• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಗುತ್ತಿಗೆದಾರರ ಮನೆಯಲ್ಲಿ ಸಿಕ್ಕ 102 ಕೋಟಿ ರೂಪಾಯಿ ಕಾಂಗ್ರೆಸ್ ಪಕ್ಷದ್ದು!!

cknewsnow desk by cknewsnow desk
November 1, 2023
in NATION, POLITICS, STATE
Reading Time: 1 min read
0
ಕಾಟನ್ ಬಾಕ್ಸ್ ಗಳಲ್ಲಿ ಕುರುಡು ಕಾಂಚಾಣ!
1k
VIEWS
FacebookTwitterWhatsuplinkedinEmail

ಹಣದಿಂದ ಸರಕಾರದಲ್ಲಿ ಆಂತರಿಕ ಕಲಹ; ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಬಳಿ ಇತ್ತೀಚೆಗೆ ಸಿಕ್ಕಿದ 102 ಕೋಟಿ ರೂಪಾಯಿ ಹಣಕ್ಕೆ ಸಂಬಂಧಿಸಿ ನೈತಿಕ ಹೊಣೆ ಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ನೀಡಬೇಕು. ಈ ಹಣ ಯಾರದು? ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ರಾಜ್ಯಕ್ಕೆ ಬಂದಿದ್ದಾರೆ. ಇವರಿಬ್ಬರು ಬಂದ ತಕ್ಷಣ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ ಗುರಿ ನಿಶ್ಚಯ ಮಾಡಲು ಅವರು ಬಂದಿದ್ದಾರೆಂದು ಮಾತನಾಡುತ್ತಾರೆ. ಪಂಚರಾಜ್ಯಗಳಿಗೆ ಚುನಾವಣೆ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ಗುರಿ ನಿಗದಿಪಡಿಸಲು ಬಂದಿದ್ದಾರೆ ಎಂದು ಜನರು ಮಾತನಾಡುತ್ತಿದ್ದು, ಇದಕ್ಕೆ ಕಾಂಗ್ರೆಸ್ಸಿಗರು ಉತ್ತರ ಕೊಡಬೇಕೆಂದು ಆಗ್ರಹಿಸಿದರು.

ಅವರು ಬೆಂಗಳೂರಿಗೆ ಬಂದು ದೆಹಲಿಗೆ ವಾಪಸ್ ಹೋದ ಕೆಲ ದಿನಗಳಲ್ಲಿ ಇಬ್ಬರು ಗುತ್ತಿಗೆದಾರರ ಮನೆಗಳಲ್ಲಿ 102 ಕೋಟಿ ರೂ. ಹಣ ಸಿಕ್ಕಿತ್ತು. ಅದು ಕಾಂಗ್ರೆಸ್ಸಿನದೇ ಹಣ, ಸಿಎಂ, ಡಿಸಿಎಂ ಅವರೇ ಸಂಗ್ರಹಿಸಿದ ಹಣ, ಅದನ್ನು ಪಂಚರಾಜ್ಯಗಳ ಚುನಾವಣೆಗೆ ಸಂಗ್ರಹಿಸಿ ಕಳಿಸಲು ಇಡಲಾಗಿತ್ತು ಎಂಬುದು ಜಗಜ್ಜಾಹೀರಾಗಿದೆ ಎಂದು ಅವರು ಆರೋಪಿಸಿದರು.

ಎನ್.ರವಿಕುಮಾರ್
ಇವರು ಕನ್ನಡದ ಸಂಪತ್ತನ್ನು ರಕ್ಷಿಸುವುದಿಲ್ಲ

ಕನ್ನಡದ ಜಲ, ನೆಲ, ಭಾಷೆಯನ್ನು ರಕ್ಷಿಸುವುದಿಲ್ಲ. ಅದರ ಬಗ್ಗೆ ಮಾತನಾಡುವ ನೈತಿಕ ಸ್ಥೈರ್ಯ ಈ ಸರಕಾರಕ್ಕೆ ಇಲ್ಲ ಎಂದು ರವಿಕುಮಾರ್ ಟೀಕಿಸಿದರು.

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ. ಈಗ 2600 ಕ್ಯೂಸೆಕ್ಸ್ ನೀರನ್ನು ಪ್ರತಿದಿನ ಬಿಡಲಾಗುತ್ತಿದೆ. ಸುಪ್ರೀಂ ಕೋರ್ಟ್, ಪ್ರಾಧಿಕಾರದ ಮುಂದೆ ಯಾಕೆ ನೀರು ಬಿಡಲು ಅಸಾಧ್ಯ ಎಂದು ಸಮರ್ಪಕ ವಾದ ಮಂಡಿಸಲು ಇವರಿಂದ ಆಗುತ್ತಿಲ್ಲ. ತಮಿಳುನಾಡಿಗೆ ಸೋಲುವುದೇ ಇವರ ಕೆಲಸ ಎಂದು ಆಕ್ಷೇಪಿಸಿದರು.ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಪಾದಯಾತ್ರೆ ಮಾಡಿದರು. ಮೇಕೆದಾಟು ವಿಚಾರ ಈಗ ಮಾತನಾಡುತ್ತಿಲ್ಲ ಯಾಕೆ? ತಮಿಳುನಾಡು ಒಪ್ಪಿಗೆ ಕೊಡಬೇಕೆಂಬ ಯೋಚನೆಯಿಂದ ಈಗ ಸಿಎಂ, ಡಿಸಿಎಂ ತೆಪ್ಪಗೆ ಇದ್ದಾರೆ. ಇದರ ಬಗ್ಗೆ ಮಾತನಾಡಿ ಎಂದು ಆಗ್ರಹಿಸಿದರು.

ಈಗ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಬಂದಿದ್ದಾರೆ. ಸಚಿವ ಸ್ಥಾನ ಸಿಗದೆ ಬೇಸರ ವ್ಯಕ್ತಪಡಿಸುವವರನ್ನು ಸಮಾಧಾನ ಪಡಿಸಲು ನಿಗಮ, ಮಂಡಳಿ ಅಧ್ಯಕ್ಷತೆಗೆ ಶಾಸಕರನ್ನು ನೇಮಿಸಲು ಇವರು ಬಂದಿದ್ದಾರೆ. ಬಹುಶಃ ನಿಗಮಗಳಿಗೆ ಇಷ್ಟು ಎಂದು ಗುರಿ ನಿರ್ಧರಿಸಲು ಬಂದಿರಬೇಕು. ಇದನ್ನು ಸ್ಪಷ್ಟಪಡಿಸಿ ಎಂದು ಸವಾಲೆಸೆದರು.

ಸರಕಾರದಲ್ಲಿ ಭುಗಿಲೆದ್ದ ಆಂತರಿಕ ಕಲಹಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಕಲಹ ಭುಗಿಲೆದ್ದಿದೆ. ಇದನ್ನು ಶಮನ ಮಾಡಲು ಡಿ.ಕೆ.ಶಿವಕುಮಾರ್ ಅವರು ಬೆಳಗಾವಿಗೆ ಹೋಗುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಪರಮೇಶ್ವರರ ಮನೆಗೆ ಹೋಗುತ್ತಾರೆ. ಬೆಳಗಾವಿಗೆ ಹೋದ ಸಂದರ್ಭದಲ್ಲಿ ಒಬ್ಬ ಶಾಸಕರೂ ಡಿ.ಕೆ.ಶಿವಕುಮಾರ್ ಅವರ ಸ್ವಾಗತಕ್ಕೆ ಬಂದಿಲ್ಲ. ಸಿದ್ದರಾಮಯ್ಯ ಅವರು ಗೃಹ ಸಚಿವ ಪರಮೇಶ್ವರರ ಮನೆಗೆ ಹೋದಾಗ ಡಿ.ಕೆ.ಶಿವಕುಮಾರವರು ಬೆಂಗಳೂರಿನಲ್ಲೇ ಇದ್ದರೂ ಅವರನ್ನು ಊಟಕ್ಕೆ ಕರೆದಿಲ್ಲ. ಹೀಗೆ ಆಂತರಿಕ ಕಲಹ, ಗುದ್ದಾಟ ಮುಗಿಲು ಮುಟ್ಟಿದೆ ಎಂದು ಆರೋಪಿಸಿದರು.

ನಮ್ಮ ರಮೇಶ ಜಾರಕಿಹೊಳಿ ಅವರು ಹೇಳಿದ್ದು ಸತ್ಯವಾಗಿದೆ. ಈ ಸರ್ಕಾರ ಏನು ಬೇಕಾದರೂ ಆಗಬಹುದೆಂದು ಸರಿಯಾಗಿಯೇ ಹೇಳಿದ್ದಾರೆ. ಸಿ.ಡಿ.ಪ್ರಕರಣದ ಸಂಬಂಧ ತನಿಖೆ ನಡೆಸಲಿ. ರಮೇಶ್ ಜಾರಕಿಹೊಳಿ ಅವರು ಹೇಳಿದ್ದರಲ್ಲಿ ಸತ್ಯವಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಬೆಳಗಾವಿ, ಚಿಕ್ಕೋಡಿ ಕರ್ನಾಟಕದ ಅವಿಭಾಜ್ಯ ಅಂಗ. ಕರ್ನಾಟಕವನ್ನು ಭಾಗ ಮಾಡುವ ಪ್ರಶ್ನೆಯೇ ಇಲ್ಲ. ಇದು ದಶಕಗಳ ಹಿಂದೆಯೇ ನಿರ್ಧಾರವಾದ ವಿಚಾರ. ಮಹಾರಾಷ್ಟ್ರದವರ ಲಾಭಕ್ಕಾಗಿ ಆಗಿಂದಾಗ್ಗೆ ಗಲಾಟೆ ಮಾಡುತ್ತಾರೆ, ಬಸ್ ಸುಟ್ಟು ಹಾಕುತ್ತಾರೆ.ಗಡಿ ಮೀರಿ ನಮ್ಮ ರಾಜ್ಯದ ಒಳಗಡೆ ಪ್ರವೇಶಿಸುತ್ತಾರೆ. ಪೊಲೀಸರ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಕರ್ನಾಟಕ ಅಖಂಡವಾಗಿ ಇರಬೇಕೆಂಬುದು ಬಿಜೆಪಿ ನಿರ್ಧಾರ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು

Tags: bjpbribeckcknewsnowCongress moneycorruptionelection moneyit raids in Karnatakapersantage
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

Recommended

ಕೆಮಿಸ್ಟ್ರಿಯಲ್ಲಿ ನಾರಿಯರಿಬ್ಬರು ಗೆದ್ದರು ನೊಬೆಲ್

ಕೆಮಿಸ್ಟ್ರಿಯಲ್ಲಿ ನಾರಿಯರಿಬ್ಬರು ಗೆದ್ದರು ನೊಬೆಲ್

5 years ago
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ