• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬಾಗೇಪಲ್ಲಿ, ಚೇಳೂರಿನಲ್ಲಿ ಕನ್ನಡ ಭವನ ನಿರ್ಮಾಣ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

cknewsnow desk by cknewsnow desk
September 17, 2023
in CHIKKABALLAPUR, STATE
Reading Time: 1 min read
0
ಬಾಗೇಪಲ್ಲಿ, ಚೇಳೂರಿನಲ್ಲಿ ಕನ್ನಡ ಭವನ ನಿರ್ಮಾಣ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
960
VIEWS
FacebookTwitterWhatsuplinkedinEmail

ಚೇಳೂರಿನಲ್ಲಿ ಕನ್ನಡ ಕಲಿಕೆ ಕುರಿತ ವಿಚಾರ ಸಂಕಿರಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ; ಗಡಿನಾಡಿನಲ್ಲಿ ಕಂಗೊಳಿಸಿದ ಕನ್ನಡ

ಬಾಗೇಪಲ್ಲಿ: ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆಯ ಅಭಿವೃದ್ಧಿಗೆ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿರುವ ಸೇವೆ ಅಭಿನಂದನೀಯ. ಕನ್ನಡ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಲು ಅನುಕೂಲವಾಗುವಂತೆ ಬಾಗೇಪಲ್ಲಿ ಮತ್ತು ಚೇಳೂರು ತಾಲೂಕು ಕೇಂದ್ರಗಳಲ್ಲಿ ಕನ್ನಡ ಭವನಗಳನ್ನು ನಿರ್ಮಾಣ ಮಾಡಲಾಗುವುದು, ಅದಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

ನೂತನ ತಾಲ್ಲೂಕು ಕೇಂದ್ರ ಚೇಳೂರಿನ ಮಾನಸ ಕಾಲೇಜು ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ಕಲಿಕೆ ಕುರಿತ ವಿಚಾರ ಸಂಕಿರಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಡೀ ದೇಶದಲ್ಲಿಯೇ ನೂರು ವರ್ಷಗಳ ಇತಿಹಾಸ ಇರುವ ಏಕೈಕ ಸಂಸ್ಥೆ ಕನ್ನಡ ಪರಿಷತ್ತು ಆಗಿದ್ದು, ದೇಶದಲ್ಲಿಯೇ ದೊಡ್ಡ ಮಟ್ಟದ ಗೌರವ ಕಸಾಪಗೆ ಇದೆ. ರಾಜ್ಯದಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದೆ. ನೂತನ ತಾಲ್ಲೂಕು ಕೇಂದ್ರ ಚೇಳೂರಿನಲ್ಲಿ ಶೈಕ್ಷಣಿಕ ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆಗೆ ಕನ್ನಡ ಜಾಥಾದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗಡಿ ಪ್ರದೇಶದಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವುದು ಶ್ಲಾಘನೀಯವಾದ ಕಾರ್ಯವಾಗಿದ್ದು ಇನ್ನೂ ಹೆಚ್ಚು ಹೆಚ್ಚಾಗಿ ಇಂತಹ ಕಾರ್ಯಕ್ರಮಗಳನ್ನು ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳುವಂತೆ ತಿಳಿಸಿದರು.

ತೆಲುಗು ಭಾಷೆಯ ಪ್ರಭಾವ ಇರುವ ಈ ಪ್ರದೇಶದಲ್ಲಿ ಮಾತೃಬಾಷೆಗೆ ಹೆಚ್ಚು ಒತ್ತು ನೀಡಲೇಬೇಕಾದ ಅಗತ್ಯವಿದೆ. ಕನ್ನಡ ಮಾಧ್ಯಮದಲ್ಲಿ ಶಿಕ್ಷಣವನ್ನು ಪಡೆದಿರುವವರು ಅತ್ಯುನ್ನತ ಸಾಧನೆಗಳನ್ನು ಮಾಡಿ ತೋರಿಸುತ್ತಿದ್ದು ಇದೊಂದು ಹೆಮ್ಮೆಯ ವಿಚಾರ ಎಂದರು ಅವರು.

ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಮಾತನಾಡಿ, “ಕನ್ನಡ ಸಾಹಿತ್ಯ ಪರಿಷತ್ತಿನ ಮನವಿಯಂತೆ ಕನ್ನಡ ಭವನ ನಿರ್ಮಿಸಲು ಸೂಕ್ತ ಸ್ಥಳವನ್ನು ಗುರಿತಿಸಲು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಸೂಚನೆ ಕೊಟ್ಟಿದ್ದಾರೆ. ಅದರಂತೆ ಒಂದು ವಾರದಲ್ಲಿ 22 ಗುಂಟೆ ಜಮೀನು ಗುರುತಿಸಿ ಕನ್ನಡ ಭವನ ನಿರ್ಮಾಣಕ್ಕೆ ಸಹಕರಿಸುತ್ತೇನೆ” ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ಕೋಡಿರಂಗಪ್ಪ ಮಾತನಾಡಿ, “ಪಂಪನ ಕಾಲದಿಂದ ಇಂದಿನವರೆವಿಗೂ ಕನ್ನಡ ಸಾಹಿತ್ಯ ಶ್ರೀಮಂತವಾಗಿದ್ದು, ಅದನ್ನು ಓದಿದರೆ ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಲು ಸಾಧ್ಯವಾಗುತ್ತದೆ. ಒಂದು ಭಾಷೆಯನ್ನು ಚೆನ್ನಾಗಿ ಕಲಿತರೆ ಅನೇಕ ಭಾಷೆಗಳನ್ನು ಕಲಿಯಲು ಸಾಧ್ಯವಾಗುತ್ತದೆ. ದಿನಕ್ಕೆ ಕನಿಷ್ಠ ಐದು ಗಂಟೆ ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಿ, ಕನ್ನಡದ ಮೇಲೆ ಅಭಿಮಾನ, ಪ್ರೀತಿಯನ್ನು ಇಟ್ಟುಕೊಳ್ಳಿ” ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ವೆಂಕಟರಾಮಪ್ಪ ಮಾತನಾಡಿ, “ಗಡಿಯಲ್ಲಿ ಕನ್ನಡದ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಇಂದಿನ ಕಾರ್ಯಕ್ರಮ ಉಪಯುಕ್ತವಾಗಿದ್ದು, ಚೇಳೂರು ಭಾಗದ ಶಿಕ್ಷಕರು, ವಿದ್ಯಾರ್ಥಿಗಳು ವಿವಿಧ ಕನ್ನಡದ ಅಭಿಮಾನಿಗಳು ತೋರಿದ ಆಸಕ್ತಿ ಅಭಿನಂದನೀಯವಾದುದು” ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಅಮೃತಕುಮಾರ್, ಸತೀಶ್, ಖಜಾಂಚಿ ಮಲ್ಲಿಕಾರ್ಜುನಯ್ಯ, ಬಾಗೇಪಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ, ಗೌರವ ಕಾರ್ಯದರ್ಶಿ ಎನ್.ಶಿವಪ್ಪ, ಶ್ರೀನಿವಾಸ್ ಬಾಣಾಲಪಲ್ಲಿ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಆರ್.ಹನುಮಂತರೆಡ್ಡಿ, ಚಿಂತಾಮಣಿ ಕಸಾಪ ಅಧ್ಯಕ್ಷ ಪ್ರಕಾಶ್, ಚೇಳೂರು ಗ್ರಾಪಂ ಅಧ್ಯಕ್ಷೆ ಕೌಸ್ತರ್, ಉಪಾಧ್ಯಕ್ಷ ಪೈಂಟರ್ ರಾಮು, ಪಿಡಿಒ ವೆಂಕಟಾಚಲಪತಿ, ಚೇಳೂರು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ರಾಧಾಕೃಷ್ಣ, ಎಇಇ ಪ್ರದೀಪ್, ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ, ಪಿ.ಎಸ್.ಐ ಹರೀಶ್, ಮಾನಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಾಂಡುರAಗಶೆಟ್ಟಿ, ಪ್ರಾಂಶುಪಾಲ ಟಿ.ಪಿ.ಅಶೋಕ್, ನಿವೃತ್ತ ಬಿಇಓ ನಾರಾಯಣರೆಡ್ಡಿ, ಪಾ.ಮು.ಚಲಪತಿಗೌಡ, ಕೆ.ಪಿ.ಅಂಜಿನಪ್ಪ, ನಾಗರಾಜ್, ಕರ್ನಾಟಕ ಪಬ್ಲಿಕ್ ಶಾಲೆ ಮುಖ್ಯೋಪಾಧ್ಯಾಯ ಜಿಲಾನ್ ಬಾಷ ಮುಂತಾದವರು ಹಾಜರಿದ್ದರು.

ಅರ್ಥಪೂರ್ಣ ವಿಚಾರ ಸಂಕಿರಣ, ಮನಸೂರೆಗೊಂಡ ಜಾಥಾ, ಸಾಂಸ್ಕೃತಿಕ ಕಾರ್ಯಕ್ರಮ

ಚೇಳೂರು ತಾಲೂಕು ಕೇಂದ್ರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಬೃಹತ್ ಕನ್ನಡ ಜಾಥಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೂರೆಗೊಳ್ಳುವಲ್ಲಿ ಯÀiಶಸ್ವಿಯಾದವು.

  • ಮತ್ತಷ್ಟು ಚಿತ್ರಗಳಿಗೆ ಕೆಳಗಿನ ಸ್ಲೈಡ್‌ ಶೋ ನೋಡಿ..

ಸಾವಿರಾರು ವಿದ್ಯಾರ್ಥಿಗಳು ಕನ್ನಡ ಬಾವುಟಗಳನ್ನು ಕೈಯಲ್ಲಿ ಹಿಡಿದು ತಾಯಿ ಭುವನೇಶ್ವರಿಗೆ ಜಯಕಾರಗಳನ್ನು ಕೂಗುತ್ತಾ, ಕನ್ನಡಪರ ಘೋಷಣೆಗಳನ್ನು ಕೂಗುತ್ತಾ ಕರ್ನಾಟಕ ಪಬ್ಲಿಕ್ ಶಾಲೆಯಿಂದ ಹೊರಟು ಚೇಳೂರು ಮುಖ್ಯರಸ್ತೆಗಳಲ್ಲಿ ಭವ್ಯವಾದ ಮೆರವಣಿಗೆಯನ್ನು ನಡೆಸಿದರು. ಕಸಾಪ ಜಿಲ್ಲಾಧ್ಯಕ್ಷ ಡಾ.ಕೋಡಿರಂಗಪ್ಪ ಜಾಥಾಗೆ ಚಾಲನೆ ನೀಡಿದರು. ಚೇಳೂರು ಮುಖ್ಯ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ಕನ್ನಡ ಬಾವುಟಗಳ ಹಾರಾಟ ಆಂಧ್ರಪ್ರದೇಶಕ್ಕೆ ಕೂಗಳತೆಯಲ್ಲಿರುವ ಚೇಳೂರಿನಲ್ಲಿ ಅಪ್ಪಟ ಕನ್ನಡದ ಪ್ರದೇಶದಂತೆ ಕಂಗೊಳಿಸಿತು.

ನಂತರ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ‘ಗಡಿಭಾಗದ ಶೈಕ್ಷಣಿಕ ಮತ್ರು ಸಾಂಸ್ಕೃತಿಕ ಸ್ಥಿತಿಗತಿಗಳು’ ವಿಷಯದ ಬಗ್ಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಕೆ.ಎಂ.ನಯಾಜ್ ಅಹಮದ್,  ‘ಗಡಿಭಾಗದ ಶಾಲೆಗಳಲ್ಲಿ ಮಕ್ಕಳ ಶಿಕ್ಷಣದ ಹಕ್ಕು ಮತ್ತು ಭಾಷಾ ಕಲಿಕೆಯ ಸ್ಥಿತಿಗತಿಗಳು’ ವಿಷಯದ ಬಗ್ಗೆ ಡಾ.ಕೋಡಿರಂಗಪ್ಪ ಹಾಗೂ ‘ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉತ್ತೇಜನಕ್ಕೆ ಮಾರ್ಗೋಪಾಯಗಳು’ ವಿಷಯದ ಬಗ್ಗೆ ಲೇಖಕ ಹಾಗು ಪತ್ರಕರ್ತ ಬಿ.ಆರ್.ಕೃಷ್ಣ ವಿಷಯ ಮಂಡನೆ ಮಾಡಿದರು. ನ್ಯಾಷನಲ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ರಾಮಯ್ಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಪ್ರಸಿದ್ದ ಜಾನಪದ ಗಾಯಕ ಮುನಿರೆಡ್ಡಿ ಮತ್ತು ತಂಡದವರು ನಡೆಸಿಕೊಟ್ಟ ಗಾಯನ ಕಾರ್ಯಕ್ರಮ ಜನರನ್ನು ರಂಜಿಸಿತು. ಗೋಪಿನಾಯಕ್, ಡಿ.ನಾರಾಯಣಸ್ವಾಮಿ, ವಸಂತಮ್ಮ, ವೈ.ನಾರಾಯಣ ಗೀತೆಗಳನ್ನು ಹಾಡಿದರು. ವಿವಿಧ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟು ಭರತ ನಾಟ್ಯ, ನೃತ್ಯರೂಪಕಗಳು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದವು.

Tags: bagepallicheluruchikkaballapurackcknewsnowkannadakannada sahitya parishat
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬರ: ತಿಂಗಳಾದರೂ ರಾಜ್ಯದ ಸರ್ವಪಕ್ಷ ನಿಯೋಗಕ್ಕೆ ಸಮಯ ಕೊಡದ ಪ್ರಧಾನಿ

ಬರ: ತಿಂಗಳಾದರೂ ರಾಜ್ಯದ ಸರ್ವಪಕ್ಷ ನಿಯೋಗಕ್ಕೆ ಸಮಯ ಕೊಡದ ಪ್ರಧಾನಿ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಲೋಕಸೇವಾ ಆಯೋಗ ಮೂಲಕ 750 ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿ

ಕರ್ನಾಟಕ ಲೋಕಸೇವಾ ಆಯೋಗ ಮೂಲಕ 750 ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿ

1 year ago
ಬಿಬಿಎಂಪಿಗೆ ಅಡ್ಮಿನಿಸ್ಟ್ರೇಟರ್?

ಬಿಬಿಎಂಪಿಗೆ ಅಡ್ಮಿನಿಸ್ಟ್ರೇಟರ್?

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ