• About
  • Advertise
  • Careers
  • Contact
Saturday, May 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಪತ್ರಕರ್ತರಾಗಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ತುಂಬು ಜೀವನ ನಡೆಸಿದ ನರಸಿಂಹ ಮೂರ್ತಿ ಅವರು ಇನ್ನಿಲ್ಲ

cknewsnow desk by cknewsnow desk
October 26, 2023
in CHIKKABALLAPUR, CKPLUS, KOLAR, STATE
Reading Time: 2 mins read
0
ಪತ್ರಕರ್ತರಾಗಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ತುಂಬು ಜೀವನ ನಡೆಸಿದ ನರಸಿಂಹ ಮೂರ್ತಿ ಅವರು ಇನ್ನಿಲ್ಲ
1.2k
VIEWS
FacebookTwitterWhatsuplinkedinEmail

ಗುಡಿಬಂಡೆಯ ಹಿರಿಯ ಜೀವ, ಚಿಕ್ಕಬಳ್ಳಾಪುರ ಜಿಲ್ಲೆಯ ಅಕ್ಷರ ಭೀಷ್ಮ ಇನ್ನು ನೆನಪು

by GS Bharath Gudibande

ಗುಡಿಬಂಡೆ: ಅವಿಭಜಿತ ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು, ಅರ್ಧ ಶತಮಾನಕ್ಕೂ ಹೆಚ್ಚು ಕಾಲ ವರದಿಗಾರರಾಗಿ ಕರ್ತವ್ಯನಿಷ್ಠೆ ಮೆರೆದವರು, ಗುಡಿಬಂಡೆ ತಾಲೂಕು ಅಭಿವೃದ್ಧಿಗೆ ಅಪಾರ ಕೊಡುಗೆ ಕೊಟ್ಟವರು, ಇತಿಹಾಸಕಾರರು ಹಾಗೂ ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶಿರು ಆಗಿದ್ದ ಎಸ್. ನರಸಿಂಹ ಮೂರ್ತಿ ಅವರು ಇನ್ನಿಲ್ಲ.‌ ಮಾಧ್ಯಮಲೋಕದಲ್ಲಿ ಗುಡಿಬಂಡೆ ನರಸಿಂಹಮೂರ್ತಿ ಎಂದೇ ಅವರು ಖ್ಯಾತರು.

ಅವರಿಗೆ 87 ವರ್ಷ ವಯಸ್ಸಾಗಿತ್ತು. ಪತ್ರಕರ್ತರಾಗಿ ತುಂಬು ಜೀವನ ನಡೆಸಿದ ಅವರು ಪುತ್ರ ಸ.ನ.ನಾಗೇಂದ್ರ ಅವರು ಸೇರಿ ಇಬ್ಬರು ಪುತ್ರರು, ಮೂವರು ಪುತ್ರಿಯರು, ಅಪಾರ ಬಂಧು ಬಳಗ, ಹಿತೈಷಿಗಳನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಗುಡಿಬಂಡೆಯ ಬ್ರಾಹ್ಮಣರ ರುದ್ರಭೂಮಿಯಲ್ಲಿ ನೆರವೇರಿತು.

ಇಂದು ಬೆಳಗ್ಗೆ ಆರು ಗಂಟೆ ಸುಮಾರಿಗೆ ವಿಧಿವಶರಾದ ನರಸಿಂಹಮೂರ್ತಿ ಅವರು 1938 ರಲ್ಲಿ ಜನಿಸಿದ್ದರು. ʼಸಂಯುಕ್ತ ಕರ್ನಾಟಕʼ ಪತ್ರಿಕೆಯ ಗುಡಿಬಂಡೆ ತಾಲೂಕು ವರದಿಗಾರರಾಗಿ ಅವರು ತಮ್ಮ ಜೀವನದ ಕೊನೆವರೆಗೂ ಕೆಲಸ ಮಾಡಿದ್ದರು. ಕಾರ್ಯನಿರತ ಪತ್ರಕರ್ತರಾಗಿಯೇ ಅವರು ತಮ್ಮ ಬದುಕನ್ನು ಅಂತ್ಯಗೊಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಅತ್ಯಂತ ಹಿರಿಯ ಪತ್ರಕರ್ತರಾಗಿದ್ದ ಗುಡಿಬಂಡೆಯ ನರಸಿಂಹಮೂರ್ತಿ ಅವರು ಪತ್ರಿಕಾ ರಂಗದಲ್ಲಿ ಸುಮಾರು ಆರು ದಶಕ ಕಾಲ ಸೇವೆ ಸಲ್ಲಿಸಿದ್ದಾರೆ. 1960ರಿಂದ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಕ್ರಿಯಾಶೀಲ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದ ಅವರು, ಬಹಳ ಹಿಂದುಳಿದಿದ್ದ ಗುಡಿಬಂಡೆ ತಾಲೂಕಿನ ಅಭಿವೃದ್ಧಿಗೆ ಬಹುವಾಗಿ ಶ್ರಮಿಸಿದ್ದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ, ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಕಸಾಪ ವತಿಯಿಂದ 2013ರಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ಸಮ್ಮೇಳನಾಧ್ಯಕ್ಷರಾಗಿದ್ದರು. ಐತಿಹಾಸಿಕ ಹಿನ್ನೆಲೆಯುಳ್ಳ ತ್ರಿಮತಾಚಾರ್ಯ ಗಾಯತ್ರಿ ಮಂದಿರದ ಅಭಿವೃದ್ದಿಗಾಗಿ ಶ್ರಮಿಸಿದ್ದರು.

ಅಲ್ಲದೆ, ಅವರು ಗುಡಿಬಂಡೆಯ ಐತಿಹಾಸಿಕ ಸುರಸದ್ಮಗಿರಿ ಕೋಟೆ ನಿರ್ಮಾತೃ ಹಾವಳಿ ಭೈರೆಗೌಡರ ರಾಜಪುರೋಹಿತ ವಂಶದ ಕುಡಿ. ಗುಡಿಬಂಡೆಯ ಇತಿಹಾಸಕ್ಕೆ ಸಂಬಂಧಿಸಿ ಸಾಕಷ್ಟು ಸಂಶೋಧನೆ, ವಿಷಯ ಸಂಗ್ರಹಣೆ ಮಾಡಿದ್ದಾರೆ. ಅಮೂಲ್ಯ ತಾಳೆಗರಿಗಳನ್ನು ಶೇಖರಿಸಿಟ್ಟಿದ್ದಾರೆ.

ಅಂತಿಮ ನಮನ

ನರಸಿಂಹಮೂರ್ತಿ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಜಯರಾಮ್, ಬಾಲಕೃಷ್ಣ, ದಯಾಸಾಗರ್,‌ ಕೃಷ್ಣಪ್ಪ, ತಾಲೂಕು ಘಟಕದ ಬಾಲಾಜಿ, ಮಂಜುನಾಥ್, ಶ್ರೀನಾಥ್, ರಾಜಶೇಖರ್, ರಾಜೇಶ್, ನವೀನ್, ಪ.ಪಂ. ಸದಸ್ಯರು, ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಅಂತಿಮ ನಮನ ಅರ್ಪಿಸಿದರು.

ನರಸಿಂಹಮೂರ್ತಿಗಳ ಸೇವೆ ಸ್ಮರಿಸಿದ ಪತ್ರಕರ್ತರು

ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ನರಸಿಂಹಮೂರ್ತಿ ಅವರನ್ನು ಸ್ಮರಿಸಲಾಯಿತು. ಅವರ ಸೇವೆ ಇತರರಿಗೆ ಸ್ಪೂರ್ತಿಯಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಜಯರಾಮ್ ಹೇಳಿದರು.

ನರಸಿಂಹ ಮೂರ್ತಿ ಅವರು ತಮ್ಮ ವೃತ್ತಿ ಜೀವನದಲ್ಲಿ ವೃತ್ತಿ ಪಾವತ್ರ್ಯತೆಯನ್ನು ಕಾಪಾಡಿಕೊಂಡು ಹಂಸಕ್ಷೀರ ನ್ಯಾಯದಂತೆ ಕಾರ್ಯ ನಿರ್ವಹಿಸಿದ್ದರು.ಅವರು ಹೊಸ ತಲೆಮಾರಿನ ಪತ್ರಕರ್ತರಿಗೆ ಆದರ್ಶಪ್ರಾಯರಾಗಿದ್ದಾರೆ ಎಂದಿದ್ದಾರೆ.

ಹಿರಿಯ ಪತ್ರಕರ್ತ, ಸಾಹಿತಿ ಟಿ.ಎಸ್.ನಾಗೇಂದ್ರ ಬಾಬು, ಸಿ.ಬಾಲಕೃಷ್ಣ ಹಿರಿಯ ಪತ್ರಕರ್ತ ದಯಾಸಾಗರ್ ಮುಂತಾದವರು ಮಾತನಾಡಿದರು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಖಜಾಂಚಿಗಳಾದ ಎಂ.ಕೃಷ್ಣಪ್ಪ, ಕೆ.ಎಸ್ ನಾರಾಯಣಸ್ವಾಮಿ, ಪತ್ರಿಕಾ ವರದಿಗಾರರಾದ ಸಿ.ವಿ ವೆಂಕಟೇಶ್, ಗಗನ್, ಕೆ.ಎಂ.ಮುನಿಕೃಷ್ಣ, ಪತ್ರಕರ್ತರ ಭವನದ ಮೇಲ್ವಿಚಾರಕ ಟಿ.ಎನ್.ವೆಂಕಟಚಲಪತಿ ಹಾಜರಿದ್ದರು.

ಶ್ರದ್ಧಾಂಜಲಿ ಸಭೆಗೂ ಮುನ್ನ ನರಸಿಂಹಮೂರ್ತಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಎರಡು ನಿಮಿಷ ಮೌನಾಚಾರಣೆ ಮಾಡಲಾಯಿತು.

ಅವಿಭಜಿತ ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು, ಸಂಯುಕ್ತ ಕರ್ನಾಟಕ ಪತ್ರಿಕೆಯ ಗುಡಿಬಂಡೆ ತಾಲೂಕು ವರದಿಗಾರರು ಆಗಿದ್ದ ಹಿರಿಯರು, ಶ್ರೀ ನರಸಿಂಹಮೂರ್ತಿ ಅವರು ಆಗಲಿದ್ದಾರೆ. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. pic.twitter.com/fkPUSQptf6

— cknewsnow.com (@cknewsnow) October 22, 2023

ನರಸಿಂಹಮೂರ್ತಿ ಅವರಿಗೆ ಶ್ರೀ ಲಕ್ಷ್ಮಿ ಆದಿನಾರಾಯಣ ಸ್ವಾಮಿ ಬ್ರಾಹ್ಮಣ ಸೇವಾ ಸಂಘದ ಪದಾಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು. ಸಂಘದ ಅಧ್ಯಕ್ಷ ಎ.ರಾಮಚಂದ್ರ ರಾವ್, ಉಪಾಧ್ಯಕ್ಷ ಸಿ.ಎನ್.ದಕ್ಷಿಣಾಮೂರ್ತಿ , ನಿರ್ದೇಶಕರಾದ ಮಂಕಾಲ ಜ್ವಾಲಾ ಪ್ರಸಾದ್ ಶರ್ಮ, ಸಿ.ಎಂ.ನಾರಾಯಣ್ ರಾವ್, ಸಿ.ಪಿ. ರಾಘವೇಂದ್ರ ಮುಂತಾದವರು ಅಗಲಿದ ಹಿರಿಯ ಜೀವಕ್ಕೆ ನಮನ ಸಲ್ಲಿಸಿದರು.

ನರಸಿಂಹಮೂರ್ತಿ ಅವರು 40 ವರ್ಷ ಹೆಚ್ಚು ಕಾಲ ಎಲ್ಲೋಡು ಶ್ರೀ ಲಕ್ಷ್ಮಿ ಆದಿನಾರಾಯಣ ಸ್ವಾಮಿ ಬ್ರಾಹ್ಮಣ ಸೇವಾ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಸಂಘದ ಕಷ್ಟದ ದಿನಗಳಲ್ಲಿ ಸಂಘವನ್ನು ಉಳಿಸಿ ಮುನ್ನಡೆಸಿದ್ದಾರೆ ಎಂದು ಅವರೆಲ್ಲರೂ ಸ್ಮರಿಸಿದ್ದಾರೆ.

ನನ್ನ ಮೊದಲ ಸಂಪಾದಕರು, ಹಿರಿಯ ಪತ್ರಕರ್ತರು, ಸಂಯುಕ್ತ ಕರ್ನಾಟಕ ಪತ್ರಿಕೆಯ ಗುಡಿಬಂಡೆ ತಾಲೂಕು ವರದಿಗಾರರು, ಪೂಜ್ಯರಾದ ಶ್ರೀ ನರಸಿಂಹಮೂರ್ತಿ ಅವರು ನಮ್ಮನ್ನು ಆಗಲಿದ್ದಾರೆ. ಅವರಿಗೆ ಭಕ್ತಿಪೂರ್ಣ ಶ್ರದ್ಧಾಂಜಲಿ.
ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ.
ಓಂ ಶಾಂತಿ.. pic.twitter.com/N6xTy0QzWv

— Channakrishna PK (@pkchannakrishna) October 22, 2023

Tags: chikkaballapurckcknewsnowgudibandejournalistkolarNarasimha Murthyno more
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ಬುದ್ಧಿ, ಪ್ರಜ್ಞೆ, ಸಾಮಾನ್ಯ ಜ್ಞಾನ ಎಂದ ಡಿಕೆಶಿಗೆ ತೀಕ್ಷ್ಣ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ; ಹೃದಯವನ್ನೇ ಕೊರಳಾಗಿಸಿಕೊಂಡು ಹಾಡಿದ ಗಂಧರ್ವ

ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ; ಹೃದಯವನ್ನೇ ಕೊರಳಾಗಿಸಿಕೊಂಡು ಹಾಡಿದ ಗಂಧರ್ವ

5 years ago
ರಾಜ್ಯದಲ್ಲಿ ಏಳು ಮಂದಿಗೆ ಬ್ರಿಟೀಷ್ ಮೂಲದ ರೂಪಾಂತರಿ ಕೊರೊನಾ; ಪ್ರತಿ ಸರಕಾರಿ ಆಸ್ಪತ್ರೆಗೆ ಆಯುಷ್‌ ವೈದ್ಯರ ನೇಮಕಕ್ಕೆ ನಿರ್ಧರಿಸಿದ ಸರಕಾರ

ರಾಜ್ಯದಲ್ಲಿ ಏಳು ಮಂದಿಗೆ ಬ್ರಿಟೀಷ್ ಮೂಲದ ರೂಪಾಂತರಿ ಕೊರೊನಾ; ಪ್ರತಿ ಸರಕಾರಿ ಆಸ್ಪತ್ರೆಗೆ ಆಯುಷ್‌ ವೈದ್ಯರ ನೇಮಕಕ್ಕೆ ನಿರ್ಧರಿಸಿದ ಸರಕಾರ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ