• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಕಬ್ಬನ್ ಪಾರ್ಕ್, ಲಾಲ್ ಬಾಗ್ ಸಸಿಗಳಿಗಿಂತ ಕಡೆ ಆಯಿತಾ ಚಿಕ್ಕಬಳ್ಳಾಪುರ-ಕೋಲಾರ ಜನರ ಬದುಕು!?

cknewsnow desk by cknewsnow desk
March 21, 2024
in EDITORS'S PICKS, NATION, STATE
Reading Time: 2 mins read
0
ಅಂತಾರಾಷ್ಟ್ರೀಯ ಮಟ್ಟದ ಅಭಿವೃದ್ಧಿ ಎಂದರೆ ಇದೇನಾ ಡಾ.ಸುಧಾಕರ್‌ ಅವರೇ..?

ಚಿಕ್ಕಬಳ್ಳಾಪುರದ ಅಮಾನಿ ಗೋಪಾಕೃಷ್ಣ ಕೆರೆಯ ಈಗಿನ ಸ್ಥಿತಿ. (ಸಂಗ್ರಹ ಚಿತ್ರ)

1.1k
VIEWS
FacebookTwitterWhatsuplinkedinEmail

ಬೆಂಗಳೂರಿಗೆ ಬೆಣ್ಣೆ, ಚಿಕ್ಕಬಳ್ಳಾಪುರ -ಕೋಲಾರ, ಬೆಂ. ಗ್ರಾಮಾಂತರಕ್ಕೆ ಸುಣ್ಣ!; ವಿಮಾನ ನಿಲ್ದಾಣ, ಕಬ್ಬನ್ ಪಾರ್ಕ್, ಲಾಲ್ ಬಾಗ್ ಸಸಿಗಳಿಗೆ 3ನೇ ಹಂತದ ಶುದ್ಧೀಕರಿಸಿದ ನೀರು!!

ಎತ್ತಿನಹೊಳೆ ಕೆಲವರ ಪಾಲಿಗೆ ಎಟಿಎಂ ಆಗಿದೆ!!

ಚಿಕ್ಕಬಳ್ಳಾಪುರ: ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಕಬ್ಬನ್‌ ಪಾರ್ಕ್, ಲಾಲ್ ಬಾಗ್ ಉದ್ಯಾನವನಗಳ ಸಸಿಗಳಿಗೆ ಮೂರು ಹಂತದ ಶುದ್ಧೀಕರಿಸಿದ ನೀರನ್ನು ಹರಿಸುವ ರಾಜ್ಯ ಸರಕಾರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಕೇವಲ ಎರಡು ಹಂತಗಳ ಶುದ್ಧೀಕರಿಸಿದ ನೀರು ಹರಿಸುತ್ತಿದೆ!

ಬೆಂಗಳೂರು ತ್ಯಾಜ್ಯ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸಿ ಬಯಲು ಸೀಮೆ ಜಿಲ್ಲೆಗಳಿಗೆ ಹರಿಸುವ ಸರಕಾರ, ಅದೇ ಬೆಂಗಳೂರು ವಿಷಯಕ್ಕೆ ಬಂದಾಗ ಎಲ್ಲಾ ಮುನ್ನೆಚ್ಚರಿಕೆಗಳನ್ನೂ ವಹಿಸುತ್ತಿದೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಅವರು ಗಂಭೀರ ಆರೋಪ ಮಾಡಿದರು.

ನೀರಾವರಿ ತಜ್ಞ ಡಾ.ಪರಮಶಿವಯ್ಯ ಅವರ 10ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ ನೀರಾವರಿಗಾಗಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದರು.

ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಹಾಗೂ ಬಯಲು ಸೀಮೆ ಜನರ ಆರೋಗ್ಯವನ್ನು ಕಡೆಗಣಿಸಿ ಎರಡು ಹಂತದಲ್ಲಿ ಶುದ್ಧೀಕರಿಸಿದ ಬೆಂಗಳೂರಿನ ಅರೆ ಸಂಸ್ಕರಿತ ತ್ಯಾಜ್ಯ ನೀರನ್ನು ಹರಿಸುತ್ತಿರುವುದರಿಂದ ನಮ್ಮ ಭಾಗದ ಕೆರೆಗಳು ಜೀವಕಳೆ ಕಳೆದುಕೊಂಡು ನಿರ್ಜೀವಾಗಿವೆ. ಅಲ್ಲದೆ ಅಪಾಯಕಾರಿ ಅಂಶಗಳು ಅಂತರ್ಜಲ ಸೇರಿ ಅದನ್ನೇ ಸೇವಿಸುವ ದುಸ್ಥಿತಿ ಎದುರಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ನೀರಾವರಿಯ ವಿಚಾರದಲ್ಲಿ ಬಯಲು ಸೀಮೆಗೆ ಎಲ್ಲಾ ಸರಕಾರಗಳು ಮತ್ತು ಜನಪ್ರತಿನಿಧಿಗಳು ನಿರಂತರವಾಗಿ ಮೋಸವನ್ನು ಮಾಡುತ್ತಿದ್ದಾರೆ. ಏನನ್ನೂ ಮಾತನಾಡದೆ ರಾಜಕಾರಣಿಗಳ ಪೊಳ್ಳು ಮಾತುಗಳಿಗೆ ಚಪ್ಪಾಳೆ ಹೊಡೆಯುತ್ತಿರುವ ನಮ್ಮ ಜನರು ಇನ್ನಾದರೂ ಎಚ್ಚೆತ್ತುಕೊಂಡು ಸರಕಾರಗಳನ್ನು ಪ್ರಶ್ನಿಸಿ ನೀರಿಗಾಗಿ ಲೋಕಸಭೆ ಚುನಾವಣೆ ನಡೆದಲ್ಲಿ ಮಾತ್ರ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಅವರು ಪ್ರತಿಪಾದಿಸಿದರು.

ಉತ್ತರ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗಗಳಿಗೆ ನದಿಗಳ ನೀರು ಸೀಮಿತ ಎಂಬಂತೆ ವರ್ತಿಸುತ್ತಿರುವ ಸರಕಾರಗಳು ಇನ್ನಾದರೂ ಬಯಲು ಸೀಮೆ ಜಿಲ್ಲೆಗಳು ರಾಜ್ಯ ಅವಿಭಾಜ್ಯ ಅಂಗ ಎಂಬುದನ್ನು ಗುರುತಿಸಿ ನೀರಾವರಿ ಯೋಜನೆಗಳನ್ನು ರೂಪಿಸಬೇಕು. ಜತೆಗೆ ಕೆರೆಗಳ ಪುನಶ್ಚೇತನಕ್ಕೆ ಪ್ರತ್ಯೇಕ ಪ್ಯಾಕೇಜ್ ಘೋಷಣೆ ಮಾಡುವುದು, ಸಂಸ್ಕರಿತ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸಿ ಈ ಜಿಲ್ಲೆಗಳಿಗೆ ಹರಿಸಬೇಕೆಂದು ಅವರು ಒತ್ತಾಯಿಸಿದರು.

ಎತ್ತಿನಹೊಳೆ ಎಂಬ ಎಟಿಎಂ

ಕಳೆದ 10 ವರ್ಷಗಳ ಹಿಂದೆ ಶಿಲಾನ್ಯಾಸಗೊಂಡ ಎತ್ತಿನಹೊಳೆ ಎಂಬ ಎಟಿಎಂ ಯೋಜನೆಯ ಗಾತ್ರವು ₹8,000 ಸಾವಿರ ಕೋಟಿಯಿಂದ ₹24,000 ಕೋಟಿ ಏರಿಕೆಯಾಗಿರುವುದು ಅದರ ಸಾಧನೆಯೇ ಹೊರತು ಹನಿನೀರು ಹರಿಸುವಲ್ಲಿ ಸರಕಾರಗಳು ವಿಫಲವಾಗಿವೆ ಎಂದು ಅವರು ನೇರ ಆರೋಪ ಮಾಡಿದರು.

ಬಯಲು ಸೀಮೆಗೆ ನೀರು ಒದಗಿಸುವಲ್ಲಿ ಎಲ್ಲಾ ನಾಯರಕರೂ ಹೇಳಿದ್ದ ಮಾತುಗಳು ಸಂಪೂರ್ಣ ಹುಸಿಯಾಗಿವೆ. ಇದನ್ನು ಪ್ರಶ್ನಿಸುವ ಹೋರಾಟಗಾರರ ವಿರುದ್ಧವೇ ದಾವೆಗಳನ್ನು ಹೂಡಿ ಖಳನಾಯಕರಂತೆ ಚಿತ್ರಿಸಲಾಗುತ್ತಿದೆ ಎಂದು ಅವರು ಕಿಡಿಕಾರಿದರು.

ಪ್ರದೀಪ್ ಈಶ್ವರ್ ಪ್ರತಾಪ ಎಲ್ಲಿ?

ಶಾಸಕರಾಗುವುದಕ್ಕೆ ಮೊದಲು ಬೆಂಗಳೂರು ತ್ಯಾಜ್ಯ ನೀರು ಅನಾಹುತಕಾರಿ, ವಿಷಕಾರಿ ಎಂದು ವಿಡಿಯೋ ಮೇಲೆ ವಿಡಿಯೋ ಮಾಡಿದ್ದ ಶಾಸಕ ಪ್ರದೀಪ್ ಈಶ್ವರ್ ಈಗ ಮಾಡುತ್ತಿರುವುದೇನು ಎಂದು ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಮುಖ್ಯಸ್ಥ ಸಂದೀಪ್ ಬಿ.ರೆಡ್ಡಿ ಕಿಡಿಕಾರಿದರು.

ಚುನಾವಣೆಗೆ ಮೊದಲು ಶಾಸಕರು ಮಾತೆತ್ತಿದರೆ ಕೊಳಚೆ ನೀರು, ಬಚ್ಚಲು ನೀರು ಎಂದು ಕೂಗಾಡುತ್ತಿದ್ದವರು ಈಗ ಮೌನವಾಗಿದ್ದಾರೆ, ಏಕೆ? ಕಾಂಗ್ರೆಸ್ ಸರಕಾರದ ಮೊದಲ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವೇ ಇಲ್ಲ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಬಯಲು ಸೀಮೆಗೆ ಶುದ್ಧ ನೀರು ಕೊಡಬೇಕು ಎನ್ನುವ ನಿಟ್ಟಿನಲ್ಲಿ ಡಾ.ಪರಮಶಿವಯ್ಯ ಅವರು ಪಟ್ಟ ಶ್ರಮ, ಅವರ ಬದ್ಧತೆ, ದೂರದೃಷ್ಟಿ ಬಗ್ಗೆ ಸಭೆಯಲ್ಲಿ ಸ್ಮರಿಸಲಾಯಿತು. ಬಯಲು ಸೀಮೆಗೆ ನದಿ ಮೂಲಗಳಿಂದ ನೀರು ಹರಿದಾಗಲೇ ಡಾ.ಪರಮಶಿವಯ್ಯ ಅವರ ಕನಸು ಸಾಕಾರವಾಗುತ್ತದೆ ಎಂದು ಮುಖಂಡರು ಹೇಳಿದರು.

ಸಭೆ ಆರಂಭ ಆಗುವುದಕ್ಕೂ ಮೊದಲು ಹೋರಾಟಗಾರರು ಬೈಕ್ ಜಾಥಾ ನಡೆಸಿದರು.

ದಲಿತ ಸಂಘಟನೆಯ ಬಿ.ಎನ್.ಗಂಗಾಧರ್, ಶಾಶ್ವತ ನೀರಾವರಿ ಸಮಿತಿಯ ಮಳ್ಳೂರು ಹರೀಶ್, ಸುಷ್ಮಾ ಶ್ರೀನಿವಾಸ್, ಆಯಿಷಾ ಸುಲ್ತಾನ, ಪ್ರಭಾ ನಾರಾಯಣಗೌಡ, ನವೀನ್, ರವಿಕುಮಾರ್, ತಿಪ್ಪೇನಹಳ್ಳಿ ನಾರಾಯಣಸ್ವಾಮಿ, ಮುನಿರೆಡ್ಡಿ, ದೇವರಾಜ್, ಲೋಕೇಶ್‌ಗೌಡ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

Tags: Bengaluruchikkaballapurckcknewsnowdr gs paramashivaiahhn valleykc valleywaste water
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅರಮನೆಯಲ್ಲಿ ಆರಾಮಾಗಿರುವ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ಸಂತೋಷ!

ಅರಮನೆಯಲ್ಲಿ ಆರಾಮಾಗಿರುವ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ಸಂತೋಷ!

Leave a Reply Cancel reply

Your email address will not be published. Required fields are marked *

Recommended

ಖಾಸಗಿ ಸೀಡ್ಸ್ ಕಂಪನಿ ಕೊಟ್ಟ ಬಾಳೆ ತಳಿ ಅದಲು ಬದಲು; ರೈತ ಕಂಗಾಲು

ಖಾಸಗಿ ಸೀಡ್ಸ್ ಕಂಪನಿ ಕೊಟ್ಟ ಬಾಳೆ ತಳಿ ಅದಲು ಬದಲು; ರೈತ ಕಂಗಾಲು

5 years ago
ಪುನೀತ್ ಅವರಿಗೆ ಮರಣೋತ್ತರ ಸಹಕಾರ ರತ್ನ

ನವೆಂಬರ್ 1ಕ್ಕೆ ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ