• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸಿದ್ದರಾಮಯ್ಯ v/s ಯಡಿಯೂರಪ್ಪ

P K Channakrishna by P K Channakrishna
November 24, 2023
in NATION, POLITICS, STATE
Reading Time: 2 mins read
0
ಸಿದ್ದರಾಮಯ್ಯ v/s ಯಡಿಯೂರಪ್ಪ
917
VIEWS
FacebookTwitterWhatsuplinkedinEmail

ಹಿಂದಿನ ಬಿಜೆಪಿ ಸರಕಾರ ಸ್ಪೀಕರ್‌ ಅನುಮತಿ ಪಡೆದಿಲ್ಲ: ಸಿದ್ದರಾಮಯ್ಯ / ಸಿಬಿಐಗೆ ವಹಿಸುವಂತೆ ಈಡಿ ಪತ್ರ ಬರೆದಿತ್ತು: ಯಡಿಯೂರಪ್ಪ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧದ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ವಾಪಸ್‌ ಪಡೆಯುವ ಬಗೆಗಿನ ವಿವಾದ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಹೇಳಿದ್ದೇನು?

ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆಯದೇ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸದೇ ಹಿಂದಿನ ಸರಕಾರದ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿರುವುದು ಕಾನೂನು ಬಾಹಿರ.

ಡಿಸಿಎಂ ವಿರುದ್ಧ ಆರೋಪದ ತನಿಖೆ ನಡೆಸಲು ಸಿಬಿಐಗೆ ನೀಡಿದ ಅನುಮತಿ ಹಿಂಪಡೆಯಲು ತೀರ್ಮಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಸರಕಾರದ ಸೇವೆಯಲ್ಲಿದ್ದವರ ವಿರುದ್ಧ ತನಿಖೆಯಾಗಬೇಕಾದರೆ ಸರಕಾರದ ಅನುಮತಿ ಅಗತ್ಯ. 2019ರಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆ ಅನುಮತಿಸಿದಾಗ ಅವರು ಶಾಸಕರಾಗಿದ್ದರು. ಇವರ ವಿರುದ್ಧ ತನಿಖೆಗೆ ಕಾನೂನು ರೀತ್ಯವಾಗಿ ವಿಧಾನ ಸಭಾಧ್ಯಕ್ಷರಿಂದ ಅನುಮತಿ ಪಡೆದು ನಂತರ ಮುಖ್ಯಮಂತ್ರಿಗಳು ತನಿಖೆ ಕೈಗೊಳ್ಳಲು ಆದೇಶಿಸಬೇಕು. ಆದರೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆದಿಲ್ಲ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸದೇ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌಖಿಕವಾಗಿ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಅವರ ಮೌಖಿಕ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಸಿಬಿಐ ತನಿಖೆಗೆ ವಹಿಸಿದ್ದಾರೆ. ಈ ರೀತಿ ಮಾಡುವುದು ಕಾನೂನಿನ ರೀತ್ಯ ಸರಿಯಲ್ಲ.

Siddaramaiah / Chief Minister of Karnataka

ನ್ಯಾಯಾಲಯದ ತೀರ್ಮಾನದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸರ್ಕಾರ ಕಾನೂನುಬಾಹಿರವಾಗಿ ಮಂಜೂರಾತಿ ನೀಡಿರುವುದರಿಂದ ಅದ ಸರಿಯಿಲ್ಲ. ಅದನ್ನು ವಾಪಸ್ಸು ತೆಗೆದುಕೊಳ್ಳಲು ತೀರ್ಮಾನ ತೆಗೆದುಕೊಂಡಿದ್ದೇವೆ.

ಸಿದ್ದರಾಮಯ್ಯ

ಅಲ್ಲದೆ; ಇದೇ ತಿಂಗಳ 29ರಂದು ನ್ಯಾಯಾಲಯವು ಕೂಡ ಆದೇಶವನ್ನು ಎತ್ತಿಹಿಡಿಯುವ ಭಯದಿಂದ ಸರಕಾರ ಇದನ್ನು ಮಾಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನ್ಯಾಯಾಲಯದ ತೀರ್ಮಾನಗಳಿಗೆ ನಾವು ಮಧ್ಯಪ್ರವೇಶಿಸುವಂತಿಲ್ಲ. ನ್ಯಾಯಾಲಯ ಏನು ತೀರ್ಮಾನ ಮಾಡುತ್ತದೆಯೋ ಮಾಡಲಿ.

ಯಡಿಯೂರಪ್ಪ ಉತ್ತರಿಸಿದ್ದೇನು?

ಮುಖ್ಯಮಂತ್ರಿಗಳು ಡಿಕೆಶಿ ಅವರ ಸಿಬಿಐ ಕೇಸ್ ವಾಪಸ್ ಪಡೆದಿದ್ದಾರೆ, ಸರಿ. ಈ ಹಿಂದೆ ಎಜಿ ಒಪ್ಪಿಗೆ ಇಲ್ಲದೇ ಬಿಜೆಪಿಯವರು ಕಾನೂನು ಬಾಹಿರವಾಗಿ ಅನುಮತಿ ಕೊಟ್ಟಿದ್ದರು ಎಂದು ಸಿಎಂ ಆರೋಪಿಸಿರುವುದು ಸರಿ ಅಲ್ಲ. ವಾಸ್ತವಕ್ಕೆ ಇಡಿ ಅಧಿಕಾರಿಗಳು ಸಿಬಿಐಗೆ ಕೇಸ್ ವಹಿಸಿಕೊಡಿ ಎಂದು ನನ್ನ ನೇತೃತ್ವದ ಸರಕಾರಕ್ಕೆ ಪತ್ರ ಬರೆದಿದ್ದರು. ಹಾಗಾಗಿ ನಾವು ಈ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದೆವು.

(ಈ ಸಂದರ್ಭದಲ್ಲಿ ಇಡಿ ಅಧಿಕಾರಿಗಳು ರಾಜ್ಯ ಸರಕಾರಕ್ಕೆ ಬರೆದಿದ್ದ ಪತ್ರ ಓದಿದರು ಯಡಿಯೂರಪ್ಪ)

ಸಿದ್ದರಾಮಯ್ಯ ಅವರು ಹಿಂದಿನ ಸರಕಾರದ ಕಾನೂನು ಬಾಹಿರ ಆದೇಶ ವಾಪಸ್ ಪಡೆದಿದ್ದೇವೆ ಅಂದಿದ್ದಾರೆ. ಇದು ವಾಸ್ತವಿಕ ಅಂಶ ಅಲ್ಲ. ಅವರು ಅಸತ್ಯ ಹೇಳುತ್ತಿದ್ದಾರೆ. ಡಿಕೆಶಿ ಅವರನ್ನು ರಕ್ಷಣೆ ಮಾಡಲು ಸಿದ್ದರಾಮಯ್ಯ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಎಜಿ ಅಭಿಪ್ರಾಯ ಪಡೆದೇ ಸಿಬಿಐಗೆ ಪ್ರಕರಣ ಕೊಟ್ಟಿದ್ದೆವು. ಅಧಿವೇಶನದಲ್ಲಿ ಇನ್ನಷ್ಟು ದಾಖಲೆಗಳನ್ನು ಇಟ್ಟು ಇದರ ಬಗ್ಗೆ ಚರ್ಚೆ ಮಾಡ್ತೇವೆ.

ಡಿಕೆಶಿ ಅವರು ಇದನ್ನು ಹೈಕೋರ್ಟ್ ನಲ್ಲಿ ಪ್ರಸ್ತಾಪಿಸಿದ್ದರು. ಹೈಕೋರ್ಟ್ ಇದನ್ನು ತಳ್ಳಿ ಹಾಕಿತ್ತು. ಡಿಕೆಶಿ ಅವರನ್ನು ಸಿಬಿಐ ಕೇಸ್ ನಿಂದ ರಕ್ಷಿಸಲು ಸಿಎಂ ಈ ನಿರ್ಧಾರ ಕೈಗೊಂಡಿರುವುದು ಅಕ್ಷಮ್ಯ ಅಪರಾಧ. ಕಾನೂನು ಬಾಹಿರವಾಗಿ ಡಿಕೆಶಿ ಉಳಿಸಲು ಈ ಕೆಲಸವನ್ನು ಸಿಎಂ ಮಾಡಬಾರದಾಗಿತ್ತು. ಈಗಲಾದರೂ ಸರಕಾರ ತನ್ನ ನಿರ್ಣಯ ವಾಪಸ್ ಪಡೆಯಲಿ. ರಾಜ್ಯದ ಜನ ಇವರನ್ನು ಕ್ಷಮಿಸಲ್ಲ. ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಿ ನಿರ್ಣಯ ವಾಪಸ್ ಪಡೆಯಲಿ.

BS Yeddyurappa / Former Chief Minister of Karnataka

ನಾವು ಎಜಿ ಅಭಿಪ್ರಾಯ ಪಡೆದಿದ್ದೆವು. ಕಾನೂನು ಚೌಕಟ್ಟಿನಲ್ಲೇ ಪ್ರಕರಣ ಸಿಬಿಐಗೆ ಕೊಟ್ಟಿದ್ದೆವು. ಈಗ ಹಿಂಬಾಗಿಲ ಮೂಲಕ ಪ್ರಕರಣದ ಅನುಮತಿ ವಾಪಸ್ ಪಡೆದಿದ್ದು ಅಕ್ಷಮ್ಯ ಅಪರಾಧ. ಡಿಕೆಶಿ ಎಸಗಿರುವ ಅಪರಾಧದಲ್ಲಿ ಸಿದ್ದರಾಮಯ್ಯ ಕೂಡಾ ಶಾಮೀಲಾಗಲು ಹೊರಟಿದ್ದಾರೆ.

ಯಡಿಯೂರಪ್ಪ

ಎಜಿ ಶಶಿಕಿರಣ್ ಶೆಟ್ಟಿ ಅವರು ಡಿಕೆಶಿ ಅವರ ವಕೀಲರು. ಎಜಿ ಆಗಿರೋರು ಕಾನೂನು ಪ್ರಕಾರ ಅಭಿಪ್ರಾಯ ಕೊಡಬೇಕು. ಈಗಿನ ಎಜಿ ಕಾನೂನು ಮೀರಿ ಅಭಿಪ್ರಾಯ ಕೊಟ್ಟಿದ್ದಾರೆ. ಎಜಿ ಕೂಡಾ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿಲ್ಲ. ಎಜಿ ಈಥರ ಅಭಿಪ್ರಾಯ ಕೊಡುವಂಥ ಪರಿಸ್ಥಿತಿ ಬಂದಿರೋದು ಗೌರವ ತರುವಂಥದ್ದಲ್ಲ. ಡಿಕೆಶಿ ಅವರಿಗೆ ಅನುಕೂಲ ಮಾಡಿಕೊಡುವಂಥ ಅಭಿಪ್ರಾಯವನ್ನೇ ಎಜಿ ನೀಡಿದ್ದಾರೆ. ಎಲ್ಲವನ್ನೂ ನ್ಯಾಯಾಲಯ ನೋಡಿಕೊಳ್ಳುತ್ತದೆ.

ನಾವೂ ಕೂಡಾ ಕೋರ್ಟ್ ನಲ್ಲಿ ಹೋರಾಟ ಮಾಡ್ತೇವೆ. ಸರಕಾರ ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದು ಕೋರ್ಟ್ ಒಪ್ಪುವುದಿಲ್ಲ. ನ್ಯಾಯಾಲಯಕ್ಕೆ ಹೆಚ್ಚಿನ ದಾಖಲೆಗಳ ಅಗತ್ಯ ಬಂದರೆ ಒದಗಿಸುತ್ತೇವೆ.

Tags: cbi caseckcknewsnowcorruption caseDK Shivakumarkarnatakasiddaramaiahyeddyurappa
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ಸಿದ್ದರಾಮಯ್ಯ ಸಂಪುಟ ಡಿಕೆಶಿ ಪಾದದಡಿಯಲ್ಲಿ ಇದೆ!!

Leave a Reply Cancel reply

Your email address will not be published. Required fields are marked *

Recommended

ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಜನವರಿ 16ರಂದು ಲಸಿಕೆ ವಿತರಣೆ; ಕೊಟ್ಟ ಲಸಿಕೆ ಪಡೆಯಬೇಕು, ಅದೇ ಬೇಕು-ಇದೇ ಬೇಕೆಂದು ಡಿಮಾಂಡ್‌ ಮಾಡುವಂತಿಲ್ಲ

4 years ago
ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಸಂದೇಹ ನಿವಾರಿಸಲು ಫೋನ್ ಇನ್ ಕಾರ್ಯಕ್ರಮ

ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಸಂದೇಹ ನಿವಾರಿಸಲು ಫೋನ್ ಇನ್ ಕಾರ್ಯಕ್ರಮ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ