• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಲೋಕಸಭೆ ಚುನಾವಣೆ; ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ ಗ್ಯಾರಂಟಿ

P K Channakrishna by P K Channakrishna
September 16, 2023
in NATION, POLITICS, STATE
Reading Time: 1 min read
0
ಲೋಕಸಭೆ ಚುನಾವಣೆ; ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ ಗ್ಯಾರಂಟಿ
1.1k
VIEWS
FacebookTwitterWhatsuplinkedinEmail

ವೀರಪ್ಪ ಮೊಯಿಲಿ ಅವರಿಗೆ ಟಿಕೆಟ್‌ ಬಹುತೇಕ ಅನುಮಾನ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿ ಕೇಂದ್ರದಲ್ಲಿ ಆ ಎರಡೂ ಸಲ ಸಂಪುಟ ದರ್ಜೆ ಮಂತ್ರಿಯಾಗಿ ಮೆರೆದಿದ್ದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್‌ ಇಲ್ಲ ಎನ್ನುವುದು ಗೊತ್ತಾಗಿದೆ.

ಕಳೆದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರು ಮೊಯಿಲಿಗೆ ಚೆಕ್ ಮೇಟ್ ಇಟ್ಟಿದ್ದರು. ಆದರೆ, ಮತ್ತೊಮ್ಮೆ ಕ್ಷೇತ್ರದ ಸಂಸದರಾಗಲು ಅವರು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಈ ಬಾರಿ ಅವರಿಗೆ ಟಿಕೆಟ್‌ ವಿಷಯದಲ್ಲೇ ಪೈಪೋಟಿ ಎದುರಾಗಿದೆ.

ಕಳೆದ ಚುನಾವಣೆಯಲ್ಲಿ ಸೋತಿದ್ದ ಮೊಯಿಲಿ ಅವರು ಈ ಬಾರಿ ಚಿಕ್ಕಬಳ್ಳಾಪುರದಿಂದಲೇ ಗೆದ್ದು ಲೋಕಸಭೆ ಪ್ರವೇಶ ಮಾಡಲು ಕಸರತ್ತು ಶುರು ಮಾಡಿದ್ದಾರೆ. ಆದರೆ, ಅವರಿಗೆ ಎಂ.ಎಸ್.ರಾಮಯ್ಯ ಅವರ ಮೊಮ್ಮಗ, ಮಾಜಿ ಶಾಸಕ ಎಂ.ಆರ್.ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ ಬಿಗ್ ಫೈಟ್ ಕೊಡುತ್ತಿದ್ದಾರೆ. ಸದ್ಯಕ್ಕೆ ಸಿಕ್ಕಿರುವ ಖಚಿತ ಮಾಹಿತಿ ಪ್ರಕಾರ ಈ ಬಾರಿ ಮೊಯಿಲಿ ಅವರಿಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಇಲ್ಲವೇ ಇಲ್ಲ.

ಕಾರಣ ಇಷ್ಟೇ;

ಇನ್ನೂ ಲೋಕಸಭೆ ಚುನಾವಣೆ ಬಿಸಿ ಏರದೇ ಇದ್ದರೂ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದೇ ಇದೆ. ಚಿಕ್ಕಬಳ್ಳಾಪುರದ ಮಟ್ಟಿಗೆ ಮೊಯಿಲಿ ಹಾಗೂ ರಕ್ಷಾ ರಾಮಯ್ಯ ಅವರ ಹೆಸರುಗಳು ಮಾತ್ರ ಜೋರು ದನಿಯಲ್ಲಿ ಸದ್ದು ಮಾಡುತ್ತಿವೆ.

ಮೊಯಿಲಿ ಅವರು ಈಗಾಗಲೇ ಕ್ಷೇತ್ರದ ಪ್ರವಾಸ ಶುರು ಮಾಡಿದ್ದು, ನೆಲಮಂಗಲ ಸೇರಿದಂತೆ ಹಲವಾರು ಕಡೆ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ರಕ್ಷಾ ರಾಮಯ್ಯ ಸೇರಿ ಇನ್ನಿತರೆ ಸಂಭವನೀಯ ಅಭ್ಯರ್ಥಿಗಳು ಇನ್ನಷ್ಟೇ ಕ್ಷೇತ್ರಕ್ಕೆ ಎಂಟ್ರಿ ಕೊಡಬೇಕಿದೆ. ಅಲ್ಲದೆ; ರಕ್ಷಾ ರಾಮಯ್ಯ ಅವರ ಕುಲ ಬಾಂಧವರು ಕ್ಷೇತ್ರದಲ್ಲಿ 60ರಿಂದ 65 ಸಾವಿರದಷ್ಟು ಇದ್ದಾರೆ. ಮೊಯಿಲಿ ಅವರಿಗೆ ಅಂಥಾ ದೊಡ್ಡ ಜಾತಿ ಬಲ ಇಲ್ಲ. ಇದು ಮೊಯಿಲಿ ಅವರ ಪಾಲಿಗೆ ದೊಡ್ಡ ಹಿನ್ನಡೆ.

ಎರಡು ಸಲ ಗೆದ್ದು, 2019ರಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡರ ಎದುರು 182,110 ಮತಗಳ ಅಂತರದಲ್ಲಿ ಮೊಯಿಲಿ ಅವರು ಸೋತಿದ್ದರು. ಮಂಗಳೂರಿನ ಮೊಯಿಲಿ ಅವರಿಗೂ ಹೊಸಕೋಟೆಯ ಬಚ್ಚೇಗೌಡರಿಗೂ ಆ ಚುನಾವಣೆಯಲ್ಲಿ ಜಿದ್ದಾಜಿದ್ದಿ ನಡೆದಿತ್ತು.

ಮೊಯಿಲಿ ಅವರು 2009ರಿಂದ 2019ರವರೆಗೆ ಚಿಕ್ಕಬಳ್ಳಾಪುರ ಸಂಸದರಾಗಿ ಕೇಂದ್ರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ, ಇಂಧನ, ಕಾರ್ಪೊರೇಟ್ ವ್ಯವಹಾರ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಪರಿಸರ ಮತ್ತು ಅರಣ್ಯ ಖಾತೆ ಮಂತ್ರಿ ಆಗಿದ್ದರು. ಸತತವಾಗಿ ಮೂರು ಬಾರಿ ಮಂಗಳೂರಿನಲ್ಲಿ ಸೋತಿದ್ದ ಅವರನ್ನು ಚಿಕ್ಕಬಳ್ಳಾಪುರ ಕೈ ಹಿಡಿದಿತ್ತು. ಆ ಕೃತಜ್ಞತೆ ಅವರಿಲ್ಲ ಎನ್ನುವ ಸಿಟ್ಟು ಜನರಿಗಿದೆ. ಅದೂ ಕಾಂಗ್ರೆಸ್‌ ಪಕ್ಷಕ್ಕೆ ಚನ್ನಾಗಿ ಗೊತ್ತಿದೆ.

ಇಂಥ ಪ್ರಭಾವೀ ಖಾತೆಗಳನ್ನು ಹೊಂದಿದ್ದರೂ ಮೊಯಿಲಿ ಅವರು ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳ ಬಗ್ಗೆ ಜನತೆಗೆ ಏನೊಂದೂ ನೆನಪಿಲ್ಲ ಎನ್ನಬಹುದು. ಸಂಸದರಾಗಿ ದಿಲ್ಲಿ ಮತ್ತು ಬೆಂಗಳೂರಿಗಷ್ಟೇ ಸೀಮಿತರಾದ ಅವರ ಬಗ್ಗೆ ಕ್ಷೇತ್ರದಲ್ಲಿ ವಿರೋಧಿ ಅಲೆ ವಿಪರೀತ ಇದೆ.

ಮೂರೇ ವರ್ಷದಲ್ಲಿ ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರಕ್ಕೆ ಹರಿಸಲಾಗುವುದು ಎಂದು ಹೇಳಿದ್ದ ಮೊಯಿಲಿ ಅವರ ಮಾತು ಹತ್ತು ವರ್ಷ ಕಳೆದರೂ ಕಾರ್ಯರೂಪಕ್ಕೆ ಬಂದಿಲ್ಲ. ಈಗಲೂ ಶೀಘ್ರದಲ್ಲಿಯೇ ಎತ್ತಿನಹೊಳೆ ನೀರು ಹರಿಸಲಾಗುವುದು, ಸರಕಾರದ ಮೇಲೆ ಒತ್ತಡ ತಂದ ಆದಷ್ಟು ಬೇಗ ಕಾರ್ಯಗತ ಮಾಡಲಾಗುವುದು ಎಂದಷ್ಟೇ ಭಾಷಣ ಮಾಡುತ್ತಿದ್ದಾರೆ ಅವರು.

ಎತ್ತಿನಹೊಳೆ ನೀರು ಕೇವಲ 3 ರಿಂದ 6 ತಿಂಗಳೊಳಗೆ ಬರುತ್ತೇ ಎಂದು ಸುಳ್ಳು ಹೇಳಿ ಕೊಂಡು ಬಂದ ಮೊಯ್ಲಿ, ಇತ್ತೀಚಿಗೆ ಬಾಗೇಪಲ್ಲಿ ಕ್ಷೇತ್ರದ 25 ಕೆರೆಗಳಿಗೆ ಮಾರ್ಚ 2024 ರೊಳಗೆ ಹೆಚ್.ಎನ್.ವ್ಯಾಲಿಯ ಬೆಂಗಳೂರಿನ ಕೊಳಚೆ ನೀರನ್ನು ಹರಿಸುತ್ತೇವೆಂದು ಹೇಳಿದ್ದಾರೆ. ಎತ್ತಿನಹೊಳೆ ಬದಲು ಕೊಳಚೆ ನೀರು ಹರಿಸಲು ಮೊಯಿಲಿ ಅವರೂ ಕಾರಣರು. ಈಗಷ್ಟೇ ಜನರಿಗೆ ಕೊಳಚೆ ನೀರಿನ ಅಪಾಯ ಢಾಳಾಗಿ ಕಾಣುತ್ತಿದೆ.

ತಮ್ಮ ಸಂಸದರ ಅನುದಾನವನ್ನು ಮೊಯಿಲಿ ಅವರು ಎಂಟು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಎಲ್ಲೆಲ್ಲಿಗೆ ಹಂಚಿದರು ಎಂಬ ಬಗ್ಗೆ ಮಾಹಿತಿ ಇಲ್ಲ. ಜನರನ್ನು ಕೇಳಿದರೆ ತಮಗೇನೂ ಗೊತ್ತಿಲ್ಲ ಅನ್ನುತ್ತಿದ್ದಾರೆ.

ಅಲ್ಲದೆ, ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಮೊಯಿಲಿ ಅಪಥ್ಯರಾಗಿದ್ದಾರೆ. ಅವರು ಈಗ ಯಾರಿಗೂ ಬೇಡವಾಗಿದ್ದಾರೆ ಹಾಗೂ 83 ವರ್ಷಗಳ ಅವರನ್ನು ನಾವು ಆರ್.ಟಿ.ನಗರಕ್ಕೆ (ಮೊಯಿಲಿ ಅವರ ಮನೆ ಇರುವ ಜಾಗ) ಹೋಗಲಾಗದು ಎನ್ನುತ್ತಿದ್ದಾರೆ.

ಮಿಗಿಲಾಗಿ ಈ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಖಚಿತ. ಒಂದು ವೇಳೆ ಹಾಗೇನಾದರೂ ಆದರೆ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಬಿಜೆಪಿಯು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಡಬಹುದು ಅಥವಾ ಜೆಡಿಎಸ್‌ ಪಕ್ಷವೇ ಬಿಜೆಪಿಗೆ ಬಿಟ್ಟು ಕೊಡಬಹುದು. ಏನೇ ಆದರೂ ಕಾಂಗ್ರೆಸ್‌ ಪಕ್ಷಕ್ಕೆ ನಷ್ಟ ತಪ್ಪಿದ್ದಲ್ಲ. ಅದರಲ್ಲೂ ಮೊಯಿಲಿ ಅವರು ಅಭ್ಯರ್ಥಿ ಆದರೆ, ಹೀನಾಯವಾಗಿ ಸೋಲುವುದು ಗ್ಯಾರಂಟಿ ಎನ್ನುವ ಮಾತನ್ನು ಕೈ ಪಕ್ಷದ ಹಿರಿಯ ನಾಯಕರೊಬ್ಬರೇ ಹೇಳುವ ಮಾತು.

ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಕ್ಷಾ ರಾಮಯ್ಯ ಅವರ ಪರವಾಗಿ ಒಲವಿದೆ ಎನ್ನಲಾಗಿದೆ. ಹೀಗಾಗಿ ಮೊಯಿಲಿ ಪರವಾಗಿ ರಾಜ್ಯಮಟ್ಟದಲ್ಲಿ ಯಾರೂ ಬ್ಯಾಟಿಂಗ್‌ ಮಾಡುತ್ತಿಲ್ಲ. ಬೆಂಗಳೂರು ನಗರ ಮಲ್ಲೇಶ್ವರ ಕ್ಷೇತ್ರದಲ್ಲಿ ರಕ್ಷಾ ಅವರ ತಂದೆ ಎಂ.ಆರ್.ಸೀತಾರಾಂ ಅವರು ಶಾಸಕರಾಗಿದ್ದರು. ಆದರೆ, ನಿವೃತ್ತ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಟಿಕೆಟ್‌ ಕೊಡುವ ಸಲುವಾಗಿ ಅವರಿಗೆ ಅವಕಾಶ ತಪ್ಪಿಸಲಾಗಿತ್ತು. ಹೀಗಾಗಿ, ಹಿಂದೆ ಆದ ಅನ್ಯಾಯವನ್ನು ಈಗ ಸರಿಪಡಿಸಲು ಸಿದ್ದರಾಮಯ್ಯ ಅವರು ಉದ್ದೇಶಿಸಿದ್ದಾರೆ ಎಂದು ಹೇಳಲಾಗಿದೆ.

ಕೋಲಾರಕ್ಕೆ ಖರ್ಗೆ ಕೈ ಅಭ್ಯರ್ಥಿ! ಮೊಯ್ಲಿಗೆ ಚಿಕ್ಕಬಳ್ಳಾಪುರ ಟಿಕೆಟ್ ಅನುಮಾನ
Tags: chikkaballapurckcknewsnowCongresselection 2024former Chief MinisterPoliticsraksha ramaiahveerappa moily
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬಾಗೇಪಲ್ಲಿ, ಚೇಳೂರಿನಲ್ಲಿ ಕನ್ನಡ ಭವನ ನಿರ್ಮಾಣ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ, ಚೇಳೂರಿನಲ್ಲಿ ಕನ್ನಡ ಭವನ ನಿರ್ಮಾಣ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Leave a Reply Cancel reply

Your email address will not be published. Required fields are marked *

Recommended

ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ!

ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ!

3 years ago
ಚಿಕ್ಕಬಳ್ಳಾಪುರದ ರಸ್ತೆಯಲ್ಲಿ ಕುಳಿತು ಮೋದಿ ಸರಕಾರದ ವಿರುದ್ಧ 100 NOT OUT ಎಂದು ಕೂಗಿದ ಕಾಂಗ್ರೆಸ್‌ ನಾಯಕರು

ಚಿಕ್ಕಬಳ್ಳಾಪುರದ ರಸ್ತೆಯಲ್ಲಿ ಕುಳಿತು ಮೋದಿ ಸರಕಾರದ ವಿರುದ್ಧ 100 NOT OUT ಎಂದು ಕೂಗಿದ ಕಾಂಗ್ರೆಸ್‌ ನಾಯಕರು

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ