• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕಮೀಷನ್‌ ಕಲೆಕ್ಷನ್‌ʼಗಾಗಿ ಕಾಂಗ್ರೆಸ್‌ ಸರಕಾರದಿಂದ ರಾಜ್ಯದಲ್ಲಿ ಕೃತಕ ವಿದ್ಯುತ್‌ ಅಭಾವ ಸೃಷ್ಟಿ!

cknewsnow desk by cknewsnow desk
October 21, 2023
in NATION, STATE
Reading Time: 2 mins read
0
ಕಮೀಷನ್‌ ಕಲೆಕ್ಷನ್‌ʼಗಾಗಿ ಕಾಂಗ್ರೆಸ್‌ ಸರಕಾರದಿಂದ ರಾಜ್ಯದಲ್ಲಿ ಕೃತಕ ವಿದ್ಯುತ್‌ ಅಭಾವ ಸೃಷ್ಟಿ!
989
VIEWS
FacebookTwitterWhatsuplinkedinEmail

ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; ವಿದ್ಯುತ್‌ ಉತ್ಪಾದನೆಗೆ ಸಾಧ್ಯವಿದ್ದರೂ ಖಾಸಗಿ ಕಂಪನಿಗಳಿಂದ ಖರೀದಿಸಿ ಪರ್ಸಂಟೇಜ್‌ ಕಲೆಕ್ಷನ್‌ʼಗೆ ಹುನ್ನಾರ

ಬೆಂಗಳೂರು: ವಿವಿಧ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೇರಳ ಅವಕಾಶವಿದ್ದರೂ ಖಾಸಗಿ ಕಂಪನಿಗಳಿಂದ ವಿದ್ಯುತ್ ಖರೀದಿಸಲು ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಪಂಚರಾಜ್ಯಗಳ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯ ವೇಳೆ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಉದ್ದೇಶದಿಂದ ಖಾಸಗಿ ಕಂಪನಿಗಳಿಂದ ವಿದ್ಯುತ್ ಖರೀದಿ ಮಾಡಿ ಕಮೀಷನ್ ಸಂಗ್ರಹ ಮಾಡಲು ರಾಜ್ಯ ಸರಕಾರ ಹುನ್ನಾರ ನಡೆಸಿದೆ, ಖಾಸಗಿ ಕಂಪನಿಗಳಿಂದ ಖರೀದಿ ಮಾಡಿದರೆ ತಾನೇ ಇವರ ಜೇಬು ತುಂಬುವುದು ಎಂದು ಅವರು ದೂರಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಅವರಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಮಳೆಯ ಅಭಾವದಿಂದ ಜಲ ವಿದ್ಯುತ್ ಉತ್ಪಾದನೆ ಕಡಿಮೆ ಆಗಿದೆ, ನಿಜ. ಆದರೆ, ಇತರೆ ಮೂಲಗಳಿಂದ ಸಾಕಷ್ಟು ವಿದ್ಯುತ್ ಉತ್ಪಾದನೆ ಮಾಡಬಹುದು. ಅಧಿಕಾರ ಬಂದಾಗಿನಿಂದಲೇ ಸರಕಾರ ಮುನ್ನೆಚ್ಚರಿಕೆ ವಹಿಸಿದ್ದಿದ್ದರೆ ಅಗತ್ಯವಾದಷ್ಟು ಕಲ್ಲಿದ್ದಲನ್ನು ದಾಸ್ತಾನು ಮಾಡಿಕೊಳ್ಳಬಹುದಿತ್ತು. ಖರೀದಿ ವ್ಯವಹಾರ ನಡೆಸಿ ಕಮೀಷನ್‌ ಹೊಡೆಯುವ ದುರುದ್ದೇಶದಿಂದ ವಿದ್ಯುತ್ ಉತ್ಪಾದನೆಯನ್ನು ಉಪೇಕ್ಷೆ ಮಾಡಲಾಗಿದೆ ಎಂದು ದೂರಿದರು ಅವರು.

  • ಮುಖ್ಯಾಂಶಗಳು
  • ಕಲ್ಲಿದ್ದಲು ಖರೀದಿಯಲ್ಲೂ ಉಪೇಕ್ಷೆ
  • ಗ್ಯಾರಂಟಿ ಅಮಲಿನಲ್ಲಿ ತೇಲಿ ಇಂಧನ ಕ್ಷೇತ್ರ ಅಲಕ್ಷ್ಯ
  • ಪಂಚರಾಜ್ಯ, ಲೋಕಸಭೆ ಚುನಾವಣೆಗೆ ಹಣ ಸಂಗ್ರಹ
  • ಬಹುಶಃ ಜಾರ್ಜ್‌ʼಗೆ ಹಣ ಬೇಕಿರಲಿಕ್ಕಿಲ್ಲ
  • ಕ್ರಿಕೆಟ್‌ ಮ್ಯಾಚ್‌ʼನಲ್ಲಿ ಪಾಕಿಸ್ತಾನಕ್ಕೆ ಬೆಂಬಲಿಸಲು ಹೋಗಿದ್ದಿರಾ?
  • ಬಂದೀಖಾನೆಯಿಂದಲೇ ಬಂದವರು ಡಿಕೆಶಿ!!

ಈ ಸರಕಾರಕ್ಕೆ ಹಣ ಮಾಡುವುದು ಒಂದೇ ಉದ್ದೇಶ ಇದೆ. ಹೈಕಮಾಂಡ್ ಮುಂದೆ ವಸೂಲಿ ಮಾಡುತ್ತೇವೆ ಎಂದು ನುಡಿದಿದ್ದರು. ಅದರಂತೆ ಈಗ ಕಲೆಕ್ಷನ್ ಮಾಡುತ್ತಿದ್ದಾರೆ. ನುಡಿದಂತೆ ನಡೆಯುತ್ತಿದ್ದಾರೆ. ಅದೇ ಇದು ಎಂದು ಅವರು ಟೀಕಾಪ್ರಹಾರ ನಡೆಸಿದರು.

ಸಮರ್ಥವಾಗಿ ದುಡ್ಡು ಹೊಡೆಯುವ ಕಾರ್ಯಕ್ರಮಗಳನ್ನಷ್ಟೇ ಕಾಂಗ್ರೆಸ್ಸಿನವರು ಹಾಕಿಕೊಳ್ಳುತ್ತಿದ್ದಾರೆ. ಅದೇ ಮುತುವರ್ಜಿಯನ್ನು ಜನರ ಬಗ್ಗೆ ತೂರಿಸಿದ್ದಿದ್ದರೆ ಬೇಕಾದಷ್ಟು ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಬಹುದಿತ್ತು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸದ್ಯದ ಪರಿಸ್ಥಿತಿಯಲ್ಲಿ 16867.63 ಮೆಗಾವ್ಯಾಟ್ ವಿದ್ಯುತ್ ಅನ್ನು ಇವತ್ತೂ ಉತ್ಪಾದನೆ ಮಾಡಬಹುದು. ಜಲಾಶಯಗಳಲ್ಲಿ ನಿರೀಕ್ಷಿತ ನೀರು ಸಂಗ್ರಹ ಇಲ್ಲದಿರುವುದರಿಂದ ಮೊದಲಿಗಿಂತ ಅರ್ಧದಷ್ಟು ಜಲ ವಿದ್ಯುತ್ತನ್ನೇ ಮಾಡಲಿ. ಆದರೆ, ಇವರು ಉತ್ಪಾದನೆ ಮಾಡುತ್ತಿಲ್ಲ, ಮಾಡುವುದೂ ಇಲ್ಲ. ಇಂತಹ ಬರಗಾಲದ ನಡುವೆಯೂ ಉತ್ಪಾದನೆ ಮಾಡಲು ಸಮಸ್ಯೆ ಇಲ್ಲ. ಗ್ಯಾರಂಟಿಗಳ ಜಪ ಮಾಡಿಕೊಂಡು ವಿದ್ಯುತ್‌ ಉತ್ಪಾನೆ ನಿರ್ಲಕ್ಷ್ಯ ಮಾಡಿದರು. ಗೃಹಜ್ಯೋತಿ ಕೊಡುತ್ತಿದ್ದೇವೆ, ಕೊನೆಪಕ್ಷ ಆಗಲಾದರೂ ಅವರು ಉತ್ಪಾದನೆಯತ್ತ ಗಮನ ಕೊಡಬೇಕಿತ್ತು. ಕಮೀಷನ್‌ ದುರಾಸೆಯಿಂದ ಅದನ್ನೂ ಮಾಡಲಿಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಮಾತಿಗೆ ಮುಂಚೆ ಕಮೀಷನ್, ಪರ್ಸಂಟೇಜ್, ವರ್ಗಾವಣೆ ಧಂದೆ ಮಾಡಿಕೊಂಡು ಕೂತಿದ್ದಾರೆ ಕಾಂಗ್ರೆಸ್‌ ನವರು. ಇನ್ನೊಂದು ತಿಂಗಳು ಕಳೆದರೆ ರಾಜ್ಯದ ರೈತರ ಪರಿಸ್ಥಿತಿ ಮತ್ತೂ ಬಿಗಡಾಯಿಸುತ್ತದೆ. ಸಾಲ ಕೊಟ್ಟವರು ಮನೆ ಹತ್ತಿರ ಬರುತ್ತಾರೆ. ವಿದ್ಯುತ್ ಕ್ಷಾಮ ಮತ್ತಷ್ಟು ತೀವ್ರವಾಗಲಿದೆ. ಇವರು ನೋಡಿದರೆ ವರುಷದ ಕೂಳಿಗೆ ಎಳ್ಳೂನೀರು ಬಿಟ್ಟು ಹರುಷದ ಕೂಳಿನ ಗ್ಯಾರಂಟಿ ಮಾದರಿಯನ್ನು ಇಡೀ ದೇಶಕ್ಕೆ ಬೃಹದೀಕರಿಸಿ ವಿಸ್ತರಣೆ ಮಾಡುತ್ತಿದ್ದಾರೆ. ಮುಂದೆ ಎಲ್ಲಾ ರಾಜ್ಯಗಳಲ್ಲಿಯೂ ಇದೇ ದುಃಸ್ಥಿತಿಯನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್‌ ಹುನ್ನಾರವಾಗಿದೆ.

ಎಲ್ಲ ಕಡೆ ಭ್ರಷ್ಟಾಚಾರದ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಐದೇ ತಿಂಗಳಲ್ಲಿ ಈ ಸತ್ಯಹರಿಶ್ಚಂದ್ರ ರ ಸರಕಾರ ಹೇಗೆ ನಡೆಯುತ್ತಿದೆ ಎಂದು ಇವರು ತೋರಿಸ್ತಾ ಇದ್ದಾರೆ. ಹಿಂದೆ ಬಿಜೆಪಿಯವರು ಮಾಡಿದ ಪಾಪದ ಫಲಕ್ಕೆ ರಾಜ್ಯಕ್ಕೆ ವಿದ್ಯುತ್ ಕೊರತೆ ಎದುರಾಗಿದೆ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಪುಣ್ಯದ ಫಲದಿಂದ ಅಧಿಕಾರಕ್ಕೆ ಬಂದರಲ್ಲ, ಐದು ತಿಂಗಳಿಂದ ಇಂಧನ ಇಲಾಖೆಯ ಕಡೆ ಗಮನ ಕೊಡದೆ ಏನು ಮಾಡುತ್ತಿದ್ದರು? ಎಂದು ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಧನ ಇಲಾಖೆಗೆ ಸಂಬಂಧಿಸಿದ ಸಭೆ ನಡೆಸಿದರು. ರಾಜ್ಯದಲ್ಲಿ 15000 ಮೆಗಾವ್ಯಾಟ್ ಕೊರತೆ ಇದೆ, ಖರೀದಿ ಮಾಡ್ತೀವಿ ಎಂದು ಹೇಳಿದ್ದಾರೆ. ಐದು ತಿಂಗಳಿಂದ ಸುಮ್ಮನೆ ಇದ್ದವರು ಈಗ ಹಿಂದಿನ ಸರಕಾರದ ಪಾಪದ ಫಲ ಎಂದು ಹೇಳುತ್ತಿದ್ದಾರೆ. ಅವರದ್ದೇನೋ ಪಾಪದ ಫಲ, ನೀವು ಪುಣ್ಯ ಮಾಡಿದ್ದೀರಲ್ಲ.. ನಿಮ್ಮ ಪುಣ್ಯದ ಫಲವನ್ನು ಜನತೆಗೆ ಕೊಡಬೇಕಲ್ಲಾ‌? ಎಂದು ಮಾಜಿ ಮುಖ್ಯಮಂತ್ರಿಗಳು ಟಾಂಗ್ ನೀಡಿದರು.

ಕಳೆದ ಜೂನ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವಾಗ ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಒಂದಷ್ಟು ಮಾಹಿತಿ ಕೊಡಲು ಮುಂದಾಗಿದ್ದೆ. ಆಗ ಸರಕಾರದವರು ಮಾತಾಡಲು ಅವಕಾಶ ಕೊಡಲಿಲ್ಲ. ಅವತ್ತೇ ನಾನು ಸರಕಾರಕ್ಕೆ ವಿದ್ಯುತ್ ಕೊರತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಲಹೆ ಮಾಡಿದ್ದೆ. ನನ್ನ ಮಾತನ್ನು ಸರಕಾರ ಕೇಳಿಸಿಕೊಳ್ಳಲಿಲ್ಲ. ಈಗ ನೋಡಿದರೆ ಹಿಂದಿನ ಸರಕಾರದ ಕಡೆ ಬೆರಳು ತೋರಿಸುತ್ತಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಜನ ಕಷ್ಟದಲ್ಲಿದ್ದರೆ ಇವರು ಮಜಾ ಮಾಡುತ್ತಿದ್ದಾರೆ!

ಒಂದೆಡೆ ಬರ, ಇನ್ನೊಂದು ಕಡೆ ವಿದ್ಯುತ್ ಕ್ಷಾಮದಿಂದ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಕೊಟ್ಟು ಕಾಪಾಡಿ ಎಂದು ಜನ ಕೇಳುತ್ತಿದ್ದರೆ ಬ್ಲೂ ಎನರ್ಜಿ ಉತ್ಪಾದನೆ ಮಾಡಲು ಒಂದು ಟೀಂ ಕರೆಸಿಕೊಂಡಿದ್ದಾರೆ ಇಂಧನ ಸಚಿವರು. ಸಮುದ್ರದಿಂದ ವಿದ್ಯುತ್ ಉತ್ಪಾದನೆ ಮಾಡಿ, ಬೇಡ ಎಂದವರು ಯಾರು? ಸದ್ಯಕ್ಕೆ ಜನರ ಕಷ್ಟ ಬಗೆಹರಿಸುವ ಕಡೆ ಗಮನ ಕೊಡಿ ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಇಡೀ ರಾಜ್ಯವೇ ಕತ್ತಲೆಯಲ್ಲಿ ಇದ್ದರೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ತಮ್ಮ ಸಚಿವರು, ಅಧಿಕಾರಿಗಳ ಪಟಾಲಂ ಕಟ್ಟಿಕೊಂಡು ಎಳೆಂಟು ಗಂಟೆ ಕ್ರಿಕೆಟ್ ಪಂದ್ಯ ನೋಡಲು ಹೋಗಿದ್ದಾರೆ. ಅಲ್ಲಿ ಇವರೆಲ್ಲ ಮಜಾ ಮಾಡಿಕೊಂಡು ಕೂತಿದ್ದರು. ಇವರು ಯಾವ ದೇಶಕ್ಕೆ ಬೆಂಬಲ ನೀಡಲು ಹೋಗಿದ್ದರು? ಆಸ್ಟ್ರೇಲಿಯಾಕ್ಕಾ? ಅಥವಾ ಪಾಕಿಸ್ತಾನಕ್ಕಾ? ಜನರಿಗೆ ಹೇಳಬೇಕಲ್ಲವೆ? ಭಾರತದ ತಂಡ ಆಡುತ್ತಿದ್ದರೆ, ನಮ್ಮ ತಂಡಕ್ಕೆ ಬೆಂಬಲ ಕೊಡಲು ಹೋಗಿದ್ದಾರೆ ಎಂದು ಭಾವಿಸಬಹುದಿತ್ತು. ಇಂಥ ದುರಿತ ಕಾಲದಲ್ಲಿಯೂ ಇವರಿಗೆ ಎಂಜಾಯ್ ಮಾಡುವ ಮನಃಸ್ಥಿತಿ ಇದೆ. ಅದಕ್ಕೆ ಏನೆಂದು ಹೇಳುವುದು ಎಂದು ಅವರು ಖಾರವಾಗಿ ಉತ್ತರಿಸಿದರು.

ಕೊಳ್ಳೆ ಹೊಡೆಯುವ ಯೋಜನೆಗಳಿಗೆ ವಾತಾವರಣ ಹೇಗೆ ಸೃಷ್ಟಿ ಮಾಡಿಕೊಳ್ಳಬೇಕು ಎನ್ನುವುದು ಸರಕಾರಕ್ಕೆ ಚೆನ್ನಾಗಿ ಗೊತ್ತಿದೆ. ಈಗ ವಿದೇಶದಿಂದ ಕಲ್ಲಿದ್ದಲು ಆಮದು ಮಾಡಿಕೊಳ್ಳುತ್ತೇವೆ ಎನ್ನುತ್ತಿದೆ. ದುಬಾರಿ ಬೆಲೆ ಕೊಟ್ಟಾದರೂ ಖರೀದಿ ಮಾಡುತ್ತವೆ ಎಂದು ಸಚಿವರೊಬ್ಬರು ಹೇಳುತ್ತಾರೆ. ಹಾಗಾದರೆ, ಇಷ್ಟು ದಿನ ಏನು ಮಾಡುತ್ತಿದ್ದಿರಿ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಪಂಪ್ ಸೆಟ್ ಗಳಿಗೆ ಒಂದು ತಾಸು ಕರೆಂಟ್ ಕೂಡ ಸಿಗುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಆದರೆ, ಪ್ರತಿಪಕ್ಷದವರು ಅಂಗಿ ಹರಿದುಕೊಂಡು ಓಡಾಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಾರೆ. ಇನ್ನು ಸ್ವಲ್ಪ ದಿನ ನೋಡೋಣ, ಯಾರು ಬಟ್ಟೆ ಹರಿದುಕೊಂಡು ಓಡಾಡ್ತಾರೆ.

ಹೆಚ್.ಡಿ.ಕುಮಾರಸ್ವಾಮಿ

ಇಂತಹ ಕಷ್ಟ ಕಾಲದಲ್ಲಿಯೂ ಜನರು ಸರಕಾರಕ್ಕೆ ತೆರಿಗೆ ಕಟ್ಟುತ್ತಿದ್ದಾರೆ. ತೆರಿಗೆ ಸಂಗ್ರಹ ಕಡಿಮೆ ಆಗಿಲ್ಲ. ಸರಕಾರದಲ್ಲಿ ಹಣದ ಕೊರತೆ ಆಗಿಲ್ಲ. ಆರು ತಿಂಗಳಿನಿಂದ 79,000 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. ಆದರೆ ಗ್ಯಾರಂಟಿ ಎನ್ನುತ್ತಾ ಜನರ ಮೂತಿಗೆ ತುಪ್ಪ ಸವರುತ್ತಿದೆ ಸರಕಾರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಕ್ಕೆ ಅಗತ್ಯವಾದಷ್ಟು ವಿದ್ಯುತ್‌ ಉತ್ಪಾದನೆ ಮಾಡಿಕೊಳ್ಳುವ ಸಾಮರ್ಥ್ಯ ನಮಗೆ ಇದೆ. 3906.6 ಮೆ.ವ್ಯಾ. ಜಲ ವಿದ್ಯುತ್, 5020 ಮೆ.ವ್ಯಾ. ಉಷ್ಣ ವಿದ್ಯುತ್, 2050 ಮೆ.ವ್ಯಾ. ಖಾಸಗಿ ಕಂಪನಿಗಳ ವಿದ್ಯುತ್‌ ಸೇರಿದಂತೆ ಒಟ್ಟು 9947 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ರಾಜ್ಯಕ್ಕಿದೆ. ಆದರೂ, ಸರಕಾರ ಕೃತಕ ಅಭಾವ ಸೃಷ್ಟಿಸುತ್ತಿದೆ. ವಿದ್ಯುತ್‌ ಹಾಹಾಕಾರ ಉಂಟು ಮಾಡುತ್ತಿದೆ. ಪರ್ಸಂಟೇಜ್ ಹೊಡೆಯಲು ಇದೆಲ್ಲವನ್ನೂ ಮಾಡಲಾಗುತ್ತಿದೆ. ಇನ್ನೂ ಎಷ್ಟು ಅಂತಾ ಕೊಳ್ಳೆ ಹೊಡೆಯುತ್ತೀರಿ, ಸಚಿವ ಜಾರ್ಜ್ ಅವರಿಗೆ ಹಣದ ಕೊರತೆ ಇಲ್ಲ, ಬಹುಶಃ ಹೈಕಮಾಂಡ್ ಇವರಿಂದ ಕಮೀಷನ್‌ ಸಂಗ್ರಹಕ್ಕೆ ಒತ್ತಡ ಹೇರುತ್ತಿರಬೇಕು ಎಂದು ಅವರು ಆರೋಪಿಸಿದರು.

ಡಿಸಿಎಂ ಡಿಕೆಶಿಗೆ ಟಾಂಗ್

‌
ಎಲ್ಲರದ್ದುನ್ನು ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.

ನಾನು ಮಾಹಿತಿ ಇಲ್ಲದೇ ಯಾವ ವಿಚಾರವನ್ನೂ ಚರ್ಚೆ ಮಾಡುವುದಿಲ್ಲ. ಮಾತೆದ್ದರೆ ಬಿಚ್ಚಿಡ್ತೀನಿ ಅಂತಾರಲ್ಲ,
ಅದೇನು ಬಿಚ್ಚಿಡುತ್ತಾರೋ ಬಿಚ್ಚಿಡಲಿ. ನನ್ನದೇನೂ ತಕರಾರು ಇಲ್ಲ. ಅವರು ಬಂಧೀಖಾನೆ ಸಚಿವರಾಗಿ ಕರಿಯರ್‌ ಆರಂಭ ಮಾಡಿದ್ದರು. ಎಷ್ಟಾದರೂ ಅವರು ಅಲ್ಲಿಂದಲೇ ಬಂದವರಲ್ಲವೇ? ಬಿಚ್ವಿಡಲಿ ಬೇಗ, ಅದಕ್ಕೂ ಮೊದಲೇ ಅವರಿಗೆ ಬೇರೆ ಏನಾದರೂ ಆದರೆ ಕಷ್ಟ ಎಂದು ಮಾಜಿ ಮುಖ್ಯಮಂತ್ರಿಗಳು ಟಾಂಗ್‌ ಕೊಟ್ಟರು.

ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ಶಾಸಕರಾದ ಸುರೇಶ್ ಗೌಡ, ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಹಿರಿಯ ಮುಖಂಡ ರಾಜಣ್ಣ ಮುತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags: ckcknewsnowCongresshd kumaraswamyjdsKarnataka electricity crisislootpower
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಪಕ್ಷಾಂತರಕ್ಕೆ ಬ್ರೇಕ್‌ ಹಾಕಿದ ಪಂಚರಾಜ್ಯ ಫಲಿತಾಂಶ

ಐಟಿ ದಾಳಿ; ಅಡಕತ್ತರಿಯಲ್ಲಿ ಆಪರೇಷನ್‌ ಹಸ್ತ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಪೊಲೀಸ್: ಕಳುವು ಮಾಲು ಮಾಲೀಕರಿಗೆ ವಾಪಸ್

ಚಿಕ್ಕಬಳ್ಳಾಪುರ ಪೊಲೀಸ್: ಕಳುವು ಮಾಲು ಮಾಲೀಕರಿಗೆ ವಾಪಸ್

4 years ago
ಚಿಂತಾಮಣಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ

ಚಿಂತಾಮಣಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ