• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕ್ರಿಸ್ತ ಪೂರ್ವ 300ರಿಂದ ಚಲಾವಣೆಯಲ್ಲಿದ್ದ ನಾಣ್ಯಗಳ ಪ್ರದರ್ಶನ

cknewsnow desk by cknewsnow desk
January 7, 2024
in STATE
Reading Time: 1 min read
0
ಕ್ರಿಸ್ತ ಪೂರ್ವ 300ರಿಂದ ಚಲಾವಣೆಯಲ್ಲಿದ್ದ ನಾಣ್ಯಗಳ ಪ್ರದರ್ಶನ
1.2k
VIEWS
FacebookTwitterWhatsuplinkedinEmail

ಮೌರ್ಯ, ಶಾತವಾಹನ, ಗುಪ್ತರು, ರಾಷ್ಟ್ರಕೂಟರು, ಚೋಳ, ಚಾಲುಕ್ಯ, ಕದಂಬ, ವಿಜಯನಗರ-ಮೈಸೂರು ಅರಸರ ಕಾಲದ ನಾಣ್ಯಗಳು

ಪೆರೇಸಂದ್ರ ಪ್ರಕೃತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರದರ್ಶನ

by GS Bharath Gudibande

ಗುಡಿಬಂಡೆ: ನಾಣ್ಯಗಳು ಇತಿಹಾಸದ ಪ್ರತಿಬಿಂಬ, ರಾಜಮನೆತನಗಳು, ರಾಜರು ಮತ್ತು ದೇಶದ ಇತಿಹಾಸ ಹೇಳುತ್ತವೆ. ಇವುಗಳ ಅಧ್ಯಯನದಿಂದ ಆ ಕಾಲದ ಜನರ ಜೀವನದ ಮಟ್ಟ, ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಗತಿ ತಿಳಿಯಬಹುದು. ದೇಶದ ಇತಿಹಾಸ ತಿಳಿಸುವ ಸಾಧನವಿದ್ದಂತೆ ಎಂದು ನಾಣ್ಯ ಸಂಗ್ರಹಕಾರ ಎಚ್​.ಕೆ.ರಾಮರಾವ್​ ಹೇಳಿದರು.

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಪ್ರಕೃತಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಭಾರತ ದರ್ಶನ- ಭಾರತದ ಪ್ರಾಚಿನ, ಅಪೂರ್ವ, ಅಮೂಲ್ಯ, ಐತಿಹಾಸಿಕ ನಾಣ್ಯಗಳ 163ನೇ ಪ್ರದರ್ಶನದಲ್ಲಿ ಅವರು ಮಾತನಾಡಿದರು.

ವಿಜಯನಗರದ ವೈಭವವನ್ನು ಆ ಕಾಲದ ಚಿನ್ನದ ನಾಣ್ಯಗಳೇ ಸಾರುತ್ತದೆ. ಹಾಗೆಯೇ ನಮ್ಮ ದೇಶದ ಸಂಸ್ಕೃತಿ ಹಾಗೂ ಇತಿಹಾಸವನ್ನು ತಿಳಿಸುತ್ತದೆ. ನಾಣ್ಯಗಳನ್ನು ತಯಾರಿಸಿದ ಲೋಹಗಳಿಂದ ಅಂದಿನ ಕಾಲದ ಆರ್ಥಿಕ ವ್ಯವಸ್ಥೆಯನ್ನು ಗಮನಿಸಬಹುದು. ಅಖಂಡ ಭಾರತದ ನಾಣ್ಯಗಳು ಈ ಪ್ರದರ್ಶನದಲ್ಲಿವೆ. ನಮ್ಮ ದೇಶದ ಇತಿಹಾಸ, ಪರಂಪರೆಯ ಬಗ್ಗೆ ಪ್ರತಿಯೊಬ್ಬರೂ ಹೆಮ್ಮೆ ಪಡಬೇಕು ಎಂದರು ಅವರು.

ವಿದ್ಯಾರ್ಥಿಗಳಿಗೆ ಮಾಹಿತಿ ಕಣಜ

ಐತಿಹಾಸಿಕ ನಾಣ್ಯಗಳು ಮತ್ತು ಅಂಚೆ ಚೀಟಿಯ ಪ್ರದರ್ಶನಕ್ಕೆ ಚಾಲನೆ ನೀಡಿದ ಪ್ರಾಂಶುಪಾಲ ಎಂ.ವೈ ಮುನಿಕೃಷ್ಣಪ್ಪ​ ಮಾತನಾಡಿ, ಐತಿಹಾಸಿಕ ನಾಣ್ಯಗಳ ಮತ್ತು ಅಂಚೆ ಚೀಟಿಗಳ ಪ್ರದರ್ಶನದ ಮೂಲಕ ಭಾರತ ದರ್ಶನವನ್ನು ವಿದ್ಯಾರ್ಥಿಗಳಿಗೆ ಮಾಡಿಸಲಾಗುತ್ತಿದೆ. ಐತಿಹಾಸಿಕ ನಾಣ್ಯಗಳ ಸಂಗ್ರಹಕಾರ ಎಚ್​.ಕೆ.ರಾಮರಾವ್​ ಅವರ ಸಂಗ್ರಹದಲ್ಲಿರುವ ಅಮೂಲ್ಯ ನಾಣ್ಯಗಳು ಮತ್ತು ಅದರ ಬಗ್ಗೆ ಮಾಹಿತಿ ವಿಶಿಷ್ಟವಾದುದು. ನಾಣ್ಯಗಳ ಇತಿಹಾಸವನ್ನು ಸಂಶೋಧನೆ ಮಾಡುವವರಿಗೆ ಈ ಪ್ರದರ್ಶನ ಅನುಕೂಲವಾಗುತ್ತದೆ ಎಂದರು.

ಮೌರ್ಯರು, ಶಾತವಾಹನರು, ಗುಪ್ತರು, ಕುಶಾನರು, ರಾಷ್ಟ್ರಕೂಟರು, ಚೋಳ, ಕೊಂಗು, ಚಾಲುಕ್ಯ, ಕದಂಬ, ಬಹುಮನಿ ಸುಲ್ತಾನರು, ವಿಜಯನಗರ ಸಾಮ್ರಾಟರು, ಮೈಸೂರು ಅರಸರು ಸೇರಿದಂತೆ ಕ್ರಿಸ್ತ ಪೂರ್ವ 300ರಿಂದ ಈವರೆಗೆ ರಾಷ್ಟ್ರದಲ್ಲಿ ಚಲಾವಣೆಯಲ್ಲಿರುವ ಸುಮಾರು 1500 ನಾಣ್ಯಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

ನಾಣ್ಯವಾಗಿ ಬಳಕೆಯಾಗುತ್ತಿದ್ದ ಉಂಗುರಾಕಾರದ ಅಲಂಕಾರಿಕ ವಸ್ತುಗಳು, ಬೇಟೆಯಾಡುವುದರ ಜತೆಗೆ ನಾಣ್ಯವಾಗಿ ಉಪಯೋಗಿಸುತ್ತಿದ್ದ ಚೂಪಾದ ಕಬ್ಬಿಣದ ತುಂಡುಗಳು, ಚಿನ್ನದಿಂದ ಮುದ್ರಿತವಾದ ನಾಣ್ಯಗಳು, ಬೆಳ್ಳಿ ನಾಣ್ಯಗಳು ಎಲ್ಲರ ಗಮನ ಸೆಳೆದವು. ವಿಶೇಷ ಅಂಚೆ ಚೀಟಿಗಳು, ದೇಶ ವಿದೇಶದ ಪುರಾತನ ಮತ್ತು ಈಗಿನ ನೋಟುಗಳು ಸಹ ಪ್ರದರ್ಶನದಲ್ಲಿದ್ದವು.

ಭಾರತ ದರ್ಶನ- 163 ನೇ ಪ್ರದರ್ಶನದಲ್ಲಿ ಐತಿಹಾಸಿಕ ನಾಣ್ಯಗಳ ಸಂಗ್ರಹಕಾರ ಎಚ್​.ಕೆ.ರಾಮರಾವ್​ ಅವರನ್ನು ಪ್ರಥಮ ದರ್ಜೆ ಕಾಲೇಜು ವತಿಯಿಂದ ಗೌರವಿಸಲಾಯಿತು.
ನಾಣ್ಯ ಸಂಗ್ರಹಕಾರ ಎಚ್​.ಕೆ.ರಾಮರಾವ್​, ಪ್ರಕೃತಿ ಪದವಿ ಪೂರ್ವ ಕಾಲೇಜು ಆಡಳಿತಾಧಿಕಾರಿ ಡಾ.ಶ್ರೀನಿವಾಸ್, ಮಾಜಿ ತಾಲೂಕು ಪಂಚಾಯತಿ ಸದಸ್ಯ ಜಿ.ಎನ್.ನರಸಿಂಹ ಮೂರ್ತಿ ಸೇರಿದಂತೆ ಇತರರು ಇದ್ದರು.

Tags: chikkaballapurackcknewsnowcoinsgudibandehistorical coin exhibitionperesandra
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೇಂದ್ರ ಮಂತ್ರಿ ಆಗುವುದರ ವದಂತಿಗಳನ್ನು ತಳ್ಳಿ ಹಾಕಿದ ಹೆಚ್.ಡಿ.ಕುಮಾರಸ್ವಾಮಿ

ಕೇಂದ್ರ ಮಂತ್ರಿ ಆಗುವುದರ ವದಂತಿಗಳನ್ನು ತಳ್ಳಿ ಹಾಕಿದ ಹೆಚ್.ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

200 ವರ್ಷ ಇತಿಹಾಸವಿರುವ ಉಲ್ಲೋಡು ಶ್ರೀ ಅಭಯ ಆಂಜನೇಯ ಸ್ವಾಮಿ

200 ವರ್ಷ ಇತಿಹಾಸವಿರುವ ಉಲ್ಲೋಡು ಶ್ರೀ ಅಭಯ ಆಂಜನೇಯ ಸ್ವಾಮಿ

4 years ago
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

2022-23ರಿಂದ ಕನ್ನಡದಲ್ಲೂ ಎಂಜಿನಿಯರಿಂಗ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ