• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಭವ್ಯ ಮಂದಿರಲ್ಲಿ ಶ್ರೀ ಬಾಲರಾಮ ವಿರಾಜಮಾನ, ಭಾರತದ ಆಸ್ಮಿತೆಗೆ ಜಾಗತಿಕ ಸಮ್ಮಾನ

cknewsnow desk by cknewsnow desk
January 22, 2024
in NATION, STATE, WORLD
Reading Time: 3 mins read
0
ಭವ್ಯ ಮಂದಿರಲ್ಲಿ ಶ್ರೀ ಬಾಲರಾಮ ವಿರಾಜಮಾನ, ಭಾರತದ ಆಸ್ಮಿತೆಗೆ ಜಾಗತಿಕ ಸಮ್ಮಾನ
978
VIEWS
FacebookTwitterWhatsuplinkedinEmail

ಶ್ರೀಬಾಲರಾಮ ದೇವರು ಇನ್ನು ಟೆಂಟಿನಲ್ಲಿ ಇರುವುದಿಲ್ಲ.. ಭವ್ಯ ಮಂದಿರದಲ್ಲಿ ದರ್ಶನ ನೀಡುತ್ತಾನೆ.. ಪ್ರಾಣ ಪ್ರತಿಷ್ಠಾಪನೆ ನಂತರ ದೇಶವನ್ನು ಉದ್ದೇಶಿಸಿ ಮತನಾಡಿದ ಪ್ರಧಾನಿ ನರೇಂದ್ರ ಮೋದಿ

ರಾಮ ಮಂದಿರ ಪ್ರಾಣಪ್ರತಿಷ್ಠೆ ಮೂಲಕ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಪೂಜಾ ವಿಧಿವಿಧಾನ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ, ರಾಮಜನ್ಮಭೂಮಿ ಆವರಣದಲ್ಲಿ ಆಯೋಜಿಸಿದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ.

by Dr.Guruprasad Hawaladar

ಆಯೋಧ್ಯೆ: ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ. ಶತ ಶತಮಾನಗಳ ಹೋರಾಟ ಸಾರ್ಥಕವಾಗಿದೆ. ಆಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠೆ ಮಾಡಿದ ಪ್ರಧಾನಿ ಮೋದಿ ಬಳಿಕ ರಾನಜನ್ಮಭೂಮಿ ಆವರದಲ್ಲಿ ಆಯೋಜಿಸಿದ ಸಭೆಯಲ್ಲಿ ದೇಶದ ಜನತೆಯನ್ನುದ್ದೇಶಿ ಮಾತನಾಡಿದ್ದಾರೆ.

ಸೀತಾರಾಮ ರಾಮಚಂದ್ರ ಪ್ರಭು ಎಂದು ಭಾಷಣ ಆರಂಭಿಸಿದ ನರೇಂದ್ರ ಮೋದಿ ಅವರು; ಹೋರಾಟ, ತ್ಯಾಗ ಬಲಿದಾನ ಬಳಿಕ ನಮ್ಮ ಪ್ರಭು ಶ್ರೀರಾಮ ಚಂದ್ರ ಇಂದು ಆಯೋಧ್ಯೆಗೆ ಆಗಮಿಸಿದ್ದಾನೆ ಎಂದರು.

ನಮ್ಮ ರಾಮ ಲಲ್ಲಾ ಟೆಂಟಿನಲ್ಲಿ ಇರುವುದಿಲ್ಲ. ನಮ್ಮ ರಾಮಲಲ್ಲಾ ಭವ್ಯ ರಾಮ ಮಂದಿರದಲ್ಲಿ ವಿರಾಜಮಾನನಾಗಿದ್ದಾನೆ. ಇಂದು ಪ್ರಾಣಪ್ರತಿಷ್ಠೆಯ ಅನುಭೂತಿ ವಿಶ್ವದ ಮೂಲೆ ಮೂಲೆಗೆ ತಲುಪಿದೆ ಎಂದು ಮೋದಿ ಅವರು ಹೇಳಿದರು.

1000 ವರ್ಷಗಳ ಬಳಿಕವೂ ಈ ದಿನ ನೆನಪಿರುತ್ತದೆ

1000 ವರ್ಷಗಳ ಬಳಿಕವೂ ಈ ದಿನಾಂಕವನ್ನು ಎಲ್ಲರೂ ನೆನಪಿಟ್ಟುಕೊಳ್ಳುತ್ತಾರೆ. ಕಾರಣ ಈ ದಿನ ಪವಿತ್ರ ದಿನ. ದಿವ್ಯತೆಯ ಪರಿಪೂರ್ಣ ದಿನವಾಗಿದೆ. ಇದು ಸಾಮಾನ್ಯ ಸಮಯವಲ್ಲ. ಕಾಲಚಕ್ರದಲ್ಲಿ ಅಚ್ಚಳಿಯದೆ ಉಳಿಯುವ ದಿನ. ಎಲ್ಲಿ ಶ್ರೀರಾಮ ಇದ್ದಾನೋ ಅಲ್ಲಿ ಹನುಮಾನ್ ಭಕ್ತಿ ಇದ್ದೇ ಇರುತ್ತೆ. ಸೀತಾಮಾತಾ, ಲಕ್ಷ್ಣಣ ಸೇರಿದಂತೆ ಎಲ್ಲಾ ದೈವೀ ಸಂಭೂತರಿಗೆ ನಮನ ಸಲ್ಲಿಸುತ್ತಿದ್ದೇನೆ ಎಂದು ಮೋದಿ ಹೇಳಿದರು.

ಪ್ರಭು ಶ್ರೀರಾಮನಲ್ಲಿ ಕ್ಷಮೆಯನ್ನೂ ಕೇಳುತ್ತೇನೆ. ಇಷ್ಟು ವರ್ಷ ಶ್ರೀರಾಮನ ಸೇವೆಯಲ್ಲಿ ನಮ್ಮಿಂದ ಏನಾದರೂ ಕಡಿಮೆಯಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಮೋದಿ ಗದ್ಗದಿತರಾಗಿ ಹೇಳಿದರು.

ಇಂದು ಪ್ರಭು ಶ್ರೀರಾಮನ ನೋಡಿ ಆಯೋಧ್ಯೆ ಹಾಗೂ ಇಡೀ ದೇಶದ ನಾಗರೀಕರು ಸಂಸತದಲ್ಲಿ ತೇಲಾಡಿದ್ದಾರೆ. ಶ್ರೀರಾಮ 14 ವರ್ಷ ವನವಾಸ ಮಾಡಿದ್ದರು. ಆದರೆ ಶ್ರೀರಾಮನನ್ನು ಭವ್ಯ ರಾಮ ಮಂದಿರದಲ್ಲಿ ವಿರಾಜಮಾನಗೊಳಿಸಲು ಶತ ಶತಮಾನಗಳ ಕಾಲ ನಮ್ಮ ತಲೆ ತಲೆಮಾರುಗಳ ಹೋರಾಟ ನಡೆಸಿದೆ ಎಂದರು ಅವರು.

श्री रामलला सरकार के भव्य प्राण प्रतिष्ठा महोत्सव का श्री राम जन्मभूमि मंदिर परिसर से सीधा प्रसारण

LIVE Webcast of Prana Pratishtha Mahotsav of Shri Ramlalla Sarkar, from Shri Ram Janmabhoomi Mandir complex. https://t.co/A4r1iT1rzI

— Shri Ram Janmbhoomi Teerth Kshetra (@ShriRamTeerth) January 22, 2024

ಸಂವಿಧಾನ ಅಸ್ತಿತ್ವಕ್ಕೆ ಬಂದ ಬಳಿಕವೂ ಶ್ರೀರಾಮನ ಹೋರಾಟ ನಡೆಯುತ್ತಲೇ ಇತ್ತು. ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಲಾಗಿತ್ತು. ಕಾನೂನು ಹೋರಾಟ ನಡೆದಿತ್ತು. ಈ ವೇಳೆ ನ್ಯಾಯಪಾಲಿಕೆಗೆ ಗೌರವ ಸೂಚಿಸುತ್ತಿದ್ದೇನೆ. ಪ್ರತಿ ಮನೆಯಲ್ಲಿ ದೀಪಾವಳಿ ಸಡಗರ ಮನೆ ಮಾಡಿದೆ ಎಂದು ಮೋದಿ ನುಡಿದರು.

ರಾಮಸೇತು ಆರಂಭ ಬಿಂದುವಾಗಿ ಅರಿಚಲ್ ಮುನೈಗೆ ಭೇಟಿ ನೀಡಿದ್ದೆ. ಅಲ್ಲಿ ನಿಂತು ಶ್ರೀರಾಮನ ಹೆಜ್ಜೆಗಳ ಅನುಭೂತಿ ಪಡೆಯಲು ಪ್ರಯತ್ನ ಮಾಡಿದ್ದೇನೆ. ಕಳೆದ 11 ದಿನಗಳಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ರಾಮಕಥೆ ಕೇಳುವ ಸೌಭಾಗ್ಯ ನನಗೆ ಸಿಕ್ಕಿತ್ತು ಎಂದರು ಅವರು. 

ರಾಮ ಭಕ್ತರು, ರಾಜ ಮಹಾರಾಜರು, ಸಾಧು ಸಂತರು, ಕರಸೇವಕರು, ಜತೆಗೆ ಕೋಟಿ ಕೋಟಿ ಹಿಂದೂಗಳ ಹೋರಾಟಕ್ಕೆ ನಾನು ಚಿರಋಣಿ ಆಗಿದ್ದೇನೆ. ಇತಿಹಾಸ, ನಾಗರೀಕತೆಯನ್ನು ಪುನರುತ್ಥಾನಗೊಳಿಸಲು ಹೊರಟ ದೇಶಗಳಿಗೆ ಅತ್ಯಂತ ಕಠಿಣ ಸವಾಲು ಎದುರಾಗಿದೆ. ಭಾರತ ಕೂಡ ಹಲವು ಸವಾಲು ಎದುರಿಸಿದೆ. ಇಂದು ಭಾರತ ಭವ್ಯ ರಾಮ ಮಂದಿರ ನಿರ್ಮಿಸಿ ಉತ್ತಮ ಭವಿಷ್ಯಕ್ಕೆ ನಾಂದಿ ಹಾಡಿದೆ. ರಾಮ ಮಂದಿರ ಧೈರ್ಯ, ಶಾಂತಿ, ಸಮನ್ವಯದ ಪ್ರತೀಕವಾಗಿದೆ ಎಂದು ಪ್ರಧಾನಿಗಳು ಹೇಳಿದರು. 

ರಾಷ್ಟ್ರೀಯ ಕೀರ್ತನೆಯ ಮಂದಿರ

ರಾಮ ವಿವಾದವಲ್ಲ, ರಾಮ ಭಕ್ತಿಯ ಸಂಕೇತ, ರಾಮ ಎಲ್ಲರಿಗೂ ಸೇರಿದ ಆದರ್ಶ ಪುರುಷ. ಇದು ಕೇವಲ ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠೆ ಅಲ್ಲ, ಭಾರತೀಯ ಸಂಸ್ಕೃತಿಗೆ ಪ್ರಾಣಪ್ರತಿಷ್ಠೆಯಾಗಿದೆ. ಇದು ಕೇವಲ ದೇವ ಮಂದಿರ ಮಾತ್ರವಲ್ಲ, ಭಾರತದ ದೃಷ್ಟಿ, ಭಾರತದ ದರ್ಶನದ ಮಂದಿರವಾಗಿದೆ. ಇದು ರಾಷ್ಟ್ರೀಯ ಕೀರ್ತನೆಯ ಮಂದಿರವಾಗಿದೆ. ರಾಮ ಭಾರತದ ವಿಚಾರ, ರಾಮ ಭಾರತದ ವಿಕಾಸ, ರಾಮ ಭಾರತದ ಚೇತನ, ರಾಮ ಭಾರತದ ಚಿಂತನೆ, ರಾಮ ಭಾರತದ ಪ್ರತಾಪ, ರಾಮ ಭಾರತದ ಪ್ರಭಾವ, ರಾಮ ನೀತಿಯೂ ಹೌದು, ನಿರಂತರತೆ ಹೌದು. ರಾಮ ವ್ಯಾಪಕವೂ ಹೌದು.. ಎಂದು ಪ್ರಧಾನಿ ಮೋದಿ ನುಡಿದರು.

ತ್ರೇತಾಯುಗದಲ್ಲಿ ರಾಮ ಆಗಮಿಸಿದ್ದ. ಸಾವಿರಾರು ವರ್ಷಗಳ ಕಾಲ ರಾಮರಾಜ್ಯ ನೆಲೆಸಿತ್ತು. ಈಗ ಶ್ರೀರಾಮನ ಭವ್ಯ ಮಂದಿರ ನಿರ್ಮಾಣಗೊಂಡಿದೆ. ಮುಂದೇನು? ಈ ಸಂದರ್ಭದಲ್ಲಿ ಎಲ್ಲಾ ದೇವರು ನಮಗೆ ಆಶೀರ್ವಾದ ಮಾಡಲು ಸೇರಿದ್ದಾರೆ. ನಮ್ಮ ಅಂತಃಕರಣ ವಿಸ್ತಾರ ಮಾಡಬೇಕು, ದೇವರಿಂದ ದೇಶದ ತನಕ, ರಾಮನಿಂದ ರಾಷ್ಟ್ರದ ತನಕ ವಿಸ್ತರಿಸಬೇಕು. ಭಾರತದಲ್ಲಿ ಭಕ್ತಿ, ಸೇವೆ, ಸಮರ್ಪಣೆ ಭಾವ ಭಾರತದ ಆಧಾರವಾಗಿದೆ.

ಪ್ರಧಾನಿ ನರೇಂದ್ರ ಮೋದಿ

ರಾಮ ಬರುತ್ತಾನೆ ಎಂದು  ತಾಯಿ ಶಬರಿದೇವಿ ಹೇಳಿದ್ದರು. ದೇಶದಲ್ಲಿ ಸಂಕುಚಿತಗೊಳ್ಳುವ ಅವಶ್ಯಕತೆ ಇಲ್ಲ. ಯಾವುದೇ ಸ್ತರದಲ್ಲಿ ಇರಲಿ, ಪ್ರಯತ್ನಗಳಿಂದ ಸಾಧಕರಾಗಲು ಸಾಧ್ಯ. ಜಟಾಯು ಕರ್ತವ್ಯ ನಿಷ್ಠೆ ನೋಡಿ ನಾವು ಪಾಠ ಕಲಿಯಬೇಕು. ರಾವಣನ ಮುಂದೆ ಹೋರಾಡಿ ಗೆಲ್ಲಲು ಸಾಧ್ಯವಿಲ್ಲ ಅನ್ನೋದು ಜಟಾಯುವಿಗೆ ತಿಳಿದಿತ್ತು. ಆದರೂ ಹೋರಾಟ ಮಾಡಿತ್ತು. ಇದು ಸಮರ್ಥ, ಸಕ್ಷಂ, ಭವ್ಯ ದಿವ್ಯ ಭಾರತ ಎಂದು ಮೋದಿ ಹೇಳಿದ್ದಾರೆ.

ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಕಳೆದ 11 ದಿನಗಳಿಂದ ಕಠಿಣ ವ್ರತ ಕೈಗೊಂಡಿದ್ದರು. ಬೆಳ್ಳಿ ಛಾತ್ರ ಹಾಗೂ ವಸ್ತ್ರ ಹಿಡಿದು ಗರ್ಭಗುಡಿ ಪ್ರವೇಶಿಸಿದ ಪ್ರಧಾನಿ; ಪ್ರಾಣಪ್ರತಿಷ್ಠೆ ಪೂಜಾ ಕೈಂಕರ್ಯದಲ್ಲಿ ಯಜಮಾನನ ಸ್ಥಾನ ವಹಿಸಿದ್ದರು. ಪ್ರಾಣ ಪ್ರತಿಷ್ಠಾಪನೆಯ ವಿವಿಧ ವಿಧಿಗಳು ಮಧ್ಯಾಹ್ನ 12.20ರಿಂದ ಆರಂಭಗೊಂಡಿತು. ಮೂಲ ಮುಹೂರ್ತ ಮಧ್ಯಾಹ್ನ 12.30ರ ಸುಮಾರಿಗೆ ಪ್ರಾಣಪ್ರತಿಷ್ಠೆ ನೇರವೇರಿಸಲಾಯಿತು. 84 ಸೆಕೆಂಡುಗಳಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಬಳಿಕ ಇತರ ವಿಧಿ ವಿಧಾನಗಳನ್ನು 12.55ರೊಳಗೆ ಮುಗಿಸಲಾಯಿತು. 

Tags: ayodhyabala ramackcknewsnowindiakarnatakalord ramanarendra modinewspran pratishta
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಹೊಸ ಸಂಸತ್‌ ಭವನ; ವಿಶೇಷಗಳ ನಂದನವನ

ಮಾರ್ಚ್ʼನಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ; ರಾಜ್ಯದಲ್ಲಿ ಎರಡು ಹಂತದ ಮತದಾನ?

Leave a Reply Cancel reply

Your email address will not be published. Required fields are marked *

Recommended

ಪ್ರಧಾನಿಯನ್ನು ಭೇಟಿಯಾಗೋಕೆ ಸಿದ್ದರಾಮಯ್ಯನ ಪರ್ಮಿಷನ್‌ ಬೇಕಾ? ನಾನ್‌ಸೆನ್ಸ್‌ ಎಂದ ದೇವೇಗೌಡರು

ಬೆಂಗಳೂರಿನಲ್ಲಿ ಪ್ರತಿ ಕುಟುಂಬಕ್ಕೆ ಆಗುವ ಕುಡಿಯುವ ನೀರಿನ ಖರ್ಚು ಎಷ್ಟು?

5 months ago
ಆರೋಗ್ಯ ಕವಚ ಸೇವೆಗೆ 120 ಆಂಬ್ಯುಲೆನ್ಸ್ ಸೇರ್ಪಡೆ

ಆರೋಗ್ಯ ಕವಚ ಸೇವೆಗೆ 120 ಆಂಬ್ಯುಲೆನ್ಸ್ ಸೇರ್ಪಡೆ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ