• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ದಸರಾ ನಂತರ ಒಳ್ಳೇ ದಿನ, ಒಳ್ಳೇ ಸಮಯ ನೋಡಿಕೊಂಡು ಕ್ಷೇತ್ರ ಹಂಚಿಕೆ ಬಗ್ಗೆ ನಿರ್ಧರಿಸುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ

P K Channakrishna by P K Channakrishna
September 22, 2023
in NATION, POLITICS, STATE
Reading Time: 1 min read
0
ದಸರಾ ನಂತರ ಒಳ್ಳೇ ದಿನ, ಒಳ್ಳೇ ಸಮಯ ನೋಡಿಕೊಂಡು ಕ್ಷೇತ್ರ ಹಂಚಿಕೆ ಬಗ್ಗೆ ನಿರ್ಧರಿಸುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ
1k
VIEWS
FacebookTwitterWhatsuplinkedinEmail

ಎನ್‌ಡಿಎ ಕೂಟಕ್ಕೆ ದಳ; ಜೆಡಿಎಸ್‌-ಬಿಜೆಪಿ ಮೈತ್ರಿ ಫಿಕ್ಸ್‌

ನವದೆಹಲಿ/ಬೆಂಗಳೂರು: ಒಳ್ಳೆಯ ದಿನ, ಒಳ್ಳೆಯ ಸಮಯ ನೋಡಿಕೊಂಡು ಯಾರಿಗೆಷ್ಟು ಕ್ಷೇತ್ರಗಳು ಎಂಬುದನ್ನು ದಸರಾ ನಂತರ ನಿರ್ಧಾರ ಮಾಡುತ್ತೇವೆ ಎಂದು ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಜೆಡಿಎಸ್‌ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರ್ಪಡೆ ಆಗುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜತೆ ನಿರ್ಣಾಯಕ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಈ ಸಭೆ ಅಮಿತ್‌ ಶಾ ಅವರ ನಿವಾಸದಲ್ಲಿ ನಡೆಯಿತು.

ಕರ್ನಾಟಕ ರಾಜ್ಯದಲ್ಲಿ ಹೊಸ ರಾಜಕೀಯ ಶಖೆ ಆರಂಭಕ್ಕೆ ನಾಂದಿ ಹಾಡುವ ನಿಟ್ಟಿನಲ್ಲಿ, ಜೆಡಿಎಸ್‌ ಪಕ್ಷವು ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆ ಆಗುವ ಬಗ್ಗೆ ಕೇಂದ್ರ ಗೃಹ ಸಚಿವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜತೆ ಮಹತ್ವದ ಮಾತುಕತೆ ಸೌಹಾರ್ದ, ಪರಸ್ಪರ ವಿಶ್ವಾಸದಿಂದ ನಡೆಯಿತು ಎಂದರು ಅವರು.

ಮೈತ್ರಿ ಬಗ್ಗೆ ನಡೆದ ಮಾತುಕತೆ ನನಗೆ ಬಹಳ ಸಂತಸವಾಗಿದೆ. ಮುಂದೆ ಎಲ್ಲವೂ ಸುಗಮವಾಗಿ ನಡೆಯುತ್ತದೆ. ಯಾರು ಯಾರಿಗೆ ಎಷ್ಟು ಸೀಟು ಹಂಚಿಕೆ ಆಗುತ್ತದೆ ಎನ್ನುವುದು ಮುಖ್ಯವಲ್ಲ ಎಂದು ಅನೇಕ ಬಾರಿ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ರಾಜ್ಯದ 28 ಕ್ಷೇತ್ರಗಳಿಗೆ 28 ಅನ್ನು ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ವಿಷಯವನ್ನು ನಾನು ಬಿಜೆಪಿ ವರಿಷ್ಠರಿಗೆ ಒತ್ತಿ ಹೇಳಿದ್ದೇನೆ. ನನ್ನ ಮಾತಿಗೆ ಅವರೂ ಸಮಹಮತ ವ್ಯಕ್ತಪಡಿಸಿದರು ಎಂದು ಅವರು ತಿಳಿಸಿದರು.

ಬಿಜೆಪಿ ಸ್ಥಳೀಯ ನಾಯಕರನ್ನು ದೆಹಲಿ ಕರೆಸಿ ಮಾತುಕತೆ ನಡೆಸುವುದು, ನಂತರ ಎರಡೂ ಪಕ್ಷಗಳ ಹಿರಿಯರನ್ನು ಕರೆದು ಪರಸ್ಪರ ಸಮನ್ವಯತೆ ಮಾತುಕತೆ ನಡೆಸುವ ಹಾಗೂ ದಸರಾ ಹಬ್ಬದ ನಂತರ ಎಲ್ಲಾ ನಿರ್ಧಾರಗಳನ್ನು ಕೈಗೊಳ್ಳುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು. ಅಲ್ಲದೆ; ಈ ಮೈತ್ರಿ ದೀರ್ಘಕಾಲೀನವಾಗಿರಬೇಕು, ಇದರಲ್ಲಿ ರಾಜ್ಯದ ಹಿತ ಅಡಗಿರಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮಾಜಿ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಮಾಧ್ಯಮಗಳು ಪದೇಪದೆ ಮೈತ್ರಿ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿಗಳು; ಬರೀ ಮೈತ್ರಿಯ ಬಗ್ಗೆಯಷ್ಟೇ ಕೇಳಬೇಡಿ. ಕಾವೇರಿ ವಿಷಯದ ಬಗ್ಗೆಯೂ ಕೇಳಿ. ನಾನಿಲ್ಲಿ ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಮಾತುಕತೆ ನಡೆಸಲು ಬಂದಿದ್ದೇನೆ. ಕಾವೇರಿ, ಬರ ಸೇರಿದಂತೆ ರಾಜ್ಯದ ಮುಂದಿರುವ ಸಮಸ್ಯೆಗಳ ಬಗ್ಗೆ ಬಿಜೆಪಿ ವರಿಷ್ಠರ ಗಮನ ಸೆಳೆದಿದ್ದೇನೆ ಎಂದರು.

ಈ ಮೈತ್ರಿಯಿಂದ ಕಾವೇರಿ ನೀರು ಸೇರಿದಂತೆ ನಮ್ಮ ರಾಜ್ಯಕ್ಕೆ ಆಗಿರುವ ಸಮಸ್ಯೆಗಳಿಗೆ ಉತ್ತಮ ಪರಿಹಾರ ಸಿಗುತ್ತದೆ. ಈ ಅಂಶವನ್ನು ಇಟ್ಟುಕೊಂಡೇ ನಾನು ಅಮಿತ್‌ ಶಾ ಮತ್ತು ನಡ್ಡಾ ಅವರೊಂದಿಗೆ ಮುಕ್ತವಾಗಿ ಚರ್ಚಿಸಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಕರ್ನಾಟಕದ ಹಿತಕ್ಕಾಗಿ @JanataDal_S & @BJP4India ಮೈತ್ರಿ ವಿಷಯದ ಬಗ್ಗೆ ಕೇಂದ್ರದ ಗೃಹ ಸಚಿವರಾದ ಶ್ರೀ @AmitShah ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರೊಂದಿಗೆ ನವದೆಹಲಿಯ ಗೃಹ ಸಚಿವರ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಲಾಯಿತು.

ಗೋವಾ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಪ್ರಮೋದ್ ಸಾವಂತ್ @goacm ಅವರು,… pic.twitter.com/pvWwXg6UL8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 22, 2023

ಮಾತುಕತೆ ಸಂದರ್ಭದಲ್ಲಿ ಗೋವಾ ರಾಜ್ಯದ ಮುಖ್ಯಮಂತ್ರಿಗಳಾದ ಪ್ರಮೋದ್‌ ಸಾವಂತ್‌, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಹಾಜರಿದ್ದರು.

ಜೆ.ಪಿ.ನಡ್ಡಾ ಅವರಿಂದ ಘೋಷಣೆ

Met Former Chief Minister of Karnataka and JD(S) leader Shri H.D. Kumaraswamy in the presence of our senior leader and Home Minister Shri @AmitShah Ji.
I am happy that JD(S) has decided to be the part of National Democratic Alliance. We wholeheartedly welcome them in the NDA.… pic.twitter.com/eRDUdCwLJc

— Jagat Prakash Nadda (Modi Ka Parivar) (@JPNadda) September 22, 2023

ಗೃಹ ಸಚಿವರಾದ ಅಮಿತ್‌ ಶಾ ಅವರ ಸಮ್ಮುಖದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್‌ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ. ಜೆಡಿಎಸ್‌ ಪಕ್ಷವು ಎನ್‌ ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಸಂತಸ ಉಂಟು ಮಾಡಿದೆ. ಕುಮಾರಸ್ವಾಮಿ ಅವರನ್ನು ತುಂಬು ಹೃದಯದಿಂದ ಎನ್‌ ಡಿಎ ಕೂಟಕ್ಕೆ ಸ್ವಾಗತಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಘೋಷಣೆ ಮಾಡಿದ್ದಾರೆ.

ಅವರು ಭೇಟಿಯ ನಂತರ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಮಾಡಿರುವ ಪೋಸ್ಟ್‌ ನಲ್ಲಿ ಈ ವಿಷಯ ತಿಳಿಸಿದ್ದಾರೆ.

Tags: amit shahbjpckcknewsnowhd kumaraswamyjp naddakarnatakaNational Democratic AllianceNDA
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
113ರಿಂದ 107 ಅಡಿಗೆ ಕುಸಿದ KRS ನೀರಿನ ಮಟ್ಟ

ಕಾವೇರಿ ಸಂಕಷ್ಟ; ಮಹತ್ವದ ಪರಿಹಾರೋಪಾಯ ಸೂಚಿಸಿದ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸರ್ವಸಿದ್ಧತೆ: ರಾಜ್ಯಾದ್ಯಂತ 29,451 ಕೇಂದ್ರ

ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸರ್ವಸಿದ್ಧತೆ: ರಾಜ್ಯಾದ್ಯಂತ 29,451 ಕೇಂದ್ರ

5 years ago
ಬಾಗೇಪಲ್ಲಿಗೆ ಬೆಂಗಳೂರು ಕೊಚ್ಚೆ ನೀರು; ಕರವೇ ಪ್ರತಿಭಟನೆ

ಬಾಗೇಪಲ್ಲಿಗೆ ಬೆಂಗಳೂರು ಕೊಚ್ಚೆ ನೀರು; ಕರವೇ ಪ್ರತಿಭಟನೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ