• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಬಾಗೇಪಲ್ಲಿಯ S.N.ಸುಬ್ಬಾರೆಡ್ಡಿಗೆ ಬೀಜ ನಿಗಮ, ಬಂಗಾರಪೇಟೆಯ S.N.ನಾರಾಯಣಸ್ವಾಮಿಗೆ ನಗರ ಮೂಲಸೌಕರ್ಯ ಅಭಿವೃದ್ದಿ ನಿಗಮ; ಕೆಜಿಎಫ್‌ʼನ ರೂಪಕಲಾ ಅವರಿಗೆ ಕರಕುಶಲ ಅಭಿವೃದ್ಧಿ ನಿಗಮ

cknewsnow desk by cknewsnow desk
January 26, 2024
in EDITORS'S PICKS, NATION, POLITICS, STATE
Reading Time: 3 mins read
0
ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ
984
VIEWS
FacebookTwitterWhatsuplinkedinEmail

34 ಶಾಸಕರಿಗೆ ನಿಗಮ ಮಂಡಳಿ ಭಾಗ್ಯ; ಎಲ್ಲರಿಗೂ ಸಂಪುಟ ದರ್ಜೆ ಪ್ರಾಪ್ತಿ

ಬೆಂಗಳೂರು: ಕಾಂಗ್ರೆಸ್ ಸರಕಾರದ ನಿಗಮ ಮಂಡಳಿ ಗಜ ಪ್ರಸವದ ಸಂಕಷ್ಟ ಕೊನೆಗೂ ಅಂತ್ಯವಾಗಿದೆ.

ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ 34 ಶಾಸಕರಿಗೆ ನಿಗಮ ಮಂಡಳಿ ಭಾಗ್ಯ ದೊರೆತಿದೆ.

ಎರಡು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ನೇಮಕಾತಿ ಆದೇಶ ಜಾರಿಯಲ್ಲಿ ಇರುತ್ತದೆ ಹಾಗೂ ಎಲ್ಲರಿಗೂ ಸಂಪುಟ ದರ್ಜೆ ದಯಪಾಲಿಸಲಾಗಿದೆ.

ಎಸ್ ಎನ್ ಸುಬ್ಬಾರೆಡ್ಡಿ ಅವರಿಗೆ ಕರ್ನಾಟಕ ಬೀಜ ನಿಗಮದ ಅಧ್ಯಕ್ಷಗಿರಿ ಸಿಕ್ಕಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಡಾ.ಎಂ.ಸಿ.ಸುಧಾಕರ್ ಅವರು ಈಗಾಗಲೇ ಮಂತ್ರಿಯಾಗಿದ್ದಾರೆ. ಅಲ್ಲಿಗೆ ಜಿಲ್ಲೆಯಲ್ಲಿ ಇಬ್ಬರು ಶಾಸಕರಿಗೆ ಅಧಿಕಾರ ಸಿಕ್ಕಂತೆ ಆಗಿದೆ.

ಕೋಲಾರ ಜಿಲ್ಲೆಯಲ್ಲಿ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಭಾಗ್ಯ ಸಿಕ್ಕಿದೆ. ಮೂರು ಬಾರಿ ಗೆದ್ದು ಹ್ಯಾಟ್ರಿಕ್ ದಾಖಲೆ ಮಾಡಿರುವ ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಅವರು ಶತಾಯ ಗತಾಯ ಮಂತ್ರಿ ಆಗಲೇಬೇಕು ಎಂದು ಪ್ರಯತ್ನ ಮಾಡಿದ್ದರು

ಆದರೆ, ಪೊಗದಸ್ತಾದ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಕೊಡಲಾಗಿದೆ

ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರಿಗೆ ಅಷ್ಟೇನೂ ಪ್ರಭಾವೀ ಅಲ್ಲದ ಕರ್ನಾಟಕ ಕರಕುಶಲ ಅಭಿವೃದಿ ನಿಗಮವನ್ನು ನೀಡಲಾಗಿದೆ. ಅಲ್ಲಿಗೆ ಕೋಲಾರ ಜಿಲ್ಲೆಗೆ ಎರಡು ನಿಗಮ ಮಂಡಳಿಗಳನ್ನು ಹಂಚಿಕೆ ಮಾಡಲಾಗಿದೆ.

ಎಸ್ ಎನ್ ಸುಬ್ಬಾರೆಡ್ಡಿ ಅವರಿಗೆ ಸಿಕ್ಕಿರುವ ಬೀಜ ನಿಗಮವು ಭರ್ಜರಿಯಾಗಿದೆ.

ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಹಾಗೂ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಅವರಿಗೆ ಭರ್ಜರಿ ನಿಗಮ ಮಂಡಳಿ ಭಾಗ್ಯ ಸಿಗಲಿದೆ ಎಂದು ಸಿಕೆನ್ಯೂಸ್ ನೌ ಈ ಹಿಂದೆಯೇ ವರದಿ ಮಾಡಿತ್ತು

ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್

ಯಾರಿಗೆ ಯಾವ ಮಂಡಳಿ?

ಈ ಕೆಳಗಿನ ಸ್ಲೈಡ್ ಶೋ ಗಮನಿಸಿ

Document-37

  1. ಹಂಪನಗೌಡ ಬಾದರ್ಲಿ / ಸಣ್ಣ ಕೈಗಾರಿಕೆಗಳ ಮೂಲಸೌಕರ್ಯ ಅಭಿವೃದ್ಧಿ ನಿಗಮ
  2. ಅಪ್ಪಾಜಿ ಸಿ.ಎಸ್.ನಾಡಗೌಡ / ಕರ್ನಾಟಕಸೋಪ್ಸ್‌ ಅಂಡ್‌ ಡಿಟರ್ಜಂಟ್‌ ನಿಯಮಿತ (ಕೆಎಸ್​ಡಿಎಲ್)
  3. ಭರಮಗೌಡ ಅಲಗೌಡ ಕಾಗೆ (ರಾಜು ಕಾಗೆ) / ವಾಯವ್ಯ ಸಾರಿಗೆ ನಿಗಮ ನಿಯಮಿತ
  4. ಹೆಚ್.ವೈ.ಮೇಟಿ / ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
  5. ಎಸ್.ಆರ್.ಶ್ರೀನಿವಾಸ (ಗುಬ್ಬಿ ವಾಸು) / ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
  6. ಬಸವರಾಜ ನೀಲಪ್ಪ ಶಿವಣ್ಣನವರ್ / ಅರಣ್ಯ ಅಭಿವೃದ್ಧಿ ನಿಗಮ
  7. ಬಿ.ಜಿ.ಗೋವಿಂದಪ್ಪ / ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
  8. ಎಚ್.ಸಿ.ಬಾಲಕೃಷ್ಣ / ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
  9. ಜಿ.ಎಸ್.ಪಾಟೀಲ್ / ಖನಿಜ ಅಭಿವೃದ್ಧಿ ನಿಗಮ ನಿಯಮಿತ
  10. ಎನ್.ಎ.ಹ್ಯಾರಿಸ್ / ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
  11. ಮಹಾಂತೇಶ್ ಶಿವಾನಂದ ಕೌಜಲಗಿ / ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
  12. ಸಿ.ಪುಟ್ಟರಂಗಶೆಟ್ಟಿ / ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್
  13. ಜಿ.ಟಿ.ಪಾಟೀಲ್‌ / ಹಟ್ಟಿ ಚಿನ್ನದ ಗಣಿ
  14. ರಾಜಾ ವೆಂಕಟಪ್ಪ ನಾಯಕ / ಕರ್ನಾಟಕ ರಾಜ್ಯ ಉಗ್ರಾಣ ನಿಗಮ
  15. ಬಿ.ಕೆ.ಸಂಗಮೇಶ್ವರ / ಕರ್ನಾಟಕ ಮೂಲಭೂತ ಸೌಕರ್ಯಗಳ ನಿಗಮ (ಭೂಸೇನಾ ನಿಗಮ)
  16. ಕೆ.ಎಂ.ಶಿವಲಿಂಗೇಗೌಡ / ಕರ್ನಾಟಕ ಗೃಹ ಮಂಡಳಿ
  17. ಅಬ್ಬಯ್ಯ ಪ್ರಸಾದ್ / ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ
  18. ಬೇಳೂರು ಗೋಪಾಲಕೃಷ್ಣ/ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ
  19. ಎಸ್.ಎನ್.ನಾರಾಯಣಸ್ವಾಮಿ / ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ
  20. ಟಿ.ರಘುಮೂರ್ತಿ / ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
  21. ರಮೇಶ್ ಬಂಡಿಸಿದ್ದೇಗೌಡ / ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ (ಚೆಸ್ಕಾಂ)
  22. ಬಿ.ಶಿವಣ್ಣ / ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)
  23. ಎಸ್.ಎನ್.ಸುಬ್ಬಾರೆಡ್ಡಿ / ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
  24. ವಿನಯ್ ಕುಲಕರ್ಣಿ / ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
  25. ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್
  26. ಬಸನಗೌಡ ದದ್ದಲ್ / ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
  27. ಖನೀಜ್ ಫಾತಿಮಾ / ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ
  28. ವಿಜಯಾನಂದ ಕಾಶಪ್ಪನರ್ / ಕರ್ನಾಟಕ ಕ್ರೀಡಾ ಪ್ರಾಧಿಕಾರ
  29. ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
  30. ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ
  31. ಸತೀಶ್‌ ಕೃಷ್ಣ ಸೈಲ್‌ / ಕರ್ನಾಟಕ ಮಾರ್ಕೆಟಿಂಗ್‌ ಕನ್ಸಲ್‌ ಟೆಂಟ್‌ ಅಂಡ್‌ ಏಜೆನ್ಸೀಸ್‌
  32. ಶರತ್‌ ಬಚ್ಚೇಗೌಡ / ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)
  33. ಜಿ.ಎಂ.ಗಣೇಶ್‌ / ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ
  34. ಬಸವನಗೌಡ ತುರುವಿಹಾಳ / ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ

ಮೇಲಿನ ಈ ಪಟ್ಟಿಯನ್ನು ಸಿಬ್ಬಂದಿ ಮತ್ತು ಆಡಳಿ ಸುಧಾರಣಾ ಇಲಾಖೆ ಸಂಜೆ ಹೊತ್ತಿಗೆ ಬಿಡುಗಡೆ ಮಾಡಿದೆ.

ಇಬ್ಬರು ಶಾಸಕರ ಹೆಸರು ನಾಪತ್ತೆ

ಅಧಿಕೃತ ಪಟ್ಟಿ ಹೊರಬೀಳುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಟರ್‌ ಹೆಡ್‌ ನಲ್ಲಿ ಮುದ್ರಣವಾಗಿ ಸಿದ್ದರಾಮಯ್ಯ ಅವರ ಸಹಿಯೇ ಇದ್ದ ಪಟ್ಟಿಯೊಂದು ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಆ ಪಟ್ಟಿಯೇ ಪ್ರಕಟವಾಯಿತು. ಆದರೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಹೊರಬಿದ್ದ ಪಟ್ಟಿಯಲ್ಲಿ ವೈರಲ್‌ ಆದ ಪಟ್ಟಿಯಲ್ಲಿದ್ದ ಕೆಲ ಶಾಸಕರ ಹೆಸರುಗಳು ಮಿಸ್‌ ಆಗಿವೆ

ಪಿ.ಎಂ.ನರೇಂದ್ರಸ್ವಾಮಿ / ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿ
ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ

ಈ ಇಬ್ಬರು ಶಾಸಕರ ಹೆಸರುಗಳು ಅಧಿಕೃತ ಪಟ್ಟಿಯಲ್ಲಿ ಇಲ್ಲ. ಕೊನೆಕ್ಷಣದಲ್ಲಿ ಇವರಿಬ್ಬರ ನೇಮಕಕ್ಕೆ ತಡೆ ಬಿತ್ತಾ ಎನ್ನುವುದು ಅನುಮಾನವಾಗಿದೆ.

Tags: board and corporationckcknewsnowCongresskarnatakaministermlanews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಹೈವೋಲ್ಟೇಜ್ ಅಧಿವೇಶನ

ಕರ್ನಾಟಕದಲ್ಲಿ ನಗದಾಭಿವೃದಿ ಇಲಾಖೆ ಎಂದರೆ ಯಾವುದು?

Leave a Reply Cancel reply

Your email address will not be published. Required fields are marked *

Recommended

ಮಳೆ ನೆರೆಗೆ ತತ್ತರಿಸಿದ ಚಿಕ್ಕಬಳ್ಳಾಪುರ

ಮಳೆ ನೆರೆಗೆ ತತ್ತರಿಸಿದ ಚಿಕ್ಕಬಳ್ಳಾಪುರ

3 years ago
ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಸ್ಫೋಟ;  ಸರಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಸ್ಫೋಟ; ಸರಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ