• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ನಂದಿ ಗಿರಿಧಾಮದ 1775 ಮಟ್ಟಿಲು ಹತ್ತಿದ್ದರು ಬಾಪೂಜಿ

cknewsnow desk by cknewsnow desk
October 2, 2023
in NATION, STATE
Reading Time: 2 mins read
0
ನಂದಿ ಗಿರಿಧಾಮದ 1775 ಮಟ್ಟಿಲು ಹತ್ತಿದ್ದರು ಬಾಪೂಜಿ
1k
VIEWS
FacebookTwitterWhatsuplinkedinEmail

ಮೂರು ಬಾರಿ ಗಿರಿಧಾಮದಲ್ಲಿ ತಂಗಿದ್ದರು ಮಹಾತ್ಮ ಗಾಂಧೀಜಿ

Gandhi Jayanti Special

by G.S. Bharath Gudibande

ಚಿಕ್ಕಬಳ್ಳಾಪುರ: ಇಂದು ರಾಷ್ಟ್ರಪಿತ ಮಾಹಾತ್ಮ ಗಾಂಧೀಜಿ ಅವರ ಜಯಂತಿ. ತಮ್ಮ ಜೀವಿತಾವಧಿಯಲ್ಲಿ ಗಾಂಧೀಜಿ ಅವರು ದೇಶದ ಉದ್ದಗಲಕ್ಕೂ ಅನೇಕ ಪ್ರದೇಶಗಳಿಗೆ, ತಾಣಗಳಿಗೆ ಭೇಟಿ ನೀಡಿದ್ದರು. ಅವರು ಭೇಟಿ ನೀಡಿದ್ದರು ಎನ್ನುವ ಕಾರಣಕ್ಕೆ ಆ ಸ್ಥಳಗಳು ಪ್ರಖ್ಯಾತವಾಗಿವೆ. ಆದರೆ, ಅವರಿಗೆ ಇಷ್ಟದ ತಾಣಗಳು ಕೆಲವು ಇವೆ. ಅವುಗಳಲ್ಲಿ ಜಿಲ್ಲೆಯ ನಂದಿ ಗಿರಿಧಾಮವೂ ಒಂದಾಗಿದೆ.

ನಿಜ, ನಂದಿ ಗಿರಿಧಾಮವು ಮಹಾತ್ಮ ಗಾಂಧಿ ಅವರಿಗೆ ಬಹಳ ಇಷ್ಟದ ಗಿರಿಧಾಮವಾಗಿತ್ತು. ಅವರ ಆರೋಗ್ಯ ರಕ್ಷಣೆಯಲ್ಲಿ ಗಿರಿಧಾಮದ ಪಾತ್ರ ಬಹಳಷ್ಟು ಪ್ರಮುಖ. ಅವರ ಜಯಂತಿ ಹೊತ್ತಿನಲ್ಲಿ ಅದನ್ನೊಮ್ಮೆ ಸ್ಮರಿಸೋಣ.

ಚಿಕ್ಕಬಳ್ಳಾಪುರ ಜಿಲ್ಲೆಗೆ ಎರಡು ಭಾರಿ ಭೇಟಿ ನೀಡಿದ್ದ ಗಾಂಧೀಜಿ ಅವರು ನಂದಿಬೆಟ್ಟದಲ್ಲಿಯೇ ತಂಗಿದ್ದರು. ಅನಾರೋಗ್ಯಕ್ಕೆ ತುತ್ತಾಗಿದ್ದಅವರು ಕೆಲ ತಿಂಗಳ ಕಾಲ ನಂದಿಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದರು. ಅವರಿಗೆ ಗಿರಿಧಾಮದ ಪ್ರಾಕೃತಿಕ ಸಿರಿ ಬಹಳ ಇಷ್ಟವಾಗಿತ್ತು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮೈಸೂರು ಅರಸರ ಕಾಲದಲ್ಲಿ ನಿರ್ಮಿಸಿದ್ದ ಡ್ಯಾಂ ವಿಕ್ಷಿಸಲು ರಾಜ್ಯಕ್ಕೆ 1924ರಲ್ಲಿ ಪ್ರಥಮ ಬಾರಿಗೆ ಗಾಂಧೀಜಿ ಅವರು ಆಗಮಿಸಿದ್ದರು. ಆಗ ಅವರು ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾತ್ರಿ ವೇಳೆ ತಂಗಿದ್ದು, ಮರುದಿನ ಮೈಸೂರು ಕಡೆಗೆ ಪ್ರಯಾಣ ಬೆಳೆಸಿದ್ದರು.

ಗಾಂಧಿ ಅವರು ದೇಶ ಪರ್ಯಟನೆ ಆರಂಭಿಸಿದ ವೇಳೆಯಲ್ಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದ ಗಾಂಧೀಜಿ ಅವರು ನಂದಿಬೆಟ್ಟವನ್ನು ಮೆಟ್ಟಿಲ ಮೂಲಕವೇ ಹತ್ತಿದ್ದರು. 1775 ಮಟ್ಟಿಲುಗಳನ್ನು ಅವರು ಹತ್ತಿ ಗಿರಿಧಾಮ ತಲುಪಿದ್ದರು.

nandi hills_aamir–unsplash

ಖಾದಿಗೆ ಶಕ್ತಿ ತುಂಬಲು ಬಂದಿದ್ದರು

2ನೇ ಬಾರಿಗೆ ಖಾದಿಗೆ ಪ್ರೋತ್ಸಾಹ ನೀಡುವ ಹಾಗೂ ಪ್ರತೀ ಮನೆಯಲ್ಲಿಯೂ ಚರಕ ಸ್ಥಾಪಿಸುವ ಉದ್ದೇಶದಿಂದ ದೇಶದ ಉದ್ದಗಲಕ್ಕೂ ಪ್ರವಾಸ ಕೈಗೊಂಡಿದ್ದ ಗಾಂಧೀಜಿ ಅವರು, ಜಿಲ್ಲೆಗೆ ಆಗಮಿಸಿ ನಂದಿಬೆಟ್ಟದಲ್ಲಿಯೇ ವಾಸ್ತವ್ಯ ಹೂಡಿದ್ದರು. ಆಗ ಗಾಂಧೀಜಿ ಅವರನ್ನು ಕಾಣಲು ಅಕ್ಕಪಕ್ಕದ ಗ್ರಾಮಗಳ ಜನರು, ಮಕ್ಕಳು ಬೆಟ್ಟಕ್ಕೆ ಬಂದಿದ್ದರು. ಮಕ್ಕಳನ್ನು ಕಂಡು ಬಾಪೂಜಿ ಬಹಳ ಖುಷಿಪಟ್ಟಿದ್ದರಲ್ಲದೆ, ಆ ಮಕ್ಕಳೊಂದಿಗೆ ಸಂವಾದ ನಡೆಸಿದ್ದರು. ಮಕ್ಕಳಿಂದ ಹಾಡು ಕೇಳಿ ಸಂಭ್ರಮಿಸಿದ್ದರು.

ಮೂರನೇ ಬಾರಿ ಭೇಟಿ; ದೀರ್ಘಕಾಲ ವಾಸ್ತವ್ಯ

ಅಹಿಂಸೆ ಮಾರ್ಗದಲ್ಲಿ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಮಹಾತ್ಮಗಾಂಧಿ ಅವರು 1936ರಲ್ಲಿಅನಾರೋಗ್ಯಕ್ಕೀಡಾಗಿದ್ದರು. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಗಾಂಧೀಜಿ ಅವರಿಗೆ ಕೆಲ ಸಮಯ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದರು. ಹೀಗಾಗಿ ಆ ವರ್ಷ ಮೇ 10ರಂದು ಅಂದಿನ ಮದರಾಸ್‌ (ಇಂದಿನ ಚೆನ್ನೈ) ನಿಂದ ಗಿರಿಧಾಮಕ್ಕೆ ಆಗಮಿಸಿದ್ದರು. ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ಅಲ್ಲಿ ವಿಶ್ರಾಂತಿ ಪಡೆದಿದ್ದರು. ಅವರ ನೆನಪಿಗಾಗಿ ನಂದಿಬೆಟ್ಟದಲ್ಲಿ ʼಗಾಂಧಿ ಭವನʼ ನಿರ್ಮಿಸಲಾಗಿದೆ. ಅಂದು ಬೆಟ್ಟಕ್ಕೆ ರಸ್ತೆ ಇಲ್ಲದ ಕಾರಣದಿಂದ ಕಾಲ್ನಡಿಗೆ ಮೂಲಕವೇ ನಂದಿಬೆಟ್ಟ ಏರಿದ್ದ ಗಾಂಧೀಜಿ ಅವರಿಗೆ ‘ನಂದಿ’ ಎಂಬ ಹೆಸರು ಕೂಡ ತುಂಬ ಆಕರ್ಷಕವಾಗಿ ಕಂಡಿತ್ತಂತೆ.

ಗಾಂಧೀಜಿ ಅವರನ್ನು ಸ್ವಾಗತಿಸಲು ಬ್ರಿಟೀಷ್ ಕಮಿಷನರ್‌ಗಳು ನಂದಿಬೆಟ್ಟದ ಕೆಳಗಿನ ಸುಲ್ತಾನ್‌ಪೇಟೆ ಬಳಿ ಕಾಯುತ್ತಿದ್ದರೆ; ಗಾಂಧೀಜಿ ಅವರು ಕುಡುವತಿ ಮೂಲಕ ಕಾಲ್ನಡಿಗೆಯಲ್ಲಿಯೇ ನಂದಿಬೆಟ್ಟವನ್ನು ಹತ್ತಿದ್ದರು.

ತಮ್ಮ ಜೀವಿತಾವಧಿಯಲ್ಲಿ ಸಾಬರಮತಿ ಅಶ್ರಮ ಬಿಟ್ಟರೆ ಅವರು ಅತಿ ಹೆಚ್ಚು ಇಷ್ಟಪಡುತ್ತಿದ್ದ ತಾಣವೆಂದರೆ ನಂದಿಬೆಟ್ಟ. ಅಲ್ಲದೆ; ಆಶ್ರಮವನ್ನು ಹೊರತುಪಡಿಸಿ ಹೆಚ್ಚು ಸಮಯ ಅವರು ತಂಗಿದ್ದು ನಂದಿಗಿರಿಧಾಮದಲ್ಲಿಯೇ. 1927 ಮತ್ತು 1931ರಲ್ಲಿ ಮೂರು ಸಲ ನಂದಿಬೆಟ್ಟಕ್ಕೆ ಆಗಮಿಸಿದ್ದರು ಗಾಂಧೀಜಿಯವರು. ಅವರು ಇಲ್ಲಿ ಒಟ್ಟು 66 ದಿನ ಉಳಿದುಕೊಂಡಿದ್ದರು.

ಅಸ್ಥಿ ವಿಸರ್ಜನೆ

1948ರ ಜ.30ರಂದು ಗಾಂಧೀಜಿ ಅವರ ನಿಧನದ ನಂತರ ಅವರ ಚಿತಾಭಸ್ಮವನ್ನು ಅ೦ದಿನ ಕೋಲಾರ ಜಿಲ್ಲೆಯ ಅಂತರಗಂಗೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಅಮೃತ ಸರೋವರದಲ್ಲಿ ಅಂದಿನ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಅಪೇಕ್ಷೆಯಂತೆ 1948ರ ಫೆ.2ರಂದು ಜಿಲ್ಲೆಗೆ ತರಿಸಿಕೊಂಡು ವಿಜರ್ಸನೆ ಮಾಡಲಾಯಿತು.

ಮಹಾತ್ಮ ಗಾಂಧಿಜೀ ಅವರ ಮಕ್ಕಳು ಸಹ ಮತ್ತೊಮ್ಮೆ 1950ರ ಜೂ.20ರಂದು ರಾಜ್ಯ ಸಚಿವೆಯಾಗಿದ್ದ ಯಶೋಧರ ದಾಸಪ್ಪ ಅವರೊಂದಿಗೆ ನಂಧಿ ಗಿರಿಧಾಮಕ್ಕೆ ಭೇಟಿ ನೀಡಿದ್ದರು.

ಯಾರೆಲ್ಲಾ ಭೇಟಿ ನೀಡಿದ್ದಾರೆ

ನಂದಿಗಿರಿಧಾಮಕ್ಕೆ ಭೇಟಿ ನೀಡಿದ ಪ್ರಖ್ಯಾತರ ದೊಡ್ಡ ಪಟ್ಟಿಯೇ ಇದೆ. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಬೆಂಗಳೂರಿನಲ್ಲಿ ಸಾರ್ಕ್ ಶೃಂಗಸಭೆ ನಡೆದಿತ್ತು. ಆಗ ಸಾರ್ಕ್ ರಾಷ್ಟ್ರಗಳ ಪ್ರಮುಖರೆಲ್ಲರೂ ನಂದಿಬೆಟ್ಟಕ್ಕೆ ಬಂದು, ಇಲ್ಲಿನ ಆಹ್ಲಾದಕರ ವಾತಾವರಣಕ್ಕೆ ಮನಸೋತಿದ್ದರು.

ಎಲಿಜಬೆತ್ ರಾಣಿ ತಮ್ಮ ಪತಿಯೊಂದಿಗೆ ನಂದಿಬೆಟ್ಟಕ್ಕೆ ಭೇಟಿ ನೀಡಿದ ಹೆಗ್ಗಳಿಕೆ ಸಹ ಇದೆ. ಗಿರಿಧಾಮದ ಬುಡದಲ್ಲಿರುವ ಮುದ್ದೇನಹಳ್ಳಿಯವರಾದ ಸರ್.ಎಂ.ವಿಶ್ವೇಶ್ವರಯ್ಯನವರು ನಡೆದೇ ಬೆಟ್ಟಕ್ಕೆ ಹೋಗುತ್ತಿದ್ದರು. ಇನ್ನು, ನೆಹರು, ವಿಜಯಲಕ್ಷ್ಮಿ ಪಂಡಿತ್, ಇಂದಿರಾ ಗಾಂಧಿ, ಎಸ್.ರಾಧಾಕೃಷ್ಣನ್, ವಲ್ಲಭ ಬಾಯಿ ಪಟೇಲ್, ಸರ್ ಸಿ.ವಿ.ರಾಮನ್, ರಾಜಗೋಪಾಲಾಚಾರಿ ಮುಂತಾದ ಗಣ್ಯರು ನಂದಿಬೆಟ್ಟಕ್ಕೆ ಭೇಟಿ ನೀಡಿ ಇಲ್ಲಿನ ಸೌಂದರ್ಯಕ್ಕೆ ಮನ ಸೋತಿದ್ದರು.

ರಾಷ್ಟ್ರಪಿತ ಮಹಾತ್ಮಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ಒತ್ತಡದಲ್ಲಿಯೂ ಅವರ ಆರೋಗ್ಯ ಕಾಪಾಡಿಕೊಳ್ಳಲು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮಕ್ಕೆ ಆಗಮಿಸಿ ವಿಶ್ರಾಂತಿ ಪಡೆದಿರುವುದು ನಮಗೆ ಹೆಮ್ಮೆಯ ವಿಷಯ. ಅವರ ಭೇಟಿ ಐತಿಹಾಸಿಕ ಮಹತ್ವ ಪಡೆದುಕೊಂಡಿದೆ ಎನ್ನುವುದು ಬಹಳ ಗಮನಾರ್ಹ.

-ವಿ.ಲಕ್ಷ್ಮೀನಾರಾಯಣ, ನಿವೃತ್ತ ಯೋಧರು

Tags: bapuchikkaballapurackcknewsnowGandhi jayantiMahatma GandhiNandi hills
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

Leave a Reply Cancel reply

Your email address will not be published. Required fields are marked *

Recommended

ಜನವರಿ 1ರಿಂದಲೇ ವಿದ್ಯಾಗಮ ಪುನಾರಂಭ; ಸರ್ವ ಮುನ್ನೆಚ್ಚರಿಕೆಗಳೊಂದಿಗೆ ತಯಾರಿ ನಡೆಸಿದೆ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರದಿಂದ ಆದೇಶ

ಕಂಟ್ರೋಲ್‌ಗೆ ಬಾರದ ಕೋವಿಡ್‌ ಎರಡನೇ ಅಲೆ; ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಕ್ಟಿಕಲ್‌ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್‌ ಕುಮಾರ್‌ ಪ್ರಕಟಣೆ

4 years ago
ದ್ವಿತೀಯ ಪಿಯುಸಿ ಫಲಿತಾಂಶ; ಎಲ್ಲ ವಿದ್ಯಾರ್ಥಿಗಳು ಪಾಸ್‌

ದ್ವಿತೀಯ ಪಿಯುಸಿ ಫಲಿತಾಂಶ; ಎಲ್ಲ ವಿದ್ಯಾರ್ಥಿಗಳು ಪಾಸ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ