• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸ್ಥಳ, ಸಮಯ, ದಿನ ಫಿಕ್ಸ್‌ ಮಾಡಿ: ಡಿಸಿಎಂ ಡಿಕೆಶಿ ಬಹಿರಂಗ ಚರ್ಚೆ ಸವಾಲ್ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

cknewsnow desk by cknewsnow desk
October 26, 2023
in NATION, POLITICS, STATE
Reading Time: 2 mins read
0
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು
917
VIEWS
FacebookTwitterWhatsuplinkedinEmail

ನೈಸ್ ಯೋಜನೆಗೆ ನೋಟಿಫೈ ಆಗಿದ್ದ 8 ಎಕರೆ ಭೂಮಿ ಕಬಳಿಸಿದ ಡಿ.ಕೆ.ಬ್ರದರ್ಸ್; ತಾವರೆಕೆರೆಯ ಒಂದೇ ಕಂಪೊಂಡಿನ 900 ಎಕರೆ ಭೂಮಿಯಲ್ಲಿ 350 ಎಕರೆ ಯಾರದು?

ರಾಮನಗರ ಹೆಸರು ಬದಲಿಸಿದರೆ ಆಮರಣಾಂತ ಉಪವಾಸ; ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ಯಾರಿಗೆ ದಕ್ಷಣಿ ಕೊಡುತ್ತೀರಿ ಎಂದು ಟಾಂಗ್

ಬೆಂಗಳೂರು: ಬಹಿರಂಗ ಚರ್ಚೆಗೆ ಬರುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾಕಿರುವ ಸವಾಲನ್ನು ಸ್ವೀಕರಿಸಿದ್ದೇನೆ. ವಿಧಾನಸಭೆಯಲ್ಲಿಯೇ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು ಅವರು.

ಹೆಚ್ಚು ಟಿಆರ್ ಪಿ ಇರುವ ಚಾನೆಲ್ ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಬಹಿರಂಗ ಸವಾಲು ಹಾಕಿದ್ದಾರೆ. ಅದು ಹಾಗಿರಲಿ, ರಾಮನಗರ ಜಿಲ್ಲೆಯ ಅಭಿವೃದ್ಧಿಯನ್ನು ಯಾರು ಮಾಡಿದರು ಎಂಬ ವಿಷಯವೂ ಸೇರಿದಂತೆ; ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬೆಂಗಳೂರು ಸುತ್ತ ಇರುವ ಭೂಮಿಗಳನ್ನು ಯಾರು ಕೊಳ್ಳೆ ಹೊಡೆಯಲು ಹೊರಟಿದ್ದಾರೆ ಎಂಬ ಬಗ್ಗೆಯೂ ಬಹಿರಂಗ ಚರ್ಚೆ ಸದನದಲ್ಲಿಯೇ ನಡೆಯಲಿ. ದಾಖಲೆ ಸಮೇತ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಘೋಷಿಸಿದರು ಮಾಜಿ ಮುಖ್ಯಮಂತ್ರಿಗಳು.

ಕನಕಪುರ ಸೇರಿ ರಾಮನಗರ ಜಿಲ್ಲೆಯ ಭೂಮಿಯನ್ನು ಲೂಟಿ ಮಾಡಲು ಬೆಂಗಳೂರು ದಕ್ಷಿಣ ಜಿಲ್ಲೆ ಎನ್ನುತ್ತಿದ್ದಾರೆ. ಯಾರಿಗೆ ದಕ್ಷಣಿಯಾಗಿ ಕೊಡಲು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡುತ್ತಿದ್ದಿರಿ? ಎಂದು ಅವರು ನೇರ ಪ್ರಶ್ನೆ ಕೇಳಿದ್ದಾರೆ.

ನೈಸ್ ಭೂಮಿ ಕಬಳಿಸಿದ ಡಿಕೆ ಬ್ರದರ್ಸ್

ನೈಸ್ ಜಮೀನನ್ನು ಅಕ್ರಮವಾಗಿ ಡಿ.ಕೆ.ಸುರೇಶ್ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಹೊಸಕೆರೆ‌ಹಳ್ಳಿ ಬಳಿ 8 ಎಕರೆ ನೈಸ್ ಗೆ ಅಂತ ನೋಟಿಫಿಕೇಶನ್ ಆಗಿತ್ತು ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಈ ಜಮೀನು ಡಿ.ಕೆ.ಸುರೇಶ್ ಖರೀದಿ ಮಾಡಿದ್ದಾರೆ. ಭಾಗ್ಯಲಕ್ಷಿ, ಅಮಾಸೆಗೌಡ ಎಂಬುವವರ ಹೆಸರಲ್ಲಿ ಈ ಭೂಮಿ ಇತ್ತು. ಇದನ್ನು ನೈಸ್ ಯೋಜನೆಗೆ ನೋಟಿಫೈ ಮಾಡಲಾಗಿತ್ತು. ಇದನ್ನು ಡಿ.ಕೆ.ಸುರೇಶ್ ಯಾವ ಆಧಾರದಲ್ಲಿ ಖರೀದಿ ಮಾಡುತ್ತಾರೆ ಎನ್ನುವುದು ನನ್ನ ಪ್ರಶ್ನೆ. ಅಧಿಕಾರಿಗಳು ಈ ಪ್ರಕರಣದಲ್ಲಿ ಶಾಮೀಲಾಗಿ ಡಿ.ಕೆ.ಸುರೇಶ್ ಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ 8 ಎಕರೆ ಜಾಗವನ್ನು ಶೋಭಾ ಡೆವಲಪರ್ ಗೆ ಕೊಡಲಾಗಿದೆ. ಅಲ್ಲಿ ಈಗಾಗಲೇ ಅಪಾರ್ಟ್ ಮೆಂಟ್ ಬಂದಿದೆ. ಇದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪಾತ್ರವೂ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಈ ಎಂಟು ಎಕರೆ ಕರ್ಮಕಾಂಡದ ಬಗ್ಗೆ ನನ್ನ ಬಳಿ ದಾಖಲೆ ಇದೆ. ಈ ಬಗ್ಗೆಯೂ ಬಹಿರಂಗವಾಗಿ ಚರ್ಚೆ ಮಾಡೋಣ. ಅಧಿವೇಶನ ಕರೆಯಲಿ. ಚರ್ಚೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಅವರು ಸವಾಲು ಹಾಕಿದರು.

ತಾವರೆಕೆರೆ ಬಳಿ ಒಂದೇ ಕಂಪೊಂಡಿನಲ್ಲಿ 900 ಎಕರೆಯಷ್ಟು ಭೂಮಿ ಇದೆ. ಅದರಲ್ಲಿ 350 ಎಕರೆ ಯಾರದ್ದು? ಆ ಭೂಮಿಗೆ ಅಪ್ಪ ಅಮ್ಮ ಯಾರು? ಅಂತಹ ಪಾಪದ ಭೂಮಿಗಳ ಬೆಲೆ ಹೆಚ್ಚಿಸಿಕೊಂಡು ದುಡ್ಡು ಮಾಡುವುದಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ರಚನೆ ಮಾಡಬೇಕಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇಡೀ ಕರ್ನಾಟಕದವರು ಬೆಂಗಳೂರಿನಲ್ಲಿ ಇದ್ದಾರೆ. ಬೆಂಗಳೂರು ನಗರವು ಕರ್ನಾಟಕದ ಒಂದು ಭಾಗ. ನಮ್ಮ ಬ್ರ್ಯಾಂಡ್ ಬೆಂಗಳೂರು ಎನ್ನುವರಿಗೆ ಈ ನಗರವೇನು ಪಿತ್ರಾರ್ಜಿತ ಆಸ್ತಿಯೇ? ನಮ್ಮನ್ನು ವಲಸಿಗರು ಎನ್ನುವ ಇವರಿಗೆ ಅದು ಅರ್ಥ ಆಗಬೇಕು. ಡಿಕೆಶಿ ಬೆಂಗಳೂರಿನವರು ಅಲ್ಲ. ಅವರ ಮೂಲ ಬೆಂಗಳೂರು ಅಲ್ಲವೇ ಅಲ್ಲ ಎಂದು ಅವರು ಕಿಡಿಕಾರಿದರು.

ನನ್ನ ಬಳಿಯೂ ಸಾಕಷ್ಟು ಸರಕಿದೆ, ಉತ್ತರಿಸುತ್ತೇನೆ

ವಿಜಯದಶಮಿ ಆಸುಪಾಸಿನಲ್ಲಿ ಸಿಎಂ ಮತ್ತೆ ಡಿಸಿಎಂ ವೈಯಕ್ತಿಕವಾಗಿ ನನ್ನ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಅದಕ್ಕೆ ಸಂಬಂಧಪಟ್ಟಂತೆ ದಾಖಲೆ ಸಮೇತ ಮಾತಾಡಲು ಬಂದಿದ್ದೇನೆ. ಟಿಆರ್ ಪಿ ಹೆಚ್ಚು ಇರುವ ಚಾನಲ್ ನಲ್ಲಿ ನಾನು ಚರ್ಚೆಗೆ ಸಿದ್ದ ಅಂದಿದ್ದಾರೆ ಡಿಸಿಎಂ. ಟಿಆರ್ ಪಿ ಇರುವ ಚಾನೆಲ್ ಇರಲಿ, ವಿಧಾನಸಭೆಯಲ್ಲಿಯೇ ಚರ್ಚೆಗೆ ನಾನು ಸಿದ್ಧನಿದ್ದೇನೆ. ಅವರು ಚರ್ಚೆಗೆ ಬರಲಿ. ನಾನು ಕೂಡ ಸವಾಲನ್ನು ಸ್ವೀಕಾರ ಮಾಡ್ತೀನಿ. ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದರು.

ನಾನು ಬಿಡದಿಯಲ್ಲಿ ಖರೀದಿ‌ ಮಾಡಿರುವ 44 ಎಕರೆ ಜಾಗ ರಾಜಕೀಯಕ್ಕೆ ಬರುವ ಮುನ್ನ ತೆಗೆದುಕೊಂಡಿದ್ದು. ಸಿನಿಮಾದಿಂದ ಬಂದ ಹಣದಲ್ಲಿ 4 ಸಾವಿರದಿಂದ 12 ಸಾವಿರ ಹಣ ಕೊಟ್ಟು ಖರೀದಿ ಮಾಡಿದ್ದ ಭೂಮಿ ಅದು. ಮಾಲ್ ಆರಂಭ ಮಾಡಿ ಬಿಸಿನೆಸ್ ಪ್ಯಾಶನ್ ಅಂತ ನಾನು ಹಣ‌ ಸಂಪಾದನೆ ಮಾಡಿಲ್ಲ ಎಂದು ಅವರು ಹೇಳಿದರು.

1,400 ಕೋಟಿ ರೂ. ಹೇಗೆ ಸಂಪಾದನೆ ಮಾಡಿದಿರಿ?

ಡಿ.ಕೆ.ಶಿವಕುಮಾರ್ ಅವರೇ 1,400 ಕೋಟಿ ರೂಪಾಯಿ ಹೇಗೆ ಸಂಪಾದನೆ ಮಾಡಿದಿರಿ ಎಂದು ಹೇಳಿ. ನನಗೆ ನೀವು ಹೇಳುವುದು ಬೇಡ, ಕನಕಪುರದ ಜನತೆಗಾದರೂ ಹೇಳಿ, 1,400 ಕೋಟಿ ರೂಪಾಯಿ ‌ಖರೀದಿ ಹೇಗೆ ಮಾಡಿದ್ದು ಅಂತ ತಿಳಿಸಿ. ನಿಮ್ಮ ಮತದಾರರಿಗಾದರೂ ಸತ್ಯ ಹೇಳಿ ಎಂದು ಅವರು ಒತ್ತಾಯ ಮಾಡಿದರು.

ದೊಡ್ಡ ಆಲದಹಳ್ಳಿಯಲ್ಲಿ ಹೇಗೆ ಆಸ್ತಿ ಸಂಪಾದನೆ ಮಾಡಿದ್ದೀರಾ ಎಂಬುದು ನನಗೆ ಗೊತ್ತಿದೆ. 8 ಬಾರಿ ಶಾಸಕರಾಗಿ 1,400 ಕೋಟಿ ರೂಪಾಯಿ ಹೇಗೆ ಸಂಪಾದನೆ ‌ಮಾಡಿದಿರಿ ಎಂಬುದನ್ನು ದಯಮಾಡಿ ಹೇಳಿ. ಕೇಳಿ ತಿಳಿದುಕೊಳ್ಳುವ ಹಂಬಲ ನನ್ನದು.

ಹೆಚ್.ಡಿ.ಕುಮಾರಸ್ವಾಮಿ

ಸಮಯ, ಸ್ಥಳ, ದಿನಾಂಕ ನಿಗದಿ ಮಾಡಿ

ಕನಕಪುರ ಯಾರಿಂದ ಹೇಗೆ ಅಭಿವೃದ್ಧಿ ಹೊಂದಿದೆ ಎಂಬ ಚರ್ಚೆಗೂ ನಾನು ಸಿದ್ಧನಿದ್ದೇನೆ. ಅವರ ಯಾವುದೇ ಸವಾಲಿಗೂ ನಾನು ರೆಡಿ. ವಿಧಾನಸೌಧದಲ್ಲಿ ಚರ್ಚೆ ಮಾಡೋಕೆ‌ ನಾನು ಸಿದ್ದ. ಸಮಯ, ಸ್ಥಳ‌‌ ಎಲ್ಲಾ ಡಿ.ಕೆ.ಶಿವಕುಮಾರ್ ಫಿಕ್ಸ್ ಮಾಡಲಿ, ನಾನು ಚರ್ಚೆಗೆ ಬರುತ್ತೇನೆ.

ನಾವು ಅವರಂತೆ ತಲೆ ಒಡೆಯುವ ಕೆಲಸ ಮಾಡಿಲ್ಲ. ಬೇರೆ ಜಮೀನಿಗೆ ಫೆನ್ಸಿಂಗ್ ಹಾಕಿಲ್ಲ. ಅದೆಲ್ಲ ಹೆಂಗೆ ಅಂತ ಡಿ.ಕೆ.ಶಿವಕುಮಾರ್ ಅಣ್ಣನ್ನೇ ಕೇಳಿ ಎಂದು ಕಾಲೆಳೆದ ಅವರು; ಶಾಂತಿನಗರ ಹೌಸಿಂಗ್ ಸೊಸೈಟಿ ಅಸಲಿ ನಕಲಿ ಮಾಡಿದ್ದು ಯಾರು?‌ ಡಿಕೆಶಿ ಯಾರನ್ನು ಬೇಕಾದರೂ ಕೊಂಡುಕೊಳ್ತಾರೆ ಎಂದರು ಅವರು.

ಬ್ರ್ಯಾಂಡ್ ಬೆಂಗಳೂರು ಎನ್ನುತ್ತಾರೆ. ಕೆರೆ-ಕಟ್ಟೆ ನುಂಗಿ ಹಾಕಿದ್ದಾರೆ. ಯಾವ ಯಾವ ಕೆರೆ ನುಂಗಿದ್ದೀರಾ ಎನ್ನುವ ಬಗ್ಗೆ ಪಟ್ಟಿ ಬೇಕಾ? ಯಾವ ಮುಖ ಇಟ್ಟುಕೊಂಡು ಕೆಂಪೇಗೌಡರ ಹೆಸರು ಹೇಳ್ತೀರಾ. ಈಗ ಕನಕಪುರ, ರಾಮನಗರ ಕೆರೆಗಳನ್ನು ಮುಗಿಸಲು ಹೊರಟಿದ್ದೀರಾ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ರಾಮನಗರ ಹೆಸರು ಬದಲಿಸಿದರೆ ಆಮರಣಾಂತ ಉಪವಾಸ

ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಿದರೆ ಆಮರಣಾಂತ ಉಪವಾಸ ಸತ್ಯಾಗ್ರಹ ಕೂರುತ್ತೇನೆ. ನನ್ನ ಆರೋಗ್ಯ ಚೆನ್ನಾಗಿಲ್ಲ. ನನ್ನ ಜೀವ ಹೋದರೂ ಪರವಾಗಿಲ್ಲ, ಜಿಲ್ಲೆಯ ಹೆಸರು ಬದಲಾವಣೆಗೆ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ನಾನು ಹುಟ್ಟಿದ್ದು ಹಾಸನ ಜಿಲ್ಲೆ ಇರಬಹುದು. ಆದರೆ ನನ್ನ ಜೀವನ ಅಂತ್ಯ ಆಗುವುದು ರಾಮನಗರದಲ್ಲೇ.‌ ನನ್ನ ಹೋರಾಟಕ್ಕೆ ರಾಮನಗರದ ಜನರ ಸಹಕಾರ ಕೇಳ್ತೀನಿ. ಈ ಹೋರಾಟದಲ್ಲಿ ಅವರು ಭಾಗಿ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಮನವಿ ಮಾಡಿದರು.

ನಾನು ರಾಮನಗರ ಜಿಲ್ಲೆ ಮಾಡಿದಾಗ ಇವರು ವಿರೋಧ‌ ಮಾಡಿರಲಿಲ್ಲ. 17 ವರ್ಷದಿಂದ ವಿರೋಧ ಮಾಡಿರಲಿಲ್ಲ. ಯಾಕೆ ವಿರೋಧ ಮಾಡಿರಲಿಲ್ಲ? ಇದ್ದಕಿದ್ದ ಹಾಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಲ್ಲಿಂದ ಹುಟ್ಟಿ ಬಂತು? ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ ಎಂದು ಎಂದು ಅವರು ತಿಳಿಸಿದರು.

ರಾಜೀವ್ ಗಾಂಧಿ ವಿವಿ ರಾಮನಗರಕ್ಕೆ ಹೋಗಿದ್ದಕ್ಕೆ ಇವರು ಬಹಳ ವಿರೋಧ ಮಾಡಿದರು. ಕನಕಪುರಕ್ಕೆ ಮೆಡಿಕಲ್ ಕಾಲೇಜ್ ಬೇಕು ಎಂದರು. ಮೊದಲು ಕೊಡಲಾಗಿದ್ದ ಮೆಡಿಕಲ್ ಕಾಲೇಜ್ ಚಿಕ್ಕಬಳ್ಳಾಪುರಕ್ಕೆ ಹೋಯಿತು. ಮತ್ತೆ 450 ಕೋಟಿ‌ ರೂಪಾಯಿ ಹಣ ಇಟ್ಟು ಹೊಸ ಮೆಡಿಕಲ್ ಕಾಲೇಜ್ ಗೆ 100 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೆ ಎಂದ ಅವರು, ನಾನು ‌ಫ್ರೀ ಇದ್ದೀನಿ. ಡಿ.ಕೆ.ಶಿವಕುಮಾರ್ ಯಾವಾಗ ಬೇಕಾದರೂ ಸಮಯ ನಿಗದಿ ಮಾಡಲಿ. ಅವರು ಹೇಳಿದ ಸಮಯಕ್ಕೆ ಚರ್ಚೆಗೆ ನಾನು ಸಿದ್ದ ಎಂದು ಅವರು ಸವಾಲು ಹಾಕಿದರು.

ಮಾಗಡಿಯ ಮಾಜಿ ಶಾಸಕ ಆರ್ ಮಂಜುನಾಥ್, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಎ.ಪಿ.ರಂಗನಾಥ್, ಜಯಮುತ್ತು ಮುಂತಾದವರು ಉಪಸ್ಥಿತರಿದ್ದರು.

Tags: ckcknewsnowDK Shivakumardk sureshhd kumaraswamykarnatakaland grabenewsnice road
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಆಕ್ರೋಶಕ್ಕೆ ಮಣಿದ ಸರಕಾರ; ರೈತರಿಗೆ 5 ತಾಸು ನಿರಂತರ ವಿದ್ಯುತ್‌

ವಿದ್ಯುತ್‌ ಖರೀದಿಯಲ್ಲಿ ಅಕ್ರಮ ನಡೆದಿಲ್ಲ

Leave a Reply Cancel reply

Your email address will not be published. Required fields are marked *

Recommended

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮಕ್ಕೆ ಸಿಎಂಗೇ ಆಹ್ವಾನ ಇಲ್ಲ! ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

1 year ago
ಭಾರತ ಐಕ್ಯತಾ ಯಾತ್ರೆಗೆ ಕಾರಣ ಕೊಟ್ಟ ರಾಹುಲ್‌ ಗಾಂಧಿ

ಭಾರತ ಐಕ್ಯತಾ ಯಾತ್ರೆಗೆ ಕಾರಣ ಕೊಟ್ಟ ರಾಹುಲ್‌ ಗಾಂಧಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ