• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದ ಹಿರಿಯ ಪತ್ರಕರ್ತ ಕೋಲಾರದ ಸಚ್ಚಿ ಇನ್ನಿಲ್ಲ

cknewsnow desk by cknewsnow desk
October 13, 2023
in NATION, STATE
Reading Time: 2 mins read
0
ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದ ಹಿರಿಯ ಪತ್ರಕರ್ತ ಕೋಲಾರದ ಸಚ್ಚಿ ಇನ್ನಿಲ್ಲ
957
VIEWS
FacebookTwitterWhatsuplinkedinEmail

ಸಿಎಂ, ಡಿಸಿಎಂ, ಹೆಚ್.ಡಿ.ಕುಮಾರಸ್ವಾಮಿ ಸೇರಿ ಅನೇಕ ಗಣ್ಯರ ಕಂಬನಿ

ಬೆಂಗಳೂರು: ಮೂಲತಃ ಕೋಲಾರ ಜಿಲ್ಲೆಯವರು ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದ ಹೆಸರಾಂತ ಹಿರಿಯ ಪತ್ರಕರ್ತ ಕೆ.ಎಸ್.ಸಚ್ಚಿದಾನಂದ ಮೂರ್ತಿ ಅವರು ಇನ್ನಿಲ್ಲ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಸ್ನೇಹಲೋಕದಲ್ಲಿ ಸಚ್ಚಿ ಎಂದೇ ಹೆಸರಾಗಿದ್ದರು.

ಅನಾರೋಗ್ಯದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಸಚ್ಚಿ ಅವರು ಕೆಲ ದಿನಗಳ ಹಿಂದೆಯಷ್ಟೇ ಶ್ವಾಸಕೋಶ ಕಸಿ ಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೂ ಅವರ ಆರೋಗ್ಯ ಸುಧಾರಣೆ ಕಂಡಿರಲಿಲ್ಲ. ಕೆಲವು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೇಲೆಯೇ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಆಗಲಿದ್ದಾರೆ.

ಸಚ್ಚಿದಾನಂದ ಮೂರ್ತಿ ಅವರು ಮಲೆಯಾಳಂ ಮನೋರಮಾ ಮತ್ತು ದಿ ವೀಕ್‌ನ ರೆಸಿಡೆಂಟ್ ಎಡಿಟರ್ ಆಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಅವರು, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಪ್ರೆಸ್ ಕೌನ್ಸಿಲ್ ಸದಸ್ಯರಾಗಿಯೂ ಸಚ್ಚಿದಾನಂದ ಮೂರ್ತಿ ಅವರು ಸೇವೆ ಸಲ್ಲಿಸಿದ್ದರು.

ಸಚ್ಚಿ ಅವರು ಮೂಲತಃ ಕೋಲಾರ ಜಿಲ್ಲೆಯವರು. ಕೋಲಾರ – ಬೇತಮಂಗಲ ರಸ್ತೆಯಲ್ಲಿರುವ ಶಿಳ್ಳೆಗೆರೆ ಅವರ ಹುಟ್ಟೂರು.

ಅವರು ಪತ್ನಿ ಚಂದ್ರಿಕಾ, ಪುತ್ರರಾದ ನಿತಿನ್, ರೋಹನ್ ಹಾಗೂ ಅಸಂಖ್ಯಾತ ಪತ್ರಕರ್ತ ಗೆಳೆಯರು, ಹಿತೈಷಿಗಳನ್ನು ಅವರು ಅಗಲಿದ್ದಾರೆ. ಮಕ್ಕಳಿಬ್ಬರು ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದು, ಅವರು ಈಗಾಗಲೇ ಬೆಂಗಳೂರಿಗೆ ಬಂದಿದ್ದಾರೆ.

ರಾಷ್ಟ್ರೀಯ ಮಾಧ್ಯಮ ವಲಯದಲ್ಲಿ ಬಹಳಷ್ಟು ಪ್ರಭಾವಿ ಆಗಿದ್ದ ಅವರು; ಪ್ರಧಾನಿ, ಕೇಂದ್ರ ಸಚಿವರು, ರಾಜ್ಯಗಳ ಮುಖ್ಯಮಂತ್ರಿಗಳು, ಉನ್ನತ ಅಧಿಕಾರಿಗಳನ್ನು ಸುಲಭವಾಗಿ ಭೇಟಿ ಆಗುತ್ತಿದ್ದರು. ಅಲ್ಲದೆ ಅವರನ್ನು STRONG MAN OF THE WEEK ಎಂದು ಕರೆಯಲಾಗುತ್ತಿತ್ತು. ಸುಮಾರು 40 ವರ್ಷಗಳ ಕಾಲ ಅವರು ಮಾಧ್ಯಮದಲ್ಲಿ ಸೇವೆ ಸಲ್ಲಿಸಿ ನಿರ್ಗಮಿಸಿದ್ದಾರೆ. ದಿ ವೀಕ್ ಒಂದರಲ್ಲಿಯೇ ಅವರು 32 ವರ್ಷ ಕೆಲಸ ಮಾಡಿದ್ದರು. ಅದಕ್ಕೂ ಮುನ್ನ ಅವರು ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಕೆಲಸ ಮಾಡಿದ್ದರು.

ಆಸ್ಪತ್ರೆಯಲ್ಲಿ ಜನ್ಮದಿನ ಆಚರಿಸಿಕೊಂಡಿದ್ದರು

ಸಚ್ಚಿ ಅವರು ಬಹಳಷ್ಟು ಜೀವನ ಪ್ರೀತಿಯುಳ್ಳವರಾಗಿದ್ದರು. ಅವರ ಗೆಳೆಯರ ಬಳಗ ದೊಡ್ಡದು. ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಅವರು, ಕಳೆದ ಆಗಸ್ಟ್ 30ರಂದು ಜಯನಗರ ಅಪೋಲೋ ಆಸ್ಪತ್ರೆಯಲ್ಲಿ ತಮ್ಮ ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ಆ ಸಂದರ್ಭದಲ್ಲಿ ಅವರು ಶ್ವಾಸಕೋಶ ಕಸಿ ಚಿಕಿತ್ಸೆಗೆ ಒಳಗಾಗಿದ್ದರು.

ತಮ್ಮ ವೃತ್ತಿ ಜೀವನದಲ್ಲಿ ಅಸಂಖ್ಯಾತ ತರುಣ ಪತ್ರಕರ್ತರನ್ನು ಮುನ್ನೆಲೆಗೆ ತಂದ ಅವರು, ಪತ್ರಿಕೋದ್ಯಮದ ಪರಿಪೂರ್ಣ ರೂಪವಾಗಿದ್ದರು ಎಂದು ಅವರನ್ನು ಹತ್ತಿರದಿಂದ ಬಲ್ಲ ಗೆಳೆಯರು ಅನೇಕರು ಹೇಳುತ್ತಾರೆ.

ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಸಿಕೆನ್ಯೂಸ್ ನೌ ಪ್ರಾರ್ಥನೆ ಮಾಡುತ್ತದೆ.

ದೇವೇಗೌಡರು, ಸಿದ್ದರಾಮಯ್ಯ, ಡಿಕೆಶಿ, ಹೆಚ್ಡಿಕೆ ಸಂತಾಪ

ಸಚ್ಚಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಸಿಎಂ ಸಿದ್ದರಾಮಯ್ಯ , ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿ.ಕೆ. ಶಿವಕುಮಾರ್ ಮುಂತಾದವರು ಶೋಕ ವ್ಯಕ್ತಪಡಿಸಿದ್ದಾರೆ.

ಹಿರಿಯ ಪತ್ರಕರ್ತರು, ಪ್ರತಿಭಾನ್ವಿತರು ಆಗಿದ್ದ ಶ್ರೀ ಕೆ. ಎಸ್.ಸಚ್ಚಿದಾನಂದ ಮೂರ್ತಿ (ಸಚ್ಚಿ) ಅವರು ವಿಧಿವಶರಾದ ಸುದ್ದಿ ತಿಳಿದು ತೀವ್ರ ನೋವುಂಟಾಯಿತು. ಸಚ್ಚಿದಾನಂದ ಮೂರ್ತಿ ಅವರು ಮಲೆಯಾಳಂ ಮನೋರಮಾ ಮತ್ತು ದಿ ವೀಕ್ ವಾರಪತ್ರಿಕೆಯ ಸ್ಥಾನಿಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿಯಾಗಿ, ಪ್ರೆಸ್ ಕೌನ್ಸಿಲ್ ಸದಸ್ಯರಾಗಿಯೂ ದುಡಿದಿದ್ದರು.ಅವರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಕಂಬನಿ ಮಿಡಿದಿದ್ದಾರೆ.

ಹಿರಿಯ ಪತ್ರಕರ್ತ, 'ಮಲಯಾಳ ಮನೋರಮಾ' ಮತ್ತು 'ದಿ ವೀಕ್' ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.

ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ… pic.twitter.com/e8l7ZmXrHH

— Siddaramaiah (@siddaramaiah) October 13, 2023

ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.

ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು. 

ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಜ್ಞಾನಕೋಶದಂತಿದ್ದ ಸಚ್ಚಿದಾನಂದ ಮೂರ್ತಿಯವರ‌ ಸಾವು ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

ಸೂಕ್ಷ್ಮ, ಸಂವೇದನಾಶೀಲ ಹಾಗೂ ಜನಪರ ಪತ್ರಿಕೋದ್ಯಮದಲ್ಲಿ ಬಹುದೊಡ್ಡ ಹೆಸರಾಗಿದ್ದ ಹಿರಿಯ ಪತ್ರಕರ್ತ ಶ್ರೀ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ನಿಧನದ ವಾರ್ತೆ ತಿಳಿದು ಬಹಳ ನೋವಾಯಿತು.

'ಮಲೆಯಾಳ ಮನೋರಮಾ' ಹಾಗೂ 'ದಿ ವೀಕ್' ಪತ್ರಿಕೆಗಳ ಸ್ಥಾನಿಕ ಸಂಪಾದಕರಾಗಿದ್ದ ಅವರ ಅಂಕಣ ಬರಹಗಳನ್ನು ನಾನು ಸಾಕಷ್ಟು ಓದಿದ್ದೇನೆ.

ಸಚ್ಚಿ ಅವರ ಆತ್ಮಕ್ಕೆ… pic.twitter.com/5WH32ScLPg

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 13, 2023

ಸೂಕ್ಷ್ಮ, ಸಂವೇದನಾಶೀಲ ಹಾಗೂ ಜನಪರ ಪತ್ರಿಕೋದ್ಯಮದಲ್ಲಿ ಬಹುದೊಡ್ಡ ಹೆಸರಾಗಿದ್ದ ಹಿರಿಯ ಪತ್ರಕರ್ತ ಶ್ರೀ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ನಿಧನದ ವಾರ್ತೆ ತಿಳಿದು ಬಹಳ ನೋವಾಯಿತು.

‘ಮಲೆಯಾಳ ಮನೋರಮಾ’ ಹಾಗೂ ‘ದಿ ವೀಕ್’ ಪತ್ರಿಕೆಗಳ ಸ್ಥಾನಿಕ ಸಂಪಾದಕರಾಗಿದ್ದ ಅವರ ಅಂಕಣ ಬರಹಗಳನ್ನು ನಾನು ಸಾಕಷ್ಟು ಓದಿದ್ದೇನೆ.

ಸಚ್ಚಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಸಚ್ಚಿದಾನಂದ ಮೂರ್ತಿ ಅವರ ಸಾವಿನ ಸುದ್ದಿ ಕೇಳಿ ಹೃದಯ ಭಾರವಾಗಿದೆ. ಮಲಯಾಳಂ ಮನೋರಮಾ, ದಿ ವೀಕ್ ಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಸಚ್ಚಿದಾನಂದಮೂರ್ತಿ ಅವರ ಸಾವು ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ.
ಅಗಲಿದ ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನು ಭಾಗಿ. pic.twitter.com/g4LLl7SKF6

— DK Shivakumar (@DKShivakumar) October 13, 2023

ಹಿರಿಯ ಪತ್ರಕರ್ತರಾದ ಸಚ್ಚಿದಾನಂದ ಮೂರ್ತಿ ಅವರ ಸಾವಿನ ಸುದ್ದಿ ಕೇಳಿ ಹೃದಯ ಭಾರವಾಗಿದೆ. ಮಲಯಾಳಂ ಮನೋರಮಾ, ದಿ ವೀಕ್ ಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಸಚ್ಚಿದಾನಂದಮೂರ್ತಿ ಅವರ ಸಾವು  ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ.

ಅಗಲಿದ ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನು ಭಾಗಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

Tags: BengalurudeathindiaJournalismjournalistkarnatakano moreSachhiSachhidananda murthyThe week
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕಾಟನ್ ಬಾಕ್ಸ್ ಗಳಲ್ಲಿ ಕುರುಡು ಕಾಂಚಾಣ!

ಕಾಟನ್ ಬಾಕ್ಸ್ ಗಳಲ್ಲಿ ಕುರುಡು ಕಾಂಚಾಣ!

Leave a Reply Cancel reply

Your email address will not be published. Required fields are marked *

Recommended

ಪ್ರಧಾನಿ ಅಭ್ಯರ್ಥಿ; ಖರ್ಗೆ ಅವರಿಗೆ ಸಿದ್ದರಾಮಯ್ಯ ಚೆಕ್‌ಮೇಟ್!!

ಪ್ರಧಾನಿ ಅಭ್ಯರ್ಥಿ; ಖರ್ಗೆ ಅವರಿಗೆ ಸಿದ್ದರಾಮಯ್ಯ ಚೆಕ್‌ಮೇಟ್!!

1 year ago
ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ, ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ: ಡಾ.ಕೆ.ಸುಧಾಕರ್

ಕೋವಿಡ್ ಎರಡನೇ ಅಲೆ ಆರಂಭದ ಸೂಚನೆ ಸ್ಪಷ್ಟ, ಮುನ್ನೆಚ್ಚರಿಕೆ ವಹಿಸದಿದ್ದರೆ ಕಾದಿದೆ ಆಪತ್ತು; ರಾಷ್ಟ್ರೀಯ ಪಾಸಿಟಿವಿಟಿ ದರಕ್ಕಿಂತ ರಾಜ್ಯದ ಪಾಸಿಟಿವಿಟಿ ದರವೇ ಹೆಚ್ಚು!!

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ