• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕುತ್ತಿಗೆಪಟ್ಟಿ ಹಿಡಿದ ಕೋಲಾರ ಎಸ್ಪಿ ವಿರುದ್ಧ ಸಂಸದರ ಹಕ್ಕುಚ್ಯುತಿ

cknewsnow desk by cknewsnow desk
September 26, 2023
in NATION, STATE
Reading Time: 1 min read
0
ಕುತ್ತಿಗೆಪಟ್ಟಿ ಹಿಡಿದ ಕೋಲಾರ ಎಸ್ಪಿ ವಿರುದ್ಧ ಸಂಸದರ ಹಕ್ಕುಚ್ಯುತಿ
1.2k
VIEWS
FacebookTwitterWhatsuplinkedinEmail

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ರಾಜ್ಯಪಾಲ ಗೆಹ್ಲೋತ್‌ ಅವರಿಗೆ ದೂರು ನೀಡುವೆ ಎಂದ ಎಸ್.ಮುನಿಸ್ವಾಮಿ

ಕೋಲಾರ: ತಮ್ಮ ಕುತ್ತಿಗೆ ಪಟ್ಟಿ ಹಿಡಿದು ಹೊರದಬ್ಬಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಅವರ ವಿರುದ್ಧ ಲೋಕಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ಸಂಸದ ಎಸ್.ಮುನಿಸ್ವಾಮಿ ಅವರು ಹೇಳಿದ್ದಾರೆ.

ಕೋಲಾರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಎಂಟು ವಿಧಾನಸಭೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಓರ್ವ ಸಂಸದ, ಅದರಲ್ಲಿಯೂ ದಲಿತ ಸಂಸದನಾದ ನನ್ನನ್ನು ಅಮಾನುಷವಾಗಿ ಸಭೆಯಿಂದ ಹೊರದಬ್ಬಲಾಗಿದೆ. ಪೊಲೀಸ್ ಅಧಿಕಾರಿ ಸಂಸದರ ಕುತ್ತಿಗೆ ಪಟ್ಟಿ ಹಿಡಿಯುವುದು ಎಂದರೆ ಏನರ್ಥ? ಅವರ ಹಿಂದೆ ಯಾರಿದ್ದಾರೆ? ಹಾಗೆ ಮಾಡಲು ಅವರಿಗೆ ಆದೇಶ ಕೊಟ್ಟವರು ಯಾರು ಎಂದು ಮುನಿಸ್ವಾಮಿ ಪ್ರಶ್ನಿಸಿದರು.

ನನ್ನ ಹಕ್ಕುಚ್ಯುತಿ ಆಗಿದೆ. ನಾನು ಲೋಕಸಭೆ ಸ್ಪೀಕರ್ ಅವರ ಮೊರೆ ಹೋಗುವೆ. ರಾಜ್ಯಪಾಲರಿಗೆ ಕೂಡ ದೂರು ಕೊಡುತ್ತೇನೆ ಎಂದು ಅವರು ಹೇಳಿದರು.

ಸೋಮವಾರ ಕೋಲಾರದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದ ನಡೆದ ಎಲ್ಲಾ ಘಟನೆಗಳ ಬಗ್ಗೆ ಎಲ್ಲಾ ಮಾಹಿತಿ ಸಂಗ್ರಹ ಮಾಡಿದ್ದೇನೆ. ಅವೆಲ್ಲವನ್ನೂ ಲೋಕಸಭೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಸಲ್ಲಿಸುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೋಲಾರ ಜಿಲ್ಲಾ ಎಸ್ಪಿ ನಾರಾಯಣ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಏಜೆಂಟ್. ಜಿಲ್ಲೆಯಲ್ಲಿ ವೇಶ್ಯಾವಾಟಿಕೆ, ಬೆಟ್ಟಿಂಗ್, ಇಸ್ಪೀಟ್ ಅಡ್ಡೆಗಳಿಗೆ ಅವರು ಪ್ರೋತ್ಸಾಹ ನೀಡುತ್ತಿದ್ದಾರೆ. ಕೊಲೆ, ಸುಲಿಗೆ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗಿವೆ. ಅವರ ವಿರುದ್ದ ಸರಕಾರ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಇಂಥ ಪೊಲೀಸ್‌ ವರಿಷ್ಠಾಧಿಕಾರಿ ನಮ್ಮ ಜಿಲ್ಲೆಗೆ ಬೇಕಿಲ್ಲ ಎಂದು ಮುನಿಸ್ವಾಮಿ ಒತ್ತಾಯ ಮಾಡಿದರು.

ಎಸ್ಪಿ ನಾರಾಯಣ ವರ್ತನೆ ಬಗ್ಗೆ ನಮ್ಮ ಪಕ್ಷದ ಹಿರಿಯ ನಾಯಕರ ಗಮನಕ್ಕೆ ತಂದಿದ್ದೇನೆ. ದೌರ್ಜನ್ಯ ವಿರುದ್ದ ಲೋಕಸಭಾ ಸ್ಪೀಕರ್ ಗೆ ಹಕ್ಕುಚ್ಯುತಿ ದೂರು ಕೊಡಲು ಎಲ್ಲರೂ ಸಲಹೆ ಮಾಡಿದ್ದಾರೆ. ಸಚಿವರನ್ನು ಮೆಚ್ಚಿಸಲು ಎಸ್ಪಿ ನಾರಾಯಣ ನನ್ನ ಮೇಲೆ ದರ್ಪ ತೋರಿಸಿದ್ದಾರೆ. ಒಬ್ಬ ಸಂಸದನಿಗೆ ಸರಕಾರದಿಂದಲೇ ಅಪಮಾನವಾಗಿದೆ ಎಂದು ಅವರು ಕಿಡಿಕಾರಿದರು.

#cknewsnow
ತಮ್ಮ ಕುತ್ತಿಗೆಪಟ್ಟಿ ಹಿಡಿದು ಜನತಾದರ್ಶನ ಸಭೆಯಿಂದ ಹೊರದಬ್ಬಿದ ಕೋಲಾರ ಪೊಲೀಸ್‌ ವರಿಷ್ಠಾಧಿಕಾರಿ ನಾರಾಯಣ ವಿರುದ್ಧ ಲೋಕಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ಕೋಲಾರ ಸಂಸದ @bjp_muniswamy ಹೇಳಿದ್ದಾರೆ.#AssaultOnMP@BJP4Karnataka #ips #Karnataka #KarnatakaPolice pic.twitter.com/kw2tm1oJQv

— cknewsnow.com (@cknewsnow) September 26, 2023

ಜಿಲ್ಲಾಧಿಕಾರಿ ವಿರುದ್ಧವೂ ಆರೋಪ

ಇದೇ ಸಂಸದ ಮುನಿಸ್ವಾಮಿ ಅವರು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ವಿರುದ್ಧವೂ ಆರೋಪ ಮಾಡಿದರು. ಜಿಲ್ಲಾಧಿಕಾರಿ ಕಚೇರಿ ರಿಯಲ್ ಎಸ್ಟೇಟ್ ತಾಣವಾಗಿದೆ. ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಗಳು ಸದಾ ಅವರ ಕಚೇರಿಯಲ್ಲಿ ಬೀಡು ಬಿಟ್ಟಿರುತ್ತಾರೆ ಎಂದು ಅವರು ಗಂಭೀರ ಆರೋಪ ಮಾಡಿದರು.

ಕೋಲಾರದಲ್ಲಿರುವ ಜಿಲ್ಲಾಧಿಕಾರಿ, ಎಸ್ಪಿ ಅಂತವರನ್ನು ನಾನು ನೋಡಿಯೇ ಇಲ್ಲ. ಸಂಜೆಯಾದರೆ ಜಿಲ್ಲಾಧಿಕಾರಿ ಕಚೇರಿ ಬೆಂಗಳೂರಿನ ಬಿಲ್ಡರುಗಳೆಲ್ಲ ಬೀಡು ಬಿಟ್ಟಿರುತ್ತಾರೆ. ಸಂಜೆಯಾದರೆ ಅಲ್ಲಿ ವ್ಯಾಪಾರ ನಡೆಯುತ್ತಿರುತ್ತದೆ. ಮಾಧ್ಯಮದವರು ಯಾರೇ ಹೋಗಿ ಕೇಳಿದರೂ ʼನೋ ಬೈಟ್‌ʼ ಅಂತ ಹೇಳುವ ಲೆಕ್ಕಾಚಾರದಲ್ಲಿದ್ದಾರೆ.

ಕೋಲಾರ ಸಂಸದರ ಕುತ್ತಿಗೆ ಪಟ್ಟಿಗೆ ಕೈಹಾಕಿ ಹೊರದಬ್ಬಿದ ಎಸ್‌ ಪಿ!!
ಸಂಸದ ಮುನಿಸ್ವಾಮಿ ಮೇಲೆ ದಬ್ಬಾಳಿಕೆ; ಮಾಜಿ ಸಚಿವ ಡಾ.ಕೆ.ಸುಧಾಕರ್‌ ಕಿಡಿ
Tags: assult aginist mpckcknewsnowdalit mpkarnatakakolarmember of parliamentS Muniswamy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಡಿಕೆಶಿ ಬಹಿರಂಗ ಕ್ಷಮೆ ಕೇಳಬೇಕು: ಸಚಿವ ಡಾ.ಕೆ.ಸುಧಾಕರ್ ಡಿಮಾಂಡ್

ನೀರಿನ ಒಳ ಹರಿವು ಚನ್ನಾಗಿದೆ! ಮತ್ತೆ ಎಡವಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್!!

Leave a Reply Cancel reply

Your email address will not be published. Required fields are marked *

Recommended

ನಿರ್ಗಮನಕ್ಕೆ ಮುನ್ನ ಸರಕಾರಿ ನೌಕರರಿಗೆ ಬಂಪರ್ ಉಡುಗೊರೆ ಕೊಟ್ಟ ಯಡಿಯೂರಪ್ಪ

ನಿರ್ಗಮನಕ್ಕೆ ಮುನ್ನ ಸರಕಾರಿ ನೌಕರರಿಗೆ ಬಂಪರ್ ಉಡುಗೊರೆ ಕೊಟ್ಟ ಯಡಿಯೂರಪ್ಪ

4 years ago
ಹೊಣೆಗಾರಿಕೆ ಮರೆತು ಪ್ರಾಮಾಣಿಕವಾಗಿ ಕೆಲಸ ಮಾಡದ ಸೊಸೈಟಿ ಕಾರ್ಯದರ್ಶಿಗಳಿಗೆ ತಕ್ಕಶಾಸ್ತಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ

ಹೊಣೆಗಾರಿಕೆ ಮರೆತು ಪ್ರಾಮಾಣಿಕವಾಗಿ ಕೆಲಸ ಮಾಡದ ಸೊಸೈಟಿ ಕಾರ್ಯದರ್ಶಿಗಳಿಗೆ ತಕ್ಕಶಾಸ್ತಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ