• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಬೇಡಿಕೆಗೆ ಅಂಕುರಾರ್ಪಣೆ ಮಾಡಿದ ಹೋರಾಟದ ಕಲಿಗೆ ಇಂದು ಸಮ್ಮಾನ

cknewsnow desk by cknewsnow desk
February 20, 2024
in CHIKKABALLAPUR, STATE
Reading Time: 2 mins read
0
ಗುಡಿಬಂಡೆ ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಬೇಡಿಕೆಗೆ ಅಂಕುರಾರ್ಪಣೆ ಮಾಡಿದ ಹೋರಾಟದ ಕಲಿಗೆ ಇಂದು ಸಮ್ಮಾನ
1.3k
VIEWS
FacebookTwitterWhatsuplinkedinEmail

ಜಿ.ಎ.ಶಂಕರ್; ಐತಿಹಾಸಿಕ ಗುಡಿಬಂಡೆ ಹೋರಾಟಗಳ ಮುಂಚೂಣಿ ನಾಯಕ, ೬ನೇ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಗೌರವ

ಗುಡಿಬಂಡೆ: ಐತಿಹಾಸಿಕ ಗುಡಿಬಂಡೆ ಪ್ರತ್ಯೇಕ ವಿಧಾನಸಭೆ ಕ್ಷೇತ್ರದ ಕೇಂದ್ರ ಸ್ಥಾನವಾಗಬೇಕು ಎಂಬ ಕೂಗಿಗೆ ಈಗ ಕಾಲು ಶತಮಾನ. ಅಂದು ಈ ಧ್ವನಿ ಎತ್ತಿದ ಹೋರಾಟಗಾರ ಹಾಗೂ ಗುಡಿಬಂಡೆ ವಿಧಾನಸಭಾ ಕ್ಷೇತ್ರ ಹೋರಾಟ ಕ್ರಿಯಾ ಸಮಿತಿಯ ಕಾರ್ಯದರ್ಶಿಯಾಗಿದ್ದ ಜಿ.ಎ.ಶಂಕರ್ ಅವರಿಗೆ ೬ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿ ಗೌರವಿಸಲಾಗುತ್ತಿದೆ. ಸಮ್ಮೇಳನ ಇಂದಿಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಸಮ್ಮೇಳನದಲ್ಲಿ ಗೌರವಿಸಲ್ಪಡುವ ಸಾಧಕರಲ್ಲಿ ಹೋರಾಟಗಾರ ಜಿ.ಎ.ಶಂಕರ್ ಅವರ ಹೆಸರಿದ್ದು, ಸ್ಥಳೀಯರಿಗೆ ಸಂತಸ ಉಂಟು ಮಾಡಿದೆ.ಇವರ ಜತೆಗೆ ಇನ್ನೂ ಹಲವಾರು ಹೋರಾಟಗಾರರನ್ನು ಗುರುತಿಸಿ ಗೌರವಿಸಲಾಗುತ್ತಿದೆ.

ಸುಮಾರು 25 ವರ್ಷಗಳಿಗೂ ಹೆಚ್ಚು ಕಾಲದ ಈ ಹೋರಾಟವು ಈವರೆಗೂ ಫಲ ಕೊಟ್ಟಿಲ್ಲವಾದರೂ ಅದರ ಕಾವು ಮಾತ್ರ ಕಡಿಮೆ ಆಗಿಲ್ಲ. ಜನಸಂಖ್ಯೆಯ ಕಾರಣವೋ, ಸರಕಾರದ ನಿರ್ಲಕ್ಷ್ಯವೋ, ಸ್ಥಳೀಯ ನಾಯಕತ್ವದ ಕೊರತೆಯೋ ಇಂದಿಗೂ ಗುಡಿಬಂಡೆ ಪ್ರತ್ಯೇಕ ವಿಧಾನಸಭೆ ಕ್ಷೇತ್ರವಾಗಿ ಹೊರಹೊಮ್ಮಿಲ್ಲ. ಬದಲಿಗೆ ಬಾಗೇಪಲ್ಲಿ ಕ್ಷೇತ್ರದ ಒಂದು ಭಾಗವಾಗಿಯೇ ಉಳಿದುಕೊಂಡಿದ್ದು, ಅಭಿವೃದ್ಧಿ ವಿಚಾರದಲ್ಲಿ ಮಲತಾಯಿ ದೋರಣಿಗೆ ತುತ್ತಾಗಿದೆ.

ಕರ್ನಾಟಕದ ಕಟ್ಟಕಡೆಯ ಹಾಗೂ ಗಡಿ ತಾಲೂಕು ಆಗಿರುವ ಗುಡಿಬಂಡೆ ಅತಿ ಹಿಂದುಳಿದ ಪ್ರದೇಶವೂ ಹೌದು. ಅಭಿವೃದ್ಧಿಯಿಂದ ಸಂಪೂರ್ಣ ವಂಚಿತವಾಗಿದೆ. ಸ್ವಾತಂತ್ರ್ಯ ಬಂದು ಏಳೂವರೆ ದಶಕವಾದರೂ ಬಡತನ ತಾಂಡವಾಡುತ್ತಿದೆ. ಅನೇಕ ಹಳ್ಳಿಗಳಲ್ಲಿ ಕಡು ಬಡತನವಿದೆ. ಬೇಸಾಯಕ್ಕೆ ಮತ್ತು ಜನರಿಗೆ ಶುದ್ಧ ನೀರಿಲ್ಲದ ದುಃಸ್ಥಿತಿಯಲ್ಲಿದೆ ಈ ಪ್ರದೇಶ. ಹೀಗೆ ಅನೇಕ ಸಮಸ್ಯೆಗಳ ನಡುವೆಯೂ ತಾಲೂಕಿನ ಜನರು ಪ್ರತ್ಯೇಕ ವಿಧಾನಸಭೆ ಕ್ಷೇತ್ರಕ್ಕಾಗಿ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ.

ಗುಡಿಬಂಡೆ ೬ನೇ ಸಾಹಿತ್ಯ ಸಮ್ಮೇಳನ ಇಂದು

25 ವರ್ಷಗಳ ಹಿಂದೆಯೇ ಹೋರಾಟಕ್ಕೆ ಅಂಕುರಾರ್ಪಣೆ

1996ರಲ್ಲಿ ತಾಲೂಕಿನ ಜಿ.ಎನ್.ರಾಜಶೇಖರ ನಾಯ್ಡು, ಜಿ.ಎ.ಶಂಕರ್, ಸ್ನೇಹಿತರ ತಂಡ ಸೇರಿ ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಹೋರಾಟ ಸಮಿತಿ ರಚಿಸಿಕೊಂಡು ಅಂದಿನ ಜನತಾದಳ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರು. ಅಲ್ಲದೆ, ಕಾನೂನುಬದ್ಧ ಹೋರಾಟ ನಡೆಸಿ ಸರಕಾರದ ಗಮನ ಸೆಳೆದು ಕಳೆದ ವರ್ಷದ ಜೂನ್ ೯ಕ್ಕೆ 25 ವರ್ಷವಾಗಿದೆ. ಇನ್ನಾದರೂ ಗುಡಿಬಂಡೆ ಪ್ರತ್ಯೇಕ ವಿಧಾನಸಭೆ ಕ್ಷೇತ್ರವಾಗುತ್ತಾ? ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ.

ಕನ್ನಡಕ್ಕಾಗಿ ಕನ್ನಡ ಭುವನೇಶ್ವರಿ ಸಂಘ

ಆಂಧ್ರ ಪ್ರದೇಶದ ಗಡಿ ಭಾಗದಲ್ಲಿರುವ ಗುಡಿಬಂಡೆಯಲ್ಲಿ ಕನ್ನಡಾಭಿಮಾನ ಸುಮಾರು 1980ರಲ್ಲಿಯೇ ಕಂಪಿಸಲು ಕಾರಣವಾದ ಸಂಘ ಇದಾಗಿದೆ. ಈ ಸಂಘದ ಮೂಲಕ ತಾಲೂಕಿನಲ್ಲಿ ಕನ್ನಡ ಭಾಷೆ ಹಬ್ಬಿಸಲು ಆರಂಭ ಮಾಡಿದ್ದರು. ಅಲ್ಲದೇ ಮುಖ್ಯರಸ್ತೆಯ ಅಂಗಡಿಗಳ ಮುಂದೆ ಕನ್ನಡ ಮಾತಾಡಬೇಕು, ಒಂದು ವೇಳೆ ಯಾರಾದರೂ ಮಾತಾಡಲಿಲ್ಲವೆಂದರೆ ಅವರಿಗೆ ಒಂದು ಕಾಫಿ ಅಥವಾ ಟೀ ಕೊಡಿಸಬೇಕು ಎಂಬ ಷರತ್ತನ್ನು ಮಾಡಿಕೊಂಡಿದ್ದರು. ಅಂದು ಆರಂಭವಾದ ಕನ್ನಡ ಭುವನೇಶ್ವರಿ ಸಂಘವನ್ನು ಇಂದಿಗೂ ಮುನ್ನಡೆಸಿಕೊಂಡು ಹೋಗಲಾಗುತ್ತಿದೆ.

  • ಜಿ.ಎನ್.ರಾಜಶೇಖರ ನಾಯ್ಡು, ಜಿ.ಎ.ಶಂಕರ್ & ಸ್ನೇಹಿತರ ತಂಡ

ಶಂಕರ್‌ ಅವರು ಭಾಗಿಯಾಗಿದ್ದ ಹೋರಾಟಗಳು

ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರದ ಹೋರಾಟ
ತಾಲ್ಲೂಕು ಕಚೇರಿಗಾಗಿ ಹೋರಾಟ
ತಾಲೂಕು ಆಸ್ಪತ್ರೆಗಾಗಿ ಹೋರಾಟ
ತಾಲೂಕಿನಲ್ಲಿ ಪಿಯುಸಿ ವಿಜ್ಞಾನ ವಿಭಾಗಕ್ಕಾಗಿ ಹೋರಾಟ
ತಾಲೂಕು ಕ್ರೀಡಾಂಗಣಕ್ಕೆ ಹೋರಾಟ
ಸಮರ್ಪಕ ಬಸ್’ಗಳಿಗಾಗಿ ಹೋರಾಟ

ಹೀಗೆ ಗುಡಿಬಂಡೆ ತಾಲೂಕಿಗೆ ಅನ್ಯಾಯವಾಗುತ್ತಿದ್ದ ಪ್ರತಿಯೊಂದು ವಿಷಯ, ವಿಚಾರದಲ್ಲಿ ಜಿ.ಎ.ಶಂಕರ್ ಹಾಗೂ ಅವರ ಸ್ನೇಹಿತರು ಹೋರಾಟ ಮಾಡಿ ಅದನ್ನು ಯಶಸ್ವಿಯಾಗಿ ಪಡೆಯಲು ಪ್ರಯತ್ನಗಳನ್ನು ಮಾಡುತ್ತಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

Tags: bagepallichikkaballapurckcknewsnowfight for separate assembly constituencyga shankergudibande
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
55 ಲಕ್ಷ ಸರಕಾರಿ ಶಾಲೆ ಮಕ್ಕಳಿಗೆ ರಾಗಿ ಮಾಲ್ಟ್

55 ಲಕ್ಷ ಸರಕಾರಿ ಶಾಲೆ ಮಕ್ಕಳಿಗೆ ರಾಗಿ ಮಾಲ್ಟ್

Leave a Reply Cancel reply

Your email address will not be published. Required fields are marked *

Recommended

ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಜಾಕ್ಪಾಟ್;  ಪರೀಕ್ಷೆ ಇಲ್ಲದೆ ಪಾಸ್‌: ಫೈನಲ್ ಸೆಮಿಸ್ಟರಿಗೆ ಎಕ್ಸಾಮ್

ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಜಾಕ್ಪಾಟ್; ಪರೀಕ್ಷೆ ಇಲ್ಲದೆ ಪಾಸ್‌: ಫೈನಲ್ ಸೆಮಿಸ್ಟರಿಗೆ ಎಕ್ಸಾಮ್

5 years ago
ಮಹಾತ್ಮ ಗಾಂಧೀಜಿ ಅವರಿಗೇ ದಾರಿದೀಪವಾದ ಕುದ್ಮುಲ್ ರಂಗರಾವ್ ಎಂಬ ದೀನ ದಲಿತರ ಸಂತನಿಗೆ ಒಮ್ಮೆ ನಮಿಸೋಣ..

ಮಹಾತ್ಮ ಗಾಂಧೀಜಿ ಅವರಿಗೇ ದಾರಿದೀಪವಾದ ಕುದ್ಮುಲ್ ರಂಗರಾವ್ ಎಂಬ ದೀನ ದಲಿತರ ಸಂತನಿಗೆ ಒಮ್ಮೆ ನಮಿಸೋಣ..

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ