• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಉಪ ಮುಖ್ಯಮಂತ್ರಿ ಗಾದಿಗೆ ಪಟ್ಟು; ಬೆಳಗಾವಿ ಬೇಗುದಿಯಿಂದ ಕಾಂಗ್ರೆಸ್ ತಲ್ಲಣ

cknewsnow desk by cknewsnow desk
October 18, 2023
in NATION, POLITICS, STATE
Reading Time: 1 min read
0
ಉಪ ಮುಖ್ಯಮಂತ್ರಿ ಗಾದಿಗೆ ಪಟ್ಟು; ಬೆಳಗಾವಿ ಬೇಗುದಿಯಿಂದ ಕಾಂಗ್ರೆಸ್ ತಲ್ಲಣ
1k
VIEWS
FacebookTwitterWhatsuplinkedinEmail

ಸತೀಶ್ ಜಾರಕಿಹೊಳಿ ನಡೆಯಿಂದ ಇಕ್ಕಟ್ಟಿಗೆ ಸಿಲುಕಿತಾ ಸಿದ್ದರಾಮಯ್ಯ ಸರಕಾರ?; ಸಚಿವ ರಾಜಣ್ಣ ಅವರ ಡಿಸಿಎಂ ಡಿಮಾಂಡ್ ಗೆ ಹೊಸ ಟ್ವಿಸ್ಟ್

ಬೆಂಗಳೂರು: ತಗಲಾಕಿ ತಮಾಷೆ ನೋಡುತ್ತಿರುವ ರಾಜ್ಯ ಕಾಂಗ್ರೆಸ್ ಪಕ್ಷದ ಬಣ ರಾಜಕೀಯ ಹೆಚ್ಚೂಕಮ್ಮಿ ಪರಾಕಾಷ್ಠೆ ಮುಟ್ಟಿದೆ.

ಹೆಚ್.ಡಿ.ಕುಮಾರಸ್ವಾಮಿ ಅವರ ಮೈತ್ರಿ ಸರಕಾರವನ್ನು ಕೆಡವಲು ಬೆಳಗಾವಿ ರಾಜಕೀಯವನ್ನು ದಾಳವಾಗಿ ಬಳಿಸಿಕೊಂಡಿದ್ದ ಶಕ್ತಿಗಳಿಗೆ ಈಗ ಅದೇ ಉರುಳಾಗಿ ಪರಿಣಮಿಸಿದೆ.

ಮುಖ್ಯವಾಗಿ, ಕೆಲ ದಿನಗಳ ಹಿಂದೆ ಸಮುದಾಯಕ್ಕೊಂದು ಡಿಸಿಎಂ ಪದವಿಯನ್ನು ಡಿಮಾಂಡ್ ಮಾಡಿದ್ದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಪಟ್ಟು ಈಗ ಕೆಲಸ ಮಾಡತೊಡಗಿದೆ.

ಸದ್ಯಕ್ಕೆ ಸತೀಶ್ ಜಾರಕಿಹೊಳಿ ಅವರ ರೂಪದಲ್ಲಿ ಧುತ್ತನೆ ಎದ್ದು ಕೂತಿರುವ ಬೆಳಗಾವಿ ರಾಜಕೀಯದ ಬೇಗುದಿ ಡಿಸಿಎಂ ಪಟ್ಟಕ್ಕೆ ಮಂಡಿಸಿದ ಬೇಡಿಕೆ ಅಲ್ಲದೆ ಮತ್ತೇನೂ ಅಲ್ಲ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತವೆ.

ಮೇಲಾಗಿ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಳಗಾವಿ ಮೇಲೆ ತೋರಿಸಿದ ವಿಶೇಷ ಕಾಳಜಿ ಕಾರಣದಿಂದಲೇ ಏನೇನು ತಪ್ಪು ಮಾಡದ ಕುಮಾರಸ್ವಾಮಿ ಅವರು ಅಧಿಕಾರ ಕಳೆದುಕೊಂಡಿದ್ದರು. ಈಗ ಪೂರ್ಣ ಬಹುಮತದ ಸರಕಾರವಿದ್ದರೂ ಬೆಳಗಾವಿ ಬೇಗುದಿ ಮುನ್ನೆಲೆಗೆ ಬಂದಿದೆ ಹಾಗೂ ಇದಕ್ಕೆ ಡಿಕೆಶಿ ಕಾರಣ ಎಂದು ಆ ಮೂಲಗಳು ಸ್ಪಷ್ಟವಾಗಿ ಹೇಳುತ್ತವೆ.

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಪ್ರಭಾವ ಹೆಚ್ಚಿಸುವ ಸಲುವಾಗಿ ನಡೆಯುತ್ತಿರುವ ಪ್ರಯತ್ನಗಳೇ ತಿಕ್ಕಾಟಕ್ಕೆ ಕಾರಣ ಎನ್ನಲಾಗಿದೆ. ಸರಕಾರ ಹಾಗೂ ಪಕ್ಷದ ಮಟ್ಟದಲ್ಲಿ ಅತ್ಯಂತ ಹಿರಿಯ ಸಚಿವರಾದ ಸತೀಶ ಜಾರಕಿಹೊಳಿ ಅವರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡುತ್ತಿರುವುದು ಬೇಗುದಿಗೆ ಮೂಲ ಕಾರಣ ಎಂದು ಹೇಳಲಾಗಿದೆ.

ಡಿಕೆಶಿಗೆ ಸರಿ ಸಮಾನ ಹುದ್ದೆ

ರಾಜ್ಯ ಸರಕಾರದಲ್ಲಿ ಡಿ.ಕೆ.ಶಿವಕುಮಾರ್‌ ಅವರಿಗೆ ಸರಿಸಮನಾದ ಸ್ಥಾನಮಾನವನ್ನು ತಮಗೂ ನೀಡುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ ಅವರು ವರಿಷ್ಠರ ಮೇಲೆ ಒತ್ತಡ ತರಲು ಬಣ ರಾಜಕೀಯ ಆರಂಭಿಸಿದ್ದಾರೆ ಎನ್ನುವ ಮಾಹಿತಿ ಸ್ವತಃ ಕಾಂಗ್ರೆಸ್ ಪಾಳಯದಲ್ಲಿ ಬಿರುಗಾಳಿ ಎಬ್ಬಿಸಿದೆ.

ಮುಂಬಯಿ ಕರ್ನಾಟಕದ 20ಕ್ಕೂ ಹೆಚ್ಚು ಪಕ್ಷದ ಶಾಸಕರನ್ನು ಬೆನ್ನಿಗೆ ಕಟ್ಟಿಕೊಂಡು ಉಪ ಮುಖ್ಯಮಂತ್ರಿ ಹುದ್ದೆಗಾಗಿ ಅವರು ಲಾಬಿ ಆರಂಭಿಸಿದ್ದಾರೆ ಎನ್ನಲಾಗಿದ್ದು, ಶಿವಕುಮಾರ್ ಅವರಿಗೆ ಸಿಕ್ಕಿರುವ ಸ್ಥಾನಮಾನಗಳನ್ನು ನೀವು ಪಡೆಯಲೇಬೇಕು ಎಂದು ಜಾರಕಿಹೊಳಿ ಕುಟುಂಬವು ಸತೀಶ್ ಅವರನ್ನು ಹುರಿದುಂಬಿಸಿದೆ ಎಂಬ ಸುದ್ದಿ ಇದೆ.

ಅವರ ಕುಟುಂಬದಲ್ಲೇ ಇಬ್ಬರು ಬಿಜೆಪಿಯಲ್ಲಿ ಶಾಸಕರು, ಇನ್ನೊಬ್ಬರು ವಿಧಾನ ಪರಿಷತ್ತಿನ ಪಕ್ಷೇತರ ಸದಸ್ಯರು. ಹೀಗಾಗಿ ಜಾರಕಿಹೊಳಿ ಇಡೀ ಕುಟುಂಬ ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಹಿಡಿತ ಸಾಧಿಸಿಕೊಂಡಿದೆ.

ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಪ್ರಬಲ ಖಾತೆ ಹೊಂದಿದ್ದ ರಮೇಶ್ ಜಾರಕಿಹೊಳಿ ಅವರು ಪ್ರಕರಣ ಒಂದರ ಕಾರಣಕ್ಕೆ ಅಧಿಕಾರ ಕಳೆದುಕೊಳ್ಳಬೇಕಾಯಿತು. ಅಧಿಕಾರ ಕಳೆದುಕೊಳ್ಳಲು ಡಿಕೆಶಿ ನಡೆಸಿದ ಹನಿಟ್ರ್ಯಾಪ್ ತಂತ್ರವೇ ಕಾರಣವೆಂದು ಅವರ ಕುಟುಂಬ ನಂಬಿದ್ದು, ಈ ಕಾರಣಕ್ಕೆ ರಾಜಕೀಯವಾಗಿ ಹಾಲಿ ಉಪ ಮುಖ್ಯಮಂತ್ರಿ ವಿರುದ್ಧ ಸಿಡಿದೆದ್ದಿದೆ.

ಶಿವಕುಮಾರ್ ಪ್ರಮುಖ ಹುದ್ದೆಗಳನ್ನು ಪಡೆದು ಸರಕಾರದಲ್ಲಿ ಮುಖ್ಯಮಂತ್ರಿಗೆ ಸಮನಾಗಿ ಅಧಿಕಾರ ನಡೆಸುತ್ತಿರುವುದು ಈ ಕುಟುಂಬಕ್ಕೆ ಪಥ್ಯವಾಗುತ್ತಿಲ್ಲ. ಶಿವಕುಮಾರ್ ಅಷ್ಟೇ, ಪಕ್ಷ ಸಂಘಟನೆ ಹಾಗೂ ಒಂದು ಸಮುದಾಯದ ಬೆಂಬಲ ಇರುವಾಗ ಅವರಿಗೆ ನೀಡಿರುವ ಸಮಾನಾಂತರ ಹುದ್ದೆ ಪಡೆದುಕೊಳ್ಳಬೇಕು ಎಂದು ಸತೀಶ್ ಸಹೋದರರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಪಟ್ಟು ಹಿಡಿದಿರುವುದರ ಜತೆಗೆ ಸತೀಶ್ ಜಾರಕಿಹೊಳಿಗೆ ಬೆಂಬಲವಾಗಿ ನಿಲ್ಲಲು ಮುಂಬಯಿ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ತಂಡವನ್ನೇ ರಚಿಸಿ ವರಿಷ್ಠರ ಮೇಲೆ ಒತ್ತಡ ತರಿಸಿದ್ದಾರೆ ಎನ್ನುವುದು ಮಾಹಿತಿ.

ಸಾರ್ವಜನಿಕವಾಗಿ ತಮ್ಮ ಹೋರಾಟ ಬಹಿರಂಗಗೊಳ್ಳಬೇಕು ಎಂದೇ ವಿಶ್ವ ವಿಖ್ಯಾತ ದಸರಾ ಮಹೋತ್ಸವ ನೋಡಲೆಂದೇ ಬೆಳಗಾವಿಯಿಂದ ಮೈಸೂರಿಗೆ ಸತೀಶ್ ನೇತೃತ್ವದಲ್ಲಿ ಶಾಸಕರ ತಂಡ ಪ್ರವಾಸ ಕೈಗೊಳ್ಳುವ ಯೋಜನೆ ರೂಪಿಸಿದ್ದರು.ಈ ವಿಷಯ ತಿಳಿಯುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನಗರಕ್ಕೆ ವೇಣುಗೋಪಾಲ್ ಅವರನ್ನು ಕರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಬಣ ರಾಜಕೀಯ ನಿಲ್ಲಿಸುವಲ್ಲಿ ತಾತ್ಕಾಲಿಕವಾಗಿ ಯಶಸ್ವಿಯಾಗಿದ್ದಾರೆ.

ಆದರೆ, ತಮ್ಮ ಪಟ್ಟನ್ನು ಜಾರಕಿಹೊಳಿ ಬಿಟ್ಟಿಲ್ಲ. ನಮಗೂ ಅಧಿಕಾರ ಕೊಡಿ. ನೀವು ಚುನಾವಣೆ ಸಂದರ್ಭಲ್ಲಿ ಕಾರ‍್ಯಾಧ್ಯಕ್ಷ ಸ್ಥಾನ ನೀಡಿದ್ದರಿಂದ ಮುಂಬಯಿ ಕರ್ನಾಟಕದಲ್ಲಿ ಬಿಜೆಪಿ ಮಟ್ಟ ಹಾಕಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲ್ಲು ಸಾಧ್ಯವಾಯಿತು.

ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಾಲ್ಮೀಕಿ ಸಮುದಾಯ ಪಕ್ಷದ ಪರವಾಗಿ ಗಟ್ಟಿಯಾಗಿ ನಿಲ್ಲುತ್ತದೆ.ನಮಗೆ ಮುಂಬಯಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಬಹುದು ಎಂದು ಒತ್ತಾಯ ಮಾಡಿದ್ದಾರೆಯೇ ಹೊರತು, ಶಿವಕುಮಾರ್ ವಿರುದ್ಧ ಯಾವುದೇ ರೀತಿಯ ಗುರುತರ ಆರೋಪ ಹೊರಿಸುವ ಪ್ರಯತ್ನ ಮಾಡಿಲ್ಲ ಎನ್ನುವುದು ಸತೀಶ್ ಜಾರಕಿಹೊಳಿ ಅವರ ಗುಂಪಿನ ಮಾತು.

ಕಳೆದ ಕೆಲ ದಿನಗಳ ಹಿಂದಷ್ಟೇ ಇದೇ ಸಮುದಾಯಕ್ಕೆ ಸೇರಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಸಂಪುಟದಲ್ಲಿ ಮೂವರು ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವಂತೆ ವರಿಷ್ಠರಿಗೆ ಬಹಿರಂಗವಾಗಿ ಮನವಿ ಮಾಡಿದ್ದರು.ಇದರ ಬೆನ್ನಲ್ಲೇ ಜಾರಕಿಹೊಳಿ ಕುಟುಂಬ ಉಪ ಮುಖ್ಯಮಂತ್ರಿ ಹುದ್ದೆಗಾಗಿ ಬಣ ರಾಜಕೀಯ ಮುಂದಿಟ್ಟುಕೊಂಡು ಬಹಿರಂಗವಾಗಿ ಅಖಾಡಕ್ಕಿಳಿದಿದೆ.

Tags: ckcknewsnowCongressDK ShivakumarPoliticsSatish jarkiholisiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಶೋಭಾ ಕರಂದ್ಲಾಜೆ

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಶೋಭಾ ಕರಂದ್ಲಾಜೆ

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಾಲ ಮಾಡಿ ಅದ್ಧೂರಿ ಮದುವೆ ಮಾಡಿಕೊಳ್ಳಬೇಡಿ

2 years ago
ಬಿಜೆಪಿ ಮೈತ್ರಿ | ಅನುಮಾನ, ಗೊಂದಲ ನಿವಾರಿಸಿದ ಜೆಡಿಎಸ್ ವರಿಷ್ಠರು

ಬಿಜೆಪಿ ಮೈತ್ರಿ | ಅನುಮಾನ, ಗೊಂದಲ ನಿವಾರಿಸಿದ ಜೆಡಿಎಸ್ ವರಿಷ್ಠರು

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ