• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬದುಕಿನ ಕೊನೆ ಉಸಿರು ಇರುವ ತನಕ ಕಾವೇರಿ ನೀರಿಗಾಗಿ ಹೊರಾಡುತ್ತೇನೆ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

cknewsnow desk by cknewsnow desk
January 13, 2024
in NATION, STATE
Reading Time: 1 min read
0
ಬದುಕಿನ ಕೊನೆ ಉಸಿರು ಇರುವ ತನಕ ಕಾವೇರಿ ನೀರಿಗಾಗಿ ಹೊರಾಡುತ್ತೇನೆ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು
936
VIEWS
FacebookTwitterWhatsuplinkedinEmail

ಕಾವೇರಿ ವಿಷಯದಲ್ಲಿ ಕನ್ನಡಿಗರಿಗೆ ನಿರಂತರ ಅನ್ಯಾಯ; ಮಮ್ಮಲಮರುಗಿದ ಮಣ್ಣಿನಮಗ; ಮೋದಿ ಅವರಿಂದ ಮಾತ್ರ ಕಾವೇರಿ ಸಂಕಷ್ಟಕ್ಕೆ ಪರಿಹಾರ ಸಾಧ್ಯ ಎಂದ ಗೌಡರು

ಬೆಂಗಳೂರು: ಕರ್ನಾಟಕ ಎದುರಿಸುತ್ತಿರುವ ಕಾವೇರಿ ಜಲ ಸಂಕಷ್ಟವನ್ನು ಪರಿಹಾರ ಮಾಡುವ ಶಕ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ. ಈ ಚುನಾವಣೆ ಮುಗಿದ ನಂತರ ಮತ್ತೆ ಪ್ರಧಾನಿ ಆಗಲಿರುವ ಅವರು, ಈ ಜಲ ಸಂಕಷ್ಟಕ್ಕೆ ಪರಿಹಾರ ನೀಡಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತೀ ವರ್ಷ ತಮಿಳುನಾಡು ರಾಜ್ಯದವರು ಕಾವೇರಿ ಜಲ ನಿರ್ವಹಣಾ ಸಮಿತಿ ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಮುಂದೆ ಕರ್ನಾಟಕದಿಂದ ನೀರು ಕೊಡಿಸಿ ಎಂದು ಅರ್ಜಿ ಹಾಕುತ್ತಾರೆ. ನಮ್ಮ ಬಳಿ ನೀರು ಇಲ್ಲದೆ ಇದ್ದರೂ ನೀರು ಬಿಡಿ ಅಂತಾರೆ. ನಮ್ಮ ಅಧಿಕಾರಿಗಳು ಏನೇ ವಾದ ಮಾಡಿದರೂ ಪ್ರಯೋಜನ ಆಗಿಲ್ಲ. ಕಾವೇರಿ ಪ್ರಾಧಿಕಾರದವರು ಯಾವತ್ತು ಕೂಡ ನಮ್ಮ ರಾಜ್ಯಕ್ಕೆ ಬಂದು ನೀರು ಎಷ್ಟು ಇದೆ ಅಂತ ನೋಡಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ರಾಜಕೀಯ ಬಿಟ್ಟು ಹೋರಾಡಬೇಕು

ಕಾವೇರಿ ಸಮಸ್ಯೆಗೆ ಪರಿಹಾರ ಇದೆ. ಪ್ರಧಾನಿ ಮೋದಿ ಅವರಿಗೆ ನಮಗೆ ಆಗಿರುವ ಅನ್ಯಾಯ ಮನ ಮುಟ್ಟುವಂತೆ ನಾವು ಒಟ್ಟಾಗಿ ಹೋರಾಡಬೇಕು. ಇದರಲ್ಲಿ ರಾಜಕೀಯ ಇರಬಾರದು. ರಾಜಕೀಯ ಪಕ್ಷಗಳು ಒಟ್ಟಾಗಿ ಹೋರಾಟ ಮಾಡಬೇಕು. ನಾನು ಇನ್ನೂ ಎರಡೂವರೆ ವರ್ಷ ರಾಜ್ಯಸಭೆಯಲ್ಲಿ ಇರುತ್ತೇನೆ. ಹೊರಾಡುತ್ತೇನೆ, ನಾನು ಸಾಯುವವರೆಗೂ ಕಾವೇರಿ ಬಗ್ಗೆ ಹೋರಾಟ ಮಾಡುತ್ತೇನೆ. ರಾಜ್ಯದ ಜನರಿಗೆ ನ್ಯಾಯ ಸಿಗುವವರೆಗೂ ವಿರಮಿಸುವುದಿಲ್ಲ. ನನ್ನ ಕೊನೆಯುಸಿರು ಇರೋವರೆಗೂ ಹೋರಾಟ ಮಾಡ್ತೀನಿ ಎಂದು ಗದ್ಗದಿತರಾರು ಮಾಜಿ ಪ್ರಧಾನಿಗಳು.

ನಾನು ಸಂಸತ್ ಅಧಿವೇಶನದಲ್ಲಿ ಭಾಗವಹಿಸುತ್ತೇನೆ. ಕಾವೇರಿ ವಿಚಾರವನ್ನು ನಾನು ಸಂಸತ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ. ಕಾವೇರಿ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಬೇಕು ಅಂತ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದೇನೆ ಎಂದರು ಅವರು.

ರಾಜ್ಯಕ್ಕೆ ಮರಣಶಾಸನ

ನಮ್ಮ ಜಲಾಶಯಗಳಲ್ಲಿ ನೀರು ಇಲ್ಲದೆ ಇದ್ದರೂ ನೀರು ಬಿಡಿ ಅನ್ನೋದು ಕರ್ನಾಟಕಕ್ಕೆ ಮರಣಶಾಸನ ಎಂದು ಆಕ್ರೋಶ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ತಮಿಳುನಾಡಿನವರಿಗೆ ಶಕ್ತಿ ಇದೆ. ಹೀಗಾಗಿ ನೀರು ತೆಗೆದುಕೊಂಡು ಹೋಗ್ತಿದ್ದಾರೆ. ನ್ಯಾಯ ಕೊಡಬೇಕಾದ ಕಾವೇರಿ ಪ್ರಾಧಿಕಾರ ನಮಗೆ ಅನ್ಯಾಯ ಮಾಡುತ್ತಿದೆ ಎಂದರು.

ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಪ್ರತಿ ಅಂಶವನ್ನು ನಾನು ಮೋದಿ ಅವರ ಗಮನಕ್ಕೆ ತಂದಿದ್ದೇನೆ. ಆದರೆ, ಮೋದಿ ಅವರು ಕೂಡಲೇ ಎಲ್ಲಾ ಮಾಡಲು ಆಗುವುದಿಲ್ಲ. ನಾವೆಲ್ಲರೂ ಈ‌ ಬಗ್ಗೆ ಹೋರಾಟ ಮಾಡುತ್ತೇವೆ. ಮಳೆ ಇಲ್ಲದೆ ಹೋದರೂ ನೀರು ಬಿಡಿ ಎಂದು ಅದೇಶ ಮಾಡುವುದು ಸರಿಯಲ್ಲ. ನಮಗೆ ನಿರಂತರ ಅನ್ಯಾಯ ಆಗಿದೆ ಎಂದು ಅವರು ನೊಂದು ಹೇಳಿದರು.

ಜಲಸಂಪನ್ಮೂಲ ಸ್ಥಾಯಿ ಸಮಿತಿಗೆ ಮಾಹಿತಿ ಕೊಟ್ಟಿದ್ದೇನೆ

ಕೇಂದ್ರ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ ಸ್ಥಾಯಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದೆ. ಹೈಡ್ರೋ ಪವರ್ ಜನರೇಷನ್, ಕುಡಿಯುವ ನೀರಿನ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಸಮಿತಿ ಅಧ್ಯಕ್ಷರು ಭುವನೇಶ್ವರದಿಂದ ಸಭೆ ಪ್ರಾರಂಭ ಮಾಡಿ ನಮ್ಮ ರಾಜ್ಯಕ್ಕೆ ಬಂದಿದ್ದರು. ನಮ್ಮ ರಾಜ್ಯದಿಂದ ನಾನು, ಡಿ.ಕೆ.ಸುರೇಶ್, ಶಿವಕುಮಾರ್ ಉದಾಸಿ ಸದಸ್ಯರು. ಮೊದಲ ಸಭೆಯಲ್ಲಿ ನಾನು, ಡಿ.ಕೆ.ಸುರೇಶ್, ಉದಾಸಿ ಭಾಗವಹಿಸಿದ್ದೆವು ಎಂದು ಅವರು ಮಾಹಿತಿ ನೀಡಿದರು.

ಈ ಸಭೆಯಲ್ಲಿ ಕೊಡಗು ಸೇರಿ ಕಾವೇರಿ ಜಲಾಶಯದ ಹತ್ತು ಜಿಲ್ಲೆಗಳಲ್ಲಿ‌ ರೈತರಿಗೆ ಉಂಟಾಗಿರುವ ಅನ್ಯಾಯದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ನಮ್ಮ ರಾಜ್ಯಕ್ಕೆ 8 ಸಾವಿರ ಕೋಟಿ ರೂಪಾಯಿ ಹಣ ಕೃಷ್ಣ ಜಲಾನಯನ ಪ್ರದೇಶದ ಯೋಜನೆಗಳಿಗೆ ಕೇಂದ್ರದಿಂದ ಹಣ ಬಂದಿತ್ತು. ಆದರೆ, ಕಾವೇರಿ ಜಲಾನಯನ ಯೋಜನೆಗೆ ಯಾವುದೇ ಹಣ ಬಂದಿಲ್ಲ. ಈ ಬಗ್ಗೆ ಸಮಿತಿ ಕೇಂದ್ರದ ಗಮನಕ್ಕೆ ತರಬೇಕು. ಇದರ ಬಗ್ಗೆ ನಾನು ಅವರ ಗಮನಕ್ಕೆ ತಂದಿದ್ದೇವೆ ಎಂದು ಮಾಜಿ ಪ್ರಧಾನಿಗಳು ವಿವರ ನೀಡಿದರು.

ಬೆಂಗಳೂರಿಗೆ ಕಾದಿದೆ ಜಲ ಸಂಕಷ್ಟ

ಮೇಕೆದಾಟು ಯೋಜನೆಗೆ ಕೂಡಲೇ ಅನುಮತಿ ಕೊಡುವಂತೆ ಮನವಿ ಮಾಡಿದ್ದೇವೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ದೇಶದ ಎಲ್ಲ ಜನರಿಗೆ ಉದ್ಯೋಗ, ಜೀವನೋಪಾಯ ನೀಡಿ ಸಲಹುತ್ತಿದೆ. ಮೇಕೆದಾಟು ಕುಡಿಯುವ ನೀರಿನ‌ ಯೋಜನೆ ಅನುಷ್ಠಾನಕ್ಕೆ ತಂದರೆ ಮಾತ್ರ ನಗರದ ನೀರಿನ ಬವಣೆ ತಪ್ಪಿಸಬಹುದು. ಇಲ್ಲವಾದರೆ, ಬೆಂಗಳೂರು ನಗರ ಅತಿ ದೊಡ್ಡ ಜಲ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದೆ ಎಂದು ಮಾಜಿ ಪ್ರಧಾನಿಗಳು ತೀವ್ರ ಆತಂಕ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಜನಸಂಖ್ಯೆ ಸದ್ಯಕ್ಕೆ 135 ಲಕ್ಷವಿದ್ದು, 2044ರ ವೇಳೆ ಈ ಪ್ರಮಾಣ 3 ಕೋಟಿ ಮೀರಲಿದೆ. ಇಷ್ಟು ದೊಡ್ಡ ಪ್ರಮಾಣದ ಜನಸಂಖ್ಯೆಗೆ 64 ಟಿಎಂಸಿ ನೀರಿನ ಅಗತ್ಯ ಇದೆ ಎಂದು ಅವರು ಹೇಳಿದರು.

ತಮಿಳುನಾಡಿಗೆ ದೈತ್ಯ ರಾಜಕೀಯ ಶಕ್ತಿ ಇದೆ. ಅವರಿಗೆ ಎಷ್ಟು ನೀರು ಕೊಟ್ಟರು ಸಾಲದು. ತಮಿಳುನಾಡಿನಲ್ಲಿ ಎಲ್ಲಾ ಕಡೆ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ. ಅವರಿಗೆ ಸಮೃದ್ಧವಾಗಿ ಮಳೆ ಬಂದರೂ ನೀರು ಬೇಕು ಎಂದು ಕೇಳುತ್ತಾರೆ. ತಮಿಳುನಾಡಿನ ನೀರಾವರಿಯ ಬಗ್ಗೆ ಕೃಷಿ ವಿಜ್ಞಾನಿಗಳಾದ ಸ್ವಾಮಿನಾಥನ್ ಅವರು ವರದಿ ಕೊಟ್ಟಿದ್ದಾರೆ. ಅವರು ವಾರ್ಷಿಕ 3 ಬೆಳೆ ಅರಾಮವಾಗಿ ಬೆಳೆಯುತ್ತಾರೆ. ನಮಗೆ ಒಂದು ಬೆಳೆ ಬೆಳೆಯುವುದಕ್ಕೆ ಕೂಡ ಆಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ತಮಿಳುನಾಡಿನಲ್ಲಿ ಕುರುವೈ, ಸಾಂಬಾ, ತಾಲಾಡಿ ಹಾಗೂ ಇನಾ ಬೇಸಾಯ ಸೇರಿದಂತೆ ಒಟ್ಟು 24.71 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಅದೇ ಕರ್ನಾಟಕಕ್ಕೆ ಬಂದರೆ, ಎಲ್ಲಾ ರೀತಿಯ ಬೆಳೆಗಳನ್ನು ಸೇರಿಸಿದರೂ 18.85 ಲಕ್ಷ ಎಕರೆ ಮೀರುವುದಿಲ್ಲ ಎಂದು ಮಾಜಿ ಪ್ರಧಾನಿಗಳು ಅಂಕಿ ಅಂಶಗಳ ಸಮೇತ ವಿವರಣೆ ನೀಡಿದರು.

ಕಾವೇರಿ ಜಲ ವಿವಾದ ಮಂಡಳಿ ಏಕಪಕ್ಷೀಯವಾಗಿ 1991ರಲ್ಲಿ ಮಧ್ಯಂತರ ಆದೇಶ ನೀಡಿ, ಕರ್ನಾಟಕ ರಾಜ್ಯ ತನ್ನ ನೀರಾವರಿ ಅಚ್ಚುಕಟ್ಟನ್ನು 11.20 ಲಕ್ಷ ಹೆಕ್ಟೇರ್ ಗೆ ಸೀಮಿತಗೊಳಿಸುವಂತೆ ಮತ್ತು ತಮಿಳುನಾಡಿನ 205 ಟಿಎಂಸಿ ನೀರನ್ನು ಬಿಡುಗಡೆ ‌ಮಾಡುವಂತೆ ಆದೇಶಿಸಿರುವುದರಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಕಾವೇರಿ ಕಣಿವೆಯಲ್ಲಿ ಕೃಷ್ಣರಾಜ ಸಾಗರ, ಹಾರಂಗಿ, ಕಬಿನಿ, ಹೇಮಾವತಿ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿವರ್ಷ ಜೂನ್ ತಿಂಗಳಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 177.25 ಟಿಎಂಸಿ ನೀರು ಬಿಡಬೇಕು ಎನ್ನುವ ಆದೇಶದಿಂದ ಕ್ಲಿಷ್ಟ ಮತ್ತು ಬರಗಾಲದಲ್ಲಿ ಕರ್ನಾಟಕ ರಾಜ್ಯವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಈ‌ ಬಗ್ಗೆಯೂ ಸಮಿತಿ ಗಮನಕ್ಕೆ ತರಲಾಗಿದೆ ಎಂದು ದೇವೇಗೌಡರು ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೆಗೌಡ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್. ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ ಹಾಜರಿದ್ದರು.

Tags: Cauvery riverckcknewsnowhd devegowdakarnatakanarendra modiRiver disputetamilnadu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗುಡಿಬಂಡೆಯ ಮನೆಮನೆಗೂ ಮುಟ್ಟಿದ ರಾಮಾಕ್ಷತೆ

ಗುಡಿಬಂಡೆಯ ಮನೆಮನೆಗೂ ಮುಟ್ಟಿದ ರಾಮಾಕ್ಷತೆ

Leave a Reply Cancel reply

Your email address will not be published. Required fields are marked *

Recommended

ಮನೋಹರ್‌ ಲೋಫರ್‌ ಎಂದಿದ್ದಕ್ಕೆ ಕಾರಣ ಕೊಟ್ಟ ರಮೇಶ್‌ ಗೌಡ

ಮನೋಹರ್‌ ಲೋಫರ್‌ ಎಂದಿದ್ದಕ್ಕೆ ಕಾರಣ ಕೊಟ್ಟ ರಮೇಶ್‌ ಗೌಡ

1 year ago
ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದಾರೆ, ಕೂಡಲೇ ಅಡುಗೆ ಎಣ್ಣೆ ದರ ನಿಯಂತ್ರಿಸಿ ಎಂದು ಪಿಎಂ, ಸಿಎಂ, ಆಹಾರ ಸಚಿವರಿಗೆ ಪತ್ರ ಬರೆದ ಸಂಸದ ಡಿ.ಕೆ ಸುರೇಶ್

ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದಾರೆ, ಕೂಡಲೇ ಅಡುಗೆ ಎಣ್ಣೆ ದರ ನಿಯಂತ್ರಿಸಿ ಎಂದು ಪಿಎಂ, ಸಿಎಂ, ಆಹಾರ ಸಚಿವರಿಗೆ ಪತ್ರ ಬರೆದ ಸಂಸದ ಡಿ.ಕೆ ಸುರೇಶ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ