• About
  • Advertise
  • Careers
  • Contact
Thursday, May 15, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಸಿದ್ದರಾಮಯ್ಯ ಕೊಟ್ಟ ಪಂಚ್’ಗೆ ಡಿಕೆಶಿ ಬಣ ವಿಲವಿಲ

P K Channakrishna by P K Channakrishna
November 2, 2023
in CKPLUS, CKPRESS, EDITORS'S PICKS, NATION, NEWS & VIEWS, POLITICS, STATE
Reading Time: 1 min read
0
ಸಿದ್ದರಾಮಯ್ಯ ಕೊಟ್ಟ ಪಂಚ್’ಗೆ ಡಿಕೆಶಿ ಬಣ ವಿಲವಿಲ
1k
VIEWS
FacebookTwitterWhatsuplinkedinEmail

ಸದ್ಯಕ್ಕೆ ನಾನೇ ಸಿಎಂ, ಐದು ವರ್ಷ ಸಿಎಂ ಆಗಿ ನಾನೇ ಮುಂದುವರಿಯುತ್ತೇನೆ ಎಂದ ಸಿದ್ದು; ಹೈಕಮಾಂಡ್ ಎಚ್ಚರಿಕೆಗೆ ಸ್ವತಃ ಮುಖ್ಯಮಂತ್ರಿಯಿಂದಲೇ ಎಳ್ಳುನೀರು

ಬೆಂಗಳೂರು: ಶತಾಯಗತಾಯ ಸಿಎಂ ಆಗಲೇಬೇಕು ಎಂದು ಹೊರಟಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶಾಕ್ ಕೊಟ್ಟಿರುವ ಸಿದ್ದರಾಮಯ್ಯ ಅವರು; ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಗುಡುಗಿದ್ದಾರೆ.

ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಿದ್ದರಾಮಯ್ಯ ಅವರು ಈ ಹೇಳಿಕೆ ನೀಡುತ್ತಿದ್ದಂತೆಯೇ ಡಿಕೆಶಿ ಪಾಳೆಯ ಬೆಚ್ಚಿಬಿದ್ದಿದೆ. ಹೇಗಾದರೂ ಮಾಡಿ ಆಪರೇಷನ್ ಹಸ್ತ ಮಾಡಿ ಸಿಎಂ ಆಗಲೇಬೇಕು ಎಂದು ಪಣ ತೊಟ್ಟಿದ್ದ ಡಿಸಿಎಂ ಆಘಾತಕ್ಕೆ ಒಳಗಾಗಿದ್ದು, ಅವರ ಹಿಂಬಾಲಕರು ದಿಗ್ಭ್ರಮೆಗೊಂಡಿದ್ದಾರೆ.

ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಯಾರು ಮಾತನಾಡುವಂತಿಲ್ಲ. ನಿಮ್ಮ ನಿಮ್ಮ ಬೆಂಬಲಿಗರಿಗೆ ನೀವೇ ತಾಕೀತು ಮಾಡಿ ಎಂದು ಹೈಕಮಾಂಡ್ ಕಟ್ಟಪ್ಪಣೆ ಮಾಡಿದ ಮರುದಿನವೇ ಸಿದ್ದರಾಮಯ್ಯ ಅವರು ಐದು ವರ್ಷ ನಾನೇ ಸಿಎಂ ಎಂದು ಗುಡುಗಿದ್ದಾರೆ.

ಅಲ್ಲಿಗೆ, ನಿನ್ನೆಯ ದಿನ ಪಂಚತಾರಾ ಹೋಟೆಲಿನಲ್ಲಿ ಗೌಪ್ಯ ಸಭೆ ನಡೆಸಿ ಶಿಸ್ತಿನ ಪಾಠ ಮಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಂದೀಪ್ ಸುರ್ಜೆಕಾಲ ಅವರ ಕಟ್ಟಪ್ಪಣೆಯನ್ನು ಸ್ವತಃ ಸಿಎಂ ಅವರೇ ಕಾಲ ಕಸದಂತೆ ಪಕ್ಕಕ್ಕೆ ತೂರಿದ್ದಾರೆ.

ಹೈಕಮಾಂಡ್ ಎಚ್ಚರಿಕೆ ನಡುವೆಯೂ ಸಿದ್ದರಾಮಯ್ಯ ಅವರ ಇಂಥ ಹೇಳಿಕೆ ನೀಡಿದ್ದೇಕೆ? ಇದರಲ್ಲಿಯೂ ದಿಲ್ಲಿ ಕುಳಗಳ ಕೈವಾಡ ಇದೆಯಾ? ಎನ್ನುವ ಅನುಮಾನ ಡಿಕೆಶಿ ಬಣವನ್ನು ಕಾಡುತ್ತಿದೆ.ಸಿಎಂ ಕೊಟ್ಟಿರುವ ಹೇಳಿಕೆ ಕಾಂಗ್ರೆಸ್ ನಲ್ಲಿ ತೀವ್ರ ತಳಮಳ ಉಂಟು ಮಾಡಿದೆ.

ಸಿದ್ದರಾಮಯ್ಯ ಅವರ ಪಾಳೆಯದಲ್ಲಿ ಯುದ್ಧ ಗೆದ್ದ ಸಂಭ್ರಮ ಇದ್ದರೆ, ಡಿ.ಕೆ.ಶಿವಕುಮಾರ್ ಅವರ ಗುಂಪಿನಲ್ಲಿ ಮುಂದೇನು? ಎನ್ನುವ ಗಾಢ ಚಿಂತೆ ಶುರುವಾಗಿದೆ. ಸಿಎಂ ವಿರುದ್ಧ ಹೈಕಮಾಂಡ್ ಗೆ ದೂರು ನೀಡುವುದಾ? ಅಥವಾ ರಾಜಕೀಯವಾಗಿ ಬೇರೆ ಹೆಜ್ಜೆ ಇಡುವುದಾ? ಎನ್ನುವ ಚರ್ಚೆ ಶುರುವಾಗಿದೆ ಎಂದು ಉನ್ನತ ಮೂಲವೊಂದು ತಿಳಿಸಿದೆ.

ಇನ್ನೊಂದೆಡೆ, ಅಧಿಕಾರ ಕೈ ಚೆಲ್ಲುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ಗುಂಪು ಗುಟುರು ಹಾಕುತ್ತಿದೆ. ನ್ಯಾಯಯುತವಾಗಿ ಡಿಕೆಶಿ ಅವರಿಗೆ ಸಿಗಬೇಕಿದ್ದ ಅಧಿಕಾರವನ್ನು ಸಿದ್ದರಾಮಯ್ಯ ಹೈಜಾಕ್ ಮಾಡಿದ್ದಾರೆ ಎಂದು ಆ ಬಣ ಭುಸುಗುಡುತ್ತಿದೆ.

ಅಧಿಕಾರ ಹಂಚಿಕೆ ವಿಚಾರಕ್ಕೆ ತೆರೆಯೇ?

ಸಿದ್ದರಾಮಯ್ಯ ಅವರ ಹೇಳಿಕೆ ಎರಡೂವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ವಿಚಾರಕ್ಕೆ ತೆರೆ ಎಳೆದಂತೆಯೇ ಆಗಿದೆಯಾ? ಎನ್ನುವ ಚರ್ಚೆ ರಾಜ್ಯ ರಾಜಕೀಯ ವಲಯದಲ್ಲಿ ಶುರುವಾಗಿದೆ. ಅಥವಾ, ಡಿಕೆಶಿ ಅವರಿಗೆ ಸರಕಾರ ನಡೆಸುವಷ್ಟು ವ್ಯವಧಾನ, ತಾಳ್ಮೆ, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಹನೆ ಇಲ್ಲವೆಂಬ ಕಾರಣ ಮುಂದೊಡ್ಡಿ ಕಾಂಗ್ರೆಸ್ ವರಿಷ್ಠ ನಾಯಕರೇ ಸಿದ್ದರಾಮಯ್ಯ ಅವರಿಗೆ ಪೂರ್ಣ ಅವಧಿಯ ಅಧಿಕಾರ ನೀಡಲು ಒಪ್ಪಿದ್ದಾರೆಯೇ ಎನ್ನುವ ಅನುಮಾನ ಕಾಡುತ್ತಿದೆ.

ಸದ್ಯಕ್ಕೆ ಕೈ ಪಾಳೆಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಕೂಲಂಕಶವಾಗಿ ಗಮನಿಸಿದರೆ ಇದೇ ನಿಜ ಎನ್ನುವಂತೆ ಕಾಣುತ್ತಿದೆ.ಹೈಕಮಾಂಡ್ ನಲ್ಲಿಯೇ ಬಣ ರಾಜಕೀಯಹೈಕಮಾಂಡ್ ನಲ್ಲಿಯೇ ಕರ್ನಾಟಕಕ್ಕೆ ಸಂಬಂಧಿಸಿ ಬಣ ರಾಜಕೀಯ ನಡೆಯುತ್ತಿರುವುದು ಗುಟ್ಟಿನ ಸಂಗತಿಯೇನಲ್ಲ.

ಪ್ರಧಾನ ಕಾರ್ಯದರ್ಶಿಗಳ ಪೈಕಿ ಯಾರ ಒಲವು ಯಾರ ಕಡೆಗಿದೆ ಎನ್ನುವುದು, ಗಾಂಧಿ ಕುಟುಂಬದಲ್ಲಿ ಸಿದ್ದರಾಮಯ್ಯ ಪರ ಯಾರು? ಡಿಕೆಶಿ ಪರ ಯಾರು? ಎನ್ನುವ ಸ್ಪಷ್ಟ ಮಾಹಿತಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಇದ್ದೇ ಇದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ. ಇದರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಅವರ ವಿರೋಧಿ ನಿಲುವು ಹೊಂದಿದ್ದರೂ ಅವರ ಮಾತಿಗೆ ಗಾಂಧಿ ಮನೆಯಲ್ಲಿ ಕಿಮ್ಮತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರ ಕೈ ಮೇಲಾಗಿದೆ ಎನ್ನುವ ವರದಿಗಳು ಸತ್ಯಕ್ಕೆ ಹತ್ತಿರವಾಗಿವೆ.

ಹೆಚ್ಚುವರಿ ಡಿಸಿಎಂ ಸೃಷ್ಟಿ ಉದ್ದೇಶ

ಸಿದ್ದರಾಮಯ್ಯ ಅವರು ಅಳೆದುಸುರಿದು ತಮ್ಮ ವಿರೋಧಿಗಳಿಗೆ ವಿಜಯನಗರದಲ್ಲಿ ತಿರುಗೇಟು ಕೊಟ್ಟಿದ್ದಾರೆ. ಅಧಿಕಾರ ಹಂಚಿಕೆಯ ಬಗ್ಗೆ ಡಿಕೆಶಿ ಬಣದಲ್ಲಿ ಶಾಸಕರು ಬಹಿರಂಗವಾಗಿಯೇ ಮಾತನಾಡುತ್ತಿರುವುದು ಅವರಿಗೆ ಇರಿಸುಮುರಿಸು ಉಂಟು ಮಾಡಿದೆ.

ಮೊದಲ ಸಲ ವಿಧಾನಸಭೆ ಪ್ರವೇಶ ಮಾಡಿರುವ ಮಂಡ್ಯ ಶಾಸಕ ರಮೇಶ್ ಗಣಿಗ, ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ ಅವರು ಎರಡೂವರೆ ವರ್ಷದ ನಂತರ ಡಿಕೆಶಿ ಸಿಎಂ ಆಗುತ್ತಾರೆ, ಅವರ ಬೆಂಬಲಿಗ ಶಾಸಕರೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಹೇಳಿದ್ದರು. ಇದು ಸಿದ್ದರಾಮಯ್ಯ ಪಾಳೆಯವನ್ನು ಕೆರಳಿಸಿತ್ತು.

ಈ ತರುಣ ಶಾಸಕರ ಹೇಳಿಕೆಗೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ ಬೆಂಬಲಿಗ ಸಚಿವರು, ಶಾಸಕರು ಸಿಎಂ ಕುರ್ಚಿ ಖಾಲಿ ಇಲ್ಲ. ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ತಿರುಗೇಟು ಕೊಟ್ಟಿದ್ದರು. ಇದು ಎರಡೂ ಬಣಗಳ ನಡುವೆ ನಡುವೆ ಮಾತಿನ ಯುದ್ಧಕ್ಕೆ ಕಾರಣ ಆಗಿತ್ತು. ಒಂದು ಹಂತದಲ್ಲಿ ಸಿಟ್ಟಾದ ಡಿ.ಕೆ.ಶಿವಕುಮಾರ್ ಅವರು, ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಗುಡುಗಿದ್ದರು.

ಡಿಸಿಎಂ ಹುದ್ದೆಗಳ ರಾಜಕೀಯ

ಬಹಳ ದಿನಗಳ ಹಿಂದೆಯೇ ಸಹಕಾರ ಸಚಿವ, ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ ಸಚಿವ ಕೆ.ಎನ್.ರಾಜಣ್ಣ ಇನ್ನೂ ಡಿಸಿಎಂ ಹುದ್ದೆಗಳನ್ನು ಸೃಷ್ಟಿ ಮಾಡಬೇಕು. ಜಾತಿಗೊಬ್ಬರಿಗೆ ಆ ಹುದ್ದೆ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದರು.

ಆಗಲೂ ಸಿಎಂ, ಡಿಸಿಎಂ ಬಣಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಅಷ್ಟಾದರೂ ಸಿದ್ದರಾಮಯ್ಯ ಅವರು, ಸುಮ್ಮನೆ ಇರುವಂತೆ ರಾಜಣ್ಣ ಅವರಿಗೆ ತಾಕೀತು ಮಾಡಲಿಲ್ಲ, ಬದಲಿಗೆ ಡಿಸಿಎಂ ಹುದ್ದೆಗಳನ್ನು ಸೃಷ್ಟಿ ಮಾಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದುಬಿಟ್ಟರು.ಈ ಮಾತು ಕೂಡ ಡಿಕೆಶಿ ಬಣವನ್ನು ಕೆರಳಿಸಿತ್ತು.

ಇನ್ನೊಂದೆಡೆ, ಸತೀಶ್ ಜಾರಕಿಹೊಳಿ ಅವರ ಬಂಡಾಯದ ಬಗ್ಗೆ ಸಿದ್ದರಾಮಯ್ಯ ಬಣ ಮುಗುಮ್ಮಾಗಿ ಇದ್ದರೆ, ಡಿಕೆಶಿ ಬಣ ಕೊತ ಕೊತನೆ ಕುದಿಯುತ್ತಿದೆ.

ಆಪರೇಷನ್ ಕಮಲ ಇಲ್ಲ, ಸರಕಾರ ಸುಭದ್ರತಮ್ಮ ನಾಯಕತ್ವದಲ್ಲಿ ಸರಕಾರ ಸುಭದ್ರವಾಗಿರುತ್ತದೆ. ರಾಜ್ಯದಲ್ಲಿ 5 ವರ್ಷ ನಮ್ಮ ಸರಕಾರ ಸುಭದ್ರವಾಗಿರುತ್ತದೆ. ಬಿಜೆಪಿಯವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಅವರ ಆಪರೇಷನ್ ಕಮಲ ಈ ಬಾರಿ ನಡೆಯುವುದಿಲ್ಲ ಎಂದು ಇದೇ ವೇಳೆ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Tags: ckcknewsnowCongressDK Shivakumarfight for com postkarnatakaPoliticssiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಾಕೀತು

ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಾಕೀತು

Leave a Reply Cancel reply

Your email address will not be published. Required fields are marked *

Recommended

ಕೆಪಿಎಸ್‍ಸಿ ಸದಸ್ಯರಾಗಿ ನೇಮಕಗೊಂಡ ಡಾ.ಬಿ.ಪ್ರಭುದೇವ್; ಅಪ್ಪಟ ಮಣ್ಣಿನ ಮಗನ ಚಿನ್ನದಂಥ ಸಾಧನೆ

ಕೆಪಿಎಸ್‍ಸಿ ಸದಸ್ಯರಾಗಿ ನೇಮಕಗೊಂಡ ಡಾ.ಬಿ.ಪ್ರಭುದೇವ್; ಅಪ್ಪಟ ಮಣ್ಣಿನ ಮಗನ ಚಿನ್ನದಂಥ ಸಾಧನೆ

4 years ago
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರ ಕೊಲೆ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರ ಕೊಲೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ