• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ತೆಲಂಗಾಣ ದಿನಪತ್ರಿಕೆಗಳಲ್ಲಿ ಕರ್ನಾಟಕ ಗ್ಯಾರಂಟಿ ಜಾಹೀರಾತು; ಸಿದ್ದು ಸರಕಾರದಿಂದ ನೀತಿ ಸಂಹಿತೆ ಉಲ್ಲಂಘನೆ

P K Channakrishna by P K Channakrishna
November 27, 2023
in NATION, POLITICS, STATE
Reading Time: 1 min read
0
ತೆಲಂಗಾಣ ದಿನಪತ್ರಿಕೆಗಳಲ್ಲಿ ಕರ್ನಾಟಕ ಗ್ಯಾರಂಟಿ ಜಾಹೀರಾತು; ಸಿದ್ದು ಸರಕಾರದಿಂದ ನೀತಿ ಸಂಹಿತೆ ಉಲ್ಲಂಘನೆ
1k
VIEWS
FacebookTwitterWhatsuplinkedinEmail

ಸಿದ್ದರಾಮಯ್ಯ ಸರಕಾರಕ್ಕೆ ತುರ್ತು ನೊಟೀಸ್; ಮಂಗಳವಾರ 5 ಗಂಟೆಯೊಳಗೆ ವಿವರಣೆ ನೀಡಲು ಮುಖ್ಯ ಕಾರ್ಯದರ್ಶಿಗೆ ಪತ್ರ

ಬೆಂಗಳೂರು/ಹೈದರಾಬಾದ್: ತನ್ನ ಗ್ಯಾರಂಟಿ ಯೋಜನೆಗಳ ಜಾಹೀರಾತುಗಳನ್ನು ತೆಲಂಗಾಣದ ತೆಲುಗು ಪತ್ರಿಕೆಗಳಿಗೆ ನೀಡಿದ ಕರ್ನಾಟಕದ ಕಾಂಗ್ರೆಸ್‌ ಸರಕಾರ ಕೇಂದ್ರ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿ ಆಗಿದೆ.

ತೆಲಂಗಾಣದ ಪ್ರಮುಖ ದಿನಪತ್ರಿಕೆಗಳಾದ ಈನಾಡು, ಸಾಕ್ಷಿ, ಆಂದ್ರಜ್ಯೋತಿ ಸೇರಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕರ್ನಾಟಕ ಸರಕಾರ ಜಾಹೀರಾತುಗಳನ್ನು ನೀಡಿರುವುದನ್ನು ತೀವ್ರವಾಗಿ ಆಕ್ಷೇಪಿಸಿ ಬಿಜೆಪಿ ಹಾಗೂ ಬಿಆರ್‌ ಎಸ್‌ ಪಕ್ಷಗಳು ಪ್ರತ್ಯೇಕವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು. ಈ ದೂರುಗಳನ್ನು ಸ್ವೀಕಾರ ಮಾಡಿರುವ ಆಯೋಗ, ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದೆ.

ಈ ಬಗ್ಗೆ ಕರ್ನಾಟಕ ಸರಕಾರದ ವಿವರಣೆ ಕೋರಿರುವ ಚುನಾವಣಾ ಆಯೋಗ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿದೆ. ಈ ಬಗ್ಗೆ ಮಂಗಳವಾರ ಸಂಜೆ ಐದು ಗಂಟೆಯೋಳಗೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರ ಬಗ್ಗೆಅಷಟ ವಿವರಣೆ ನೀಡಬೇಕು ಎಂದು ಹೇಳಿದೆ.

ತೆಲಂಗಾಣದಲ್ಲಿ ಜಾಹೀರಾತುಗಳನ್ನು ಪ್ರಕಟಿಸುವ ಅಥವಾ ಮಾಧ್ಯಮಗಳಿಗೆ ನೀಡುವ ಮುನ್ನ ಕರ್ನಾಟಕ ಸರಕಾರ ತನ್ನ ಅನುಮತಿ ಪಡೆದಿಲ್ಲ. ಹೀಗಾಗಿ ಈ ಜಾಹೀರಾತುಗಳ ನೀಡಿಕೆ ಸಂಪೂರ್ಣವಾಗಿ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ ಎಂದು ಆಯೋಗ ನೇರ ಮಾತುಗಳಲ್ಲಿ ಮುಖ್ಯ ಕಾರ್ಯದರ್ಶಿಗೆ ಹೇಳಿದೆ.

ತನ್ನ ಅನುಮೋದನೆ ಸಿಗುವ ತನಕ ತೆಲಂಗಾಣದಲ್ಲಿ ಕರ್ನಾಟಕ ಸರಕಾರ ಯಾವುದೇ ಜಾಹೀರಾತುಗಳನ್ನು ನೀಡಬಾರದು ಎಂದು ಸಿದ್ದರಾಮಯ್ಯ ಸರಕಾರಕ್ಕೆ ಚುನಾವಣಾ ಆಯೋಗ ತಾಕೀತು ಮಾಡಿದೆ.

ಅಷ್ಟೇ ಅಲ್ಲ, ನೀತಿ ಸಂಹಿತೆ ಉಲ್ಲಂಘನೆ ಕಾರಣಕ್ಕಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಕಾರ್ಯದರ್ಶಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಬಾರದೇಕೆ ಎಂದು ಆಯೋಗವು ಮುಖ್ಯ ಕಾರ್ಯದರ್ಶಿಗಳನ್ನು ಖಾರವಾಗಿ ಪ್ರಶ್ನೆ ಮಾಡಿದೆ.

ನವೆಂಬರ್‌ ೩೦ರಂದು ತೆಲಂಗಾಣದಲ್ಲಿ ಒಂದೇ ಹಂತದ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರ ನಡುವೆ ತೆಲಂಗಾಣಕ್ಕೆ ದಾಂಗುಡಿ ಇಟ್ಟಿರುವ ಕರ್ನಾಟಕ ಕಾಂಗ್ರೆಸ್‌ ನಾಯಕರು, ಗೆಲುವಿಗಾಗಿ ಇಲ್ಲಿ ನಡೆಸಿದ್ದ ಪ್ರಯೋಗಗಳನ್ನೇ ಅಲ್ಲೂ ಮುಂದುವರಿಸಿದ್ದಾರೆ. ಸೋಮವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಇಡೀ ಸಂಪುಟವೇ ತೆಲಂಗಾಣದಲ್ಲಿ ಪ್ರಚಾರ ಮಾಡಿತ್ತು.

ಯಾವ ಜಾಹೀರಾತು?

ಶಕ್ತಿ ಯೋಜನೆಯ ಜಾಹೀರಾತನ್ನು ತೆಲಂಗಾಣದ ಎಲ್ಲಾ ತೆಲುಗು ಪತ್ರಿಕೆಗಳಿಗೆ ನೀಡಲಾಗಿದೆ. ತೆಲುಗು ಭಾಷೆಯಲ್ಲೇ ಇರುವ ಆ ಜಾಹೀರಾತನ್ನು ಕರ್ನಾಟಕ ಸಾರಿಗೆ ಇಲಾಖೆಯೇ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪತ್ರಿಕೆಗಳಿಗೆ ಬಿಡುಗಡೆ ಮಾಡಿದೆ. ಸೋಮವಾರ ಬೆಳಗ್ಗೆ ಪತ್ರಿಕೆಗಳಲ್ಲಿ ಕಂಡ ಈ ಜಾಹೀರಾತನ್ನು ಗಮನಿಸಿದ ಬಿಜೆಪಿಯು, ಆಯೋಗಕ್ಕೆ ದೂರು ನೀಡಿದ್ದು; ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಜನತಾ ಪ್ರಾತಿನಿಧ್ಯ ಕಾಯ್ದೆ ಅನ್ವಯ ಕಾಂಗ್ರೆಸ್‌, ಅದರಲ್ಲೂ ಕರ್ನಾಟಕ ಸರಕಾರದ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿತ್ತು.

  • ತೆಲಂಗಾಣದ ʼಸಾಕ್ಷಿʼ & ‘ ಆಂಧ್ರಜ್ಯೋತಿ ‘ ಲುಗು ಪತ್ರಿಕೆಯಲ್ಲಿ ಪ್ರಕಟವಾಗಿರುವ ಕರ್ನಾಟಕ ಸರಕಾರದ ʼಶಕ್ತಿʼ ಯೋಜನೆಯ ಜಾಹೀರಾತು.

ʼಕರ್ನಾಟಕ ಪ್ರಭುತ್ವಂ, ಗ್ಯಾರಂಟಿ ಪ್ರಭುತ್ವಂʼ ಎನ್ನುವ ಟೈಟಲ್ಲಿನ ಈ ಜಾಹೀರಾತಿನಲ್ಲಿ ಶಕ್ತಿ ಯೋಜನೆಯ ಯಶಸ್ಸಿನ ಅಂಶಗಳನ್ನು ಮುದ್ರಿಸಲಾಗಿದೆ. ಬಿಜೆಪಿ, ಬಿಆರ್‌ ಎಸ್‌ ಪಕ್ಷಗಳು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವುದು ಒಂದೆಡೆಯಾದರೆ, ಚುನಾವಣಾ ಆಯೋಗವೂ ಗರಂ ಆಗಿದೆ. ಅಲ್ಲದೆ; ಚುನಾವಣೆ ವಿಶ್ಲೇಷಕರು ಕೂಡ, ವಾಮಮಾರ್ಗದಲ್ಲಿ ಕಾಂಗ್ರೆಸ್‌ ಗೆಲ್ಲುವ ಪ್ರಯತ್ನ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Tags: bjpbrsckcknewsnowCongresselection commission of indiaguarantees advertisementkarnatakamodel code violationTelangana electiontelugu papers
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ನಟೋರಿಯಸ್ ನರ್ಸ್

ನಟೋರಿಯಸ್ ನರ್ಸ್

Leave a Reply Cancel reply

Your email address will not be published. Required fields are marked *

Recommended

ಮುದಗಾನುಕುಂಟೆಯಲ್ಲಿ ಗಂಗಾ ಪೂಜೆ ಸಲ್ಲಿಸಿದ ಡಾ.ಸಿ ಎನ್ ಅಶ್ವತ್ಥ ನಾರಾಯಣ

ಮುದಗಾನುಕುಂಟೆಯಲ್ಲಿ ಗಂಗಾ ಪೂಜೆ ಸಲ್ಲಿಸಿದ ಡಾ.ಸಿ ಎನ್ ಅಶ್ವತ್ಥ ನಾರಾಯಣ

3 years ago
ಮಕ್ಕಳಿಗೆ ಪರೀಕ್ಷೆ ಟೆನ್ಷನ್;‌ ಬೆಲೆ ಏರಿಕೆ‌ ಬಿಸಿ

ಮಕ್ಕಳಿಗೆ ಪರೀಕ್ಷೆ ಟೆನ್ಷನ್;‌ ಬೆಲೆ ಏರಿಕೆ‌ ಬಿಸಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ