• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

cknewsnow desk by cknewsnow desk
March 6, 2024
in CHIKKABALLAPUR, EDITORS'S PICKS, STATE
Reading Time: 2 mins read
0
ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್
1.8k
VIEWS
FacebookTwitterWhatsuplinkedinEmail

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಸರ್ವೆ ಮಾಡಿ ವರದಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಶಾಸಕರು

by GS Bharath Gudibande

ಗುಡಿಬಂಡೆ: ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್ ಮಾಡುತ್ತಿದ್ದ ತಾಲ್ಲೂಕಿನ ದಪ್ಪರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭತ್ತಲಹಳ್ಳಿ ಗ್ರಾಮದ ಸಮೀಪದ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾನೂನು ಬಾಹಿರವಾಗಿ ಬ್ಲಾಸ್ಟಿಂಗ್ ಮಾಡುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳ‌ ಮನೆಗಳು ಬಿರುಕು ಬಿಡುತ್ತಿವೆ. ಜನ ಜಾನುವಾರುಗಳ ಆರೋಗ್ಯದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಹಾಗೂ ಜಲಮೂಲಗಳು ಕಲುಷಿತ ಆಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿದ್ದವು.

ಈ ಬಗ್ಗೆ ದಪ್ಪರ್ತಿ ಗ್ರಾಮ ಪಂಚಾಯತಿಯಿಂದಲೂ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಶಾಸಕರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ರಸ್ತೆಯಲ್ಲೇ ವೇಸ್ಟ್ ಡಂಪ್; ಶಾಸಕರು ಗರಂ

ಕಲ್ಲು ಗಣಿಗಾರಿಕೆ ಮಾಡುವವರು ಯದ್ವಾತದ್ವಾ ಬ್ಲಾಸ್ಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ, ಅದರಿಂದ ಹೊರಬರುವ ವೇಸ್ಟ್ ಅನ್ನು ರಸ್ತೆಯಲ್ಲಿಯೇ (ಡಂಪ್) ಮಾಡಿದ್ದಾರೆ. ಕಾನೂನು ಬಾಹಿರವಾಗಿ ಮಾಡುತ್ತಿರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ ಎಂದು ಶಾಸಕರು ಕಿಡಿಕಾರಿದರು.

ಇದರಿಂದ ರಸ್ತೆಯಲ್ಲಿ ಜನರು ಸಂಚಾರ ಮಾಡುವುದೇ ಕಷ್ಟವಾಗಿದೆ. ದಾರಿ ಅಪಾಯಕಾರಿಯಾಗಿ ಪರಿಣಮಿಸಿದೆ.

ಈ ಬಗ್ಗೆ ಸ್ಥಳೀಯ ಜನರು ಕೂಡ ಶಾಸಕರಿಗೆ ದೂರುಗಳ ಸರಮಾಲೆಯನ್ನೇ ಸಲ್ಲಿಸಿದರು.

ಸಮೀಕ್ಷೆ ನಡೆಸಿ ವರದಿ ನೀಡಿ

ಸ್ಥಳದಲ್ಲಿ ತಹಶೀಲ್ದಾರ್ ಅವರು ಇದ್ದಾರೆ ಈಗಾಗಲೇ ಅವರಿಗೆ ಸೂಚನೆ ನೀಡಿದ್ದೇನೆ. ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಸಮೀಕ್ಷೆ ಮಾಡಿ ಮಾಹಿತಿ ನೀಡುತ್ತಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಇಲ್ಲಿನ ಪರಿಸ್ಥಿತಿಯ ಬಗ್ಗೆ ಹೇಳಿದ್ದೇನೆ. ಅವರಿಗೂ ಸರ್ವೇ ಮಾಡಿ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳ ವರದಿಯ ಮೆರೆಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು ಶಾಸಕ ಸುಬ್ಬಾರೆಡ್ಡಿ ಅವರು.

ಕಲ್ಲುಗಣಿಗಾರಿಕೆ ಸ್ಥಗಿತಕ್ಕೆ ಮನವಿ

ಅಧಿಕಾರಿಗಳು ಸರಕಾರಿ ಆದೇಶವನ್ನು ಗಾಳಿಗೆ ತೂರಿ ಗ್ರಾಮದ ಪಕ್ಕದಲ್ಲೆ ಗಣಿಗಾರಿಕೆಗೆ ಅನುಮತಿ ನೀಡಿರುವುದು ಸರಿಯಲ್ಲ. ಕೂಡಲೇ ನಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಗಣಿಸಿ ಗಣಿಗಾರಿಕೆಗೆ ನೀಡಿರುವ ಅನುಮತಿ ರದ್ದುಪಡಿಸಬೇಕೆಂದು ಈ ಹಿಂದೆ ಹಲವು ಬಾರಿ ಅಧಿಕಾರಿಗಳಿಗೆ ಗ್ರಾಮಸ್ಥರು ಶಾಸಕರನ್ನು ಒತ್ತಾಯ ಮಾಡಿದ್ದಾರೆ.

ಈ ವೇಳೆ ತಹಶೀಲ್ದಾರ್ ಮನಿಶಾ ಮಹೇಶ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಪ್ಪರ್ತಿ ಗ್ರಾಮ‌ ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು ಸೇರಿದಂತೆ ಅಧಿಕಾರಿಗಳು ಶಾಸಕರ ಜತೆಯಲ್ಲಿದ್ದರು.

ಮಾಸದ ನೆನಪು, ಕಲಿಯದ ಪಾಠ

ಹಿರೇನಾಗವಲ್ಲಿ ಗ್ರಾಮದಲ್ಲಿ ಕಲ್ಲು ಗಣಿಯಲ್ಲಿ ಅಕ್ರಮ ಬ್ಲಾಸ್ಟಿಂಗ್ ಗೆ ಸಂಗ್ರಹ ಮಾಡಿ ಇರಿಸಲಾಗಿದ್ದ ಜಿಲಿಟಿನ್ ಕಡ್ಡಿಗಳು ಸ್ಪೋಟಗೊಂಡು ಆರು ಜನ ಕಾರ್ಮಿಕರು ಧಾರುಣ ಸಾವಿಗೆ ಗುರಿ ಆಗಿದ್ದರು.

ಈ ದುರಂತದಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಾಠ ಕಲಿಯುವ ಹಾಗೆ ಕಾಣುತ್ತಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

Tags: chikkaballapurckcknewsnowgudibandeilligal blastmines and geologymla sn subba reddystone crushersurprise visit
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಭಾರತದ ಮೊದಲ ನದಿಯೊಳಗಿನ ಮೆಟ್ರೋ!

ಭಾರತದ ಮೊದಲ ನದಿಯೊಳಗಿನ ಮೆಟ್ರೋ!

Leave a Reply Cancel reply

Your email address will not be published. Required fields are marked *

Recommended

ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಿಲ್ಲ ಅಡ್ಡಿ

ಇಂದು ತಾಯಿ ಚಾಮುಂಡೇಶ್ವರಿ ದರ್ಶನ ಇಲ್ಲ

2 years ago
ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜ್‌; 500 ಕೋಟಿ ಟೆಂಡರ್‌ ಮೊತ್ತ 800 ಕೋಟಿ ರೂ. ಆಗಿದ್ದೇಕೆ?

ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜ್‌; 500 ಕೋಟಿ ಟೆಂಡರ್‌ ಮೊತ್ತ 800 ಕೋಟಿ ರೂ. ಆಗಿದ್ದೇಕೆ?

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ