• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home SCIENCE

ಎಲ್-1 ಪಾಯಿಂಟ್ ಸೇರಿದ ಆದಿತ್ಯ ನೌಕೆ; ಹೆಮ್ಮೆಯ ಇಸ್ರೋ ತಂಡದಲ್ಲಿ ನಮ್ಮ ಗುಡಿಬಂಡೆಯ ಗುರ್ರಪ್ಪ, ಗೌರಿಬಿದನೂರಿನ ಶ್ರೀನಾಥ

P K Channakrishna by P K Channakrishna
January 6, 2024
in SCIENCE, STATE, TECH, WORLD, WORLD
Reading Time: 1 min read
0
ಎಲ್-1 ಪಾಯಿಂಟ್ ಸೇರಿದ ಆದಿತ್ಯ ನೌಕೆ; ಹೆಮ್ಮೆಯ  ಇಸ್ರೋ ತಂಡದಲ್ಲಿ ನಮ್ಮ ಗುಡಿಬಂಡೆಯ ಗುರ್ರಪ್ಪ, ಗೌರಿಬಿದನೂರಿನ ಶ್ರೀನಾಥ
1.1k
VIEWS
FacebookTwitterWhatsuplinkedinEmail

ಐತಿಹಾಸಿಕ ಮಿಷನ್ ಭಾಗವಾದ ಹಳ್ಳಿ ಪ್ರತಿಭೆಗಳು

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆ ಮತ್ತು ನಿರೀಕ್ಷೆಗಳ ಪ್ರತೀಕವಾದವಾದ ಇಸ್ರೋ ಇನ್ನೊಂದು ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದೆ. ಆ ಮೈಲುಗಲ್ಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೆಜ್ಜೆಗುರುತುಗಳು ಮೂಡಿವೆ.

ಗುಡಿಬಂಡೆ ತಾಲೂಕಿನ ಗುರ್ರಪ್ಪ ಹಾಗೂ ಗೌರಿಬಿದನೂರಿನ ಶ್ರೀನಾಥ ಅವರು ಈ ಮಹೋನ್ನತ ಮಿಷನ್ ನಲ್ಲಿ ಕಾರ್ಯ ನಿರ್ವಹಣೆ ಮಾಡಿ ನಮ್ಮ ಜಿಲ್ಲೆಗೆ ಗರಿಮೆಯನ್ನು ಹೆಚ್ಚಿಸಿದ್ದಾರೆ.

ಸೂರ್ಯನ ಅಧ್ಯಯನಕ್ಕಾಗಿ ಉಡಾವಣೆಯಾಗಿದ್ದ ಆದಿತ್ಯ ನೌಕೆ ನಿಗದಿತ ಎಲ್-1 ಪಾಯಿಂಟ್ ತಲುಪಿದ್ದು, ಇಸ್ರೋ ಮಿಷನ್ ಯಶಸ್ವಿಯಾಗಿದೆ. ಈ ಮಿಷನ್‌ ನ ವಿಜ್ಞಾನಿಗಳ ತಂಡದಲ್ಲಿ ಕೆಲಸ ಮಾಡಿದ್ದ ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ನಮ್ಮೆಲ್ಲರ ಹೆಮ್ಮೆಗೆ ಕಾರಣರಾಗಿದ್ದಾರೆ.

ಚಂದ್ರಯಾನ-3 ಮಿಷನ್ ಬಳಿಕ ಇಸ್ರೋ ಈ ಮಹತ್ವದ ಸಾಧನೆ ಮಾಡಿದ್ದು, ಆದಿತ್ಯ ನೌಕೆಯು ಸೂರ್ಯನ ಅಧ್ಯಯನ ಆರಂಭಿಸಲಿರುವ ಮೊದಲ ನೌಕೆ ಆಗಿದೆ. ವಿಶೇಷ ಎಂದರೆ; ಚಂದ್ರಯಾನ-3 ಯಶಸ್ವಿಯಾದ ಕೇವಲ ಹತ್ತೇ ದಿನಗಳಲ್ಲಿ ಆದಿತ್ಯ ಎಲ್-1 ನೌಕೆಯನ್ನು ಇಸ್ರೋ ಉಡಾವಣೆ ಮಾಡಿತ್ತು. ಸುದೀರ್ಘ 126 ದಿನಗಳ ಬಳಿಕ ನೌಕೆ ತನ್ನ ಗುರಿಯನ್ನು ಮುಟ್ಟಿದೆ.

𝐈𝐧𝐝𝐢𝐚, 𝐈 𝐝𝐢𝐝 𝐢𝐭. 𝐈 𝐡𝐚𝐯𝐞 𝐫𝐞𝐚𝐜𝐡𝐞𝐝 𝐭𝐨 𝐦𝐲 𝐝𝐞𝐬𝐭𝐢𝐧𝐚𝐭𝐢𝐨𝐧!

Aditya-L1 has successfully entered the Halo orbit around the L1 point.#ISRO #AdityaL1Mission #AdityaL1 pic.twitter.com/6gwgz7XZQx

— ISRO InSight (@ISROSight) January 6, 2024

ಇಂಥಹ ಮಹಾನ್‌ ಕಾರ್ಯದಲ್ಲಿ ತಾವೂ ಭಾಗಿಯಾಗಿ, ವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವುದಕ್ಕೆ ಗುರ್ರಪ್ಪ ಅವರು ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ. ಇಡೀ ಇಸ್ರೋ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅಭಿನಂದಿಸಿದ್ದಾರೆ.

ಗುರಪ್ಪ ಅವರು ಗಗನನೌಕೆಯ ನಿರ್ವಹಣಾ ತಂತ್ರಜ್ಞ (Spacecraft operation manager) ಆಗಿದ್ದು, ನಿಯಂತ್ರಣ ಕೇಂದ್ರದಲ್ಲಿ ಮಿಷನ್ ಆಗುಹೋಗುಗಳನ್ನು ಬಹಳ ಜತನವಾಗಿ ಗಮನಿಸುತ್ತಾರೆ. ಹಾಗೆಯೇ, ಗೌರಿಬಿದನೂರು ತಾಲೂಕಿನ ಶ್ರೀನಾಥ ಅವರು ದತ್ತಾಂಶ ಸ್ವೀಕರಿಸುವ ವಿಭಾಗದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಾರೆ.

ಯಾರು ಈ ಗುರ್ರಪ್ಪ?

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿಯ ಗ್ರಾಮದವರು. ಅತ್ಯಂತ ಬಡ, ಕೃಷಿ ಕುಟುಂಬದಲ್ಲಿ ಜನಿಸಿದ ಅವರು; ವಿಶೇಷ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದಾರೆ.

ಇಸ್ರೋ ನಿರ್ಮಿತ ಸಂಪೂರ್ಣ ಸ್ವದೇಶಿ ಉಪಗ್ರಹ ಮಂಗಳನ ಅಂಗಳಕ್ಕೆ ಮೊದಲ ಯತ್ನದಲ್ಲಿ ಯಶಸ್ವಿಯಾಗಿ ಇಳಿದ ನೌಕೆಯ ನಿರ್ಮಾಣದಲ್ಲಿ ಜೆ.ಸಿ.ಗುರಪ್ಪ ವಿಶೇಷ ತಂತ್ರಜ್ಞರಾಗಿ ಕರ್ತವ್ಯ ನಿರ್ವಹಿಸಿದ್ದರು.

ಬಿಎಂಎಸ್ ಎಂಜಿಯರಿಂಗ್ ಕಾಲೇಜಿನಿಂದ ಬಿಇ ಪದವೀಧರರಾದ ಅವರು, ಬೆಂಗಳೂರಿನ ಐಟಿಐನಲ್ಲಿ ಅಪ್ರೆಂಟಿಸ್ ಟ್ರೈನಿಯಾಗಿ ವೃತ್ತಿ ಜೀವನ ಪ್ರಾರಂಭಿಸಿದರು.

1990ರಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳ ನೌಕೆಯ ನಿಯಂತ್ರಣ ಕಾರ್ಯ ಯಶಸ್ವಿಯಾಗಿ ನಡೆಸಿದ ಇವರು ಮಂಗಳ ನೌಕೆಯ ಅಭೂತಪೂರ್ವ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇಸ್ರೋ ಕೇಂದ್ರದಲ್ಲಿ ಗುರ್ರಪ್ಪ ಹಾಗೂ ಅವರ ಸಹೋದ್ಯೋಗಿ ಶ್ರೀನಾಥ.
Tags: Aditya l1chikkaballapurackcknewsnowgudibandeGurappaisro
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಹೈವೋಲ್ಟೇಜ್ ಅಧಿವೇಶನ

ಕರ್ನಾಟಕದ ಸೊಕ್ಕಿನ ಮನುಷ್ಯ ಯಾರು?

Leave a Reply Cancel reply

Your email address will not be published. Required fields are marked *

Recommended

ಯುವ ವೈದ್ಯರು ಹಳ್ಳಿಗಳಲ್ಲಿ ಸೇವೆ ಸಲ್ಲಿಸಬೇಕೆಂದು ಕಿವಿಮಾತು ಹೇಳುತ್ತಲೇ ತಾಯಿಯನ್ನು ಸ್ಮರಿಸಿ ಗದ್ಗದಿರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಯುವ ವೈದ್ಯರು ಹಳ್ಳಿಗಳಲ್ಲಿ ಸೇವೆ ಸಲ್ಲಿಸಬೇಕೆಂದು ಕಿವಿಮಾತು ಹೇಳುತ್ತಲೇ ತಾಯಿಯನ್ನು ಸ್ಮರಿಸಿ ಗದ್ಗದಿರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

4 years ago
ಜೆಡಿಎಸ್ – ಬಿಜೆಪಿ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿ; ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದ ಹೆಚ್.ಡಿ.ದೇವೇಗೌಡರು

ಜೆಡಿಎಸ್ – ಬಿಜೆಪಿ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿ; ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದ ಹೆಚ್.ಡಿ.ದೇವೇಗೌಡರು

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ