• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

DMK ಪಕ್ಷಕ್ಕೆ ದೇವೇಗೌಡರ ಸಡ್ಡು; ಮೇಕೆದಾಟು ಕಟ್ಟುತ್ತೇವೆ ಎಂದು JDS ಪ್ರಣಾಳಿಕೆಯಲ್ಲಿ ಹಾಕುತ್ತೇವೆ, ಕಾಂಗ್ರೆಸ್‌ & ಬಿಜೆಪಿಯೂ ಹಾಕಲಿ

cknewsnow desk by cknewsnow desk
March 24, 2024
in NATION, STATE
Reading Time: 2 mins read
0
ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ
971
VIEWS
FacebookTwitterWhatsuplinkedinEmail

ಬಿಜೆಪಿ, ಕಾಂಗ್ರೆಸ್ ಸೇರಿ ರಾಜ್ಯದ ಎಲ್ಲಾ ಪಕ್ಷಗಳು ಪ್ರಣಾಳಿಕೆಯಲ್ಲಿ ಮೇಕೆದಾಟು ಬೆಂಬಲಿಸಲಿ; ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸಲಿ

ಬೆಂಗಳೂರು: ರಾಜ್ಯಕ್ಕೆ ಅತ್ಯಗತ್ಯವಾಗಿ ಬೇಕಿರುವ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ತನ್ನ ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿಯೇ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಮಾಜಿ ಪ್ರಧಾನಿಗಳು ಹಾಗೂ ಜಾತ್ಯತೀತ ಜನತಾದಳ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ.

ಅಲ್ಲದೆ; ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆಯನ್ನು ಬೆಂಬಲಿಸಿ ಅದನ್ನು ಕಾರ್ಯಗತಗೊಳಿಸುವ ಅಚಲ ನಿರ್ಧಾರವನ್ನು ಇದೇ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಸೇರಿ ಎಲ್ಲಾ ಪಕ್ಷಗಳು ದೃಢ ಹೆಜ್ಜೆಯನ್ನು ಇಡಲಿ ಎಂದು ಮಾಜಿ ಪ್ರಧಾನಿಗಳು ಆಗ್ರಹಪಡಿಸಿದರು.

ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿಗಳು; ತಮಿಳುನಾಡಿನ ಮುಖ್ಯಮಂತ್ರಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ವಿರೋಧಿ ಅಂಶವನ್ನು ಸೇರಿಸುವುದನ್ನು ಜೆಡಿಎಸ್ ಖಂಡಿಸುತ್ತದೆ. ನಾವು ಕೂಡ ಜೆಡಿಎಸ್ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಬೆಂಬಲಿಸಿ ಆ ಕುಡಿಯುವ ನೀರಿನ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಜನರಿಗೆ ತಿಳಿಸುತ್ತೇವೆ ಎಂದು ಗುಡುಗಿದರು.

ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ

ಇಂತಹ ಬೆದರಿಕೆಗಳಿಗೆ ಯಾವುದೇ ರೀತಿಯ ಭಯ ಪಡಬೇಕಾಗಿಲ್ಲ. ಚುನಾವಣೆ ಮುಗಿದ ಮೇಲೆ ಮೇಕೆದಾಟು ಅಣೆಕಟ್ಟು ಕಟ್ಟಲು ನಾನೊಬ್ಬನೇ ಅಲ್ಲ, ರಾಜ್ಯ ಸರಕಾರ, ಮುಖ್ಯಮಂತ್ರಿಗಳು, ಬಿಜೆಪಿ ನಾಯಕರಾದ ಯಡಿಯೂರಪ್ಪ ಸಮೇತ ಹೋರಾಟ ಮಾಡೋಣ. ಅದಕ್ಕೂ ಮೊದಲು ಮೇಕೆದಾಟು ಕಟ್ಟಲು ಮ್ಯಾನಿಫೆಸ್ಟೋದಲ್ಲಿ ಹಾಕೋಣ ಹಾಗೂ ಆ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರಿಗೆ ಭರವಸೆ ನೀಡೋಣ. ಡಿಎಂಕೆ ಮಿತ್ರಪಕ್ಷವಾದ ಕಾಂಗ್ರೆಸ್ ಕೂಡ ಮೇಕೆದಾಟು ಯೋಜನೆ ಬೆಂಬಲಿಸಿ ಪ್ರಣಾಳಿಕೆಯಲ್ಲಿ ಜನತೆಗೆ ಭರವಸೆ ನೀಡಲಿ ಎಂದು ಮಾಜಿ ಪ್ರಧಾನಿಗಳು ಆಗ್ರಹಪಡಿಸಿದರು.

ತಮಿಳುನಾಡು ಪರ ವಕೀಲ ಶೇಖರ್ ನಫಾರ್ಡ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸುವಾಗ ಮೇಕೆದಾಟು ಅಣೆಕಟ್ಟು ಕಟ್ಟಲಿ. ನಮ್ಮದೇನೂ ಅಭ್ಯಂತರ ಇಲ್ಲ ಎಂದು ಹೇಳಿದ್ದಾರೆ. ಅದರಿಂದ ನಾನು ರಾಜ್ಯ ಸರಕಾರಕ್ಕೆ ಮನವಿ ಮಾಡುತ್ತೇನೆ. ಡಿಎಂಕೆ ಅವರು ಪ್ರಣಾಳಿಕೆಯಲ್ಲಿ ಮೇಕೆದಾಟು ವಿರೋಧಿ ನಿಲುವು ಪ್ರಕಟಿಸದಂತೆ, ಇವರು ಕೂಡ ಪ್ರಣಾಳಿಕೆಯಲ್ಲಿ ಮೇಕೆದಾಟು ಪರವಾಗಿ ನಿಲುವು ಪ್ರಕಟಿಸಲಿ ಎಂದರು ಅವರು.

ನಾನು ದೆಹಲಿಗೆ ಯಾಕಾಗಿ ಹೋದೆ? ಮೇಕೆದಾಟು ಮಾಡಲು ಬಿಡೋದೇ ಇಲ್ಲ ಅಂತಾರೆ. ನಾವು ನಮ್ಮ ಮ್ಯಾನಿಫೆಸ್ಟೋದಲ್ಲಿ ಹಾಕ್ತೀವಿ. ಮೇಕೆದಾಟು ನಮ್ಮ ರಾಜ್ಯದಲ್ಲಿದೆ. ಇದರಲ್ಲಿ ಎರಡನೇ ಮಾತಿಲ್ಲ ಎಂದು ಅವರು ನೇರ ಮಾತುಗಳಲ್ಲಿ ಹೇಳಿದರು.

ಸಿದ್ದರಾಮಯ್ಯ ಬಜೆಟ್ ನಲ್ಲೇ ಮೇಕೆದಾಟುಗೆ ಅವಕಾಶ ಮಾಡಿದ್ದಾರೆ

ನಮ್ಮ ಪ್ರಣಾಳಿಕೆಯಲ್ಲಿ ಮೇಕೆದಾಟು ಪ್ರವಾದ ಅಂಶ ಸೇರಿಸುತ್ತೇವೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯದ ಬಗ್ಗೆ ರಾಜಿ ಮಾಡಿಕೊಳ್ಳುವ ಪ್ರಶ್ನೆ ಬರುವುದೇ ಇಲ್ಲ. ಆದರೆ, ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿಯೇ ಮೇಕೆದಾಟು ಯೋಜನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಿಜೆಪಿ ಕೂಡ ಪ್ರಣಾಳಿಕೆಯಲ್ಲಿ ಹಾಕಲಿ. ನಾವು ಮೂರು ಪಕ್ಷಗಳು ಒಟ್ಟುಗೂಡಿಯೇ ಹೋರಾಡಬೇಕು. ದೇವೇಗೌಡರು ಒಬ್ಬರು ಮಾತ್ರ ವೈಯಕ್ತಿಕವಾಗಿ ಹೆಸರು ತಗೋಬೇಕಿಲ್ಲ ಎಂದು ತಿಳಿಸಿದರು ದೇವೇಗೌಡರು.

ಪರಿಸರ ನಿಪುಣರಿಗೆ ಕಿವಿಮಾತು

ಇದು ಕಾಂಗ್ರೆಸ್, ಬಿಜೆಪಿ, ಡಿಎಂಕೆ ಅಥವಾ ಯಾವ ಪಕ್ಷದ ಯೋಜನೆ ಅಲ್ಲ. ಜನಪರವಾದ ಯೋಜನೆ. ಕುಡಿಯುವ ನೀರಿಗಾಗಿ ಜನ ಸಮಸ್ಯೆಗೆ ಒಳಗಾಗಿದ್ದಾರೆ. ಕಾವೇರಿ ಕೊಳ್ಳದ ಒಂಬತ್ತು ಜಿಲ್ಲೆಗಳಲ್ಲಿ ಜಲ ಸಂಕಷ್ಟ ಎದುರಾಗಿದೆ. ನಾನು ಕೈ ಮುಗಿದು ಎಲ್ಲರಿಗೂ ಮನವಿ‌ ಮಾಡುತ್ತೇನೆ. ಮೇಕೆದಾಟು ಯೋಜನೆಯಿಂದ ಐದು ಸಾವಿರ ಎಕರೆ ಮುಳುಗಡೆ ಆಗಲ್ಲ. ಈ ಅಂಶವನ್ನು ಪರಿಸರ ನಿಪುಣರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿಗಳು ಕೋರಿದರು.

ಅಧಿಕಾರಿಗಳು, ನೀರಾವರಿ ತಜ್ಞರು ಮೇಕೆದಾಟು ಯೋಜನೆಯಿಂದ 30 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ. ಈ ಯೋಜನೆಯ ಬಗ್ಗೆ 2018ರಲ್ಲಿಯೆ ಕೇಂದ್ರ ಸರ್ಕಾರ ಈ ಯೋಜನೆಯ ಕಾರ್ಯ ಸಾಧ್ಯತೆಯ ವರದಿಯನ್ನು ಕೇಂದ್ರೀಯ ಜಲ ಆಯೋಗಕ್ಕೆ ಸಲ್ಲಿಸಿತ್ತು. ಈ ವರದಿಯನ್ನು ಒಪ್ಪಿದ ನಂತರ ಸಮಗ್ರ ಯೋಜನಾ ವರದಿ (DPR) ಸಲ್ಲಿಸುವಂತೆ ರಾಜ್ಯಕ್ಕೆ ಸೂಚಿಸಿತ್ತು. ಅದರಂತೆ 2019ರಲ್ಲಿ ರಾಜ್ಯ ಸರ್ಕಾರ DPR ಸಲ್ಲಿಸಿದೆ. ಇದಕ್ಕೆ ಪ್ರಧಾನಮಂತ್ರಿಗಳು ಅನುಮತಿ ಕೊಡಿಸಬೇಕು ಹಾಗೂ ಈ ಮೇಕೆದಾಟು ಯೋಜನೆ ವಿಷಯದಲ್ಲಿ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು ಎಂದು ಮಾಜಿ ಪ್ರಧಾನಿಗಳು ಮನವಿ ಮಾಡಿಕೊಂಡರು.

ಪ್ರಧಾನಿ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಶೇಖಾವತ್ ಅವರಿಗೆ ವಿವರವಾಗಿ ಮೇಕೆದಾಟು ಯೋಜನೆ ಬಗ್ಗೆ ಪತ್ರ ಬರೆದಿದ್ದೇನೆ. ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಗೆ ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ. ತಮಿಳುನಾಡಿಗೆ ನೀರು ಬಿಡುವುದನ್ನು ನಿಯಂತ್ರಿಸಬೇಕು ಎಂದು ಪತ್ರ ಬರೆದಿದ್ದೇನೆ ಎಂದು ಇದೇ ವೇಳೆ ಅವರು ಮಾಹಿತಿ ನೀಡಿದರು.

ರಾಜಕೀಯ ಬೇರೆಸಬೇಡಿ; ನೀರಿಲ್ಲದೆ ಜನರು ಮನೆ ಬಿಟ್ಟು ಹೋಗುತ್ತಿದ್ದಾರೆ

ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಕೀಯ ಆನಗತ್ಯ. ಯಾರೂ ಇದರಲ್ಲಿ ರಾಜಕೀಯ ಬೆರೆಸಬೇಡಿ. ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕು. ಮಾನವೀಯತೆಯಿಂದ ಮೇಕೆದಾಟು ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು. ಇಲ್ಲಿ ರಾಜ್ಯ ಸರಕರದ ವೈಫಲ್ಯ ಅಂತಲ್ಲ. ತಮಿಳುನಾಡು ರಾಜ್ಯದವರು ಪ್ರತೀ ದಿ‌ನ ಕೋರ್ಟಿಗೆ ಪಿಟಿಷನ್ ಹಾಕ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು ಮಾಜಿ ಪ್ರಧಾನಿಗಳು.

ಕಾವೇರಿ ಕೊಳ್ಳದ 9 ಜಿಲ್ಲೆಯ 22 ತಾಲೂಕು, ಬೆಂಗಳೂರು ನಗರವೂ ಸೇರಿ ಅನೇಕ ಕಡೆ ಕುಡಿಯುವ ನೀರಿನ ಸಮಸ್ಯೆ ತುಂಬಾ ಭೀಕರವಾಗಿದೆ. ಕಳೆದ ಐದು ದಿನಗಳಿಂದ ಕೆಲವರು ಮನೆಗಳಿಗೆ ಬೀಗ ಹಾಕಿ ವಲಸೆ ಹೋಗಿದ್ದಾರೆ. ಕುಡಿಯಲು ನೀರಿಲ್ಲ, ಈ ಭೀಕರ ಸಮಸ್ಯೆಗೆ ಪರಿಹಾರ ಒದಗಿಸಲು ರಾಜ್ಯ ಸರಕಾರದಿಂದ ಸಾಧ್ಯವಾಗಿಲ್ಲ. ಹೀಗಾಗಿ ಜನರು ತಮ್ಮ ಮನೆಗಳಿಗೆ ಬೀಗ ಹಾಕಿ ಬೇರೆ ಊರುಗಳಿಗೆ ಹೋಗ್ತಿದ್ದಾರೆ ಎಂದು ರಾಜ್ಯದ ಜಲ ಸಂಕಷ್ಟವನ್ನು ಎಳೆಎಳೆಯಾಗಿ ಬಿಡಿಸಿಟ್ಟರು ಮಾಜಿ ಪ್ರಧಾನಿಗಳು.

ತಮಿಳುನಾಡು ಸಿಎಂ ಬಹಳ ಕಠೋರವಾದ ನಿಲುವು ತೆಗೆದುಕೊಂಡಿದ್ದಾರೆ. ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಕರ್ನಾಟಕಕ್ಕೆ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡಲ್ಲ ಅಂತಾ ಕಠಿಣವಾದ ಅಂಶ ಸೇರಿಸಿದ್ದಾರೆ. ನಾನೂ ಬೇರೆ ಶಬ್ದ ಬಳಕೆ ಮಾಡಬಹುದು. ಆದರೆ ‘ಕಠಿಣವಾದ’ ಎನ್ನುವ ಪದವನ್ನಷ್ಟೇ ತೆಗೆದುಕೊಂಡಿದ್ದೇನೆ ಎಂದು ಖಾರವಾಗಿ ತಿರುಗೇಟು ಕೊಟ್ಟ ಅವರು; 1964ರಲ್ಲಿ ವಿಧಾನಸಭೆಯಲ್ಲಿ‌ ಒಂದು ಖಾಸಗಿ ನಿರ್ಣಯ ಮಂಡನೆ ಮಾಡಿದ್ದೆ ನಾನು. ನಮ್ಮ ರಾಜ್ಯದ ಸಂಪನ್ಮೂಲಗಳಿಂದ ಹೇಮಾವತಿ, ಹಾರಂಗಿ, ಕಬಿನಿ ಯೋಜನೆಗಳನ್ನು ಕಾರ್ಯಗತ ಮಾಡಬೇಕು ಎಂದು ನಾನು ವಾದ ಮಂಡನೆ ಮಾಡಿದ್ದೆ. ಅದು ಸಾಧ್ಯ ಆಯಿತು. ಇದನ್ನು ಅವರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕರ್ನಾಟಕ-ತಮಿಳುನಾಡು ಬಾಂಧವ್ಯ ವೃದ್ಧಿಗೆ ಯಡಿಯೂರಪ್ಪ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು

ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ತಮಿಳುನಾಡಿನ ಜತೆ ಸಂಬಂಧ ವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ, ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳನ್ನು ಸ್ಥಾಪಿಸಿ ಒಳ್ಳೆಯ ಬಾಂಧವ್ಯಕ್ಕೆ ನಾಂದಿ ಹಾಡಿದ್ದರು. ಅವರೂ ಚೆನ್ನೈಗೆ ಹೋಗಿ ಸರ್ವಜ್ಞರ ಪ್ರತಿಮೆಯನ್ನು ಅನಾವರಣ ಮಾಡಿದ್ದರು. ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಕರುಣಾನಿಧಿ ಅವರು ಬೆಂಗಳೂರಿಗೆ ಬಂದು ತಿರುವಳ್ಳುವರ್ ಅವರ ಪುತ್ತಳಿಯನ್ನು ಲೋಕಾರ್ಪಣೆ ಮಾಡಿದ್ದರು. ಎರಡೂ ರಾಜ್ಯಗಳ ಸಂಬಂಧದ ವಿಚಾರದಲ್ಲಿ ಅದೊಂದು ಒಳ್ಳೆಯ ಸಂದರ್ಭ ಎಂದು ಮಾಜಿ ಪ್ರಧಾನಿಗಳಾದ ದೇವೇಗೌಡರು ಉಲ್ಲೇಖ ಮಾಡಿದರು.

ಸಮಸ್ಯೆ ಬಂತು ಎಂದಾಕ್ಷಣ ಸಂಘರ್ಷಕ್ಕೆ ಇಳಿಯಬೇಕಿಲ್ಲ. ಮಾತುಕತೆ ಮೂಲಕವೂ ಬಗೆಹರಿಸಿಕೊಳ್ಳಬಹುದು. ಇದನ್ನು ನೆರೆ ರಾಜ್ಯ ಅರ್ಥ ಮಾಡಿಕೊಳ್ಳಬೇಕು. ಜನರು ಯಾವ ಸಂಕ್ಷಟದಲ್ಲಿ ಇದ್ದಾರೆ ಎಂಬುದನ್ನು ಅವರು ನೋಡಬೇಕು ಎಂದು ಮಾಜಿ ಪ್ರಧಾನಿಗಳು ಪ್ರತಿಪಾದಿಸಿದರು.

ಮೈತ್ರಿಯಿಂದ ಸಮಸ್ಯೆ ಇಲ್ಲ

ಬಿಜೆಪಿ ಜತೆ ಮೈತ್ರಿಯಿಂದ ನಮಗೆ ಸಮಸ್ಯೆ ಇಲ್ಲ. ನಮಗೆ ಮೂರು ಸೀಟು ಕೊಟ್ಟಿದ್ದಾರೆ. ನನ್ನನ್ನು, ಕುಮಾರಸ್ವಾಮಿ ಹಾಗೂ ಜಿಟಿ ದೇವೇಗೌಡರನ್ನು ತಾರಾ ಪ್ರಚಾರಕರನ್ನಾಗಿ (ಸ್ಟಾರ್ ಕ್ಯಾಂಪೇನರ್) ಆಗಿ ಪಟ್ಟಿಗೆ ಸೇರಿಸಿದ್ದಾರೆ. ಇವತ್ತಷ್ಟೇ ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ. ಸಿ ಎನ್
ಮಂಜುನಾಥ್ ಅವರ ಪರ ನಾವೆಲ್ಲಾ ಪ್ರಚಾರ ಮಾಡ್ತೀವಿ. ಮಂಡ್ಯದಲ್ಲಿ ಏನೂ ಸಮಸ್ಯೆ ಇಲ್ಲ ಎಂದರು ಮಾಜಿ ಪ್ರಧಾನಿಗಳು.

ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡರು, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ, ಪಕ್ಷದ ಕಾನೂನು ಘಟಕದ ಅಧ್ಯಕ್ಷ ಎ ಪಿ ರಂಗನಾಥ್, ಡಾ.ಸುಧಾಕರ್ ಶೆಟ್ಟಿ ಇತರರು ಉಪಸ್ಥಿತರಿದ್ದರು.

Tags: cauveryckcknewsnowdmkdrinking waterhd devegowdajdskarnatakaMekedatu projecttamilnadu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು?; ಸೋಮವಾರ ಸಂಜೆಯೊಳಗೆ ಹೆಚ್.ಡಿ.ಕುಮಾರಸ್ವಾಮಿ ನಿರ್ಧಾರ

ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು?; ಸೋಮವಾರ ಸಂಜೆಯೊಳಗೆ ಹೆಚ್.ಡಿ.ಕುಮಾರಸ್ವಾಮಿ ನಿರ್ಧಾರ

Leave a Reply Cancel reply

Your email address will not be published. Required fields are marked *

Recommended

ಬಾಯಿ ಕ್ಯಾನ್ಸರ್ ಗೆ ಕಾರಣವಾಗುವ 114 ವಂಶವಾಹಿನಿ ರೂಪಾಂತರಗಳ ಪತ್ತೆ

ಬಾಯಿ ಕ್ಯಾನ್ಸರ್ ಗೆ ಕಾರಣವಾಗುವ 114 ವಂಶವಾಹಿನಿ ರೂಪಾಂತರಗಳ ಪತ್ತೆ

3 years ago
ಮಹಾರಾಷ್ಟ್ರ ಮಾದರಿಯಲ್ಲಿ ಕಾಂಗ್ರೆಸ್ ಸರಕಾರ ಪತನ, ಡಿಕೆಶಿ ಶೀಘ್ರವೇ ಮಾಜಿ ಮಂತ್ರಿ ಆಗಲಿದ್ದಾರೆ..

ಮಹಾರಾಷ್ಟ್ರ ಮಾದರಿಯಲ್ಲಿ ಕಾಂಗ್ರೆಸ್ ಸರಕಾರ ಪತನ, ಡಿಕೆಶಿ ಶೀಘ್ರವೇ ಮಾಜಿ ಮಂತ್ರಿ ಆಗಲಿದ್ದಾರೆ..

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ