• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ನರೇಂದ್ರ ಮೋದಿ ಅಲೆ: ರಾಜಕೀಯ ನೆಲೆ ಕಂಡುಕೊಳ್ಳಲು ಲೋಕಸಭೆ ಟಿಕೆಟ್’ಗೆ ಬಿಜೆಪಿಯಲ್ಲಿ ಮಾಜಿಗಳ ಪೈಪೋಟಿ

cknewsnow desk by cknewsnow desk
January 4, 2024
in NATION, POLITICS, STATE
Reading Time: 2 mins read
0
ನರೇಂದ್ರ ಮೋದಿ ಅಲೆ: ರಾಜಕೀಯ ನೆಲೆ ಕಂಡುಕೊಳ್ಳಲು  ಲೋಕಸಭೆ ಟಿಕೆಟ್’ಗೆ ಬಿಜೆಪಿಯಲ್ಲಿ ಮಾಜಿಗಳ ಪೈಪೋಟಿ
1k
VIEWS
FacebookTwitterWhatsuplinkedinEmail

ಕೇಂದ್ರ ಸಚಿವ ಸ್ಥಾನ ಸಿಗುತ್ತದೆ ಎನ್ನುವ ನಿರೀಕ್ಷೆ; ಅಗ್ನಿಪರೀಕ್ಷೆಗೆ ತಾಲೀಮು ನಡೆಸುತ್ತಿರುವ ನಾಯಕರು

ಚಿಕ್ಕಬಳ್ಳಾಪುರ ಟಿಕೆಟ್’ಗೆ ಡಾ.ಕೆ.ಸುಧಾಕರ್ ಪೈಪೋಟಿ; ಮಗನಿಗಾಗಿ ಯಲಹಂಕ ವಿಶ್ವನಾಥ್ ಲಾಬಿ

ಬೆಂಗಳೂರು: ಮುಂದುವರಿದ ನರೇಂದ್ರ ಮೋದಿ ಅವರ ಅಲೆಯಲ್ಲಿ ದಡ ಸೇರಿಕೊಳ್ಳಲು ರಾಜ್ಯ ಬಿಜೆಪಿ ನಾಯಕರ ಧಾವಂತ ಹೆಚ್ಚಾಗಿದ್ದು, ಇದು ಲೋಕಸಭೆ ಟಿಕೆಟ್ ಪಡೆಯಲು ಭಾರೀ ಪೈಪೋಟಿಗೆ ಕಾರಣವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ರಾಜ್ಯ ಬಿಜೆಪಿ ನಾಯಕರಲ್ಲಿ ಅನೇಕರು ಕೇಂದ್ರ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಲೋಕಸಭೆಗೆ ಟಿಕೆಟ್ ಗಿಟ್ಟಿಸಲು ಈಗಾಗಲೇ ಹರಸಾಹಸ ಶುರು ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಸೇರಿದಂತೆ ಹಲವು ಮುಖಂಡರು ದೆಹಲಿ ರಾಜಕಾರಣಕ್ಕೆ ತೆರಳಲು ಭಾರೀ ಆಸಕ್ತಿ ತೋರುತ್ತಿದ್ದಾರೆ ಎಂದು ಗೊತ್ತಾಗಿದೆ.

ಹೀನಾಯ ಸೋಲು ಕಂಡಿದ್ದ ನಾಯಕರು

ರಾಜ್ಯ ಬಿಜೆಪಿ ಆಡಳಿತದಲ್ಲಿ ಸತತವಾಗಿ ಅಧಿಕಾರ ಅನುಭವಿಸಿದ್ದ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು ಅಲ್ಲದೆ, ಸಿ.ಟಿ. ರವಿ, ಡಾ.ಕೆ.ಸುಧಾಕರ್ ಸೇರಿದಂತೆ ಕೆಲವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು.

ಇವರೆಲ್ಲರೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿದು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಅಲೆಯಲ್ಲಿ ಜಯಗಳಿಸಿ ಸಂಸದರಾಗುವುದಷ್ಟೇ ಅಲ್ಲದೆ, ಸಚಿವ ಸ್ಥಾನವೂ ಧಕ್ಕಬಹುದೆಂಬ ಆಶಾಭಾವನೆಯಲ್ಲಿದ್ದಾರೆ.

ಅಲ್ಲದೆ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದು ಕೇಂದ್ರ ರಾಜಕಾರಣಕ್ಕೆ ತೆರಳುವ ಉತ್ಸಾಹದಲ್ಲಿದ್ದಾರೆ ಎನ್ನುವುದು ಅತ್ಯಂತ ಆಸಕ್ತಿದಾಯಕ ಅಂಶ.

ಹಿರಿತನ, ಜಾತಿ ಆಧಾರ

ಸಂಸದರಾದರೆ ತಮ್ಮ ಹಿರಿತನ, ಜಾತಿ ಆಧಾರದ ಮೇಲೆ ತಮಗೆ ಕೇಂದ್ರದಲ್ಲಿ ಅಧಿಕಾರ ಸಿಗಬಹುದು ಎಂಬ ಆಲೋಚನೆಯಲ್ಲಿದ್ದಾರೆ. ಹಿಂದೆ ಡಿ.ವಿ.ಸದಾನಂದ ಗೌಡರಿಗೆ ಇದೇ ರೀತಿ ಅಧಿಕಾರ ಸಿಕ್ಕಿತ್ತು. ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಅವರು ಮೋದಿ ಅವರ ಸಂಪುಟ ಪ್ರವೇಶಿಸಿ ಪ್ರಭಾವೀ ರೈಲ್ವೆ ಖಾತೆಯನ್ನು ಪಡೆದುಕೊಂಡಿದ್ದರು.

ಗೋವಿಂದ ಕಾರಜೋಳ ಅವರು ವಿಜಯಪುರ ಮೀಸಲು ಕ್ಷೇತ್ರದಿಂದ, ಶ್ರೀರಾಮುಲು ಅವರು ಬಳ್ಳಾರಿ ಮೀಸಲು ಕ್ಷೇತ್ರ, ಸಿ.ಟಿ. ರವಿ ಅವರು ಬೆಂಗಳೂರು ಉತ್ತರ ಅಥವಾ ಉಡುಪಿ-ಚಿಕ್ಕಮಗಳೂರು, ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಇಲ್ಲವೇ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಮಾಜಿ ಸಚಿವ, ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಬೆಂಗಳೂರು ಗ್ರಾಮಾಂತರದಿಂದ ಕಣಕ್ಕಿಳಿದು ಸಂಸದರಾಗಿ ಒಕ್ಕಲಿಗ ಕೋಟಾದ ಮೇಲೆ ಸಚಿವರಾಗಬಹುದೆಂಬ ಲೆಕ್ಕಾಚಾರದಲ್ಲಿದ್ದಾರೆ.

ಅಧಿಕಾರ ಪಡೆಯುವ ಹಂಬಲ

ಇದೇ ರೀತಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಪ್ರಭಾವೀ ನಾಯಕರುಗಳು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿದು ಅಧಿಕಾರ ಪಡೆಯುವ ಹಂಬಲದಲ್ಲಿದ್ದಾರೆ. ಅಷ್ಟೇ ಅಲ್ಲ, ಟಿಕೆಟ್ ಪಡೆಯಲು ತಮ್ಮ ಮುಖಂಡರುಗಳ ಮೂಲಕ ಕೇಂದ್ರ ನಾಯಕರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಹಲವು ಕಾರಣಗಳಿಗಾಗಿ ತನ್ನ ವರ್ಚಸ್ಸನ್ನು ಕುಂದಿಸಿಕೊಂಡಿದೆ. ಇದು ಹಾಲಿ ಸರಕಾರದ ಬಹುದೊಡ್ಡ ಮೈನಸ್ ಪಾಯಂಟ್.

ಕುಂದುತ್ತಿದೆ ಗ್ಯಾರಂಟಿ ಹವಾ

ಐದು ಗ್ಯಾರಂಟಿ ಯೋಜನೆಗಳ ಜಾರಿ ಕಾರಣಕ್ಕೆ ಆರಂಭದಲ್ಲಿ ಸರಕಾರಕ್ಕೆ ಸಾಕಷ್ಟು ಜನಪ್ರಿಯತೆ ಬಂದಿದ್ದು ನಿಜ. ಆದರೆ, ನಂತರದ ಬೆಳವಣಿಗೆಗಳಲ್ಲಿ ಆ ಜನಪ್ರಿಯತೆ ನಿರಂತರವಾಗಿ ಕುಸಿಯುತ್ತಾ ಸಾಗಿದೆ. ಇದನ್ನು ಬಿಜೆಪಿ ಲಾಭ ಮಾಡಿಕೊಳ್ಳುವುದು ಖಚಿತ.

ಹಿಂದುಳಿದ ವರ್ಗಗಳ ಆಯೋಗದ ವರದಿ ಜಾರಿಗೆ ಮುಂದಾಗಿರುವುದು, ಬಲಿಷ್ಠ ಲಿಂಗಾಯತ ಹಾಗೂ ಒಕ್ಕಲಿಗರ ಕೆಂಗಣ್ಣಿಗೆ ಸರಕಾರ ಗುರಿಯಾಗಿದೆ.

ಈ ಎರಡೂ ಸಮುದಾಯಗಳು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದವು, ಈ ಕಾರಣಕ್ಕೆ ವಿರೋಧವಾಗುವುದರ ಜತೆಗೆ ಅತಿಯಾಗಿ ಅಲ್ಪಸಂಖ್ಯಾತರನ್ನು ಓಲೈಸುತ್ತಿರುವುದು ಉಳಿದ ಸಮಾಜಗಳವರಿಗೆ ಕಿರಿಕಿರಿ ಉಂಟು ಮಾಡಿದೆ. ಈ ಕಾರಣಕ್ಕೆ ಅಹಿಂದ ವಲಯದಲ್ಲಿರುವ ಕೆಲ ಸಮುದಾಯಗಳನ್ನು ಬಿಟ್ಟರೆ ಉಳಿದ ಬಹುತೇಕ ಸಮುದಾಯಗಳು ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿವೆ.

ಮತದಾರರಲ್ಲಿ ಕೈ ಪಕ್ಷದ ಮೇಲೆ ಭ್ರಮನಿರಸನ

ಐದು ಗ್ಯಾರಂಟಿಗಳ ಜಾರಿಯ ಗುಂಗಿನಲ್ಲಿ ಉಳಿದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು ಕೊಡುತ್ತಿಲ್ಲ, ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಮೂಲಸೌಕರ್ಯ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುತ್ತಿಲ್ಲ, ಇದು ಮತದಾರರಲ್ಲಿ ಬೇಸರ ಮೂಡಿಸಿದೆ. ಇದಕ್ಕಿಂತ ಮಿಗಿಲಾಗಿ ಆಡಳಿತ ಪಕ್ಷದ ಶಾಸಕರೇ ಈಗ ಅನುದಾನದ ವಿಷಯದಲ್ಲಿ ಬೇಸರಗೊಂಡಿದ್ದಾರೆ. ಇದು ಮಾರ ವಿಭಜನೆಗೆ ಕಾರಣವಾಗುವ ಭಯವೂ ಕಾಂಗ್ರೆಸ್ ಪಕ್ಷವನ್ನು ಕಾಡುತ್ತಿದೆ.

ಅಧಿಕಾರಕ್ಕೆ ಬರುತ್ತಿದ್ದಂತೆ ವರ್ಗಾವರ್ಗಿ ದಂಧೆಯೂ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಇದೆಲ್ಲದಕ್ಕೂ ಮಿಗಿಲಾಗಿ ಮತ್ತೆ ರಾಷ್ಟ್ರದಲ್ಲಿ ಸದೃಢ ಸರಕಾರ ತರಲು ನರೇಂದ್ರ ಮೋದಿ ಅವರನ್ನೇ ಬೆಂಬಲಿಸಬೇಕೆಂಬ ಹುಮ್ಮಸ್ಸು ಮತದಾರರಲ್ಲಿ ಕಂಡುಬರುತ್ತಿದೆ. ಈಗಾಗಲೇ ಎರಡೂ ರಾಷ್ಟ್ರೀಯ ಪಕ್ಷಗಳು ನಡೆಸಿರುವ ಹಲವಾರು ಸಮೀಕ್ಷೆಗಳಲ್ಲಿ ಈ ಅಂಶ ಸ್ಪಷ್ಟವಾಗಿ ಹೊರಬಿದ್ದಿದೆ.

ಅಲ್ಲದೆ, ರಾಮಮಂದಿರ ನಿರ್ಮಾಣ ನರೇಂದ್ರ ಮೋದಿ ಅವರ ಕಾರ್ಯ ಕ್ಷಮತೆಗೆ ಕೈಗನ್ನಡಿ ಆಗಿದ್ದು, ಕಾಂಗ್ರೆಸ್ ಪಾಲಿಗೆ ಇದು ಪ್ರಶ್ನಾರ್ಥಕವಾಗಿದೆ.

ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ಅಧಿಕಾರ ಇಲ್ಲದೆ ಮನೆಯಲ್ಲಿರುವ ಬಿಜೆಪಿ ನಾಯಕರು ಲೋಕಸಭೆ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ಭಾರೀ ಪೈಪೋಟಿ ಶುರುವಾಗಿದೆ.

bjp, Loksabha election, demand for ticket, Congress, karnataka, politics, ck, cknewsnow,

Tags: bjpckcknewsnowCongressdemand for ticketkarnatakaloksabha electionPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಯುವನಿಧಿ ಭತ್ಯಕ್ಕೆ ನೊಂದಾಯಿಸಿಕೊಳ್ಳಿ, ಷರತ್ತುಗಳು ಅನ್ವಯ

ಯುವನಿಧಿ ಭತ್ಯಕ್ಕೆ ನೊಂದಾಯಿಸಿಕೊಳ್ಳಿ, ಷರತ್ತುಗಳು ಅನ್ವಯ

Leave a Reply Cancel reply

Your email address will not be published. Required fields are marked *

Recommended

ಚಾಮರಾಜನಗರ, ಕೋಲಾರ ಜಿಲ್ಲೆಗಳ ಆಕ್ಸಿಜನ್‌ ದುರಂತಗಳ ಎಫೆಕ್ಟ್:‌ ಎಚ್ಚೆತ್ತುಕೊಂಡ ಆರೋಗ್ಯ ಸಚಿವರ ತವರು ಜಿಲ್ಲಾಡಳಿತ, ಆಮ್ಲಜನಕ-ರೆಮಿಡಿಸ್ವೀರ್‌ ಕೊರತೆ ಇಲ್ಲ ಎಂದ ಡಿಸಿ

ಚಾಮರಾಜನಗರ, ಕೋಲಾರ ಜಿಲ್ಲೆಗಳ ಆಕ್ಸಿಜನ್‌ ದುರಂತಗಳ ಎಫೆಕ್ಟ್:‌ ಎಚ್ಚೆತ್ತುಕೊಂಡ ಆರೋಗ್ಯ ಸಚಿವರ ತವರು ಜಿಲ್ಲಾಡಳಿತ, ಆಮ್ಲಜನಕ-ರೆಮಿಡಿಸ್ವೀರ್‌ ಕೊರತೆ ಇಲ್ಲ ಎಂದ ಡಿಸಿ

4 years ago
ನಿಮ್ಮೊಳಗಿನ ದೈವಿಕ ಬೆಳಕು ರಾಮ

ನಿಮ್ಮೊಳಗಿನ ದೈವಿಕ ಬೆಳಕು ರಾಮ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ