• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಅಧಿಕಾರ ಕೊಡುವ ಗ್ಯಾರಂಟಿ ಇಲ್ಲ; ಆದರೂ ಇಂಗದ ಆಪರೇಷನ್ ಹಸ್ತದ ದಾಹ

cknewsnow desk by cknewsnow desk
December 27, 2023
in NATION, POLITICS, STATE
Reading Time: 1 min read
0
ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ
974
VIEWS
FacebookTwitterWhatsuplinkedinEmail

ಅನ್ಯಪಕ್ಷಗಳ ಮುಖಂಡರಿಗೆ ಮುಂದುವರಿದ ಕಾಂಗ್ರೆಸ್ ಗಾಳ

ಬೆಂಗಳೂರು: 136 ಶಾಸಕರು ಸೇರಿದಂತೆ ಮಾಜಿ ಸಚಿವರು, ಶಾಸಕರು, ಮುಖಂಡರಿಂದ ಕಾಂಗ್ರೆಸ್ ತುಂಬಿ ತುಳುಕುತ್ತಿದ್ದರೂ ರಾಜ್ಯ ನಾಯಕರಿಗೆ ಆಪರೇಷನ್ ಹಸ್ತದ ದಾಹ ಇಂಗಿದಂತೆ ಕಾಣುತ್ತಿಲ್ಲ.

ಪಕ್ಷದ ಹಿರಿಯ ತಲೆ ಹಾಗೂ ಪ್ರಭಾವೀ ಸಚಿವರೊಬ್ಬರ ಸೂಚನೆ ಮೇರೆಗೆ ಮಧ್ಯವರ್ತಿಗಳನ್ನು ಬಿಟ್ಟು ಅನ್ಯಪಕ್ಷಗಳ ಮುಖಂಡರುಗಳಿಗೆ ಹಸ್ತಪಾಳೆಯ ಗಾಳ ಹಾಕುತ್ತಿದೆ ಎನ್ನುವ ಮಾಹಿತಿ ಸಿಕೆನ್ಯೂಸ್ ನೌ ಗೆ ಸಿಕ್ಕಿದೆ.

ಕಾಂಗ್ರೆಸ್ ಪಕ್ಷದಲ್ಲೇ ಅಧಿಕಾರದಿಂದ ವಂಚಿತರಾದ, ವಿಧಾನಸಭೆ ಮತ್ತು ಪರಿಷತ್ತಿನ ಶಾಸಕ- ಮುಖಂಡರ ದಂಡೇ ಇದ್ದರೂ, ಅನ್ಯಪಕ್ಷಗಳಿಂದ ಸೆಳೆಯಲಾಗುತ್ತಿರುವ ನಾಯಕರಿಗೆ ಅಧಿಕಾರ ಮತ್ತು ಇತರೆ ಆಮಿಷಗಳನ್ನು ನೀಡುವ ಭರವಸೆ ಮಾಡುತ್ತಿದ್ದಾರೆ.

ಅದರೆ, ಕಾಂಗ್ರೆಸ್ ಪಕ್ಷದಲ್ಲಿ ಈಗಿರುವ ಪರಿಸ್ಥಿತಿಯಲ್ಲಿ ಹಾಲಿ ಇರುವವರಿಗೇ ಅಧಿಕಾರ ಕೊಡುವುದು ಸಿಎಂ, ಡಿಸಿಎಂ ಅವರಿಗೆ ಕಷ್ಟವಾಗಿದೆ. ವಸ್ತುಸ್ಥಿತಿ ಹೀಗಿದ್ದರೂ ಆಪರೇಷನ್ ಹಸ್ತ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ.

ಅನ್ಯಪಕ್ಷಗಳ ಮುಖಂಡರಿಗೆ ಲೋಕಸಭೆ ಟಿಕೆಟ್!

ಆರ್‌ಎಸ್‌ಎಸ್, ಎಬಿವಿಪಿಯಲ್ಲಿ ಹಲವು ಸಮಯದಿಂದ ದುಡಿದು ಬಿಜೆಪಿಯಲ್ಲಿ ಅಧಿಕಾರದ ಹುದ್ದೆ ಹೊಂದಿರು ಬಿಜೆಪಿಯ ಇಬ್ಬರು ಹಿರಿಯ ನಾಯಕರಿಗೆ ಈ ಕೈ ಮಧ್ಯವರ್ತಿಗಳು ಬೆಲೆ ಬೀಸಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.

ಮಾಜಿ ಸಚಿವರು ಆಗಿರುವ ಆ ಇಬ್ಬರು ನಾಯಕರು ಪಕ್ಷಕ್ಕೆ ಬಂದರೆ ಲೋಕಸಭೆ ಚುನಾವಣೆಗೆ ಲಾಭವಾಗುತ್ತದೆ ಎನ್ನುವ ಲೆಕ್ಕಾಚಾರ ಕಾಂಗ್ರೆಸ್ ನಾಯಕರದ್ದು. ಅಲ್ಲದೆ; ಅವರು ಸ್ಪರ್ಧೆ ಮಾಡಲು ಇಚ್ಚಿಸಿದರೆ ಟಿಕೆಟ್ ಕೊಡಲಿಕ್ಕೂ ಆ ನಾಯಕರು ತುದಿಗಾಲ ಮೇಲೆ ನಿಂತಿದ್ದಾರೆ.

ಚಿಕ್ಕಮಗಳೂರು ಹಾಗೂ ಮೂಲತಃ ಬಾಗಲಕೋಟೆ ಜಿಲ್ಲೆಯವರಾದ, ಬೆಂಗಳೂರಿನಿಂದ ಪೂರ್ವ ದಿಕ್ಕಿನ ಮೀಸಲು ಕ್ಷೇತ್ರದಿಂದ ಗೆದ್ದು ಸಚಿವರಾಗಿದ್ದವರಿಗೆ ಆಪರೇಷನ್ ಹಸ್ತದ ಬಲೆ ಬೀಸಲಾಗಿದೆ.

ಈ ಪೈಕಿ ಒಬ್ಬರಿಗೆ ಕೋಲಾರ ಮೀಸಲು ಕ್ಷೇತ್ರ, ಇನ್ನೊಬ್ಬರಿಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಟಿಕೆಟ್ ನೀಡಲು ಕಾಂಗ್ರೆಸ್ ತುದಿಗಾಲ ಮೇಲೆ ನಿಂತಿದೆ. ಈ ಇಬ್ಬರು ನಾಯಕರಿಗೆ ಟಿಕೆಟ್ ಜತೆಗೆ ಇಡೀ ಚುನಾವಣಾ ವೆಚ್ಚ ಭರಿಸುವ ಭರವಸೆ ನೀಡಿದೆ ಎಂದು ಹೇಳಲಾಗಿದೆ.

ಆದರೆ, ಸಂಘ ಪರಿವಾರದಿಂದ ಬಂದಿರುವ ಹಾಗೂ ತಳಮಟ್ಟದಿಂದ ಬೆಳೆದು ಬಂದಿರುವ ಈ ನಾಯಕರಿಬ್ಬರೂ ಅಷ್ಟು ಸುಲಭವಾಗಿ ಕಾಂಗ್ರೆಸ್ ಬಲೆಗೆ ಬೀಳುತ್ತಾರಾ? ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.

ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ

ಗ್ಯಾರೆಂಟಿಗಳ ಜಾರಿಯಿಂದ ಬೀಗುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಈಗ ಅಭ್ಯರ್ಥಿಗಳ ಕೊರತೆ ಕಾಡುತ್ತಿದೆ. ಪಕ್ಷದಲ್ಲಿ ಕೆಲವರು ಇದ್ದಾರೆ, ಅವರು ಹಳೆ ಮುಖಗಳು. ನರೇಂದ್ರ ಮೋದಿ ಪ್ರಭಾವದಲ್ಲಿ ಜನರು ಅವರಿಗೆ ಮಣೆ ಹಾಕುತ್ತಾರ ಎನ್ನುವ ಅನುಮಾನ ಕೈ ಪಕ್ಷವನ್ನು ಕಾಡುತ್ತಿದೆ.

ಹೀಗಾಗಿ, ಕೊನೆಯ ಪಕ್ಷ ಹತ್ತರಿಂದ ಹದಿನೈದು ಕ್ಷೇತ್ರಗಳಲ್ಲಿ ಹೊಸಬರನ್ನು ಅದರಲ್ಲೂ ಅನ್ಯಪಕ್ಷಗಳ ಪ್ರಬಲ ನಾಯಕರನ್ನು ಕರೆತಂದು ಟಿಕೆಟ್ ಕೊಡುವ ಆಲೋಚನೆ ಕಾಂಗ್ರೆಸ್ ಪಕ್ಷಕ್ಕೆ ಇದೆ.

ಕರ್ನಾಟಕದಿಂದ ಕೊನೆಪಕ್ಷ 20 ಕ್ಷೇತ್ರಗಳನ್ನು ಗೆಲ್ಲಲೇಬೇಕು ಎನ್ನುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ಆದರೆ, ಬಿಜೆಪಿ- ಜೆಡಿಎಸ್ ಮೈತ್ರಿಕೂಟ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ.

20 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ

ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕು ಎಂಬ ಕಾರಣಕ್ಕಾಗಿ ಅನ್ಯಪಕ್ಷಗಳ ಮುಖಂಡರನ್ನು ಸೆಳೆಯುವ ತಂತ್ರಕ್ಕೆ ಮತ್ತೆ ಚಾಲನೆ ಕೊಟ್ಟಿದೆ.

ಸಿಎಂ, ಡಿಸಿಎಂ ಅವರಿಬ್ಬರೂ ದೆಹಲಿಯ ನಾಯಕರೊಂದಿಗೆ ಚರ್ಚಿಸಿ ಹಿಂತಿರುಗುತ್ತಿದ್ದಂತೆ ಅನ್ಯಪಕ್ಷಗಳ ನಿಷ್ಠಾವಂತ ಮುಖಂಡರು, ಕಾರ್ಯಕರ್ತರು, ಶಾಸಕರು ಮತ್ತು ಸಂಸದರನ್ನು ಸೆಳೆಯಲು ಪ್ರಭಾವೀ ನಾಯಕರು ರಾತ್ರಿ ಕಸರತ್ತು ನಡೆಸಿದ್ದಾರೆ.

ಕೆಲ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್ ಸೇರಿ ಕೆಲ ನಾಯಕರು ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ.

ಪ್ರತಿಷ್ಠೆಯಾದ ಲೋಕಸಭಾ ಚುನಾವಣೆಕೆಪಿಸಿಸಿ ಅಧ್ಯಕ್ಷರಿಗೆ ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಲೋಕಸಭಾ ಚುನಾವಣೆ ಪ್ರತಿಷ್ಠೆಯಾಗಿದೆ. ವಿಧಾನಸಭಾ ಚುನಾವಣಾ ಜಯಭೇರಿಯನ್ನೇ ಲೋಕಸಭಾ ಚುನಾವಣೆಯಲ್ಲೂ ಸಾಧಿಸಲು ತಂತ್ರ ರೂಪಿಸಿದ್ದಾರೆ.

ದೆಹಲಿಯಲ್ಲಿ ವರಿಷ್ಠರೊಂದಿಗೆ ನಡೆದ ಸಭೆಯಲ್ಲಿ ಆಪರೇಷನ್ ಹಸ್ತಕ್ಕೆ ಹಸಿರು ನಿಶಾನೆ ಪಡೆದಿರುವುದಲ್ಲದೆ, ಇದರಿಂದಾಗಿ ನಿಗಮ-ಮಂಡಳಿ ನೇಮಕಾತಿ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ಪುನರ್ ರಚನೆಯೂ ಮುಂದಕ್ಕೆ ಹೋಗಿದೆ.

ನಿಗಮ-ಮಂಡಳಿ ನೇಮಕ ಮತ್ತೆ ಮುಂದಕ್ಕೆ

ಪಕ್ಷದ 39 ಶಾಸಕರಿಗೆ ಅಧಿಕಾರ ನೀಡುವ ಪಟ್ಟಿ ಅಂತಿಮಗೊಂಡು ಇನ್ನೇನು ಪ್ರಕಟಗೊಳ್ಳಬೇಕೆಂಬ ಸಮಯದಲ್ಲಿ ವರಿಷ್ಠರು ಆ ಪಟ್ಟಿಗೆ ತಡೆ ನೀಡಿದ್ದಾರೆ.

ಕರ್ನಾಟಕದಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಲೇಬೇಕೆಂಬ ಗುರಿ ಇಟ್ಟುಕೊಂಡಿರುವ ಎಐಸಿಸಿ, ರಾಜ್ಯ ನಾಯಕರಿಗೆ ಟಾರ್ಗೆಟ್ ನೀಡಿ ಮುಂದುವರಿಯುವಂತೆ ತಿಳಿಸಿದೆ.

Tags: bjpckcknewsnowCongressjdsloksabha electionoparation hastaPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋಲಾರದಲ್ಲಿ ಪತ್ರಕರ್ತರನ್ನು ಏರುದನಿಯಲ್ಲಿ ಗದರಿ ಕೆಡಿಪಿ ಸಭೆಯಿಂದ ಹೊರ ಹಾಕಿದ ಸಿಎಂ ಸಿದ್ದರಾಮಯ್ಯ!

ಕೋಲಾರದಲ್ಲಿ ಪತ್ರಕರ್ತರನ್ನು ಏರುದನಿಯಲ್ಲಿ ಗದರಿ ಕೆಡಿಪಿ ಸಭೆಯಿಂದ ಹೊರ ಹಾಕಿದ ಸಿಎಂ ಸಿದ್ದರಾಮಯ್ಯ!

Leave a Reply Cancel reply

Your email address will not be published. Required fields are marked *

Recommended

ಪ್ರಥಮ ಗಣರಾಜ್ಯೋತ್ಸವ ಹೇಗಿತ್ತು ಗೊತ್ತಾ?

ಪ್ರಥಮ ಗಣರಾಜ್ಯೋತ್ಸವ ಹೇಗಿತ್ತು ಗೊತ್ತಾ?

4 years ago
ಸರಕಾರದ ಆಡಳಿತದಲ್ಲಿ ವಿಜಯೇಂದ್ರ ಮತ್ತು ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ ಎಂದು ಮತ್ತೊಮ್ಮೆ ಪುನುರುಚ್ಛರಿಸಿದ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್

ಸರಕಾರದ ಆಡಳಿತದಲ್ಲಿ ವಿಜಯೇಂದ್ರ ಮತ್ತು ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ ಎಂದು ಮತ್ತೊಮ್ಮೆ ಪುನುರುಚ್ಛರಿಸಿದ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ