• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 2 ಹಂತ; ಏಪ್ರಿಲ್ 26 – ಮೇ 7ರಂದು ಮತದಾನ

cknewsnow desk by cknewsnow desk
March 16, 2024
in ELECTION2024, NATION, NEWS IN USE, POLITICS, STATE
Reading Time: 2 mins read
0
ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 2 ಹಂತ; ಏಪ್ರಿಲ್ 26 – ಮೇ 7ರಂದು ಮತದಾನ
937
VIEWS
FacebookTwitterWhatsuplinkedinEmail

ಜೂನ್ 4ರಂದು ಲೋಕಸಭೆ ಫಲಿತಾಂಶ; ಸುರಪುರ ವಿಧಾನಸಭೆ ಕ್ಷೇತ್ರಕ್ಕೂ ಉಪ ಚುನಾವಣೆ

ರಾಜ್ಯದಲ್ಲಿ ಎರಡು ಹಂತ ಎಂದು ಮೊದಲೇ ವರದಿ ಮಾಡಿದ್ದ ಸಿಕೆನ್ಯೂಸ್‌ ನೌ

ಬೆಂಗಳೂರು: ಲೋಕಸಭೆ ಚುನಾವಣೆ ದಿನಾಂಕಗಳು ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಮತ್ತು ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್ ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಹಾಗೂ ಉತ್ತರ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ನಿನ್ನೆಯೇ ಸಿಕೆನ್ಯೂಸ್‌ ನೌ ವರದಿ ಮಾಡಿತ್ತು..

ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕ್ಷಣಗಣನೆ; ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

ಮೊದಲ ಹಂತದ 14 ಕ್ಷೇತ್ರಗಳು

ಮೊದಲ ಹಂತದಲ್ಲಿ ಏಪ್ರಿಲ್ 26ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು-ಕೊಡಗು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಸೇರಿವೆ.

ಕರ್ನಾಟಕದಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಮಾರ್ಚ್ 28 ರಂದು ಹೊರ ಬೀಳಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.

ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಏಪ್ರಿಲ್ 5 ರಂದು ನಡೆಯಲಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ಏಪ್ರಿಲ್ 8 ಕೊನೆಯ ದಿನವಾಗಿದೆ. ಏಪ್ರಿಲ್ 26 ರಂದು ಮತದಾನ ನಿಗದಿಯಾಗಿದೆ.

ಎರಡನೇ ಹಂತದ 14 ಕ್ಷೇತ್ರಗಳು

ಎರಡನೇ ಹಂತದಲ್ಲಿ ಮೇ 7 ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಬೀದರ್, ಚಿಕ್ಕೋಡಿ, ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾವೇರಿ-ಗದಗ, ದಾವಣಗೆರೆ, ಶಿವಮೊಗ್ಗ, ಧಾರವಾಡ, ಉತ್ತರ ಕನ್ನಡ ಸೇರಿವೆ.

ಇದರೊಂದಿಗೆ ಮೇ 7 ರಂದು ಎರಡನೇ ಹಂತದಲ್ಲಿ ನಡೆಯುವ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲೇ ಶಾಸಕ ರಾಜಾವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿರುವ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯೂ ನಡೆಯಲಿದೆ.

ಕರ್ನಾಟಕದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಅಧಿಸೂಚನೆ ಏಪ್ರಿಲ್ 12 ರಂದು ಹೊರಬೀಳಲಿದ್ದು, ನಾಮಪತ್ರ ಸಲ್ಲಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಏಪ್ರಿಲ್ 20 ರಂದು ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏಪ್ರಿಲ್ 22 ಕೊನೆಯ ದಿನವಾಗಿದೆ. ಮೇ 7ರಂದು ಮತದಾನ ನಡೆಯಲಿದೆ.

2ನೇ ಹಂತದಲ್ಲಿ ಅಂದರೆ; ಏಪ್ರಿಲ್‌ 26ಕ್ಕೆ ಚಿಕ್ಕಬಳ್ಳಾಪುರ, ಕೋಲಾರ ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್‌ – 04 (ಗುರುವಾರ) ನಾಮಪತ್ರ ಸಲ್ಲಿಕೆ ಆರಂಭ. ಏಪ್ರಿಲ್‌ – 08 (ಸೋಮವಾರ) ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಕೊನೆದಿನವಾಗಿದೆ. ಏಪ್ರಿಲ್‌ – 26 (ಶುಕ್ರವಾರ) ಮತದಾನ ನಡೆಯಲಿದೆ. ಜೂನ್‌ – 4 (ಮಂಗಳವಾರ) ರಂದು ಮತ ಎಣಿಕೆ ನಡೆಯಲಿದೆ.

ದೇಶಾದ್ಯಂತ 7 ಹಂತ

ರಾಷ್ಟ್ರಾದ್ಯಂತ 543 ಲೋಕಸಭೆ ಕ್ಷೇತ್ರಗಳಿಗೆ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲನೇ ಹಂತ ಏಪ್ರಿಲ್ 19 ಮತ್ತು ಎರಡನೇ ಹಂತ ಏಪ್ರಿಲ್ 26, ಮೂರನೇ ಹಂತ ಮೇ 7, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 25 ಮತ್ತು ಏಳನೇ ಹಾಗೂ ಕೊನೆಯ ಹಂತ ಜೂನ್ 1ರಂದು ಮತದಾನ ನಡೆಯಲಿದೆ.

ಒಟ್ಟು 96.8 ಕೋಟಿ ಮತದಾರರಿದ್ದು, ಪುರುಷ ಮತದಾರರ ಸಂಖ್ಯೆ 49.71 ಕೋಟಿಯಾಗಿದ್ದು, ಮಹಿಳಾ ಮತದಾರರ ಸಂಖ್ಯೆ 47.1 ಕೋಟಿಯಾಗಿದೆ. 1.8 ಕೋಟಿ ಹೊಸ ಮತದಾರರು ಈ ಬಾರಿ ಮತದಾನದ ಹಕ್ಕು ಪಡೆದಿದ್ದಾರೆ.

ಚುನಾವಣೆ ಕಾರ್ಯಕ್ಕೆ 1.5 ಕೋಟಿ ಸಿಬ್ಬಂದಿ ನೇಮಕವಾಗಲಿದ್ದಾರೆ. ಕೇಂದ್ರ ಚುನಾವಣೆ ಆಯೋಗವು ದೇಶಾದ್ಯಂತ ಒಟ್ಟು 2,100 ಮುಖ್ಯ ಚುನಾವಣಾ ವೀಕ್ಷಕರನ್ನು ನೇಮಿಸಿದೆ.

85 ವರ್ಷ ಮೀರಿದ ಮತದಾರರು ಮತಗಟ್ಟೆಗೆ ಬರಲು ಸಾಧ್ಯವಾಗದೆ, ಮನೆಯಿಂದಲೇ ಮತದಾನ ಮಾಡಲು ಇಚ್ಛಿಸಿದರೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗುವುದು.

ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿಶೇಷಚೇತನರಿಗೆ ರ‍್ಯಾಂಪ್, ಗಾಲಿ ಕುರ್ಚಿ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.

ಮತದಾರರಿಗೆ ಆಮಿಷ ಒಡ್ಡಿದರೆ ಕಠಿಣ ಕ್ರಮ

ಚುನಾವಣೆಯ ಮಾರ್ಗಸೂಚಿಗಳ ಪಾಲನೆ ಬಗ್ಗೆ ನಿಗಾ ವಹಿಸಲು ಈ ಬಾರಿ ಡ್ರೋನ್ ಬಳಸಲಾಗುತ್ತಿದೆ. ಮತದಾರರಿಗೆ ಆಮಿಷ ಒಡ್ಡುವಂತಹ ಉಡುಗೊರೆ ನೀಡುವುದು, ಫೋನ್ ಪೇ ಮತ್ತು ಗೂಗಲ್ ಪೇ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು.

ಮಾದರಿ ನೀತಿ ಸಂಹಿತೆ ಈ ಕೂಡಲೇ ಜಾರಿಗೆ ಬಂದಿದ್ದು, ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸುವಂತೆ ರಾಜಕೀಯ ಪಕ್ಷಗಳಿಗೆ ಆಯೋಗ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮಾರ್ಚ್ʼನಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ; ರಾಜ್ಯದಲ್ಲಿ ಎರಡು ಹಂತದ ಮತದಾನ?

ಚುನಾವಣಾ ಬಾಂಡ್‌ ವ್ಯವಹಾರ; ಬಿಜೆಪಿ ಅತಿದೊಡ್ಡ ಫಲಾನುಭವಿ!

Leave a Reply Cancel reply

Your email address will not be published. Required fields are marked *

Recommended

ಗುಡುಗಿದ ಕುಮಾರಸ್ವಾಮಿ; ವಿದ್ಯುತ್‌ ದರ ಏರಿಕೆ ಇಲ್ಲ ಎಂದ ಸರಕಾರ

ಗುಡುಗಿದ ಕುಮಾರಸ್ವಾಮಿ; ವಿದ್ಯುತ್‌ ದರ ಏರಿಕೆ ಇಲ್ಲ ಎಂದ ಸರಕಾರ

3 years ago
ಬಾಗೇಪಲ್ಲಿ ಅಸೆಂಬ್ಲಿ ಟಿಕೆಟ್ ಕೊಟ್ಟರೆ ಗೆದ್ದು ತೋರಿಸುವೆ ಎಂದ MLC ರಮೇಶ್ ಗೌಡ

ಬಾಗೇಪಲ್ಲಿ ಅಸೆಂಬ್ಲಿ ಟಿಕೆಟ್ ಕೊಟ್ಟರೆ ಗೆದ್ದು ತೋರಿಸುವೆ ಎಂದ MLC ರಮೇಶ್ ಗೌಡ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ