• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

‌3ನೇ ಜನ್ಮ ಸಿಕ್ಕಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

P K Channakrishna by P K Channakrishna
September 3, 2023
in NATION, STATE
Reading Time: 2 mins read
0
‌3ನೇ ಜನ್ಮ ಸಿಕ್ಕಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ
991
VIEWS
FacebookTwitterWhatsuplinkedinEmail

ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಮುಖ್ಯಮಂತ್ರಿ; ನಾಡಿನ ಜನ, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ ಹೆಚ್ಡಿಕೆ

ಬೆಂಗಳೂರು: ದೇವರು, ರಾಜ್ಯದ ಜನರು ಹಾಗೂ ತಂದೆ ತಾಯಿಯ ಆಶೀರ್ವಾದ, ವೈದ್ಯರ ಆರೈಕೆಯಿಂದ ನನಗೆ ಮೂರನೇ ಜನ್ಮ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೃತಜ್ಞತಾಪೂರ್ವಕ ಮಾತುಗಳನ್ನು ಹೇಳಿದರು.

ಆರೋಗ್ಯದ ಬಗ್ಗೆ ಯಾರೂ ನಿಷ್ಕಾಳಜಿ ವಹಿಸಬಾರದು. ಏನೇ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ಎಚ್ಚೆತ್ತು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಿರಿ ಎಂದು ಅವರು ಜನತೆಯಲ್ಲಿ ವಿನಂತಿ ಮಾಡಿಕೊಂಡರು.

ಅನಾರೋಗ್ಯದಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಅವರು ಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಈ ಸಂದರ್ಭದಲ್ಲಿ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ತಮ್ಮ ಹೃದಯಾಂತರಾಳದ ಮಾತುಗಳನ್ನು ಅವರು ಹಂಚಿಕೊಂಡರು.

ಕಳೆದ ಐದು ದಿನಗಳಿಂದ ನಾಡಿನ ಜನರು, ಅಭಿಮಾನಿಗಳು, ಹಿತೈಷಿಗಳು, ಮಾಧ್ಯಮ ಸ್ನೇಹಿತರು, ಆತಂಕದಿಂದ ಕಾಯುತ್ತಿದ್ದರು. ಪ್ರಥಮವಾಗಿ ಭಗವಂತನಿಗೆ, ತಂದೆತಾಯಿಗಳ ಅವರಿಗೆ ಹಾಗೂ ಆಸ್ಪತ್ರೆಯ ಎಲ್ಲಾ ವೈದ್ಯವೃಂದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ತಮ್ಮ ಆರೋಗ್ಯ ಕೈತಪ್ಪಿ ಆಸ್ಪತ್ರೆಗೆ ದಾಖಲಾದ ಸಂದರ್ಭವನ್ನು ವಿವರಿಸಿದ ಮಾಜಿ ಮುಖ್ಯಮಂತ್ರಿ ಅವರು; ಆ ದಿನ ನಾನು ಬಿಡದಿಯ ನನ್ನ ತೋಟದ ಮನೆಯಲ್ಲಿದ್ದೆ. ನನ್ನ ಆಪ್ತ ಸಹಾಯಕ ಸತೀಶ್ ಜತೆಯಲ್ಲಿ ಇದ್ದರು. ತಡರಾತ್ರಿ ನನ್ನ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿತು. ತಕ್ಷಣವೇ ಡಾ. ಸಿ.ಎನ್.ಮಂಜುನಾಥ್ ಅವರಿಗೆ ಕರೆ ಮಾಡಿ, ಅವರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯ ತಜ್ಞವೈದ್ಯರಾದ ಡಾ.ಸತೀಶ್ ಚಂದ್ರ ಅವರನ್ನು ಸಂಪರ್ಕ ಮಾಡಲಾಯಿತು. ಬಿಡದಿ ತೋಟದ ಮನೆಯಿಂದ ಕೇವಲ ಇಪ್ಪತ್ತು ನಿಮಿಷಗಳಲ್ಲಿ ಇಲ್ಲಿಗೆ ತಲುಪಿದೆ ಎಂದರು ಅವರು.

ನಾನು ಆ ಸಂದರ್ಭದಲ್ಲಿ ಸ್ವಲ್ಪ ನಿರ್ಲಕ್ಷ್ಯ ಮಾಡಿದ್ದಿರೂ ಇವತ್ತು ಇಷ್ಟು ಸರಾಗವಾಗಿ ಮಾತಾಡಲು ಆಗುತ್ತಿರಲಿಲ್ಲ. ವೈದ್ಯರು ಸಹಾ ಬಹಳ ಕಾಳಜಿ ವಹಿಸಿದರು. ಆಸ್ಪತ್ರೆಗೆ ಬಂದ ಮರು ಕ್ಷಣವೇ ವೈದ್ಯರು ಚಿಕಿತ್ಸೆ ಆರಂಭ ಮಾಡಿದರು. ಅವರ ಆರೈಕೆ, ದೇವರ ದಯೆಯ ಫಲವಾಗಿ ನಾನೀಗ ನಿಮ್ಮೆಲ್ಲರ ಜತೆ ನಿರಾಯಾಸವಾಗಿ ಮಾತನಾಡುತ್ತಿದ್ದೇನೆ ಎಂದು ಭಾವುಕರಾದರು ಮಾಜಿ ಮುಖ್ಯಮಂತ್ರಿಗಳು.

ಪ್ರತಿ ಕುಟುಂಬಗಳಲ್ಲೂ ಆರೋಗ್ಯದ ಸಮಸ್ಯೆಗಳು ಇದ್ದೇ ಇರುತ್ತವೆ. ಬಡವ ಬಲ್ಲಿದ ಯಾರೇ ಆಗಿರಲಿ, ಅನಾರೋಗ್ಯ ಕಾಣಿಸಿಕೊಂಡಾಗ ಅಸಡ್ಡೆ ಬೇಡ. ಬಹಳ ಕಾಳಜಿ ಇರಲಿ, ಗೋಲ್ಡನ್ ಪಿರಿಯಡ್ ಬಗ್ಗೆ ಗಮನ ಇರಲಿ. ವೈಯಕ್ತಿಕವಾಗಿ ನನಗೆ ಇದು ಮೂರನೆಯ ಘಟನೆ. ಭಗವಂತ ನನಗೆ ಕೊಟ್ಟಿರುವ ಮೂರನೇ ಜನ್ಮ ಇದು ಎಂದು ಕುಮಾರಸ್ವಾಮಿ ಅವರು ಒತ್ತಿಒತ್ತಿ ಹೇಳಿದರು.

ಸ್ವಲ್ಪ ತಡ ಮಾಡಿದ್ದರೂ ನಾನು ಮೂರ್ನಾಲ್ಕು ತಿಂಗಳು ಹಾಸಿಗೆ ಹಿಡಿಯಬೇಕಿತ್ತು. ಆದರೆ ವೈದ್ಯರ ಪರಿಶ್ರಮದಿಂದ ಮತ್ತೆ ಮೊದಲಿನ ಸ್ಥಿತಿಗೆ ಬಂದಿದ್ದೇನೆ. ಈಗಾಗಲೇ ಎಲ್ಲರಿಗೂ ಗೊತ್ತಿರುವಂತೆ ಎರಡು ಸಲ ಹೃದಯ ಚಿಕಿತ್ಸೆಗೆ ಒಳಗಾದವನು ನಾನು. ಎರಡನೇ ಸಲ ಸಿಎಂ ಆಗಿದ್ದೆ. ಅಂದು ವಾಲ್ಮೀಕಿ ಜಯಂತಿಯ ದಿನ. ಮಾದ್ಯಮ ಒಂದರಲ್ಲಿ ಒಂದು ಕಾರ್ಯಕ್ರಮ ಪ್ರಸಾರ ಆಗುತ್ತಿತ್ತು. “ಕರ್ನಾಟಕವನ್ನು ಕತ್ತಲೆಗೆ ತಳ್ಳಿದ ಕುಮಾರ” ಎಂಬ ಶೀರ್ಷಿಕೆಯ ಕಾರ್ಯಕ್ರಮ ಅದು. ಆಗ ನನ್ನ ಮನಸ್ಸಿಗೆ ಆಘಾತವಾಗಿ ಹೃದಯದ ಮೇಲೆ ತೀವ್ರ ಒತ್ತಡ ಉಂಟಾಗಿತ್ತು ಎಂದು ಅವರು ಹಳೆಯ ಘಟನೆಯನ್ನು ನೆನಪು ಮಾಡಿಕೊಂಡರು.

ಹೀಗಾಗಿ ನಾನು ನಾಡಿನ ಜನತೆಗೆ ಮನವಿ ಮಾಡುವುದು ಇಷ್ಟೇ. ಇಂತಹ ಅನಾರೋಗ್ಯದ ಲಕ್ಷಣಗಳು ಕಂಡು ಬಂದರೆ ಯಾವುದೇ ಕಾರಣಕ್ಕೂ ವಿಳಂಬ ಮಾಡಬೇಡಿ. ಹಣದ ಬಗ್ಗೆ ಚಿಂತೆ ಮಾಡಬೇಡಿ, ಮೊದಲು ಜೀವ ಉಳಿಸಿಕೊಳ್ಳಲು ಪ್ರಯತ್ನಿಸಿ. ನಾನು ಬೆಳಗ್ಗೆ ಹೋಗೋಣ, ನೋಡೋಣ ಅಂತ ನಿರ್ಲಕ್ಷ್ಯ ಮಾಡಿದ್ದಿದ್ದರೆ ಜೀವನಪೂರ್ತಿ ಹಾಸಿಗೆ ಹಿಡಿಯುವ ಪರಿಸ್ಥಿತಿ ಬರುತ್ತಿತ್ತು ಎಂದು ಅವರು ತಿಳಿಸಿದರು.

ಇವತ್ತು ಚಂದ್ರಯಾನ, ಸೂರ್ಯಯಾನ ಮಾಡಿದ್ದೇವೆ. ವಿಜ್ಞಾನ, ತಂತ್ರಜ್ಞಾನ, ಆರೋಗ್ಯ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧಿಸಿದ್ದೇವೆ. ಕರ್ನಾಟಕದಲ್ಲಿ ಅತ್ಯಂತ ನುರಿತ, ಪ್ರತಿಭಾವಂತ, ಶ್ರೇಷ್ಠ ವೈದ್ಯರು ಇದ್ದಾರೆ. ಎಲ್ಲರೂ ಜಾಗೃತರಾಗಿ ಇರಬೇಕು ಎಂಬುದು ನನ್ನ ಮನವಿ.

ಹೆಚ್.ಡಿ.ಕುಮಾರಸ್ವಾಮಿ
ತಂದೆಗೆ ನಿಖಿಲ್ ಅವರ ಮನವಿ

ಈ ಸಂದರ್ಭದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು; ವೈದ್ಯರಿಗೆ ಧನ್ಯವಾದ ತಿಳಿಸಿದರು.

ತಂದೆ ತಾಯಿ ಅವರು ಮಾಡಿದ ಜನಪರ ಕೆಲಸಗಳು ಅವರನ್ನು ಕಾಪಾಡಿವೆ. ನಾವು ಸಹಜವಾಗಿ ಒತ್ತಡದಲ್ಲಿದ್ದೆವು. ಹಾಗಾಗಿ ಮಾಧ್ಯಮಗಳ ಜತೆಗೆ ಈವರೆಗೂ ಮಾತಾಡಲು ಆಗಲಿಲ್ಲ ಎಂದ ಅವರು; ಮಗನಾಗಿ ನಮ್ಮ ತಂದೆ ಅವರ ಬಳಿ ಕೇಳುವುದಿಷ್ಟೇ; “ನೀವು ಜನಗಳ ಆಸ್ತಿ, ನೀವು ಹಲವಾರು ವರ್ಷಗಳ ಕಾಲ ನಮ್ಮ ಜತೆ ಇರಬೇಕು. ಮುಂದಿನ ದಿನಗಳಲ್ಲಿ ಜೀವನ ಶೈಲಿ ಬದಲಿಸಿಕೊಳ್ಳಿ. ಸರಿಯಾಗಿ ಊಟ ಮಾಡಿ, ನಿದ್ದೆ ಮಾಡಿ” ಎಂದು ಮಾಧ್ಯಮಗಳ ಮುಂದೆಯೇ ಮನವಿ ಮಾಡಿಕೊಂಡರು.

ಎಚ್ಚರಿಕೆ ಮಾತುಗಳನ್ನು ಹೇಳಿದ ವೈದ್ಯರು

ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ವೈದ್ಯರಾದ ಡಾ.ಸತೀಶ್ ಚಂದ್ರ ಅವರು ಮಾತನಾಡಿ; ಪಾರ್ಶ್ವವಾಯು ಎನ್ನುವುದು ಬಹಳ ಸಾಮಾನ್ಯ ಕಾಯಿಲೆಯಾದರೂ ಅದರ ಬಗ್ಗೆ ತಿಳಿವಳಿಕೆ ಅವಶ್ಯಕತೆ ಇದೆ. ಅದರ ಚಿಹ್ನೆಗಳನ್ನು ತಿಳಿದುಕೊಂಡ ತಕ್ಷಣ ಆಸ್ಪತ್ರೆಗೆ ಬರಬೇಕು.ಕಣ್ಣು, ಕೈ, ಮಾತುಗಳಲ್ಲಿ ಏನಾದರೂ ವ್ಯತ್ಯಾಸ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಬರಬೇಕು. ಗೋಲ್ಡನ್ ಅವರ್ ನಲ್ಲಿ ಆಸ್ಪತ್ರೆಗೆ ತಲುಪಬೇಕು. ಆಗ ಚಿಕಿತ್ಸೆ ಕೊಡಲು ಅನುಕೂಲ ಆಗುತ್ತದೆ. ರಕ್ತದ ಒತ್ತಡ, ಹೃದಯದ ಕಾಯಿಲೆ, ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡರೆ ಸ್ಟ್ರೋಕ್ ಅನ್ನು ತಡೆಯಬಹುದು ಎಂದರು.

ಆಸ್ಪತ್ರೆಯ ಉಪಾಧ್ಯಕ್ಷ ಡಾ.ಗೋವಿಂದಯ್ಯ ಯತೀಶ್ ಅವರು ಮಾತನಾಡಿ; ಮಾಜಿ ಮುಖ್ಯಮಂತ್ರಿ ಅವರ ಆರೋಗ್ಯಕ್ಕಾಗಿ ಜನತೆಗೆ ಬಹಳಷ್ಟು ಕಾಳಜಿ, ಕಳಕಳಿ ಇತ್ತು. ಜನರ ಆತಂಕವನ್ನು, ಕಳಕಳಿಯನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಈ ಕಾರಣಕ್ಕಾಗಿ ಇಂದು ತಾವು ಅನುಭವಿಸಿದ ಸಂಕಷ್ಟದ ಸ್ವತಃ ತಾವೇ ತಿಳಿಸುವಂತೆ ಕುಮಾರಸ್ವಾಮಿ ಅವರನ್ನು ಮನವಿ ಮಾಡಿಕೊಂಡೆವು ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಅವರಿಗೆ ಚಿಕಿತ್ಸೆ ನೀಡಿದ ಡಾ.ಚಿನ್ಮಯ ನಾಗೇಶ್, ಡಾ. ಅನಿರುಧ್ ವಿಲಾಸ್ ಕುಲಕರ್ಣಿ, ಡಾ.ರೇಶ್ಮಿ ದೇವರಾಜ್, ಡಾ.ಅಭಿಜಿತ್ ವಿಲಾಸ್ ಕುಲಕರ್ಣಿ ಹಾಗೂ ಶಾಸಕ ಬಿ.ಎನ್. ರವಿಕುಮಾರ್, ಮಾಜಿ ಕೆ.ಟಿ. ಶ್ರೀಕಂಠೇಗೌಡ ಮುಂತಾದವರು ಉಪಸ್ಥಿತರಿದ್ದರು.

Tags: Apollo hospitalBengaluruckcknewsnowdischarge from hospitalhd kumaraswamyHealth
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ವಿಪರ್ಯಾಸವೆಂದರೆ ಇದೆ! ಯಾರ ಸಹವಾಸ ಬೇಡವೆಂದು ರಾಜಕೀಯ ನಿವೃತ್ತಿಗೆ ಯೋಚಿಸಿದ್ದರೋ ಕೊನೆಗೆ ಅವರದೇ ಶ್ರದ್ಧಾಂಜಲಿ ಸಭೆ ಅಧ್ಯಕ್ಷತೆ ವಹಿಸಬೇಕಾಯಿತು ಪಿ.ವಿ.ನರಸಿಂಹರಾವ್

ರೂಪಾಯಿಯ ಮಾನ ಕಾಪಾಡಿದ ಮಹಾ ಮೇಧಾವಿ!

Leave a Reply Cancel reply

Your email address will not be published. Required fields are marked *

Recommended

ಬಿಎಂಟಿಸಿ ಬಸ್ ನಲ್ಲಿ ಮಾಜಿ ಸಚಿವರ ಸಂಚಾರ

ಬಿಎಂಟಿಸಿ ಬಸ್ ನಲ್ಲಿ ಮಾಜಿ ಸಚಿವರ ಸಂಚಾರ

3 years ago
ಹೈ ಕ್ವಾಲಿಟಿ ಶಿಕ್ಷಣ; ಟಾರ್ಗೆಟ್ 2030

ಹೈ ಕ್ವಾಲಿಟಿ ಶಿಕ್ಷಣ; ಟಾರ್ಗೆಟ್ 2030

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ