• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬಾಗೇಪಲ್ಲಿಗೆ ಬೆಣ್ಣೆ! ಗುಡಿಬಂಡೆ, ಚೇಳೂರಿಗೆ ಸುಣ್ಣ!!

cknewsnow desk by cknewsnow desk
January 14, 2024
in CHIKKABALLAPUR, STATE
Reading Time: 1 min read
0
ಬಾಗೇಪಲ್ಲಿಗೆ ಬೆಣ್ಣೆ! ಗುಡಿಬಂಡೆ, ಚೇಳೂರಿಗೆ ಸುಣ್ಣ!!
1.3k
VIEWS
FacebookTwitterWhatsuplinkedinEmail

ಬಾಗೇಪಲ್ಲಿಗಷ್ಟೇ ಸೀಮಿತವಾಯಿತು ಶಾಸಕರ ಸಂಕ್ರಾಂತಿ ಸಂಭ್ರಮ ಭಾಗ್ಯ

ಹ್ಯಾಟ್ರಿಕ್‌ ಗೆಲುವು ಕೊಟ್ಟ ಗುಡಿಬಂಡೆ ಲೆಕ್ಕಕ್ಕೇ ಇಲ್ಲ; ಚೇಳೂರಿನ ಮೇಲೆ ಎಸ್.ಎನ್.ಸುಬ್ಬಾರೆಡ್ಡಿಗೆ ಮಲತಾಯಿ ಧೋರಣೆ

by GS Bharath Gudibande

ಗುಡಿಬಂಡೆ: ಸಮಾಜ ಸೇವೆ, ಸಂಕ್ರಾಂತಿ ಸಂಭ್ರಮ ಎಂದು ಹೇಳಿಕೊಂಡೇ ಬಾಗೇಪಲ್ಲಿ ಕ್ಷೇತ್ರದಲ್ಲಿ ಮೂರನೇ ಅವಧಿಗೆ ಶಾಸಕರಾಗಿ ಹ್ಯಾಟ್ರಕ್‌ ದಾಖಲೆ ಮಾಡಿರುವ ಎಸ್.‌ಎನ್.‌ಸುಬ್ಬಾರೆಡ್ಡಿ ಅವರು; ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರಾ?

ಇಂಥ ಪ್ರಶ್ನೆ ಎರಡೂ ತಾಲೂಕುಗಳ ಜನರಿಗೆ ತೀವ್ರವಾಗಿ ಕಾಡುತ್ತಿದೆ. ಶಾಸಕರ ಹಾಜರಾತಿ, ಅನುದಾನ, ಯೋಜನೆಗಳ ಫಲಾಫಲ ಎಲ್ಲವೂ ವಿಧಾಸಭೆ ಕ್ಷೇತ್ರದ ಕೇಂದ್ರ ಸ್ಥಾನವಾದ ಬಾಗೇಪಲ್ಲಿಗೇ ಹೆಚ್ಚು ಸಿಗುತ್ತಿದೆ ಎನ್ನುವುದು ಗುಟ್ಟಿನ ಮಾತೇನಲ್ಲ. ಆದರೆ, ಸಾಂಸ್ಕೃತಿಕವಾಗಿಯೂ ಗುಡಿಬಂಡೆ, ಚೇಳೂರು ತಾಲೂಕುಗಳ ಬಗ್ಗೆ ಶಾಸಕರು ಪಕ್ಷಪಾತ ನೀತಿ ಪ್ರದರ್ಶಿಸುತ್ತಿದ್ದಾರೆ ಎನ್ನುವುದು ಮಾತ್ರ ಖಚಿತ.

ಪ್ರತಿ ವರ್ಷದಂತೆ ಈ ವರ್ಷವೂ ಸಂಕ್ರಾಂತಿ ಸಂಭ್ರಮ ಕೇವಲ ಬಾಗೇಪಲ್ಲಿ ಪಟ್ಟಣಕ್ಕಷ್ಟೇ ಸೀಮಿತವಾಗಿದೆ. ಗುಡಿಬಂಡೆ, ಚೇಳೂರು ತಾಲೂಕುಗಳನ್ನು ಶಾಸಕರು ಕಡೆಗಣಿಸುತ್ತಿದ್ದಾರೆ ಹಾಗೂ ಪರಿಗಣಿಸುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರು ಪ್ರತಿನಿಧಿಸುವ ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಮೂರು ತಾಲೂಕುಗಳಿವೆ. ಚುನಾವಣೆಯಲ್ಲಿ ಈ ಮೂರು ತಾಲೂಕುಗಳ ಜನರು ವೋಟು ಹಾಕಿ ಗೆಲ್ಲಿಸಿದ್ದಾರೆ. ಆದರೂ, ಅವರು ಬಾಗೇಪಲ್ಲಿ ಮೇಲಿನ ಅತಿಯಾದ ಪ್ರೀತಿಯಿಂದ ಗುಡಿಬಂಡೆ ಮತ್ತು ಚೇಳೂರು ತಾಲೂಕುಗಳನ್ನು ಕಡೆಗಣಿಸುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬಾಗೇಪಲ್ಲಿಯಂತೆ ಗುಡಿಬಂಡೆ ಕೂಡ ಐತಿಹಾಸಿಕ ತಾಣವಾಗಿದೆ. ಸಾಂಸ್ಕೃತಿಕ, ಸಾಹಿತ್ಯ, ಜಾನಪದ ಇತ್ಯಾದಿ ಕ್ಷೇತ್ರಗಳಲ್ಲಿ ಶ್ರೀಮಂತವಾಗಿದೆ. ಅಲ್ಲದೆ, ಪ್ರವಾಸೋದ್ಯಮ ವಲಯದಲ್ಲಿಯೂ ಗುಡಿಬಂಡೆ ಇಡೀ ರಾಜ್ಯದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಚೇಳೂರು ಕೂಡ ಸಂಪೂರ್ಣವಾಗಿ ಆಂಧ್ರ ಪ್ರದೇಶ ಗಡಿಗೆ ಹೊಂದಿಕೊಂಡಿದ್ದ, ತೆಲುಗು ಭಾಷೆಯ ಪಾರಮ್ಯವೇ ಜಾಸ್ತಿ. ಅಲ್ಲಿ ಕನ್ನಡ ವಾತಾವರಣ ನಿರ್ಮಾಣ ಮಾಡುವುದಕ್ಕೆ ಶಾಸಕರು ಪ್ರಯತ್ನ ಮಾಡಬೇಕಿದೆ. ಸಂಕ್ರಾಂತಿ ಸಂಭ್ರಮ ಅಂತಹ ವಾತಾವರಣ ಸೃಷ್ಟಿ ಮಾಡುತ್ತದೆ ಎನ್ನುವುದು ಖಚಿತ. ಇದೆಲ್ಲವನ್ನೂ ಶಾಸಕರು ಆಲೋಚನೆ ಮಾಡಬೇಕಿತ್ತು ಎನ್ನುವುದು ಜನರ ಮಾತು.

ಸಂಕ್ರಾಂತಿ ಸಂಭ್ರಮಕ್ಕೆ ಸಜ್ಜಾದ ಬಾಗೇಪಲ್ಲಿ

ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರು ಸಾಹಿತ್ಯ-ಸಂಸ್ಕೃತಿ-ಸಮಾಗಮ ಎಂಬ ಶೀರ್ಷಿಕೆಯಡಿಯಲ್ಲಿ ಸಂಕ್ರಾಂತಿ ಹಬ್ಬದ ದಿನದಂದು ಸಂಕ್ರಾಂತಿ ಸಂಭ್ರಮ ಆಚರಣೆ ಮಾಡಲು ಮುಂದಾಗಿದ್ದಾರೆ. ಅದರಂತೆ ಜನವರಿ 15ರ ಸೋಮವಾರ ಇಡೀ ದಿನ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ.

ಬೆಳಗ್ಗೆ 10 ಗಂಟೆಗೆ ರಂಗೋಲಿ ಸ್ಪರ್ಧೆ ಬಾಗೇಪಲ್ಲಿಯ ಮೊದಲ ವಾರ್ಡಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂಜೆ 5 ಗಂಟೆಗೆ ಚಿತ್ರಾವತಿ ನದಿ ಸೇತುವೆ ಜಾನಪದ ಕಲಾತಂಡಗಳಿಂದ ಮೆರವಣಿಗೆ ಸಾಗಲಿದೆ. ಸಂಜೆ 6 ಗಂಟೆಗೆ ಆಕರ್ಷಕ ಬಾಣ ಬಿರುಸುಗಳ ಪ್ರದರ್ಶನ ನಡೆಯಲಿದೆ.

ನಂತರ ಸಂಜೆ ರಸಮಂಜರಿ ಕಾರ್ಯಕ್ರಮ ( ಆರ್ಕೇಸ್ಟ್ರಾ) ಆಯೋಜಿಸಲಾಗಿದ್ದು, ಇದು ಮಾಧ್ಯಮ ಶಾಲೆ ಆವರಣದಲ್ಲಿ ನಡೆಯಲಿದೆ ಎಂದು ಶಾಸಕರ ಆಪ್ತ ವಲಯಗಳ ಮೂಲಗಳಿಂದ ಸಿಕೆನ್ಯೂಸ್ ನೌ ಗೆ ಮಾಹಿತಿ ಸಿಕ್ಕಿದೆ.

ಶಾಸಕರು ಸುಮಾರು 20 ವರ್ಷಗಳಿಂದ ಬಾಗೇಪಲ್ಲಿ ಪಟ್ಟಣದಲ್ಲಿ ಸಂಕ್ರಾಂತಿ ಸಂಭ್ರಮ ಮಾಡುತ್ತಿದ್ದಾರೆ. ಆದರೂ, ಶಾಸಕರಾಗಿ ಅವರು ಮೂರು ಅವಧಿಗೆ ಗೆದ್ದಿದ್ದರೂ ಗುಡಿಬಂಡೆ ಮತ್ತು ಚೇಳೂರಿನಲ್ಲಿ ಹಮ್ಮಿಕೊಂಡಿದ್ದಿದ್ದರೆ ಅಲ್ಲಿನ ಜನರು ಬಹಳ ಸಂತೋಷಪಡುತ್ತಿದ್ದರು, ಮುಂದಿನ ದಿನಗಳಲ್ಲಿ ಆದರೂ ಶಾಸಕರು ಮೂರು ತಾಲೂಕು ಕೇಂದ್ರಗಳಲ್ಲಿ ಸಂಕ್ರಾಂತಿ ಸಂಭ್ರಮವನ್ನು ನಡೆಸಲಿ.

ಕುನ್ನಮ್ಮಗಾರಿ ರಾಜೇಶ್, ಪಟ್ಟಣ ಪಂಚಾಯಿತಿ ಸದಸ್ಯ, ಗುಡಿಬಂಡೆ

Tags: bagepallicheluruckcknewsnowgudibandemla sn subbareddynewsSankranti festivalSankranti sambrama
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿದ ಸಾಗಿದ ವೃದ್ಧೆ

ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿದ ಸಾಗಿದ ವೃದ್ಧೆ

Leave a Reply Cancel reply

Your email address will not be published. Required fields are marked *

Recommended

ಸಿಎಂ ಮಂಡಿ ನೋವಿಗೆ ನಾಟಿ ವೈದ್ಯರಿಂದ ಚಿಕಿತ್ಸೆ

ಸಿಎಂ ಮಂಡಿ ನೋವಿಗೆ ನಾಟಿ ವೈದ್ಯರಿಂದ ಚಿಕಿತ್ಸೆ

3 years ago
ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣ

ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ