• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಪಂಚರಾಜ್ಯ ಚುನಾವಣೆ ಹೊತ್ತಿನಲ್ಲಿ ಡಿಕೆಶಿಗೆ ಸಿಬಿಐ ಸಿಕ್ಕು; ಅಡಕತ್ತರಿಯಲ್ಲಿ ಕಾಂಗ್ರೆಸ್

cknewsnow desk by cknewsnow desk
October 19, 2023
in NATION, NEWS & VIEWS, STATE
Reading Time: 1 min read
0
ಡಿಕೆಶಿ ಬಹಿರಂಗ ಕ್ಷಮೆ ಕೇಳಬೇಕು: ಸಚಿವ ಡಾ.ಕೆ.ಸುಧಾಕರ್ ಡಿಮಾಂಡ್
980
VIEWS
FacebookTwitterWhatsuplinkedinEmail

ಆದಾಯ ಮೀರಿದ ಸಂಪತ್ತು ಸಂಪಾದನೆ ಪ್ರಕರಣದಲ್ಲಿ ಹಿನ್ನಡೆ; ಸಿಬಿಐ ತನಿಖೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪ ಕುರಿತ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿಸಿರುವುದು ರಾಜ್ಯ ಕಾಂಗ್ರೆಸ್‌ ಪಾಳಯ ಮಾತ್ರವಲ್ಲದೆ ಹೈಕಮಾಂಡ್ ಅಂಗಳದಲ್ಲಿಯೂ ಇನ್ನಿಲ್ಲದ ತಲ್ಲಣ ಸೃಷ್ಟಿ ಉಂಟು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ರದ್ದುಪಡಿಸಬೇಕು ಎಂದು ಡಿ.ಕೆ.ಶಿವಕುಮಾರ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯದಲ್ಲಿ ಅವರಿಗೆ ಹಿನ್ನಡೆ ಉಂಟಾಗಿದೆ. ಪಂಚರಾಜ್ಯಗಳ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಎದುರಾಗಿರುವ ಈ ಸಂಕಷ್ಟ ದೊಡ್ಡ ಉರುಳಾಗಿ ಪರಿಣಮಿಸುವ ಸಾಧ್ಯತೆ ಇದೆ.

ಈಗಾಗಲೇ ಪ್ರತಿಪಕ್ಷ ಬಿಜೆಪಿ ಈ ಪ್ರಕರಣವನ್ನು ಇಟ್ಟುಕೊಂಡೇ ಕಾಂಗ್ರೆಸ್‌ ವಿರುದ್ಧ ಚಾಟಿ ಬೀಸಿದೆ. ಐದೂ ರಾಜ್ಯಗಳಲ್ಲಿ ಡಿಕೆಶಿ ಹಗರಣವನ್ನೇ ಇಟ್ಟುಕೊಂಡು ಬಿಜೆಪಿ ಪ್ರಚಾರಕ್ಕೆ ಇಳಿದರೆ ಹೊಡೆತ ಗ್ಯಾರಂಟಿ ಎಚನ್ನುವ ಭಯ ಕಾಂಗ್ರೆಸ್‌ ಪಕ್ಷವನ್ನು ಕಾಡುತ್ತಿದೆ.

ಇನ್ನು, ವಾದ ವಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ.ನಟರಾಜ್ ಅವರಿದ್ದ ಏಕಸದಸ್ಯ ಪೀಠವು ತನಿಖೆಯನ್ನು ಮೂರು ತಿಂಗಳೊಳಗೆ ಮುಗಿಸಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಸಿಬಿಐಗೆ ಆದೇಶ ಮಾಡಿದೆ.

ನ್ಯಾಯಾಲಯದ ಈ ಆದೇಶ ಡಿ.ಕೆ.ಶಿವಕುಮಾರ್ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ ಎಂದು ಕಾಂಗ್ರೆಸಿಗರೇ ಹೇಳುತ್ತಿದ್ದಾರೆ. ಕಳೆದ 2020ರ ಅಕ್ಟೋಬರ್ ನಲ್ಲಿ ಸಿಬಿಐ ದಾಖಲಿಸಿದ್ದ ಎಫ್ಐಆರ್ ಅನ್ನು ಶಿವಕುಮಾರ್ ಅವರು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು.

ಫೆಬ್ರವರಿ 2023ರಲ್ಲಿ ವಿಚಾರಣಾ ನ್ಯಾಯಾಲಯವೂ ತೀರ್ಪನ್ನು ತಡೆ ಹಿಡಿದಿತ್ತು. ಇದೀಗ ನ್ಯಾಯಾಲಯದ ಈ ತೀರ್ಪು ಶಿವಕುಮಾರ್ ಅವರಿಗೆ ದೊಡ್ಡ ಆಘಾತ ನೀಡಿದೆ.

ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿರುವ ಶಿವಕುಮಾರ್ ಅವರು, ಆ ಸ್ಥಾನ ಪಡೆಯಲು ಪಕ್ಷ ಸಂಘಟನೆಯ ಜತೆಗೆ ರಾಜಕೀಯ ತಂತ್ರಗಳನ್ನು ರೂಪಿಸುತ್ತಿರುವ ಸಂದರ್ಭದಲ್ಲೆ ಈ ತೀರ್ಪು ಬಂದಿರುವುದು ಅವರಿಗೆ ಮತ್ತು ಪಕ್ಷಕ್ಕೆ ಭಾರೀ ಹಿನ್ನಡೆ ಉಂಟು ಮಾಡಿದಂತೆ ಆಗಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಪಕ್ಷಕ್ಕೆ 20 ಸ್ಥಾನಗಳನ್ನು ತಂದು ಕೊಡಲೇಬೇಕು ಎಂದು ಈಗಿನಿಂದಲೇ ಹೋರಾಟ ಆರಂಭಿಸಿದ್ದಾರೆ ಡಿಕೆಶಿ. ಈ ಹೋರಾಟದ ನಡುವೆ ಆದಾಯ ತೆರಿಗೆ ಇಲಾಖೆಯಿಂದ ಅವರ ಆಪ್ತರು ಎನ್ನಲಾದ ಕೆಲವರ ಮೇಲೆ ಕೋಟ್ಯಂತರ ರೂ. ವಶಪಡಿಸಿಕೊಂಡು ತನಿಖೆ ಆರಂಭಿಸಿದೆ. ಅದರ ಬೆನ್ನಲ್ಲೇ ಹೈಕೋರ್ಟ್ ತೀರ್ಪು ಹೊರಬಿದ್ದಿದೆ.

ನ್ಯಾಯಾಲಯದ ತೀರ್ಪಿಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. “ನೆಲದ ಕಾನೂನನ್ನು ಗೌರವಿಸುತ್ತೇನೆ. ಏನೂ ತಪ್ಪು ಮಾಡಿಲ್ಲ ಎಂಬುದು ನನಗೆ ತಿಳಿದೆ. ನಾನು ಶುದ್ಧವಾಗಿದ್ದೇನೆ. ಬಿಜೆಪಿಯು ಸೇಡಿನ ರಾಜಕಾರಣ ಮಾಡುತ್ತಿದೆ. ಆದ್ದರಿಂದಲೇ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು” ಎಂದು ಅವರು ಹೇಳಿದ್ದಾರೆ.

ಈಗಾಗಲೇ ಶೇ.90ರಷ್ಟು ತನಿಖೆ ಪೂರ್ಣಗೊಂಡಿದೆ. ಯಾವ ಹಂತದಲ್ಲೂವಿಚಾರಣೆಗೆ ಒಳಪಡಿಸಿಲ್ಲ. ನನ್ನ ಮತ್ತು ನನ್ನ ಪತ್ನಿಗೆ ಸೇರಿದ ಆಸ್ತಿ ಬಗ್ಗೆ ವಿಚಾರಣೆ ನಡೆಯಬೇಕಿದೆ. ನಾನು ಕಾನೂನು ಚೌಕಟ್ಟಿನಲ್ಲಿ ಹೋರಾಟ ಮುಂದುವರೆಸುತ್ತೇನೆ. ಬಿಜೆಪಿಯ ಪಿತೂರಿ ಏನೇ ಇರಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಒದಗಿಸುವುದಾಗಿ ಅವರು ಹೇಳಿದ್ದಾರೆ.

ಕಾಂಗ್ರೆಸ್ಸಿನಲ್ಲಿ ಬಿರುಸಿನ ಚರ್ಚೆ

ಹೈಕೋರ್ಟ್ ಆದೇಶದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಚರ್ಚೆ ನಡೆದು, ವರಿಷ್ಠರು ಕೂಡ ಈ ಬಗ್ಗೆ ವಿಸ್ತೃತ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಡಿಕೆಶಿ ಬಣ ಮಾತ್ರ ಅಲ್ಲದೆ, ಸಿದ್ದರಾಮಯ್ಯ ಹಾಗೂ ಸತೀಶ್ ಜಾರಕಿಹೊಳಿ ಅವರ ಕಡೆಯೂ ಈ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಮೂರೇ ತಿಂಗಳಲ್ಲಿ ತನಿಖೆ ಮುಗಿಸಿ ಆರೋಪ ಪಟ್ಟಿ ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶ ನೀಡಿರುವುದು ಡಿಕೆಶಿ ಗುಂಪಿಗೆ ಆತಂಕ ಉಂಟು ಮಾಡಿವೆ.

ಡಿಕೆಶಿಯನ್ನೇ ನಂಬಿದೆ ಹೈಕಮಾಂಡ್

ಸದ್ಯದ ಪರಿಸ್ಥಿತಿಯಲ್ಲಿ ಪಂಚರಾಜ್ಯಗಳ ಚುನಾವಣೆ ಕಾಂಗ್ರೆಸ್ ಪಾಲಿಗೆ ನಿರ್ಣಾಯಕ ಆಗಿದೆ. ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಮ್ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಕಾಂಗ್ರೆಸ್ ಅಳಿವು ಉಳಿವಿನ ಪ್ರಯತ್ನ ನಡೆಸಿದೆ.

ಕರ್ನಾಟಕದ ಭರ್ಜರಿ ಫಲಿತಾಂಶದ ಉಮೇದಿನಲ್ಲಿರುವ ಕಾಂಗ್ರೆಸ್, ಕೊನೆಪಕ್ಷ ಛತ್ತೀಸ್‌ಗಢ, ರಾಜಸ್ತಾನ, ರಾಜ್ಯಗಳನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದೆ. ಮಧ್ಯ ಪ್ರದೇಶದಲ್ಲಿಯೂ ಗೆಲುವಿನ ದಡ ಸೇರಲು ನಾನಾ ತಂತ್ರಗಾರಿಕೆ ನಡೆಸಿದೆ. ಕರ್ನಾಟಕದಲ್ಲಿ ಚುನಾವಣಾ ಕಾರ್ಯತಂತ್ರ ರೂಪಿಸಿದ್ದ ತಂಡಗಳು ಈಗ ಆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿವೆ.

ಈ ಎಲ್ಲಾ ಹಿನ್ನೆಲೆಯಲ್ಲಿ ಡಿಕೆಶಿ ಸಂಕಷ್ಟಕ್ಕೆ ಸಿಲುಕಿರುವ ಪರಿಣಾಮ ಕಾಂಗ್ರೆಸ್ ವರಿಷ್ಠರು ಆತಂಕಕ್ಕೆ ಸಿಲುಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

Tags: CBIckcknewsnowCongressDK Shivakumarhigh courtindiakarnatakaPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ನಾನು, ನನ್ನ ದಾಖಲೆಗಳು ಕ್ಲೀನ್

ನಾನು, ನನ್ನ ದಾಖಲೆಗಳು ಕ್ಲೀನ್

Leave a Reply Cancel reply

Your email address will not be published. Required fields are marked *

Recommended

113ರಿಂದ 107 ಅಡಿಗೆ ಕುಸಿದ KRS ನೀರಿನ ಮಟ್ಟ

113ರಿಂದ 107 ಅಡಿಗೆ ಕುಸಿದ KRS ನೀರಿನ ಮಟ್ಟ

2 years ago

ಗುಡಿಬಂಡೆ ವೈದ್ಯನಾಥೇಶ್ವರ ದೇಗುಲ, ಚಿಕ್ಕಬಳ್ಳಾಪುರ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ