• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಪತ್ರಕರ್ತರ ನಿವೇಶನಗಳಿಗೆ ಮೀಸಲಿಟ್ಟ ಭೂಮಿಯೇ ಗುಳುಂ!

cknewsnow desk by cknewsnow desk
November 5, 2023
in CHIKKABALLAPUR, KOLAR
Reading Time: 1 min read
0
ಪತ್ರಕರ್ತರ ನಿವೇಶನಗಳಿಗೆ ಮೀಸಲಿಟ್ಟ ಭೂಮಿಯೇ ಗುಳುಂ!
1.1k
VIEWS
FacebookTwitterWhatsuplinkedinEmail

ಹಣವಂತರ ಪಾಲಾದ ಜಾಗ; ಅಧಿಕಾರಿಗಳಿಗೆ ಬೆವರಿಳಿಸಿದ ಪತ್ರಕರ್ತರು, ಎಡಿಎಲ್‌ಆರ್ ಕಚೇರಿಯಲ್ಲಿ ಧರಣಿ

ಬಾಗೇಪಲ್ಲಿ: ಪಟ್ಟಣದ ಪತ್ರಕರ್ತರಿಗೆ ನೀಡಲು ಮೀಸಲಿಟ್ಟಿದ್ದ ಸ್ಥಳವನ್ನು ಶ್ರೀಮಂತರಿಗೆ ನಿಯಮಬಾಹಿರವಾಗಿ ದುರಸ್ಥಿ ಮಾಡಿಕೊಟ್ಟಿರುವುದರಿಂದ ಕೆರಳಿದ ಪತ್ರಕರ್ತರು ಭೂಮಾಪನ ಇಲಾಖೆಯ ಕಚೇರಿ ಮುಂದೆ ಧರಣಿ ಮಾಡಿದ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಪಟ್ಟಣಕ್ಕೆ ಸಮೀಪದ ಸ.ನಂ.44ರಲ್ಲಿ ಪತ್ರಕರ್ತರ ನಿವೇಶನಗಳಿಗೆ ಸ್ಥಳವನ್ನು ಮೀಸಲು ಇಟ್ಟು 2019ರಲ್ಲಿ ಭೂಮಾಪನ ಇಲಾಖೆಯ ಸರ್ವೆಯರ್ ಸ್ಕೆಚ್ ಮಾಡಿಕೊಟ್ಟಿದ್ದು ಅದರಂತೆ ಸರಕಾರದ ನಿಯಮಾವಳಿಗ ಪ್ರಕಾರ ಸರ್ಕಾರದ ಮಟ್ಟದಲ್ಲಿ ನಿವೇಶನಗಳ ಮಂಜೂರಾತಿಗೆ ಪ್ರಕ್ರಿಯೆ ನಡೆಯುತ್ತಿದೆ. ಒಂದಲ್ಲ ಒಂದು ಕುಂಟು ನೆಪ ಮುಂದಿಟ್ಟುಕೊಂಡು ನಿವೇಶನಗಳ ಕಡತವನ್ನು ವಾಪಸ್ಸು ಮಾಡುತ್ತಲೇ ನಾಲ್ಕು ವರ್ಷಗಳನ್ನು ಕಳೆಯಲಾಗಿದೆ.

ಆದರೆ ಸರ್ವೆ ನಂ 44ರಲ್ಲಿ ಕಳೆದ ತಿಂಗಳವರೆಗೂ ಸರಕಾರಿ ಭೂಮಿ ಎಂದು ಬರುತ್ತಿದ್ದ ಪಹಣಿಯಲ್ಲಿ ಇದೀಗ ಏಕಾಏಕಿ ಖಾಸಗಿ ವ್ಯಕ್ತಿಗಳ ಹೆಸರು ಕಾಣಿಸಿಕೊಂಡಿದ್ದು, ಸರ್ವೇ ನಂ.44 ಅನ್ನು ದುರಸ್ಥಿ ಮಾಡಿ ಹೊಸ ನಂಬರ್ ನೀಡಿದ್ದ ಪತ್ರಕರ್ತರ ನಿವೇಶನಗಳಿಗೆ ಸ್ಥಳವೇ ಇಲ್ಲದಂತೆ ಮಾಡಲಾಗಿದೆ.

ಅಧಿಕಾರಿಗಳ ಹಣದಾಹ ಪತ್ರಕರ್ತರ ನಿವೇಶನಗಳ ಕನಸಿನ ಆಸೆಗೆ ಎಳ್ಳುನೀರು ಬಿಟ್ಟಂತಾಗಿದ್ದು, ಇದು ಪತ್ರಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರ ಮಧ್ಯಾಹ್ನವೇ ಎಡಿಎಲ್‌ಆರ್ ಕಚೇರಿಗೆ ಆಗಮಿಸಿದ ಪತ್ರಕರ್ತರು, ತಮಗೆ ತಮಗೆ ಮೀಸಲಿಟ್ಟಿರುವ ಸ್ಥಳವನ್ನು ನಮಗೆ ತೋರಿಸುವಂತೆ ಪಟ್ಟುಹಿಡಿದರು. ಹಣಕ್ಕಾಗಿ ಸರಕಾರಿ ಭೂಮಿಯನ್ನು ಮಾರಾಟ ಮಾಡಿಕೊಳ್ಳಲಾಗಿದೆ ಎಂದು ತರಾಟೆಗೆ ತೆಗೆದುಕೊಂಡರು.

ಎಡಿಎಲ್‌ಆರ್-ಸರ್ವೇಯರ್‌ಗೆ ತರಾಟೆ

ನಮಗೆ ನೀಡಿದ್ದ ಸರ್ವೆ ಸ್ಕೆಚ್ ಬದಲಿಸಿ ರೈತರಲ್ಲದವರಿಗೆ ಕಲ್ಲುಗುಟ್ಟ ಪ್ರದೇಶವನ್ನು ಹಿಡುವಳಿ ಜಮೀನು ಎಂದು ದಾಖಲೆ ಸೃಷ್ಟಿಸಿ ದುರಸ್ಥಿ ಮಾಡಲಾಗಿದೆ. ಮೂಲ ದಾಖಲೆಗಳನ್ನು ತಮಗೆ ಅನುಕೂಲವಾಗುವ ರೀತಿಯಲ್ಲಿ ಸಿದ್ದಪಡಿಸಿಕೊಂಡು ಅತ್ಯಂತ ವ್ಯವಸ್ಥಿತವಾಗಿ ಸರ್ಕಾರಿ ಭೂಮಿಯನ್ನು ಕೋಟ್ಯಾಧೀಶ ವ್ಯಕ್ತಿಗಳಿಗೆ ನೀಡಿದ್ದರ ಹಿಂದೆ ದೊಡ್ಡಮಟ್ಟದಲ್ಲಿ ಹಣದ ವ್ಯವಹಾರ ನಡೆದಿರುವ ಸಾಧ್ಯತೆ ಇದೆ ಎಂದು ಪತ್ರಕರ್ತರು ಅನುಮಾನ ವ್ಯಕ್ತಪಡಿಸಿದರು.

ಈ ಬಗ್ಗೆ ಎಡಿಎಲ್ ಆರ್ ನಾಗಾಂಜನೇಯ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಪತ್ರಕರ್ತರು; ನಮಗೆ ಮೀಸಲಿಟ್ಟ ಸ್ಥಳವನ್ನು ತೋರಿಸುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ರಾತ್ರಿ ಎಂಟು ಗಂಟೆಯವರೆವಿಗೂ ಕಚೇರಿಯಲ್ಲಿಯೇ ಠಿಕಾಣಿ ಹೂಡಿದ್ದರು. ಸೋಮವಾರದವರೆಗೂ ಅನಿರ್ಧಿಷ್ಠ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸೋಮವಾರ ಸಮಸ್ಯೆಗೆ ಪರಿಹಾರದ ಭರವಸೆ

ಈ ಬಗ್ಗೆ ಅನಿರ್ಧಿಷ್ಠ ಧರಣಿ ನಡೆಸುವ ಹಂತದಲ್ಲಿಯೇ ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ದೂರವಾಣಿಯಲ್ಲಿ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ ಅವರೊಂದಿಗೆ ಮಾತನಾಡಿ, ಪತ್ರಕರ್ತರಿಗೆ ಮೀಸಲಿಟ್ಟಿರುವ ಸ್ಥಳವನ್ನು ಸೋಮವಾರ ತೋರಿಸಲಾಗುವುದು. ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ನೀಡಲಾಗುವುದು. ಧರಣಿ ವಾಪಸ್ಸು ತೆಗೆದುಕೊಳ್ಳಿ ಎಂದು ಮನವಿ ಮಾಡಿದ ಹಿನ್ನಲೆ ಹಾಗೂ ದುರಸ್ಥಿಯನ್ನು ರದ್ದುಗೊಳಿಸಲು ಕ್ರಮ ಜರುಗಿಸಲಾಗುವುದು ಎಂದು ಎಡಿಎಲ್‌ಆರ್ ನೀಡಿದ ಭರವಸೆ ಹಿನ್ನಲೆಯಲ್ಲಿ ಒಟ್ಟಿಗೆ ಚರ್ಚಿಸಿ ಪತ್ರಕರ್ತರು ಧರಣಿಯನ್ನು ಹಿಂದಕ್ಕೆ ಪಡೆದುಕೊಂಡರು.

ಧರಣಿ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ವೆಂಕಟೇಶ್, ಗೌರವಾಧ್ಯಕ್ಷ ಬಿ.ಆರ್.ಕೃಷ್ಣ, ಖಜಾಂಚಿ ಜಿ.ರಾಮಕೃಷ್ಣ, ಉಪಾಧ್ಯಕ್ಷ ಸಿದ್ದೀಕ್, ಪತ್ರಕರ್ತರಾದ ಬಿ.ಟಿ.ಚಂದ್ರಶೇಖರರೆಡ್ಡಿ, ಜಿ.ಎಂ.ಗುರುಮೂರ್ತಿ, ಮಣಿಕಂಠ, ಎಸ್.ಎಸ್.ಶ್ರೀನಿವಾಸ್, ಎಸ್.ಶಂಕರರಾವ್, ಅಬ್ದುಲ್ ಕರೀಂಸಾಬ್, ಬಿ.ಎಸ್.ಸುರೇಶ್, ಮುನೀರ್, ಗೋಪಾಲ ರೆಡ್ಡಿ, ಮಂಜುನಾಥ್, ರವೀಂದ್ರ, ರಂಗನಾಥ್, ಸೂರಿ ಮತ್ತಿತರರು ಇದ್ದರು.

Tags: bagepallichikkaballapurackcknewsnowjournalists protestland grab
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ನೂತನ ಕಚೇರಿ ಲೋಕಾರ್ಪಣೆ; ಪಕ್ಷವನ್ನು ಮರಳಿ ಆಧಿಕಾರಕ್ಕೆ ತರಲು ಪಣತೊಟ್ಟ ಮುಖಂಡರು

ಕರ್ನಾಟಕ ಮಾದರಿ ಎಂದರೆ ತಾಯಂದಿರ ಮುತ್ತೈದೆತನಕ್ಕೇ ಕುತ್ತು ತರುವುದಾ?

Leave a Reply Cancel reply

Your email address will not be published. Required fields are marked *

Recommended

ಕೆಲಸ ಮಾಡಲು ಆಗದಿದ್ದರೆ ಮತ್ಯಾಕೆ ಭರವಸೆ ಕೊಡ್ತೀರಿ?

ಕೆಲಸ ಮಾಡಲು ಆಗದಿದ್ದರೆ ಮತ್ಯಾಕೆ ಭರವಸೆ ಕೊಡ್ತೀರಿ?

1 year ago
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಎರಡನೇ ಅಲೆಯ ಅಬ್ಬರ: ಕೋವಿಡ್‌ ಕಾರ್ಯಪಡೆಗೆ ಮುಖ್ಯಮಂತ್ರಿ #BSY ಟ್ರೀಟ್‌ಮೆಂಟ್; ಗೋವಿಂದ ಕಾರಜೋಳ ಬದಲಿಗೆ ಡಿಸಿಎಂ ಡಾ.ಅಶ್ವತ್ಥನಾರಾಯಣ ನೇತೃತ್ವ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ