• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸಲಹೆಗಾರರನ್ನು ನೇಮಕ ಮಾಡಿಕೊಂಡ ಮುಖ್ಯಮಂತ್ರಿಗೆ ಹ್ಯಾಟ್ಸಾಫ್‌ ಎಂದ ಹೆಚ್.ಡಿ.ಕುಮಾರಸ್ವಾಮಿ

cknewsnow desk by cknewsnow desk
January 1, 2024
in NATION, STATE
Reading Time: 2 mins read
0
ಸಲಹೆಗಾರರನ್ನು ನೇಮಕ ಮಾಡಿಕೊಂಡ ಮುಖ್ಯಮಂತ್ರಿಗೆ ಹ್ಯಾಟ್ಸಾಫ್‌ ಎಂದ ಹೆಚ್.ಡಿ.ಕುಮಾರಸ್ವಾಮಿ
968
VIEWS
FacebookTwitterWhatsuplinkedinEmail

ರೈತರಿಗೆ ಬರ ಪರಿಹಾರ ಕೊಡಲು ದುಡ್ಡಿಲ್ಲ, ರಾಜಕೀಯ ಗಂಜಿ ಕೇಂದ್ರ ಸೃಷ್ಟಿಗೆ ದುಡ್ಡಿದೆ; ಸಲಹೆಗಾರರಿಗೆ ಸಂಪುಟ ದರ್ಜೆ ಭಾಗ್ಯ ಕರುಣಿಸಿದ ಸಿಎಂ ಕ್ರಮಕ್ಕೆ ಹೆಚ್‌ಡಿಕೆ ಲೇವಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ಮೀನಾಮೇಷ ಎಣಿಸುತ್ತಿದೆ. ಆದರೆ ʼರಾಜಕೀಯ ಗಂಜಿ ಕೇಂದ್ರʼಗಳನ್ನು ಯಥೇಚ್ಚವಾಗಿ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬರದ ನಡುವೆಯೂ ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ಕರುಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ರಮವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಈ ಸರಕಾರ ರೈತರನ್ನು ಬಹಳ ಕೇವಲವಾಗಿ ನಡೆಸಿಕೊಳ್ಳುತ್ತಿದೆ. ಆದರೆ, ಅಧಿಕಾರನ್ನು ಭರ್ಜರಿಯಾಗಿ ಅನುಭವಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಸಲಹೆಗಾರರನ್ನು ನೇಮಕ ಮಾಡಿಕೊಂಡಿರುವ ಸಿಎಂಗೆ ಹ್ಯಾಟ್ಸಾಫ್ ಎಂದ ಹೆಚ್ಡಿಕೆ ಅವರು; ಸಿಎಂ ಅವರು ಬಿ.ಆರ್.ಪಾಟೀಲ್ ಅವರನ್ನು ಸಲಹೆಗಾರರನ್ನಾಗಿ ನೆಮಕ ಮಾಡಿಕೊಂಡಿದ್ದಾರೆ. ಬಸವರಾಜ ರಾಯರೆಡ್ಡಿ ಅವರಿಗೆ ಆರ್ಥಿಕ ಸಲಹೆಗಾರರು ಎಂದು ಮಾಡಿ ಸಂಪುಟ ದರ್ಜೆ ನೀಡಿದ್ದಾರೆ. ಹಾಗೆಯೇ, ರಾಜ್ಯದ 3ನೇ ಆಡಳಿತ ಸುಧಾರಣಾ ಆಯೋಗಕ್ಕೆ ಆರ್.ವಿ.ದೇಶಪಾಂಡೆ ಅವರಿಗೆ ಅವಕಾಶ ನೀಡಿ ಅವರಿಗೂ ಸಂಪುಟ ದರ್ಜೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

ಆತನ್ಯಾರೋ ಚುನಾವಣೆ ಮತ್ತು ಗ್ಯಾರಂಟಿ ತಂತ್ರಗಾರಿಕೆ ಮಾಡಿದ ಎಂದು ಆತನಿಗೂ ಸಲಹೆಗಾರ ಹುದ್ದೆ ಕೊಟ್ಟು ಸಂಪುಟ ದರ್ಜೆ ಕರುಣಿಸಿದ್ದಾರೆ. ಇನ್ನೊಬ್ಬರನ್ನು ಮಾಧ್ಯಮ ಸಲಹೆಗಾರ ಅಂತ ಮಾಡಿಕೊಂಡು ಅವರಿಗೂ ಸಂಪುಟ ದರ್ಜೆ ನೀಡಿದ್ದಾರೆ. ಹೀಗೆ ಸುತ್ತಲೂ ಸಲಹೆಗಾರರು, ಕಾರ್ಯದರ್ಶಿಗಳನ್ನು ಇಟ್ಟುಕೊಟಂಡು ಜನರ ತೆರಿಗೆ ದುಡ್ಡಿನಲ್ಲಿ ಗೂಟದ ಕಾರು, ಸರಕಾರಿ ಕಚೇರಿ, ಸಿಬ್ಬಂದಿ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ದಾಖಲೆ 14 ಬಜೆಟ್‌ ಮಂಡಿಸಿದವರಿಗೆ ಸಲಹೆಗಾರರಾ!?

ನಾಡು ಕೊಳ್ಳೆ ಹೋಗುತ್ತಿದ್ದರೂ ಈ ಸರಕಾರದಲ್ಲಿ ಅಧಿಕಾರ ಲಾಲಸೆಗೇನೂ ಕೊರತೆ ಇಲ್ಲ. 14 ಬಜೆಟ್ʼಗಳನ್ನು ಮಂಡಿಸಿ ದಾಖಲೆ ಮಾಡಿದವರು ತಮಗೆ ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಕಠಿಣ ಶಬ್ದಗಳಲ್ಲಿ ಟೀಕಿಸಿದರು ಕುಮಾರಸ್ವಾಮಿ ಅವರು.

ಅವರೇ ವಿಶ್ವ ವಿಖ್ಯಾತ ಆರ್ಥಿಕ ತಜ್ಞರು. ಹಣಕಾಸು ಸಚಿವರಾಗಿ ಅನೇಕ ಸಿಎಂಗಳ ಜತೆ ಕೆಲಸ ಮಾಡಿದವರು. ಡಿಸಿಎಂ, ಸಿಎಂ ಹಾಗೂ ಪ್ರತಿಪಕ್ಷ ನಾಯಕರಾಗಿದ್ದವರು. ಅವರು ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದರೆ ಅಚ್ಚರಿ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಟಾಂಗ್ ನೀಡಿದರು.

ಇನ್ನು, ಆರ್.ವಿ.ದೇಶಪಾಂಡೆ ಅವರು 25 ವರ್ಷಗಳ ಕಾಲ ಮಂತ್ರಿ ಆಗಿದ್ದವರು. ವಿವಿಧ ಸಿಎಂಗಳ ಜತೆ ಹತ್ತಾರು ಇಲಾಖೆಗಳಲ್ಲಿ ಕೆಲಸ ಮಾಡಿದ್ದವರು. ಬಹಳ ಹಿರಿಯರು. ಈಗ ಅವರನ್ನು ಮೂರನೇ ಆಡಳತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಹಿಂದೆ ಹಾರನಹಳ್ಳಿ ರಾಮಸ್ವಾಮಿ, ನಿವೃತ್ತ ಐಎಎಸ್ ಅಧಿಕಾರಿ ವಿಜಯಭಾಸ್ಕರ್ ಅವರುಗಳು ಇದೇ ಆಯೋಗದ ಅಧ್ಯಕ್ಷರಾಗಿ ಕೆಲಸ ಮಾಡಿ ಆಡಳಿತ ಸುಧಾರಣೆಗೆ ತಲಾ ಒಂದೊಂದು ವರದಿ ನೀಡಿದ್ದಾರೆ. ಆ ವರದಿಗಳು ಏನಾಗಿವೆ? ಆ ವರದಿಗಳ ಸಲಹೆಗಳನ್ನ ಸ್ವೀಕಾರ ಮಾಡಿ ಎಷ್ಟು ಆಡಳಿತ ಸುಧಾರಣೆ ಮಾಡಿದ್ದೀರಾ? ಎಂಬುದನ್ನು ಜನರಿಗೆ ತಿಳಿಸಲಿ ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದರು.

ವಿಧಾನಸೌಧದಲ್ಲಿ ವರ್ಗಾವಣೆ ದಂಧೆ ಮಾಡಿಕೊಂಡು ಏನು ಆಡಳಿತ ಸುಧಾರಣೆ ಮಾಡುತ್ತಾರೆ ಇವರು? ಮೇಯುವುದಕ್ಕೆ ಎಲ್ಲರಿಗೂ ಮುಕ್ತ ಅವಕಾಶ ಕೊಟ್ಟಿದ್ದಾರೆ. ಬಿ.ಆರ್‌‌.ಪಾಟೀಲ್ ಅವರನ್ನು ಸಿಎಂ ತಮ್ಮ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಸಿಎಂಗಿಂತ ಸಲಹೆಗಾರ ಬೇಕಾ? ಅಹಿಂದ ಐಕಾನ್ ಅವರು. ಖರ್ಗೆಯರನ್ನೇ ದೆಹಲಿಗೆ ಎತ್ತಿಹಾಕಿದ ರಾಜಕೀಯ ಅನುಭವ ಅವರದ್ದು. ಅಂಥವರಿಗಿಂತ ಹೆಚ್ಚು ಅನುಭವ ಬಿ.ಆರ್.ಪಾಟೀಲ್ ಅವರಿಗೆ ಇದೆಯಾ? ಎಂದು ಲೇವಡಿ ಮಾಡಿದರು.

2009ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಕ್ಷೇತ್ರಗಳಲ್ಲಿಯೂ ಸೋತಿತ್ತು. ಅಂತಹ ಹೀನಾಯ ಸೋಲಿಗೆ ಕಾರಣರಾದ ನಾಯಕನಿಗೆ ಸಲಹೆಗಾರರ ಅಗತ್ಯ ಇದೆಯಾ? ದೇವರಾಜು ಅರಸು ನಂತರ ಎರಡು ಬಾರಿ ಸಿಎಂ, ವಿರೋಧ ಪಕ್ಷದ ನಾಯಕರಾಗಿ, ಡಿಸಿಎಂ ಆಗಿ ಅನುಭವ ಪಡೆದಿರುವ ಸಿದ್ದರಾಮಯ್ಯ ಅವರೇ ಬಿ.ಆರ್.ಪಾಟೀಲ್ ಅವರರಿಂದ ಪಡೆಯುವ ಸಲಹೆಯಾದರೂ ಇರುತ್ತದಾ? ಇದೆಂಥಾ ವಿಪರ್ಯಾಸ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

https://youtu.be/qivL-3GTW-Q

2 ಸಾವಿರ ರೂಪಾಯಿ ಪರಿಹಾರ ಕೊಡಲು ಮೀನಾಮೇಷ

ಈ ಸರಕಾರ ಏನು ಮಾಡುತ್ತಿದೆ? ಕೆಲ ಸಚಿವರು ರೈತರ ಬಗ್ಗೆ ಏನೆಲ್ಲಾ ಮಾತನಾಡುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಅನ್ನ ಬೆಳೆದುಕೊಡುವ ರೈತರ ಬಗ್ಗೆ ಇಷ್ಟು ನಿರ್ದಯವಾಗಿ ಸರಕಾರ ವರ್ತಿಸಬಾರದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಫ್ರೂಟ್ ತಂತ್ರಾಂಶದ ಮೂಲಕ ರೈತರಿಗೆ 2 ಸಾವಿರ ರೂಪಾಯಿ ಪರಿಹಾರ ಕೊಡುತ್ತೇವೆ ಎಂದು ಸರ್ಕಾರ ಹೇಳಿತ್ತು. ಅದರೆ ಇಲ್ಲಿಯವರೆಗೆ ರೈತರಿಗೆ ಬಿಡಿಗಾಸನ್ನೂ ಕೊಟ್ಟಿಲ್ಲ. ಇದು ಸರ್ಕಾರದ ಏಳು ತಿಂಗಳ ಸಾಧನೆ. ನುಡಿದಂತೆ ನಡೆಯುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಇವರು. ನುಡಿದಂತೆ ನಡೆಯುವುದು ಎಂದರೆ ಹೀಗೆನಾ ಎಂದು ಅವರು ಸರಕಾರದ ಮೇಲೆ ತೀವ್ರ ಪ್ರಹಾರ ನಡೆಸಿದರು.

ಕೆಲ ದಿನಗಳ ಹಿಂದೆ ಹೋಗಿ ಪ್ರಧಾನಿಗಳು ಸೇರಿದಂತೆ ಕೇಂದ್ರದ ವಿವಿಧ ನಾಯಕರನ್ನು ಸಿಎಂ, ಡಿಸಿಎಂ ಮತ್ತು ಸಚಿವರು ಭೇಟಿ ಮಾಡಿದ್ದರು. ಕೇಂದ್ರವೂ ಕೂಡ ವರದಿಯನ್ನು ಸಿದ್ಧ ಮಾಡಿಕೊಂಡಿದೆ. NDRF ಅಡಿ ಹಣ ಶೀಘ್ರವೇ ಬಿಡುಗಡೆ ಆಗಬಹುದು. ಆದರೆ, ರಾಜ್ಯದಲ್ಲಿಯೂ ಸರಕಾರ ಎನ್ನುವುದು ಇದೆಯಲ್ಲ. ಕೇಂದ್ರದಿಂದ ಹಣ ಬರುವುದರೊಳಗೆ ರೈತರಿಗೆ ತಾನೇ ಹೇಳಿದಂತೆ 2 ಸಾವಿರ ರೂಪಾಯಿ ಕೊಡಬಹುದಿತ್ತು. ಯಾಕೆ ಈ ಹಣವನ್ನು ಕೊಡಲಿಲ್ಲ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ರೈತರು ಕಷ್ಟದಲ್ಲಿದ್ದರೆ, ಇವರು ಮೂವರು ಡಿಸಿಎಂಗಳ ಗುಂಗಿನಲ್ಲಿ ಇದ್ದಾರೆ!

ರಾಜ್ಯದಲ್ಲಿ ಇಂಥ ಭೀಕರ ಬರದ ಪರಿಸ್ಥಿತಿ ಇದ್ದರೂ ಇವರ ಮೋಜು ಮಸ್ತಿ ಏನು ಕಡಿಮೆ ಆಗಿಲ್ಲ. ಈಗಾಗಲೇ ರೈತರ ಆತ್ಮಹತ್ಯೆಗಳು ಆರಂಭವಾಗಿದೆ. ಬೆಳೆ ಉಳಿಸಿಕೊಳ್ಳಲು ನಾರಾಯಣಪುರ ಡ್ಯಾಮ್ ಬಳಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಈ ಸರಕಾರಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯದ ಚಿಂತೆ. ಇವರು ಮೂವರು ಡಿಸಿಎಂಗಳನ್ನು ಮಾಡುವ ಗುಂಗಿನಲ್ಲಿ ಇದ್ದಾರೆ ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್‌ ಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಹಿರಿಯ ಮುಖಂಡ ಕೆ.ಟಿ.ಶಾಂತಕುಮಾರ್‌ ಉಪಸ್ಥಿರಿದ್ದರು.

Tags: advisors to chief ministercabinet rankckcknewsnowCongresshd kumaraswamyjdsnewssiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ಬೆಂಗಳೂರಿನಲ್ಲಿ ಸುರಂಗ ಯೋಜನೆಗಾಗಿ ಇಬ್ಬರು ಸಚಿವರ ನಡುವೆ ಫೈಟ್

Leave a Reply Cancel reply

Your email address will not be published. Required fields are marked *

Recommended

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

3 years ago
ನಂದಿಬೆಟ್ಟಕ್ಕೆ ರೋಪ್‌ ವೇ; ಒಂದು ತಿಂಗಳಲ್ಲೇ ಟೆಂಡರ್‌

ನಂದಿಬೆಟ್ಟಕ್ಕೆ ರೋಪ್‌ ವೇ; ಒಂದು ತಿಂಗಳಲ್ಲೇ ಟೆಂಡರ್‌

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ