• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ಲೋಕಸಭೆ ಚುನಾವಣೆ ಕಣಕ್ಕೆ IAS/IPS ಅಧಿಕಾರಿಗಳು, ಪತ್ರಕರ್ತರು

P K Channakrishna by P K Channakrishna
February 7, 2024
in ELECTION2024, NATION, POLITICS, STATE
Reading Time: 1 min read
0
ಹೊಸ ಸಂಸತ್‌ ಭವನ; ವಿಶೇಷಗಳ ನಂದನವನ
1.1k
VIEWS
FacebookTwitterWhatsuplinkedinEmail

ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ನಿಂದ ಸ್ಪರ್ಧಿಸಲು ಪೈಪೋಟಿ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಮತ್ತು ಕೆಲ ಪತ್ರಕರ್ತರು ಸಾಲು ಸಾಲಾಗಿ ರಾಜಕೀಯ ಪಕ್ಷಗಳ ಬಾಗಿಲು ತಟ್ಟುತ್ತಿದ್ದಾರೆ. ಅಧಿಕಾರದಲ್ಲಿರುವವರು ಮತ್ತು ನಿವೃತ್ತಿ ಹೊಂದಿರುವ ಕೆಲ ಅಧಿಕಾರಿಗಳು ಸಂಸತ್ ಪ್ರವೇಶಿಸಲು ಹಾತೊರೆಯುತ್ತಿದ್ದಾರೆ.

ಪ್ರಭಾವ ಬಳಸಿ ಟಿಕೆಟ್ ಪಡೆಯುವ ಯತ್ನ

ಸುಮಾರು 14ಕ್ಕೂ ಹೆಚ್ಚು ಅಧಿಕಾರಿಗಳು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಅದರಲ್ಲೂ ಬಿಜೆಪಿ ಟಿಕೆಟ್‌ಗೆ ಹೆಚ್ಚು ಆಕಾಂಕ್ಷಿಗಳಾಗಿದ್ದು, ತಮ್ಮ ಪ್ರಭಾವ ಬಳಸಿ ಟಿಕೆಟ್ ಪಡೆಯುವ ಪ್ರಯತ್ನ ಮಾಡಿದ್ದಾರೆ. ಅವರು ಬೆಂಗಳೂರು ಹಾಗೂ ದೆಹಲಿಯಲ್ಲಿರುವ ತಮ್ಮ ಸಂಪರ್ಕ ಬಳಸಿಕೊಂಡು ಟಿಕೆಟ್‌ʼಗೆ ಪ್ರಯತ್ನ ಮಾಡುತ್ತಿದ್ದಾರೆ.

ಮುಖ್ಯಮಂತ್ರಿ ಕಾರ್ಯಾಲಯ ಸೇರಿ ವಿವಿಧ ಇಲಾಖೆಗಳಲ್ಲಿ ಆಯಕಟ್ಟಿನ ಜಾಗದಲ್ಲಿ ಕೂತು ವಿಜೃಂಭಿಸಿದ್ದ, ಸದ್ಯಕ್ಕೆ ನಿವೃತ್ತಿ ಅಂಚಿನಲ್ಲಿರುವ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಚುನಾವಣೆ ಕಣಕ್ಕಿಳಿಯಲು ಬಯಸಿದ್ದಾರೆ. ಅವರಿಗೆ ಮಾತ್ರ ‌ʼಮೀಸಲಾದʼ ಒಂದು ಕ್ಷೇತ್ರವನ್ನು ಬಿಟ್ಟುಕೊಡಲು ಮೂರು ಪಕ್ಷಗಳಲ್ಲಿಯೂ ಒಲವಿದೆ. ಅವರು ಯಾವ ಪಕ್ಷದಿಂದ ಕಣಕ್ಕಿಳಿಯಲಿದ್ದಾರೋ ಎಂಬುದನ್ನು ಕಾದು ನೋಡಬೇಕಷ್ಟೇ. ಕಳೆದ ಕೆಲ ಚುನಾವಣೆಗಳಲ್ಲಿ ಕಣಕ್ಕಿಳಿದು ಪರಾಭವಗೊಂಡ ಕೆಲವು ಅಧಿಕಾರಿಗಳು ಮರು ಪ್ರಯತ್ನ ಮಾಡಿದ್ದಾರೆ.

ರಾಜಕೀಯ ನಾಯಕರ ಜತೆ ಒಡನಾಟ

ಸರಕಾರಿ ಸೇವೆಯಲ್ಲಿ ಕಾರ್ಯ ನಿರ್ವಹಿಸುವಾಗ ಅಧಿಕಾರಿಗಳು ರಾಜಕೀಯ ಪಕ್ಷಗಳ ಮುಖಂಡರೊಂದಿಗಿನ ಒಡನಾಟವಿರುತ್ತದೆ. ಅದರಲ್ಲೂ ಕರ್ನಾಟಕ ಮೂಲದ ಅಧಿಕಾರಿಗಳಿಗೆ ರಾಜಕೀಯ ಪಕ್ಷಗಳು ಹಿಂದೆ ಟಿಕೆಟ್ ನೀಡಿವೆ. ಮುಂದೆಯೂ ನೀಡುವ ಸಾಧ್ಯತೆಗಳಿವೆ.‌ ಈ ಪೈಕಿ ಕೆಲ ಅಧಿಕಾರಿಗಳು ಆಯಕಟ್ಟಿನ ಜಾಗದಲ್ಲಿದ್ದರು. ಇವರ ಹೆಸರು ಪ್ರಮುಖವಾಗಿ ಕೋಲಾರ ಮೀಸಲು ಕ್ಷೇತ್ರಕ್ಕೆ ಕೇಳಿ ಬರುತ್ತಿದೆ. ಅವರೆಲ್ಲರೂ ಪ್ರಭಾವೀ ರಾಜಕಾರಣಿಗಳ ಪಡಸಾಲೆಯಲ್ಲಿ ನಿರಂತರವಾಗಿ ಪ್ರತ್ಯಕ್ಷರಾಗುತ್ತಿದ್ದರು.

ಇನ್ನೊಬ್ಬ ನಿವೃತ್ತ ಐಎಎಸ್‌ ಅಧಿಕಾರಿಯೊಬ್ಬರು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.

ಮೂರು ಪಕ್ಷಗಳಿಗೂ ಕೆಲವು ಕ್ಷೇತ್ರಗಳಲ್ಲಿ ವರ್ಚಸ್ವಿ ಮತ್ತು ಸಮರ್ಥ ಅಭ್ಯರ್ಥಿಗಳಿಲ್ಲ. ಅಂತಹ ಕ್ಷೇತ್ರಗಳಿಗೆ ಈ ಅಧಿಕಾರಿಗಳನ್ನು ಕಣಕ್ಕಿಳಿಸಬೇಕು ಎಂಬ ಉದ್ದೇಶ ರಾಜಕೀಯ ಪಕ್ಷಗಳಲ್ಲಿದೆ. ಕಣಕ್ಕಿಳಿಯುವ ಅಧಿಕಾರಿಗಳು ಚುನಾವಣೆಯ ವೆಚ್ಚವನ್ನು ಅವರೇ ಭರಿಸುಕೊಳ್ಳುತ್ತಾರೆ ಎಂಬ ಲೆಕ್ಕಾಚಾರವಿದೆ.

ಆ ರೀತಿಯ ಸಾಮರ್ಥ್ಯ ಇರುವ ಅಧಿಕಾರಿಗಳೇ ಸ್ಪರ್ಧೆ ಬಗ್ಗೆ ಆಸಕ್ತಿ ತೋರಿರುವುದು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿದವರಿಗೆ ಕೆಲ ಸೀಟುಗಳನ್ನು ನೀಡುವ ಚಿಂತನೆ ಬಿಜೆಪಿಯಲ್ಲಿದೆ. ಅದನ್ನು ಬಂಡವಾಳ ಮಾಡಿಕೊಳ್ಳಲು ಈ ಹಾಲಿ, ನಿವೃತ್ತ ಅಧಿಕಾರಿಗಳು ಶತಪ್ರಯತ್ನ ನಡೆಸಿದ್ದಾರೆ. ಚುನಾವಣೆ ಕಣಕ್ಕಿಳಿಯಲು ಬಯಸಿ ಸೇವೆಯಲ್ಲಿರುವ ಕೆಲ ಅಧಿಕಾರಿಗಳು ಕೂಡ ಸ್ವಯಂ ನಿವೃತ್ತಿ ಪಡೆಯಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದಾರೆ. ಅದರಲ್ಲಿ ಹೆಚ್ಚಿನವರು ಈ ವರ್ಷ ನಿವೃತ್ತಿಯಾಗುವವರು ಇದ್ದಾರೆ.

2ನೇ ಹಂತದ ಅಧಿಕಾರಿಗಳ ಯತ್ನ

ಜತೆಗೆ ಕಂದಾಯ, ಪೊಲೀಸ್, ಸಾರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಎರಡನೇ ಹಂತದ ಅಧಿಕಾರಿಗಳು ತೆರೆಮರೆಯಲ್ಲಿ ಟಿಕೆಟ್‌ ಗಿಟ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಇವರಲ್ಲಿ ಯಾರಿಗೆ ಟಿಕೆಟ್ ದೊರೆಯುತ್ತದೋ ಎಂಬುದನ್ನು ಕಾದು ನೋಡಬೇಕಿದೆ. ಈ ಪೈಕಿ ಕೆಎಎಸ್‌ ಅಧಿಕಾರಿಗಳಲ್ಲಿ ಕೆಲವರು ಟಿಕೆಟ್‌ ಪಡೆಯಲು ಮೂರು ಪಕ್ಷಗಳ ವರಿಷ್ಠರ ಮನೆಗಳಲ್ಲಿ ಪ್ರತ್ಯಕ್ಷರಾಗುತ್ತಿದ್ದಾರೆ.

ಪತ್ರಕರ್ತರೂ ಹಿಂದೆ ಬಿದ್ದಿಲ್ಲ

ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭ ಮಾಧ್ಯಮದಲ್ಲಿರುವ ಮಂದಿಯೂ ಸಂಸತ್‌ ಭವನಕ್ಕೆ ಲಗ್ಗೆ ಇಡಲು ಹಾತೊರೆಯುತ್ತಿದ್ದಾರೆ. ರಾಜ್ಯದಲ್ಲಿ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರು ಸುದ್ದಿಮನೆಯಿಂದ ಸಂಸತ್ತಿಗೆ ಜಿಗಿದ ನಂತರ ಅನೇಕ ಪತ್ರಕರ್ತರಿಗೆ ಲೋಕಸಭೆ ಕನಸು ನಿರಂತರವಾಗಿದೆ.

ರಾಜ್ಯ ಮತ್ತು ರಾಷ್ಟ್ರೀಯ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುವ ಮತ್ತು ಸಲ್ಲಿಸುತ್ತಿರುವವರು ಬಿಜೆಪಿ ಟಿಕೆಟ್ ಪಡೆಯಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ವೃತ್ತಿಯಲ್ಲಿ ಇದ್ದಾಗಲೇ ರಾಜಕೀಯ ಪಕ್ಷಗಳ ಜತರ ಪರೋಕ್ಷವಾಗಿ ಗುರುತಿಸಿಕೊಂಡಿದ್ದ ಪತ್ರಕರ್ತರಲ್ಲಿ ಕೆಲವರು ಈಗ ಟಿಕೆಟ್‌ ಬೇಟೆ ಆರಂಭ ಮಾಡಿದ್ದಾರೆ.

ಈಗಾಗಲೇ ಸಂಪಾದಕ ಹುದ್ದೆಯಲ್ಲಿ ಒಬ್ಬ ಪತ್ರಕರ್ತರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಂಡು ತಮ್ಮ ಪ್ರಭಾವ ವಿಸ್ತಾರ ಮಾಡಿಕೊಂಡಿದ್ದಾರೆ. ಇವರು ಉತ್ತರ ಕನ್ನಡ ಕ್ಷೇತ್ರದ ಟಿಕೆಟ್‌ʼಗೆ ಲಾಬಿ ಆರಂಭ ಮಾಡಿದ್ದಾರೆ. ಆದರೆ, ಅಲ್ಲಿ ಹಾಲಿ ಸಂಸದ ಅನಂತಕುಮಾರ ಹೆಗಡೆ ಬಹಳ ಕ್ರಿಯಾಶೀಲರಾಗಿದ್ದಾರೆ. ಆದರೆ, ಅವರ ವಿರುದ್ಧ ಕೆಲ ಪತ್ರಕರ್ತರೇ ಬಿಜೆಪಿ ವರಿಷ್ಠರ ಕಿವಿ ಕಚ್ಚುತ್ತಿದ್ದಾರೆ. ಹಿಂದೆ ಎರಡು ಪತ್ರಿಕೆಗಳ ಸಂಪಾದಕರಾಗಿದ್ದ ಅವರು ನೂರಾರು ಪತ್ರಕರ್ತರು ಕೆಲಸ ಕಳೆದುಕೊಳ್ಳುವುದಕ್ಕೆ ಕಾರಣರಾಗಿದ್ದರು ಎಂಬ ಆರೋಪವಿದೆ. ಆ ಹಳೆಯ ಸೇಡು ಈಗ ಅವರಿಗೆ ಮುಳುವಾಗಿದೆ.

ಅಲ್ಲದೆ, ಇವರು ಮೊದಲು ಬಿ.ಎಲ್.ಸಂತೋಷ್‌ ಅವರ ಕ್ಯಾಂಪಿನಲ್ಲಿದ್ದರು. ತದ ನಂತರ ಅವರ ವಿರೋಧಿ ಕ್ಯಾಂಪಿಗೆ ಜಿಗಿದಿದ್ದರು. ಈ ಜಿಗಿತವೂ ಅವರ ಟಿಕೆಟ್ಟಿಗೆ ಮುಳುವಾಗುವ ಸಾಧ್ಯತೆ ಇದೆ.

ಇನ್ನೊಂದು ವಾಹಿನಿ ಸಂಪಾದಕರೊಬ್ಬರು ಕೂಡ ಸಂಸತ್‌ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಅಥವಾ ಉತ್ತರ ಕರ್ನಾಟಕದ ಯಾವುದಾರೂ ಒಂದು ಕ್ಷೇತ್ರಕ್ಕೆ ಅವರು ಕಸರತ್ತು ನಡೆಸುತ್ತಿದ್ದಾರೆ. ಈ ಇಬ್ಬರು ಪತ್ರಕರ್ತರಿಗೆ ಸಂಘ ಪರಿವಾರದ ಕೃಪೆ ಇದ್ದರೂ ಬಿಜೆಪಿಯಲ್ಲಿ ವಿರೋಧವಿದೆ.

ಉತ್ತರ ಕರ್ನಾಟಕ ಭಾಗದ ಒಬ್ಬರು, ಮೈಸೂರು ನಗರದ ಇನ್ನೊಬ್ಬ ಪತ್ರಕರ್ತರು ಟಿಕೆಟ್‌ ಗೆ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೆ, ಇನ್ನೂ ಹಲವರು ಪತ್ರಕರ್ತರು ಕಮಲದ ಟಿಕೆಟ್ ಪಡೆಯಲು ಭಾರೀ ಪ್ರಯತ್ನ ಮಾಡಿದ್ದಾರೆ. ಪತ್ರಕರ್ತರಾಗಿದ್ದ ಪ್ರತಾಪಸಿಂಹ ಅವರು ಎರಡು ಬಾರಿ ಮೈಸೂರಿನ ಸಂಸದರಾಗಿ ಆಯ್ಕೆಗೊಂಡ ನಂತರ ಕೆಲವು ಪತ್ರಕರ್ತರಲ್ಲಿ ಸಂಸತ್ ಪ್ರವೇಶಿಸುವ ಆಸೆ ಇಮ್ಮಡಿಗೊಂಡಿದೆ. ಈ ಆಸೆಯಿಂದಲೇ ಅನೇಕ ಪತ್ರಕರ್ತರು ಬಿಜೆಪಿ, ಸಂಘ ಪರಿವಾರದ ಪರಿಚಾರಿಕೆ ಮಾಡಿಕೊಂಡು ಬಂದಿದ್ದಾರೆ.

Tags: 2024ckcknewsnowIASipsjournalistskarnatakaLok Sabha electionnews and viewsofficersPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜ್ಞಾನ ಆರ್ಥಿಕತೆ ಮತ್ತು ಆತ್ಮನಿರ್ಭರತೆ; ನೂತನ ಶಿಕ್ಷಣ ನೀತಿಗೆ ಹೊಸ ಆಯಾಮ ಕೊಡಲು ಮೋದಿ ಹೆಜ್ಜೆ

ಮೋದಿ 3ನೇ ಸಲ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ!

Leave a Reply Cancel reply

Your email address will not be published. Required fields are marked *

Recommended

ಕೋವಿಡ್‌ ಸಂತ್ರಸ್ತರಿಗೆ ಪರಿಹಾರ; ಸಚಿವ ಡಾ.ಸುಧಾಕರ್‌  ಕಟಾಕ್ಷಕ್ಕೆ ಕಾದಿದೆ ಗುಡಿಬಂಡೆ

ಕೋವಿಡ್‌ ಸಂತ್ರಸ್ತರಿಗೆ ಪರಿಹಾರ; ಸಚಿವ ಡಾ.ಸುಧಾಕರ್‌ ಕಟಾಕ್ಷಕ್ಕೆ ಕಾದಿದೆ ಗುಡಿಬಂಡೆ

3 years ago
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ನೀಡದ ಖಾಸಗಿ ಆಸ್ಪತ್ರೆಗಳಿಗೆ ಖಡಕ್ ವಾರ್ನಿಂಗ್, ಹೋಟೆಲ್‌ಗಳಲ್ಲಿ ಕೋವಿಡ್ ಕೇರ್ ಸೆಂಟರ್: ಡಾ.ಕೆ.ಸುಧಾಕರ್

ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ನೀಡದ ಖಾಸಗಿ ಆಸ್ಪತ್ರೆಗಳಿಗೆ ಖಡಕ್ ವಾರ್ನಿಂಗ್, ಹೋಟೆಲ್‌ಗಳಲ್ಲಿ ಕೋವಿಡ್ ಕೇರ್ ಸೆಂಟರ್: ಡಾ.ಕೆ.ಸುಧಾಕರ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ