• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬರ ಅಧ್ಯಯನ: ರಾಜ್ಯಕ್ಕೆ ಕೇಂದ್ರದ 3 ತಂಡ

cknewsnow desk by cknewsnow desk
October 3, 2023
in NATION, STATE
Reading Time: 1 min read
0
ಬರ ಅಧ್ಯಯನ: ರಾಜ್ಯಕ್ಕೆ ಕೇಂದ್ರದ 3 ತಂಡ

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (ಸಂಗ್ರಹ ಚಿತ್ರ)

970
VIEWS
FacebookTwitterWhatsuplinkedinEmail

161 ತಾಲೂಕುಗಳಲ್ಲಿ ತೀವ್ರ ಬರಗಾಲ; ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಕೂಡ ಬರಪೀಡಿತ

ಕಲಬುರಗಿ/ಬೆಂಗಳೂರು: ರಾಜ್ಯದಲ್ಲಿನ ಬರ ಅಧ್ಯಯನಕ್ಕೆ ಈವಾರದಲ್ಲಿ ಕೇಂದ್ರದಿಂದ ಮೂರು ತಂಡಗಳು ಅಗಮಿಸುತ್ತಿವೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕಲ್ಬುರ್ಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಭಾಗದ 7 ಜಿಲ್ಲೆಗಳಲ್ಲಿನ ಕೃಷಿ ಹಾಗೂ ಜಲಾನಯನ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ನಂತರ ಕೃಷಿ ಸಚಿವರು ಮಾಧ್ಯಮ ಪ್ರತಿನಿಧಿಗಳಿಗೆ ಈ ಮಾಹಿತಿ ನೀಡಿದರು.

ರಾಜ್ಯದಲ್ಲಿ ಒಟ್ಟು 40 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಅಂದಾಜು 28000 ಸಾವಿರ ಕೋಟಿ ರೂ ನಷ್ಟ ಸಂಭವಿಸಿದೆ ಎಂದು ಸಚಿವರು ಹೇಳಿದರು.

2023ರ ಮುಂಗಾರಿನಲ್ಲಿ 111 ಲಕ್ಷ ಟನ್ ಆಹಾರ ಧಾನ್ಯಗಳಲ್ಲಿ ಉತ್ಪಾದನೆ ಗುರಿ ಹೊಂದಲಾಗಿತ್ತು. ಬರಗಾಲದಿಂದ 58 ಲಕ್ಷಟನ್ ಉತ್ಪಾದನಾ ಹಾನಿ ಅಂದಾಜಿಸಲಾಗಿದೆ ಎಂದು ಕೃಷಿ ಸಚಿವರು ಮಾಹಿತಿ ನೀಡಿದರು.

ರಾಜ್ಯದ 31 ಜಿಲ್ಲೆಗಳ 161 ತಾಲೂಕುಗಳು ತೀವ್ರ ಹಾಗೂ 34 ತಾಲ್ಲೂಕುಗಳು ಸಾಧಾರಣ ಬರ ಎಂದು ಗುರುತಿಸಲಾಗಿದ್ದು ಒಟ್ಟಾರೆ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ ಕೇಂದ್ರ ತಂಡ‌ ಬರ ಪರಿಶೀಲನೆ ನಡೆಸಿ ವರದಿ ನೀಡಲಿವೆ ಎಂದರು.

ಬರದಿಂದ ಬಿತ್ತನಗೆ ಅಡ್ಡಿಯಾದ ರೈತರಿಗೆ 48 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗುವುದು ಎಂದು ಸಚಿವರು ಹೇಳಿದರು.

ನೆಟ್ಟೆ ರೋಗ ಪರಿಹಾರ ಸಂಕಷ್ಟಕ್ಕೆ ಸಿಲಿಕಿದ ರೈತರಿಗೆ ಒಟ್ಟಾರೆ 224 ಕೋಟಿ ರೂ ಪರಿಹಾರ ಮಂಜೂರು‌ ಮಾಡಿದ್ದು, 2 ಹಂತಗಳಲ್ಲಿ ಈವರೆಗೆ 148 ಕೋಟಿ ಬಿಡುಗಡೆ. ಮಾಡಲಾಗಿದೆ
ಕಲಬುರಗಿ ಜಿಲ್ಲೆಯ 1.58ಲಕ್ಷ ರೈತರಿಗೆ ಒಟ್ಟು 116 ಕೋಟಿ ರೂ ಪರಿಹಾರ ಒದಗಿಸಲಾಗಿದೆ ಎಂದರು.

ರಾಜ್ಯದಲ್ಲಿ ಜುಲೈನಲ್ಲಿ ಶೇ 29 ಅಧಿಕ ಮಳೆಯಾದರೂ ಆಗಸ್ಟ್‌ನಲ್ಲಿ ಶೇ 73 ಕೊರತೆಯಾಗಿದೆ. ಹಾಗಾಗಿ ಬೆಳೆ ನಷ್ಟ ಹೆಚ್ಚಾಗಿದೆ.ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಕೊರತೆ ಕೇವಲ 5%
ಆದರೆ ಸಕಾಲದಲ್ಲಿ ಮಳೆಯಾಗದ ಕಾರಣ ಬೆಳೆ ಹಾನಿಯಾಗಿದ್ದು ಜಿಲ್ಲೆಯ 11 ತಾಲ್ಲೂಕುಗಳು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಕೃಷಿ ಭಾಗ್ಯ ಯೋಜನೆ ಈ ವರ್ಷ ಪುನಾರಂಭಿಸಿದ್ದು, ಇಲಾಖೆಯಿಂದ 100 ಕೋಟಿ ಅನುದಾನ ದೊರೆಯಲಿದ್ದು, ಮುಂದಿನ ವರ್ಷದಿಂದ ಹೆಚ್ಚಿನ ಅನುದಾನ ಮೀಸಲಿರಿಸಲಾಗುವುದು ಎಂದು ಚಲುವರಾಯಸ್ವಾಮಿ ಹೇಳಿದರು.

ನವೋದ್ಯಮ ಯೋಜನೆಯಡಿ ಹೊಸ ಏಫ್ ಪಿ ಒ ಗಳಿಗೆ 5 ರಿಂದ 20 ಲಕ್ಷ ರೂಪಾಯಿವರೆಗೆ ಸಾಲದ ನೆರವನ್ನು 20 – 50 ಲಕ್ಷಗಳಿಗೆ ಏರಿಕೆ.. ಇದಕ್ಕಾಗಿ 10 ಕೋಟಿ ಮೀಸಲಿರಿಸಾಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಬೃಹತ್ ಕಟಾವ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ 50 ಕೋಟಿ ರೂಪಾಯಿ ಮೀಸಲು 100 ಹಬ್ ಸ್ಥಾಪನೆಯಾದ ಮಾಡಲಾಗುವುದು ಎಂದರು.

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಕೂಡ ಬರಪೀಡಿತ

ಎರಡೂ ಜಿಲ್ಲೆಗಳ ಹನ್ನೊಂದು 12 ತಾಲೂಕುಗಳು ಈಗಾಗಲೇ ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಕೇಂದ್ರ ತಂಡಗಳು ಜಿಲ್ಲೆಗಳಿಗೆ ಭೇಟಿ ನೀಡುತ್ತವೆಯಾ? ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಸಿಕೆನ್ಯೂಸ್‌ ನೌ ಜತೆ ಮಾತನಾಡಿದ ಜಿಲ್ಲೆಗಳ ಕೆಲ ಮುಖಂಡರು, ಚಿಕ್ಕಬಳ್ಳಾಪುರ ಜಿಲ್ಲೆಗೆ ಅಧ್ಯಯನ ತಂಡಗಳು ಬರುವುದು ಅನುಮಾನ. ಏಕೆಂದರೆ, ಸಂಸದ ಬಚ್ಚೇಗೌಡರು ಪ್ರಯತ್ನ ಮಾಡಬೇಕು, ಇಲ್ಲವೇ ಜಿಲ್ಲೆಯ ಎಲ್ಲಾ ಶಾಸಕರು ಯತ್ನಿಸಬೇಕು. ಸದ್ಯಕ್ಕೆ ಅಂತಹ ವಾತಾವರಣ ಇಲ್ಲ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಆದರೆ, ಕೋಲಾರಕ್ಕೆ ಅಧ್ಯಯನ ತಂಡ ಬಂದು ಹೋಗುವ ನಿರೀಕ್ಷೆ ಇದೆ. ಸಂಸದ ಮುನಿಸ್ವಾಮಿ ಅವರು ಈಗಾಗಲೇ ಜಿಲೆಯಲ್ಲಿ ಉಂಟಾಗಿರುವ ಬರದ ಪರಿಸ್ಥಿತಿಯ ಬಗ್ಗೆ ಕೇಂದ್ರ ಕೃಷಿ ಸಚಿವರಿಗೆ ನೀಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

Tags: Agriculture ministercentral governmentckcknewsnowdroughtkarnatakan chaluvarayaswamy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಜಾತಿ ಗಣತಿ ವರದಿ ಸಲ್ಲಿಕೆಗೆ ಆಯೋಗಕ್ಕೆ ಸಿಎಂ ಸೂಚನೆ

Leave a Reply Cancel reply

Your email address will not be published. Required fields are marked *

Recommended

ಎಂ.ಚಿದಾನಂದಮೂರ್ತಿ; ಕನ್ನಡದ ಆತ್ಮಬಂಧು, ಶರಣ ಚಿಂತನೆಯ ಪ್ರಖರತೆ,  ಸಂಶೋಧನೆಯ ಪ್ರಾಮಾಣಿಕತೆ, ದಿಟ್ಟ ಚೇತನ ನಿರ್ಗಮನಕ್ಕೆ ವರ್ಷ

ಎಂ.ಚಿದಾನಂದಮೂರ್ತಿ; ಕನ್ನಡದ ಆತ್ಮಬಂಧು, ಶರಣ ಚಿಂತನೆಯ ಪ್ರಖರತೆ, ಸಂಶೋಧನೆಯ ಪ್ರಾಮಾಣಿಕತೆ, ದಿಟ್ಟ ಚೇತನ ನಿರ್ಗಮನಕ್ಕೆ ವರ್ಷ

4 years ago
ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸರ್ವಸಿದ್ಧತೆ: ರಾಜ್ಯಾದ್ಯಂತ 29,451 ಕೇಂದ್ರ

ಕೋವಿಡ್ ಲಸಿಕೆ ವಿತರಣೆಗೆ ರಾಜ್ಯದಲ್ಲಿ ತಯಾರಿ; ಕೊವ್ಯಾಕ್ಸಿನ್ 3ನೇ ಹಂತದ ಕ್ಲಿನಿಕಲ್‌ ಪ್ರಯೋಗಕ್ಕೆ ಸಿಎಂ ಚಾಲನೆ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ