• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸಹಕಾರ ಬ್ಯಾಂಕುಗಳ ಕೃಷಿ ಸಾಲದ ಅಸಲು ಕಟ್ಟಿದ್ದರೆ ಬಡ್ಡಿ ಮನ್ನಾ

cknewsnow desk by cknewsnow desk
December 15, 2023
in STATE
Reading Time: 1 min read
0
ಸಹಕಾರ ಬ್ಯಾಂಕುಗಳ ಕೃಷಿ ಸಾಲದ ಅಸಲು ಕಟ್ಟಿದ್ದರೆ ಬಡ್ಡಿ ಮನ್ನಾ
919
VIEWS
FacebookTwitterWhatsuplinkedinEmail

ಮಧ್ಯಮಾವಧಿ, ದೀರ್ಘಾವಧಿ ಸಾಲಕ್ಕೆ ಅನ್ವಯ; ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಘೋಷಣೆ

ಬೆಳಗಾವಿ: ಬರದಿಂದ ಕಂಗೆಟ್ಟಿರುವ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸಹಕಾರಿ ಬ್ಯಾಂಕುಗಳಲ್ಲಿನ ಕೃಷಿ ಸಾಲದ ಬಡ್ಡಿ ಮನ್ನಾ ಮಾಡುವ ಘೋಷಣೆ ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ.

ಆದರೆ ಷರತ್ತುಗಳು ಅನ್ವಯ. ಬಡ್ಡಿ ಮನ್ನಾ ಆಫರ್ ಮಧ್ಯಮಾವಧಿ, ದೀರ್ಘಾವಧಿ ಸಾಲಕ್ಕೆ ಅನ್ವಯ ಹಾಗೂ ಅಸಲು ಕಟ್ಟಿದ್ದರೆ ಬಡ್ಡಿ ಮನ್ನಾ ಆಗುತ್ತದೆ.

ಸಿಎಂ ಮಾಡಿರುವ ಘೋಷಣೆಗಳು ಹೀಗಿವೆ;

ಅರ್ಥಶಾಸ್ತ್ರಜ್ಞರ ಸಮಿತಿ

ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲಾಗುವುದು.

ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61330 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ.

ಸುಮಾರು 42000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ನಂಜುAಡಪ್ಪನವರ ವರದಿಯನ್ನಾಧರಿಸಿ ನೀಡಲಾಗುವ ವಿಶೆಷ ಅಭಿವೃದ್ಧಿ ಯೋಜನೆಯಡಿಯೇ 32433.43 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ.

ಇದರ ಜತೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ. ಇಷ್ಟೆಲ್ಲ ಮಾಡಿದರೂ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ. ಶಿಕ್ಷಣ, ಆರೋಗ್ಯ, ಆದಾಯಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ.

ಹಾಗಾಗಿ ವಿಶೇಷವಾಗಿ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ (ಉನ್ನತಾಧಿಕಾರ ಸಮಿತಿ) ಕಮಿಟಿಯನ್ನು ರಚಿಸಲಾಗುವುದು.

ರೈತರಿಗೆ ಬಡ್ಡಿ ಮನ್ನಾ ಆಫರ್

ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು.ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಮ್ಯಾನಿಫೆಸ್ಟೊದಲ್ಲಿ ಹೇಳಿಲ್ಲ.

ಬಿಜೆಪಿಯವರು 2018ರ ತಮ್ಮ ಮ್ಯಾನಿಫೆಸ್ಟೊದಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” ಎಂದು ಹೇಳಿದ್ದರು.

ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ. ಯಡಿಯೂರಪ್ಪನವರು 2019 ರ ಆಗಸ್ಟ್ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? “ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಹೇಳಿದ್ದರು [ 14-8-2019 – ಶಿವಮೊಗ್ಗ].

ಯಡಿಯೂರಪ್ಪನವರು ಈ ರೀತಿ ಹೇಳಿದ್ದು ಇದೇ ಮೊದಲಲ್ಲ. 2009 ರಲ್ಲಿ ವಿಧಾನ ಪರಿಷತ್ತಿನಲ್ಲಿ ನಮ್ಮ ವಿರೋಧ ಪಕ್ಷದ ನಾಯಕರಾಗಿದ್ದ ವಿ ಎಸ್ ಉಗ್ರಪ್ಪ ಮುಂತಾದ ನಮ್ಮ ಪಕ್ಷದವರು ಸಾಲ ಮನ್ನಾ ಮಾಡಿ ಎಂದು ಆಗ್ರಹಿಸಿದ್ದಾಗಲೂ ಯಡಿಯೂರಪ್ಪನವರು ಇದೇ ಮಾತುಗಳನ್ನಾಡಿದ್ದರು.

ಯಡಿಯೂರಪ್ಪನವರು ಹೇಳಿದ್ದ ಮಾತುಗಳಿವು, “ಮತಕ್ಕಾಗಿ ಇತರ ಪಕ್ಷಗಳವರು ಹೇಳಿದಂತೆ ನಾನು ಕೂಡ ರೈತರ ಕೃಷಿ ಮನ್ನಾ ಮಾಡುತ್ತೇನೆಂದು ಚುನಾವಣೆಯ ಸಂದರ್ಭದಲ್ಲಿ ಆಶ್ವಾಸನೆ ನಿಡಿದ್ದೆ. ಆದರೆ ಇದು ಸಾಧ್ಯವಿಲ್ಲ ಎಂಬುದು ಈಗ ಅರ್ಥವಾಗುತ್ತಿದೆ, ಸಾಲ ಮನ್ನಾ ಮಾಡಲು ಹಣ ಎಲ್ಲಿದೆ? ಎಂದು ವಿರೋಧ ಪಕ್ಷದ ಸದಸ್ಯರನ್ನೆ ಪ್ರಶ್ನಿಸಿದ್ದರು.“

ರೈತರ ಸಾಲ ಮನ್ನಾ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ಬೊಕ್ಕಸದಲ್ಲಿ ಹಣದ ಕೊರತೆ ಇದೆ. ಆದುದರಿಂದ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ” ಎಂದಿದ್ದರು ಜೊತೆಗೆ “ ವಿಧಾನಸೌಧದಲ್ಲಿ ಕೂತು ನಾನು ನೋಟ್ ಪ್ರಿಂಟ್ ಮಾಡುತ್ತಿಲ್ಲ” . ಎಂದು ಉತ್ತರ ಹೇಳಿದ್ದರು.

ಬೆಳಗಾವಿಯಲ್ಲಿ ಫೌಂಡ್ರಿ ಕ್ಲಸ್ಟರ್

ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2,000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು.

ಧಾರವಾಡದಲ್ಲಿ ಹೊಸ ಕೈಗಾರಿಕಾ ವಲಯ

ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ.

ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುತ್ತದೆ.ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು.

ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು*.ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. ಐತಿಹಾಸಿಕ ಮಹತ್ವವಿರುವ ಈ ತಾಣಗಳು ಜಾಗತಿಕವಾಗಿಯೂ ಮಹತ್ವ ಪಡೆದಿವೆ. ಆದರೆ ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ನಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸುತ್ತೇವೆ.

ಧಾರವಾಡದಲ್ಲಿರುವ ವಾಲ್ಮಿ [ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ] ಯನ್ನು ಉನ್ನತೀಕರಿಸಲಾಗುವುದು.

Tags: chief ministerckcknewsnowinterestloansiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ಕೋವಿಡ್-‌19 ರೂಪಾಂತರಿ ತಳಿ ಉಲ್ಬಣ; ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ; ಒಂದೇ ಕಲ್ಲಿನಲ್ಲಿ 3 ಹಕ್ಕಿಗಳಿಗೆ ಗುರಿ ಇಟ್ಟ ಬಿಜೆಪಿ

ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ; ಒಂದೇ ಕಲ್ಲಿನಲ್ಲಿ 3 ಹಕ್ಕಿಗಳಿಗೆ ಗುರಿ ಇಟ್ಟ ಬಿಜೆಪಿ

3 years ago
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಸರಕಾರವು ಅತಿಥಿ ಉಪನ್ಯಾಸಕರ ಪರವಾಗಿಯೇ ಇದೆ ಎಂದ ಡಾ.ಅಶ್ವತ್ಥನಾರಾಯಣ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ