ ಹೊಡೆದ ದಿಡ್ಡಿ ಬಾಗಿಲು ಹಾಕಿದರುʼ ಎನ್ನುವಂತೆ ಆಗಿದೆ. ಈಗ ಸಭೆ ಕರೆದರೆ ಏನು ಪ್ರಯೋಜನ? 112 ಅಡಿ ಇದ್ದ ನೀರು ಈಗ 107 ಅಡಿಗೆ ಬಂದು ನಿಂತಿದೆ. ಮಳೆ ಆಗದಿದ್ದರೆ ಏನು ಮಾಡುವುದು. ಮುನ್ನೆಚ್ಚೆರಿಕೆ ತೆಗೆದುಕೊಳ್ಳದಿದ್ದರೆ ಉಪಯೋಗ ಏನಿದೆ? ಸಭೆಗೆ ನಮ್ಮನ್ನೇನೂ ಕರೆದಿಲ್ಲ, ನೋಡೋಣ ಎಂದರು ಮಾಜಿ ಮುಖ್ಯಮಂತ್ರಿಗಳು.

ಮೊದಲು ಒಕ್ಕೂಟ ವ್ಯವಸ್ಥೆಯಲ್ಲಿ ಏನೆಲ್ಲಾ ಕ್ರಮ ವಹಿಸಬೇಕು, ಎಲ್ಲೆಲ್ಲಿ ಹೇಗೆಲ್ಲಾ ವಾದ ಮಾಡಬೇಕು, ಆ ಬಗ್ಗೆ ಸರಕಾರ ಆಲೋಚನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿಗಳು ಸರಕಾರಕ್ಕೆ ಕಿವಿಮಾತು ಹೇಳಿದರಲ್ಲದೆ, ಮಂಡ್ಯ ಜಿಲ್ಲೆಯ ರೈತರು ನಡೆಸುತ್ತಿರುವ ಪ್ರತಿಭಟನೆ, ಹೋರಾಟಗಳಿಗೆ ನಮ್ಮ ಪಕ್ಷದ ಪೂರ್ಣ ಬೆಂಬಲ ಇದೆ ಎಂದರು.

Tags: bjpcash for postingcknewsnowCongreshd kumaraswamyindiajdskarnatakanews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
2004ರಲ್ಲಿ ಡಿ.ಕೆ.ಶಿವಕುಮಾರ್‌ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆ ಉದ್ಧಾರಕ್ಕೋ ನೈಸ್‌ ಕಂಪನಿ ಉದ್ಧಾರಕ್ಕೋ?

2004ರಲ್ಲಿ ಡಿ.ಕೆ.ಶಿವಕುಮಾರ್‌ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆ ಉದ್ಧಾರಕ್ಕೋ ನೈಸ್‌ ಕಂಪನಿ ಉದ್ಧಾರಕ್ಕೋ?

Leave a Reply Cancel reply

Your email address will not be published. Required fields are marked *

Recommended

ಕಲಿಯುಗ ಪ್ರತ್ಯಕ್ಷ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ನೆಲೆಸಿರುವ ಆಂಧ್ರಪ್ರದೇಶ ಆಗುತ್ತಿದೆಯಾ ಕ್ರೈಸ್ತಪ್ರದೇಶ !?

ವಿಜೃಂಭಿಸುತ್ತಿರುವ ಕೋವಿಡ್‌ ಸೋಂಕು; ಏಪ್ರಿಲ್‌ 12ರಿಂದ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ಆಲಯದಲ್ಲಿ ಸರ್ವ ದರ್ಶನ ಟೋಕನ್‌ ವಿತರಣೆ ಬಂದ್, ತಿರುಪತಿ ದೇಗುಲಗಳಲ್ಲೂ ಬಿಗಿ ಕ್ರಮ

4 years ago
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಚಿಕಿತ್ಸೆಗೆ ಸಡಗೋಪನ್ ಸಮಿತಿ ಕೊಟ್ಟ ಶಿಫಾರಸು

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಚಿಕಿತ್ಸೆಗೆ ಸಡಗೋಪನ್ ಸಮಿತಿ ಕೊಟ್ಟ ಶಿಫಾರಸು

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ