• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಮಹಾರಾಷ್ಟ್ರ ಮಾದರಿಯಲ್ಲಿ ಕಾಂಗ್ರೆಸ್ ಸರಕಾರ ಪತನ, ಡಿಕೆಶಿ ಶೀಘ್ರವೇ ಮಾಜಿ ಮಂತ್ರಿ ಆಗಲಿದ್ದಾರೆ..

cknewsnow desk by cknewsnow desk
October 30, 2023
in EDITORS'S PICKS, NATION, POLITICS, STATE
Reading Time: 1 min read
0
ಮಹಾರಾಷ್ಟ್ರ ಮಾದರಿಯಲ್ಲಿ ಕಾಂಗ್ರೆಸ್ ಸರಕಾರ ಪತನ, ಡಿಕೆಶಿ ಶೀಘ್ರವೇ ಮಾಜಿ ಮಂತ್ರಿ ಆಗಲಿದ್ದಾರೆ..
1.3k
VIEWS
FacebookTwitterWhatsuplinkedinEmail

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭವಿಷ್ಯ

ಬೆಳಗಾವಿ: ಅತಿ ಶೀಘ್ರದಲ್ಲಿಯೇ ಡಿ.ಕೆ. ಶಿವಕುಮಾರ್ ಮಾಜಿ ಮಂತ್ರಿ ಆಗುತ್ತಾರೆ ಎಂದು ಮಾಜಿ ಸಚಿವ ರಮೇಶ್ ‌ಜಾರಕಿಹೊಳಿ‌ ಭವಿಷ್ಯ ನುಡಿದಿದ್ದಾರೆ.

ಅಲ್ಲದೆ, ಮಹಾರಾಷ್ಟ್ರದ ಶಿವಸೇನೆ, ಕಾಂಗ್ರೆಸ್, ಎನ್ ಸಿಪಿ ಸರಕಾರದ ಮಾದರಿಯಲ್ಲಿ ಈ ಸರಕಾರವು ಪತನವಾಗಲಿದೆ. ಬೆಳಗಾವಿ ರಾಜಕಾರಣದಿಂದಲೇ ಈ ಸರಕಾರ ಹೋಗುತ್ತದೆ ಎಂದು ಅವರು ‌ಗುಡುಗಿದ್ದಾರೆ.

ಬೆಳಗಾವಿಯಲ್ಲಿ ಇಂದು ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆದ ಅವರು; ಹೆಚ್‌.ಡಿ.ಕುಮಾರಸ್ವಾಮಿ ಅವರ ಆತ್ಮೀಯನಾಗಿರುವುದಕ್ಕೆ ಡಿಕೆಶಿ ನನ್ನ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ನಿತ್ಯ ಡಿಕೆಶಿ ‌ನಾಟಕ ಮಂಡಳಿ ಆಪರೇಷನ್ ಕಮಲ ಮಾಡುತ್ತಿರುವ ಬಗ್ಗೆ ಮಾತನಾಡುತ್ತಿದೆ. ಡಿಕೆಶಿ ‌ಸೊಕ್ಕಿನ ಧೋರಣೆಗೆ ಬೇಸತ್ತು ಮೈತ್ರಿ ಸರಕಾರ ಕೆಡವಿದ್ದೇವೆ. ಆಗ ನಮಗೆ ಕಾಂಗ್ರೆಸ್ ‌ಮೇಲೆ ಸಿಟ್ಟಿರಲಿಲ್ಲ, ಡಿಕೆಶಿ ‌ವಿರುದ್ಧ ಸಿಟ್ಟಿಗೆ ಸರಕಾರವನ್ನು ಕೆಡವಿದೆವು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೈತ್ರಿ ಸರಕಾರ ಬಿದ್ದಾಗ ಬಿಜೆಪಿಯೇನೂ ನಮ್ಮನ್ನು ಆಪರೇಷನ್ ‌ಮಾಡಿರಲಿಲ್ಲ. ನಾವೇ ಮೈತ್ರಿ ಸರಕಾರ ತೆಗೆದು ‌ಬಿಜೆಪಿಗೆ ಸೇರಿದೆವು. ಈಗ ಬಿಜೆಪಿ ಹೆಸರು ಕೆಡಿಸಲು‌ ಡಿಕೆಶಿ ನಾಟಕ‌ ಮಂಡಳಿ ಹೆಣಗಾಡುತ್ತಿದೆ. ಬಿಜೆಪಿ ಹೆಸರು ಕೆಡಿಸಲು ಡಿಕೆಶಿ ನಾಟಕ ಮಂಡಳಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಅವರು ದೂರಿದರು.

ಸುಳ್ಳು ‌ಗ್ಯಾರಂಟಿ‌ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ‌ಎಲ್ಲ ರಂಗದಲ್ಲೂ ಫೇಲ್ ಆಗಿದೆ. ಸರಕಾರ ಪತನ ಆಗುವುದು‌ ಬೇಡ, ಮುಂದುವರೆಯಲಿ. ಕಾಂಗ್ರೆಸ್ ಶಾಸಕರೇ ಸರಕಾರದ ವಿರುದ್ಧ ಮಾತನಾಡುತ್ತಿದ್ದಾರೆ ಈಗ. ಡಿಕೆಶಿ ‌ಇರುವ ಸರಕಾರ ಯಾವಾಗಲೂ ಡೇಂಜರ್. ಡಿಕೆಶಿ ‌ಅಧಿಕಾರ ಇದ್ದಾಗ ಒಂದು ರೀತಿ ಇರುತ್ತಾರೆ, ಪ್ರತಿಪಕ್ಷದಲ್ಲಿದ್ದಾಗ ಒಂದು ರೀತಿ ಇರುತ್ತಾರೆ ಎಂದು ಅವರು ಟಾಂಗ್ ಕೊಟ್ಟರು.

ಡಿಕೆಶಿಯೇ ಸಿಡಿ ಮಾಸ್ಟರ್

ಡಿಕೆಶಿಯೇ ‌ಸಿಡಿ ಮಾಸ್ಟರ್, ಅದೇ ಅವರ ಶಕ್ತಿ ಎಂದ ರಮೇಶ್ ಜಾರಕಿಹೊಳಿ, ಸಿಡಿ ಇಟ್ಟುಕೊಂಡೇ ಡಿಕೆಶಿ ‌ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು.

ಸಿಡಿ ಇಟ್ಟುಕೊಂಡು ನೆಲಮಂಗಲ ‌ಮಾಜಿ ಶಾಸಕ ನಾಗರಾಜ್‌ಗೆ ಡಿಕೆಶಿ ‌ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಸ್ಪೋಟಕ‌ ಹೇಳಿಕೆ ನೀಡಿದ ರಮೇಶ್ ‌ಜಾರಕಿಹೊಳಿ;
ನಿನ್ನ ಹಾಗೂ ರಮೇಶ್ ‌ಜಾರಕಿಹೊಳಿದು ಬಹಳಷ್ಟಾಗಿದೆ. ಎಸ್ಐಟಿ ಕ್ಯಾನ್ಸಲ್‌ ಮಾಡಿ ಮರು ತನಿಖೆಗೆ ಆದೇಶಿಸುವ ಬೆದರಿಕೆ ಹಾಕುತ್ತಿದ್ದಾರೆ. ಎಷ್ಟೇ‌ ಸಿಡಿ ಬಂದರೂ ನಾನು ಹೆದರಲ್ಲ. ಮರು‌ ತನಿಖೆ ಆದರೆ ಸಿಬಿಐನಿಂದ ಆಗಲಿ ಎಂದು‌ ನಾನು ಕೋರ್ಟ್ ಮೊರೆ ಹೋಗುವೆ ಎಂದು ಅವರು ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು.

ವಿನಾಕಾರಣ ನನ್ನ ಮೇಲೆ ಡಿಕೆಶಿ ಹಗೆತನ ಸಾಧಿಸುತ್ತಿದ್ದಾರೆ. ಹೆಚ್‌ಡಿಕೆ‌ ಜತೆಗೆ ಆಪ್ತನಾಗುತ್ತಿರುವುದಕ್ಕೆ‌ ಡಿಕೆಶಿ ‌ನನ್ನ ವಿರುದ್ಧ ಹುನ್ನಾರ ಮಾಡುತ್ತಿದ್ದಾರೆ ಎಂದ ಅವರು, ಒಂದೇ‌ ರಾತ್ರಿಯಲ್ಲಿ ಬೆಳವಣಿಗೆ ‌ಆಗಿ ಸರಕಾರ ಪತನವಾಗಲಿದೆ ಎಂದರು.

ಆಪರೇಷನ್ ‌ಕಮಲ ಮಾಡಲ್ಲ, ಅಷ್ಟು ‌ಸಣ್ಣ ಮಾತು‌ ನಾನು ಮಾತನಾಡಲ್ಲ. ಆದರೆ, ಡಿಕೆಶಿ ‌ಶೀಘ್ರವೇ ಮಾಜಿ ಆಗಲಿದ್ದಾರೆ ಎಂದ ಅವರು; ಅವರು ಜೈಲಿಗೆ ಹೋಗ್ತಾರಾ? ಎಂಬ ಬಗ್ಗೆ ನಾನು ಮಾತನಾಡಲ್ಲ ಎಂದರು.

Tags: belagavickcknewsnowCongressDK ShivakumarkarnatakaPoliticsramesh jarkiholi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸುಳ್ಳು ಹರಡಬೇಡಿ; ಸಿದ್ದರಾಮಯ್ಯಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ತರಾಟೆ

ಸುಳ್ಳು ಹರಡಬೇಡಿ; ಸಿದ್ದರಾಮಯ್ಯಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ತರಾಟೆ

Leave a Reply Cancel reply

Your email address will not be published. Required fields are marked *

Recommended

ರಿಷಿ ಸುನಕ್ ಬ್ರಿಟನ್ ಪ್ರಧಾನಿ

ರಿಷಿ ಸುನಕ್ ಬ್ರಿಟನ್ ಪ್ರಧಾನಿ

3 years ago
ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಅಡಿಗಲ್ಲು; ಬಿಟಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು

ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಅಡಿಗಲ್ಲು; ಬಿಟಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು

5 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ