• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೃಷಿ ಇಲಾಖೆಯೋ ಕಸಾಯಿಖಾನೆಯೋ

cknewsnow desk by cknewsnow desk
September 16, 2023
in STATE
Reading Time: 1 min read
0
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್
929
VIEWS
FacebookTwitterWhatsuplinkedinEmail

ರೈತರನ್ನು ಆತ್ಮಹತ್ಯೆಗೆ ದೂಡುವುದು ಕರ್ನಾಟಕದ ಮಾದರಿಯೇ?; ಸರಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಾಟಿ

ಹೇಳಿಕೆಯ ಮುಖ್ಯಾಂಶ
  • ಅನ್ನದಾತನ ಸಾವಿನ ಕೇಕೆ ಸರಕಾರಕ್ಕೆ ಸವಿಗಾನವಾಗಿದೆಯಾ?
  • ಕೃಷಿ ಇಲಾಖೆಯಾ, ಕಸಾಯಿಖಾನೆಯಾ?
  • ಕಂದಾಯಕ್ಕೂ ಆದಾಯದ ಚಿಂತೆಯಾ?
  • ಕಾಲಹರಣ, ಜೀವಹರಣ ಎರಡೂ ಒಂದೇ ಎಂದು ಕಿಡಿ
  • ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೃಷಿ ಮತ್ತು ಕಂದಾಯ ಇಲಾಖೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ರೈತರನ್ನು ಆತ್ಮಹತ್ಯೆಗೆ ದೂಡುವುದು ಕರ್ನಾಟಕದ ಮಾದರಿಯೇ? ಎಂದು ಪ್ರಶ್ನಿಸಿದ್ದಾರೆ.ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ ಎಂದು ಕಿಡಿಕಾರಿದ್ದಾರೆ.

ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು(!!) ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ. ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ? ಎಂದು ಟೀಕಿದ್ದಾರೆ.

ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.

Tags: ckcknewsnowdroughthd kumaraswamyindiajdskarnatakanews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ

ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ

Leave a Reply Cancel reply

Your email address will not be published. Required fields are marked *

Recommended

ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

6 ತಿಂಗಳಲ್ಲಿ1,242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕ

4 years ago
ಬಾಲ ಬಿಚ್ಚಿದ್ರೆ ಹುಷಾರ್‌! ಚಿಕ್ಕಬಳ್ಳಾಪುರ ಜಿಲ್ಲೆ ಕ್ವಾರಿ-ಕ್ರಷರ್‌ ಮಾಲೀಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಎಸ್‌ಪಿ ಮಿಥುನ್‌ ಕುಮಾರ್; ಸರ್ಕಲ್‌ ಇನಸ್ಪೆಕ್ಟರ್‌ಗಳು-ಸಬ್‌ ಇನಸ್ಪೆಕ್ಟರ್‌ಗಳಿಗೂ ಫುಲ್‌ ಕ್ಲಾಸ್

ಬಾಲ ಬಿಚ್ಚಿದ್ರೆ ಹುಷಾರ್‌! ಚಿಕ್ಕಬಳ್ಳಾಪುರ ಜಿಲ್ಲೆ ಕ್ವಾರಿ-ಕ್ರಷರ್‌ ಮಾಲೀಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಎಸ್‌ಪಿ ಮಿಥುನ್‌ ಕುಮಾರ್; ಸರ್ಕಲ್‌ ಇನಸ್ಪೆಕ್ಟರ್‌ಗಳು-ಸಬ್‌ ಇನಸ್ಪೆಕ್ಟರ್‌ಗಳಿಗೂ ಫುಲ್‌ ಕ್ಲಾಸ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ